Homeಮುಖಪುಟ"ಕಾಂಗ್ರೆಸ್ ಅಧೋಗತಿಗಿಳಿದದೆ; ಎಡೂರಪ್ಪನ ಬೆನ್ನಿಗೆ ಮಠಮಾನ್ಯಗಳವೆ'': ಕಾಗೋಡು ತಿಮ್ಮಪ್ಪ ಸಂದರ್ಶನ

“ಕಾಂಗ್ರೆಸ್ ಅಧೋಗತಿಗಿಳಿದದೆ; ಎಡೂರಪ್ಪನ ಬೆನ್ನಿಗೆ ಮಠಮಾನ್ಯಗಳವೆ”: ಕಾಗೋಡು ತಿಮ್ಮಪ್ಪ ಸಂದರ್ಶನ

- Advertisement -
- Advertisement -

ಕಾಗೋಡು ತಿಮ್ಮಪ್ಪನವರು ನಮ್ಮ ನಡುವಿನ ವಿಶಿಷ್ಟ ರಾಜಕಾರಣಿ. ಚುನಾವಣೆಯ ಸೋಲು ಗೆಲುವುಗಳನ್ನ ಬದಿಗಿಟ್ಟು, ಈ ವ್ಯವಸ್ಥೆಯ ಬಗ್ಗೆ ಗಾಢವಾಗಿ ಚಿಂತಿಸುವವರು. ಆ ಕಾರಣಕ್ಕೆ ಇವರನ್ನು ಕಂಡರೆ ಪಾರ್ಟಿಯ ಕಾರ್ಯಕರ್ತರಿಗೆ ಮತ್ತು ಸರಕಾರದ ಕರ್ಮಾಚಾರಿಗಳಿಗೆ ಅಷ್ಟೊಂದು ಇಷ್ಟವಿಲ್ಲ. ಪಾರ್ಟಿ ಕಾರ್ಯಕರ್ತರಿಂದ ಇವರು ನಿರೀಕ್ಷಿಸುವುದು ಕ್ಷೇತ್ರಕ್ಕೆ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ. ಆದ್ದರಿಂದ ವಿನಾಕಾರಣದ ಕಾಡುಹರಟೆಗೆ ಅಲ್ಲಿ ಅವಕಾಶವಿಲ್ಲ. ಇನ್ನ ಸರ್ಕಾರದ ಕರ್ಮಾಚಾರಿಗಳು ಬಂದರೆ ಆಗುತ್ತಿರುವ ಕೆಲಸದ ಪ್ರಗತಿ ಎಲ್ಲಿಗೆ ಬಂತು, ನಿಂತಿದ್ದರೆ ಆದ ತೊಡಕೇನು, ಮುಂದೇನು ಮಾಡಬೇಕು ಎಂಬ ಸಲಹೆ. ಈ ಸಮಯದಲ್ಲಿ ಅಧಿಕಾರಿಯ ದಕ್ಷತೆ ಅದಕ್ಷತೆ ಗುರುತಿಸಿಬಿಡುವ ತಿಮ್ಮಪ್ಪನವರು ಕೆಲಸಗಾರನಿಗೆ ಮಾತ್ರ ಮನ್ನಣೆ ಕೊಡುತ್ತಾರೆ. ಇಲ್ಲವಾದರೆ ಬೈಗುಳ ಗ್ಯಾರಂಟಿ ಅವರೆಂದೂ ಮತದಾರನನ್ನ ಓಲೈಸಿದವರಲ್ಲ. ಓಟಿಗಾಗಿ ಹಲ್ಲು ಗಿಂಜಿದವರಲ್ಲ. ಚುನಾವಣೆ ಸಮಯದಲ್ಲಿ ಎದುರು ಸಿಕ್ಕವರ ಯೋಗಕ್ಷೇಮ ವಿಚಾರಿಸಬೇಕೆಂಬ ಸಲಹೆ ಕೇಳಿ ನಕ್ಕಂತವರು. ರಾಜಕಾರಣ ಆರಂಭವಾದದ್ದು ಸಮಾಜವಾದಿ ಪಾರ್ಟಿ ಮುಖಾಂತರ ದೇವರಾಜ ಅರಸು ಇಷ್ಟವಾದರೂ ಅವರ ಪಾರ್ಟಿ ಸೇರಲಿಲ್ಲ. ಆದರೂ ಗುಂಡೂರಾಯರ ಕಾಲದಲ್ಲಿ ಕಾಂಗ್ರೆಸ್ ಸೇರಿದ ತಿಮ್ಮಪ್ಪ ಇಂದಿಗೂ ಮನಸ್ಸು ಬದಲಿಸಿದವರಲ್ಲ. ಪಾರ್ಟಿ ಮತ್ತು ಕಾರ್ಯಕ್ರಮ ಬದ್ಧತೆ ಎಂದರೇನೆಂದು ತಿಮ್ಮಪ್ಪನವರನ್ನ ನೋಡಿದರೆ ತಿಳಿಯುತ್ತದೆ. ಒಬ್ಬ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಅನುಭವಗಳಿದ್ದರೂ ತಮ್ಮ ಭಾಗದ ಕೆಲಸ ನಿರ್ವಹಿಸಿದವರು. ಎಷ್ಟೇ ಸವಲತ್ತುಗಳನ್ನು ತಂದುಕೊಟ್ಟರೂ, ದ್ರೋಹ ಬಗೆಯುವ ಸಾಮಾನ್ಯ ಜನರ ನಡವಳಿಕೆ ಬಗ್ಗೆ ಎಂದೂ ಅಚ್ಚರಿಗೊಳ್ಳದವರು. ಜನರೇನೆಂಬುದನ್ನು ಲೋಹಿಯಾ, ಗೋಪಾಲಗೌಡರಿಂದ ತಿಳಿದವರು. ಆದ್ದರಿಂದ ಚುನಾವಣೆಯ ಸೋಲು ಅವರನ್ನು ಕಂಗೆಡಿಸಿಲ್ಲ. ದೇಶ ಮತ್ತು ಕರ್ನಾಟಕ ಹತ್ತಿ ಉರಿಯುತ್ತಿರುವ ಈ ಸಮಯದಲ್ಲಿ ಅವರನ್ನ ಮಾತನಾಡಿಸಬೇಕೆನಿಸಿತು. ಸಾಗರದ ಅವರ ಮನೆಗೆ ಹೋದಾಗ ಈ ಹಿಂದಿನಂತೆ ಹಲವಾರು ಕಾರುಗಳು ನಿಂತಿರಲಿಲ್ಲ. ಆ ಸಾಲಿನಲ್ಲಿ ಅವರದ್ದೂ ಒಂದು ಸಾಮಾನ್ಯ ಮನೆಯಂತೆ ಕಂಡಿತು. ಒಳಗೋದಾಗ ಆರಾಮವಾಗಿ ಟಿವಿ ನೋಡುತ್ತಾ ಕುಳಿತಿದ್ದರು.

ನನ್ನನ್ನು ಕಂಡು, “ಬನ್ರೀ” ಎಂದರು. ನಂತರ ‘ಯೇಯ್’ ಎಂದರು. ಹಾಗೆಂದರೆ ಸಹಾಯಕ ಬಂದು ಟಿವಿ ಆಫ್ ಮಾಡಬೇಕು. ಅದನ್ನು ಆತ ಮಾಡಿದ. ಈ ಹಿಂದೆ ಮನೆಗೋದಾಗ ‘ಯೇಯ್’ ಎನ್ನುತ್ತಿದ್ದರು. ಹಾಗಂದರೆ ಕಾಫಿ ತಂದು ಕೊಡು ಅಂತ. ಹೀಗೆ ತಿಮ್ಮಪ್ಪನವರ ಏಕಕ್ಷರದ ಸೂಚನೆಯಲ್ಲಿ ಒಂದೊಂದು ಸಲಹೆ ಸೂಚನೆ ವಾಕ್ಯಗಳೇ ಅಡಗಿರುತ್ತವೆ. ಇಲ್ಲಿ ಮೌನದ ಭಾಷೆಯೂ ಅಧಿಕ, ಕೆಲವೊಂದು ಪ್ರಶ್ನೆಗೆ ಅವರು ಉತ್ತರಿಸುವುದಿಲ್ಲ. ಮೌನವೇ ಉತ್ತರ ನೀಡುತ್ತದೆ.

