Homeಮುಖಪುಟ"ಕಾಂಗ್ರೆಸ್ ಅಧೋಗತಿಗಿಳಿದದೆ; ಎಡೂರಪ್ಪನ ಬೆನ್ನಿಗೆ ಮಠಮಾನ್ಯಗಳವೆ'': ಕಾಗೋಡು ತಿಮ್ಮಪ್ಪ ಸಂದರ್ಶನ

“ಕಾಂಗ್ರೆಸ್ ಅಧೋಗತಿಗಿಳಿದದೆ; ಎಡೂರಪ್ಪನ ಬೆನ್ನಿಗೆ ಮಠಮಾನ್ಯಗಳವೆ”: ಕಾಗೋಡು ತಿಮ್ಮಪ್ಪ ಸಂದರ್ಶನ

- Advertisement -
- Advertisement -

ಕಾಗೋಡು ತಿಮ್ಮಪ್ಪನವರು ನಮ್ಮ ನಡುವಿನ ವಿಶಿಷ್ಟ ರಾಜಕಾರಣಿ. ಚುನಾವಣೆಯ ಸೋಲು ಗೆಲುವುಗಳನ್ನ ಬದಿಗಿಟ್ಟು, ಈ ವ್ಯವಸ್ಥೆಯ ಬಗ್ಗೆ ಗಾಢವಾಗಿ ಚಿಂತಿಸುವವರು. ಆ ಕಾರಣಕ್ಕೆ ಇವರನ್ನು ಕಂಡರೆ ಪಾರ್ಟಿಯ ಕಾರ್ಯಕರ್ತರಿಗೆ ಮತ್ತು ಸರಕಾರದ ಕರ್ಮಾಚಾರಿಗಳಿಗೆ ಅಷ್ಟೊಂದು ಇಷ್ಟವಿಲ್ಲ. ಪಾರ್ಟಿ ಕಾರ್ಯಕರ್ತರಿಂದ ಇವರು ನಿರೀಕ್ಷಿಸುವುದು ಕ್ಷೇತ್ರಕ್ಕೆ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ. ಆದ್ದರಿಂದ ವಿನಾಕಾರಣದ ಕಾಡುಹರಟೆಗೆ ಅಲ್ಲಿ ಅವಕಾಶವಿಲ್ಲ. ಇನ್ನ ಸರ್ಕಾರದ ಕರ್ಮಾಚಾರಿಗಳು ಬಂದರೆ ಆಗುತ್ತಿರುವ ಕೆಲಸದ ಪ್ರಗತಿ ಎಲ್ಲಿಗೆ ಬಂತು, ನಿಂತಿದ್ದರೆ ಆದ ತೊಡಕೇನು, ಮುಂದೇನು ಮಾಡಬೇಕು ಎಂಬ ಸಲಹೆ. ಈ ಸಮಯದಲ್ಲಿ ಅಧಿಕಾರಿಯ ದಕ್ಷತೆ ಅದಕ್ಷತೆ ಗುರುತಿಸಿಬಿಡುವ ತಿಮ್ಮಪ್ಪನವರು ಕೆಲಸಗಾರನಿಗೆ ಮಾತ್ರ ಮನ್ನಣೆ ಕೊಡುತ್ತಾರೆ. ಇಲ್ಲವಾದರೆ ಬೈಗುಳ ಗ್ಯಾರಂಟಿ ಅವರೆಂದೂ ಮತದಾರನನ್ನ ಓಲೈಸಿದವರಲ್ಲ. ಓಟಿಗಾಗಿ ಹಲ್ಲು ಗಿಂಜಿದವರಲ್ಲ. ಚುನಾವಣೆ ಸಮಯದಲ್ಲಿ ಎದುರು ಸಿಕ್ಕವರ ಯೋಗಕ್ಷೇಮ ವಿಚಾರಿಸಬೇಕೆಂಬ ಸಲಹೆ ಕೇಳಿ ನಕ್ಕಂತವರು. ರಾಜಕಾರಣ ಆರಂಭವಾದದ್ದು ಸಮಾಜವಾದಿ ಪಾರ್ಟಿ ಮುಖಾಂತರ ದೇವರಾಜ ಅರಸು ಇಷ್ಟವಾದರೂ ಅವರ ಪಾರ್ಟಿ ಸೇರಲಿಲ್ಲ. ಆದರೂ ಗುಂಡೂರಾಯರ ಕಾಲದಲ್ಲಿ ಕಾಂಗ್ರೆಸ್ ಸೇರಿದ ತಿಮ್ಮಪ್ಪ ಇಂದಿಗೂ ಮನಸ್ಸು ಬದಲಿಸಿದವರಲ್ಲ. ಪಾರ್ಟಿ ಮತ್ತು ಕಾರ್ಯಕ್ರಮ ಬದ್ಧತೆ ಎಂದರೇನೆಂದು ತಿಮ್ಮಪ್ಪನವರನ್ನ ನೋಡಿದರೆ ತಿಳಿಯುತ್ತದೆ. ಒಬ್ಬ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಅನುಭವಗಳಿದ್ದರೂ ತಮ್ಮ ಭಾಗದ ಕೆಲಸ ನಿರ್ವಹಿಸಿದವರು. ಎಷ್ಟೇ ಸವಲತ್ತುಗಳನ್ನು ತಂದುಕೊಟ್ಟರೂ, ದ್ರೋಹ ಬಗೆಯುವ ಸಾಮಾನ್ಯ ಜನರ ನಡವಳಿಕೆ ಬಗ್ಗೆ ಎಂದೂ ಅಚ್ಚರಿಗೊಳ್ಳದವರು. ಜನರೇನೆಂಬುದನ್ನು ಲೋಹಿಯಾ, ಗೋಪಾಲಗೌಡರಿಂದ ತಿಳಿದವರು. ಆದ್ದರಿಂದ ಚುನಾವಣೆಯ ಸೋಲು ಅವರನ್ನು ಕಂಗೆಡಿಸಿಲ್ಲ. ದೇಶ ಮತ್ತು ಕರ್ನಾಟಕ ಹತ್ತಿ ಉರಿಯುತ್ತಿರುವ ಈ ಸಮಯದಲ್ಲಿ ಅವರನ್ನ ಮಾತನಾಡಿಸಬೇಕೆನಿಸಿತು. ಸಾಗರದ ಅವರ ಮನೆಗೆ ಹೋದಾಗ ಈ ಹಿಂದಿನಂತೆ ಹಲವಾರು ಕಾರುಗಳು ನಿಂತಿರಲಿಲ್ಲ. ಆ ಸಾಲಿನಲ್ಲಿ ಅವರದ್ದೂ ಒಂದು ಸಾಮಾನ್ಯ ಮನೆಯಂತೆ ಕಂಡಿತು. ಒಳಗೋದಾಗ ಆರಾಮವಾಗಿ ಟಿವಿ ನೋಡುತ್ತಾ ಕುಳಿತಿದ್ದರು.

ನನ್ನನ್ನು ಕಂಡು, “ಬನ್ರೀ” ಎಂದರು. ನಂತರ ‘ಯೇಯ್’ ಎಂದರು. ಹಾಗೆಂದರೆ ಸಹಾಯಕ ಬಂದು ಟಿವಿ ಆಫ್ ಮಾಡಬೇಕು. ಅದನ್ನು ಆತ ಮಾಡಿದ. ಈ ಹಿಂದೆ ಮನೆಗೋದಾಗ ‘ಯೇಯ್’ ಎನ್ನುತ್ತಿದ್ದರು. ಹಾಗಂದರೆ ಕಾಫಿ ತಂದು ಕೊಡು ಅಂತ. ಹೀಗೆ ತಿಮ್ಮಪ್ಪನವರ ಏಕಕ್ಷರದ ಸೂಚನೆಯಲ್ಲಿ ಒಂದೊಂದು ಸಲಹೆ ಸೂಚನೆ ವಾಕ್ಯಗಳೇ ಅಡಗಿರುತ್ತವೆ. ಇಲ್ಲಿ ಮೌನದ ಭಾಷೆಯೂ ಅಧಿಕ, ಕೆಲವೊಂದು ಪ್ರಶ್ನೆಗೆ ಅವರು ಉತ್ತರಿಸುವುದಿಲ್ಲ. ಮೌನವೇ ಉತ್ತರ ನೀಡುತ್ತದೆ.