ಪ್ರಶ್ನೆ: ಏನ್ ಸಾರ್ ದೇಶ ಹಿಂಗೆ ಮಾಡಿದ್ರು?
ಉತ್ತರ: ಮಾಡ್ತರೆ, ಅವುರಿಬ್ರು ಜೊತೆಯಾಗ್ಯವುರೆ, ಅವುರ್ಯಂಗೆ ಜೊತೆಯಾಗ್ಯವುರೆ ಅಂದ್ರೇ ಅವುರಿಗೆ ಕೌಂಟ್ರು ಕೊಡಕ್ಕೆ ನಮ್ಮಲ್ಯಾರು ಇಲ್ಲ. ಪಾಪ ಆ ಯಮ್ಮ ಮಮತಾ ಬ್ಯಾನರ್ಜಿ ಒಬ್ಬಳೆ ಎಷ್ಟು ಅಂತ ಹೋರಾಟ ಕೊಡಕ್ಕಾಯ್ತದೆ. ಒಂದು ಎಂಟತ್ತು ಸ್ಟೇಟಲ್ಲಿ ಅವುಳ ತರ ಹೋರಾಟ ಕೊಡೋರಿದ್ರೆ ಇವುರಿಂಗಾಡಕ್ಕಾಯ್ತಿರಲಿಲ್ಲ.

ಪ್ರಶ್ನೆ: ಕಾಂಗ್ರೆಸ್ ಏನ್ ಸಾರ್ ಹಿಂಗಾಯ್ತು?
ಉತ್ತರ: ಬಣ ಮಾಡಿಕಂಡು ಕಿತ್ತಾಡ್ತಾ ಅವೆ. ಮೋದಿಗೆ ಉತ್ತರ ಕೊಡೋನು ಯಾರು ಇಲ್ಲ. ಕಾಂಗ್ರೆಸ್ ಅಧೋಗತಿಗಿಳಿದದೆ ಏನು ಮಾಡದು. ಆಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹತ್ತು ವರ್ಷ ಪ್ರಧಾನಿಯಾಗಿದ್ದೋರು. ಮೋದಿ ಎದುರಿಗೆ ಮಾತಾಡಲಿಲ್ಲ. ಈಗ್ಲು ಯಾರೂ ಮಾತಾಡಲಿಲ್ಲ.

ಪ್ರಶ್ನೆ: ಜನಗಳಿಗೆ ದುಡ್ಡು ಕೊಡ್ತಾ ಅವುರೆ ಸಾರ್, ದುಡ್ಡು ತಗಂಡು ಓಟು ಮಾಡ್ತರೆ, ಇನ್ನ ನಿಮ್ಮಂಥೋರು ಗೆಲ್ಲಕ್ಕಾಗಲ್ಲ ಅಲವೆ?
ಉತ್ತರ: ದುಡ್ಡು ತಗೋಬ್ಯಾಡಿ ಅಂತ ಹೇಳಬೇಕು. ಒಂಥರದ ಜನಾಂದೋಲನ ನ್ಯಡಿ ಬೇಕು. ಆಗ ದುಡ್ಡಿದ್ದೋರ ಸೋಲಸಬವುದು.