ಪ್ರಶ್ನೆ: ಏನ್ ಸಾರ್ ದೇಶ ಹಿಂಗೆ ಮಾಡಿದ್ರು?
ಉತ್ತರ: ಮಾಡ್ತರೆ, ಅವುರಿಬ್ರು ಜೊತೆಯಾಗ್ಯವುರೆ, ಅವುರ್ಯಂಗೆ ಜೊತೆಯಾಗ್ಯವುರೆ ಅಂದ್ರೇ ಅವುರಿಗೆ ಕೌಂಟ್ರು ಕೊಡಕ್ಕೆ ನಮ್ಮಲ್ಯಾರು ಇಲ್ಲ. ಪಾಪ ಆ ಯಮ್ಮ ಮಮತಾ ಬ್ಯಾನರ್ಜಿ ಒಬ್ಬಳೆ ಎಷ್ಟು ಅಂತ ಹೋರಾಟ ಕೊಡಕ್ಕಾಯ್ತದೆ. ಒಂದು ಎಂಟತ್ತು ಸ್ಟೇಟಲ್ಲಿ ಅವುಳ ತರ ಹೋರಾಟ ಕೊಡೋರಿದ್ರೆ ಇವುರಿಂಗಾಡಕ್ಕಾಯ್ತಿರಲಿಲ್ಲ.

ಪ್ರಶ್ನೆ: ಕಾಂಗ್ರೆಸ್ ಏನ್ ಸಾರ್ ಹಿಂಗಾಯ್ತು?
ಉತ್ತರ: ಬಣ ಮಾಡಿಕಂಡು ಕಿತ್ತಾಡ್ತಾ ಅವೆ. ಮೋದಿಗೆ ಉತ್ತರ ಕೊಡೋನು ಯಾರು ಇಲ್ಲ. ಕಾಂಗ್ರೆಸ್ ಅಧೋಗತಿಗಿಳಿದದೆ ಏನು ಮಾಡದು. ಆಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹತ್ತು ವರ್ಷ ಪ್ರಧಾನಿಯಾಗಿದ್ದೋರು. ಮೋದಿ ಎದುರಿಗೆ ಮಾತಾಡಲಿಲ್ಲ. ಈಗ್ಲು ಯಾರೂ ಮಾತಾಡಲಿಲ್ಲ.

ಪ್ರಶ್ನೆ: ಜನಗಳಿಗೆ ದುಡ್ಡು ಕೊಡ್ತಾ ಅವುರೆ ಸಾರ್, ದುಡ್ಡು ತಗಂಡು ಓಟು ಮಾಡ್ತರೆ, ಇನ್ನ ನಿಮ್ಮಂಥೋರು ಗೆಲ್ಲಕ್ಕಾಗಲ್ಲ ಅಲವೆ?
ಉತ್ತರ: ದುಡ್ಡು ತಗೋಬ್ಯಾಡಿ ಅಂತ ಹೇಳಬೇಕು. ಒಂಥರದ ಜನಾಂದೋಲನ ನ್ಯಡಿ ಬೇಕು. ಆಗ ದುಡ್ಡಿದ್ದೋರ ಸೋಲಸಬವುದು.