ಪ್ರಶ್ನೆ: ಜನ ಸಾರ್, ನಾನು ಮಂಡ್ಯದ ಲೋಕಸಭಾ ಚುನಾವಣೆ ನೋಡಿದೆ. ಕಾಂಗ್ರೆಸ್ಸಿನೋರು ನೋರ್ರುಪಾಯಿ ಕೊಟ್ಟು ಕುಮಾರಸ್ವಾಮಿ ಕಡಿಯೋರು ಐದು ನೂರ್ರುಪಾಯಿ ಕೊಟ್ರು. ಆದ್ರು ಜನ ನೂರ್ರುಪಾಯಿ ಕಡಿಕೆ ಓಟು ಮಾಡಿದ್ರು. (ನಗು)
ಉತ್ತರ: ಥೂ ಅವ್ಯಲ್ಲ ಅಲ್ಲ, ಹಣ ತಗಂಡು ಓಟು ಮಾಡಿದ ಅಪಾಯನ ನಮ್ಮ ಜನಗಳಿಗೆ ಹೇಳಬೇಕು ಕೇಳ್ತರೆ.

ಪ್ರಶ್ನೆ: ಎಡೂರಪ್ಪನ ಆಡಳಿತದ ಬಗ್ಗೆ ಏನನ್ನಸತ್ತೆ ಸಾರ್?
ಉತ್ತರ: ಅವುನ ರಾಜಕಾರಣನೆ ಬೇರೆ ಕಂಡ್ರೀ ಮೊನ್ನೆ ಅವುನ್ಯಾರೋ ಸ್ವಾಮಿ ಯಾರವುನು?
ನಾನು: ವಚನಾನಂದ
ಉತ್ತರ: ಹಾ| ಅವನು ಏನೊ ಅಂದ ಅಂತ ಉಳದೋರೆಲ್ಲ ಯಂಗೆ ಮ್ಯಾಲೆ ಬಿದ್ರು. ಅಂಗೆ ಮಠಮಾನ್ಯ ಎಡೂರಪ್ಪನ ಬೆನ್ನಿಗವೆ. ಟೀಕೆ ಮಾಡಿದೊರು ಓಲೈಸೋರು ಯಲ್ರು ಅವುನ ಕಡಿಕವುರೆ ಆದ್ರಿಂದ ಆತನ ರಾಜಕಾರಣದ ಆಲೋಚನೆ ಬೇರೆ. ನಾವು ನಿರೀಕ್ಷೆ ಮಾಡೋದೆ ಬೇರೆ.

ಪ್ರಶ್ನೆ: ಮಂತ್ರಿಗಳು ಎಮ್ಮೆಲ್ಲೆಗಳು ನೇರವಾಗಿ ಮತೀಯವಾಗಿ ಮಾತಾಡ್ತರಲ್ಲ ಸಾರ್?
ಉತ್ತರ: ಮಾತಾಡ್ತರೆ, ಅವುರ ಮನಸಲ್ಲಿ ಇದ್ದದ್ದೇ ಅದಲ್ವ. ಈಗ ಬಾಯಿ ಬಿಡ್ತರಷ್ಟೇಯ ಯಾವನಾದ್ರು ಎಂಪಿ ಬಾಯಿ ಬಿಡ್ತನ ಮೋದಿ ಶಾ ಇಬ್ರೆ ಇರದೀಗ, ಏನು ಮಾಡಿದ್ರು ಜೊತೆಲಿ ಮಾಡ್ತರೆ, ಈ ದೇಶಕ್ಕೆ ಏನು ಮಾಡದಕ್ಕೂ ಜೊತೆಯಾಗ್ಯವುರೆ, ನೋಡನ ಇರಿ ಅದೇನಾಯ್ತದೊ ನೋಡನ.”

ನಾನು: ನಮಸ್ಕಾರ ಸರ್ ಬರ್ತೀನಿ.
ತಿಮ್ಮಪ್ಪನವರು: ಆಯ್ತು ಹೋಗಿ ಬನ್ನಿ.

ಬಿ.ಚಂದ್ರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...