ಪ್ರಶ್ನೆ: ಜನ ಸಾರ್, ನಾನು ಮಂಡ್ಯದ ಲೋಕಸಭಾ ಚುನಾವಣೆ ನೋಡಿದೆ. ಕಾಂಗ್ರೆಸ್ಸಿನೋರು ನೋರ್ರುಪಾಯಿ ಕೊಟ್ಟು ಕುಮಾರಸ್ವಾಮಿ ಕಡಿಯೋರು ಐದು ನೂರ್ರುಪಾಯಿ ಕೊಟ್ರು. ಆದ್ರು ಜನ ನೂರ್ರುಪಾಯಿ ಕಡಿಕೆ ಓಟು ಮಾಡಿದ್ರು. (ನಗು)
ಉತ್ತರ: ಥೂ ಅವ್ಯಲ್ಲ ಅಲ್ಲ, ಹಣ ತಗಂಡು ಓಟು ಮಾಡಿದ ಅಪಾಯನ ನಮ್ಮ ಜನಗಳಿಗೆ ಹೇಳಬೇಕು ಕೇಳ್ತರೆ.

ಪ್ರಶ್ನೆ: ಎಡೂರಪ್ಪನ ಆಡಳಿತದ ಬಗ್ಗೆ ಏನನ್ನಸತ್ತೆ ಸಾರ್?
ಉತ್ತರ: ಅವುನ ರಾಜಕಾರಣನೆ ಬೇರೆ ಕಂಡ್ರೀ ಮೊನ್ನೆ ಅವುನ್ಯಾರೋ ಸ್ವಾಮಿ ಯಾರವುನು?
ನಾನು: ವಚನಾನಂದ
ಉತ್ತರ: ಹಾ| ಅವನು ಏನೊ ಅಂದ ಅಂತ ಉಳದೋರೆಲ್ಲ ಯಂಗೆ ಮ್ಯಾಲೆ ಬಿದ್ರು. ಅಂಗೆ ಮಠಮಾನ್ಯ ಎಡೂರಪ್ಪನ ಬೆನ್ನಿಗವೆ. ಟೀಕೆ ಮಾಡಿದೊರು ಓಲೈಸೋರು ಯಲ್ರು ಅವುನ ಕಡಿಕವುರೆ ಆದ್ರಿಂದ ಆತನ ರಾಜಕಾರಣದ ಆಲೋಚನೆ ಬೇರೆ. ನಾವು ನಿರೀಕ್ಷೆ ಮಾಡೋದೆ ಬೇರೆ.

ಪ್ರಶ್ನೆ: ಮಂತ್ರಿಗಳು ಎಮ್ಮೆಲ್ಲೆಗಳು ನೇರವಾಗಿ ಮತೀಯವಾಗಿ ಮಾತಾಡ್ತರಲ್ಲ ಸಾರ್?
ಉತ್ತರ: ಮಾತಾಡ್ತರೆ, ಅವುರ ಮನಸಲ್ಲಿ ಇದ್ದದ್ದೇ ಅದಲ್ವ. ಈಗ ಬಾಯಿ ಬಿಡ್ತರಷ್ಟೇಯ ಯಾವನಾದ್ರು ಎಂಪಿ ಬಾಯಿ ಬಿಡ್ತನ ಮೋದಿ ಶಾ ಇಬ್ರೆ ಇರದೀಗ, ಏನು ಮಾಡಿದ್ರು ಜೊತೆಲಿ ಮಾಡ್ತರೆ, ಈ ದೇಶಕ್ಕೆ ಏನು ಮಾಡದಕ್ಕೂ ಜೊತೆಯಾಗ್ಯವುರೆ, ನೋಡನ ಇರಿ ಅದೇನಾಯ್ತದೊ ನೋಡನ.”

ನಾನು: ನಮಸ್ಕಾರ ಸರ್ ಬರ್ತೀನಿ.
ತಿಮ್ಮಪ್ಪನವರು: ಆಯ್ತು ಹೋಗಿ ಬನ್ನಿ.

ಬಿ.ಚಂದ್ರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...