Homeಮುಖಪುಟ"ಕಾಂಗ್ರೆಸ್ ಅಧೋಗತಿಗಿಳಿದದೆ; ಎಡೂರಪ್ಪನ ಬೆನ್ನಿಗೆ ಮಠಮಾನ್ಯಗಳವೆ'': ಕಾಗೋಡು ತಿಮ್ಮಪ್ಪ ಸಂದರ್ಶನ

“ಕಾಂಗ್ರೆಸ್ ಅಧೋಗತಿಗಿಳಿದದೆ; ಎಡೂರಪ್ಪನ ಬೆನ್ನಿಗೆ ಮಠಮಾನ್ಯಗಳವೆ”: ಕಾಗೋಡು ತಿಮ್ಮಪ್ಪ ಸಂದರ್ಶನ

- Advertisement -
- Advertisement -

ಕಾಗೋಡು ತಿಮ್ಮಪ್ಪನವರು ನಮ್ಮ ನಡುವಿನ ವಿಶಿಷ್ಟ ರಾಜಕಾರಣಿ. ಚುನಾವಣೆಯ ಸೋಲು ಗೆಲುವುಗಳನ್ನ ಬದಿಗಿಟ್ಟು, ಈ ವ್ಯವಸ್ಥೆಯ ಬಗ್ಗೆ ಗಾಢವಾಗಿ ಚಿಂತಿಸುವವರು. ಆ ಕಾರಣಕ್ಕೆ ಇವರನ್ನು ಕಂಡರೆ ಪಾರ್ಟಿಯ ಕಾರ್ಯಕರ್ತರಿಗೆ ಮತ್ತು ಸರಕಾರದ ಕರ್ಮಾಚಾರಿಗಳಿಗೆ ಅಷ್ಟೊಂದು ಇಷ್ಟವಿಲ್ಲ. ಪಾರ್ಟಿ ಕಾರ್ಯಕರ್ತರಿಂದ ಇವರು ನಿರೀಕ್ಷಿಸುವುದು ಕ್ಷೇತ್ರಕ್ಕೆ ಆಗಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ. ಆದ್ದರಿಂದ ವಿನಾಕಾರಣದ ಕಾಡುಹರಟೆಗೆ ಅಲ್ಲಿ ಅವಕಾಶವಿಲ್ಲ. ಇನ್ನ ಸರ್ಕಾರದ ಕರ್ಮಾಚಾರಿಗಳು ಬಂದರೆ ಆಗುತ್ತಿರುವ ಕೆಲಸದ ಪ್ರಗತಿ ಎಲ್ಲಿಗೆ ಬಂತು, ನಿಂತಿದ್ದರೆ ಆದ ತೊಡಕೇನು, ಮುಂದೇನು ಮಾಡಬೇಕು ಎಂಬ ಸಲಹೆ. ಈ ಸಮಯದಲ್ಲಿ ಅಧಿಕಾರಿಯ ದಕ್ಷತೆ ಅದಕ್ಷತೆ ಗುರುತಿಸಿಬಿಡುವ ತಿಮ್ಮಪ್ಪನವರು ಕೆಲಸಗಾರನಿಗೆ ಮಾತ್ರ ಮನ್ನಣೆ ಕೊಡುತ್ತಾರೆ. ಇಲ್ಲವಾದರೆ ಬೈಗುಳ ಗ್ಯಾರಂಟಿ ಅವರೆಂದೂ ಮತದಾರನನ್ನ ಓಲೈಸಿದವರಲ್ಲ. ಓಟಿಗಾಗಿ ಹಲ್ಲು ಗಿಂಜಿದವರಲ್ಲ. ಚುನಾವಣೆ ಸಮಯದಲ್ಲಿ ಎದುರು ಸಿಕ್ಕವರ ಯೋಗಕ್ಷೇಮ ವಿಚಾರಿಸಬೇಕೆಂಬ ಸಲಹೆ ಕೇಳಿ ನಕ್ಕಂತವರು. ರಾಜಕಾರಣ ಆರಂಭವಾದದ್ದು ಸಮಾಜವಾದಿ ಪಾರ್ಟಿ ಮುಖಾಂತರ ದೇವರಾಜ ಅರಸು ಇಷ್ಟವಾದರೂ ಅವರ ಪಾರ್ಟಿ ಸೇರಲಿಲ್ಲ. ಆದರೂ ಗುಂಡೂರಾಯರ ಕಾಲದಲ್ಲಿ ಕಾಂಗ್ರೆಸ್ ಸೇರಿದ ತಿಮ್ಮಪ್ಪ ಇಂದಿಗೂ ಮನಸ್ಸು ಬದಲಿಸಿದವರಲ್ಲ. ಪಾರ್ಟಿ ಮತ್ತು ಕಾರ್ಯಕ್ರಮ ಬದ್ಧತೆ ಎಂದರೇನೆಂದು ತಿಮ್ಮಪ್ಪನವರನ್ನ ನೋಡಿದರೆ ತಿಳಿಯುತ್ತದೆ. ಒಬ್ಬ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಅನುಭವಗಳಿದ್ದರೂ ತಮ್ಮ ಭಾಗದ ಕೆಲಸ ನಿರ್ವಹಿಸಿದವರು. ಎಷ್ಟೇ ಸವಲತ್ತುಗಳನ್ನು ತಂದುಕೊಟ್ಟರೂ, ದ್ರೋಹ ಬಗೆಯುವ ಸಾಮಾನ್ಯ ಜನರ ನಡವಳಿಕೆ ಬಗ್ಗೆ ಎಂದೂ ಅಚ್ಚರಿಗೊಳ್ಳದವರು. ಜನರೇನೆಂಬುದನ್ನು ಲೋಹಿಯಾ, ಗೋಪಾಲಗೌಡರಿಂದ ತಿಳಿದವರು. ಆದ್ದರಿಂದ ಚುನಾವಣೆಯ ಸೋಲು ಅವರನ್ನು ಕಂಗೆಡಿಸಿಲ್ಲ. ದೇಶ ಮತ್ತು ಕರ್ನಾಟಕ ಹತ್ತಿ ಉರಿಯುತ್ತಿರುವ ಈ ಸಮಯದಲ್ಲಿ ಅವರನ್ನ ಮಾತನಾಡಿಸಬೇಕೆನಿಸಿತು. ಸಾಗರದ ಅವರ ಮನೆಗೆ ಹೋದಾಗ ಈ ಹಿಂದಿನಂತೆ ಹಲವಾರು ಕಾರುಗಳು ನಿಂತಿರಲಿಲ್ಲ. ಆ ಸಾಲಿನಲ್ಲಿ ಅವರದ್ದೂ ಒಂದು ಸಾಮಾನ್ಯ ಮನೆಯಂತೆ ಕಂಡಿತು. ಒಳಗೋದಾಗ ಆರಾಮವಾಗಿ ಟಿವಿ ನೋಡುತ್ತಾ ಕುಳಿತಿದ್ದರು.

ನನ್ನನ್ನು ಕಂಡು, “ಬನ್ರೀ” ಎಂದರು. ನಂತರ ‘ಯೇಯ್’ ಎಂದರು. ಹಾಗೆಂದರೆ ಸಹಾಯಕ ಬಂದು ಟಿವಿ ಆಫ್ ಮಾಡಬೇಕು. ಅದನ್ನು ಆತ ಮಾಡಿದ. ಈ ಹಿಂದೆ ಮನೆಗೋದಾಗ ‘ಯೇಯ್’ ಎನ್ನುತ್ತಿದ್ದರು. ಹಾಗಂದರೆ ಕಾಫಿ ತಂದು ಕೊಡು ಅಂತ. ಹೀಗೆ ತಿಮ್ಮಪ್ಪನವರ ಏಕಕ್ಷರದ ಸೂಚನೆಯಲ್ಲಿ ಒಂದೊಂದು ಸಲಹೆ ಸೂಚನೆ ವಾಕ್ಯಗಳೇ ಅಡಗಿರುತ್ತವೆ. ಇಲ್ಲಿ ಮೌನದ ಭಾಷೆಯೂ ಅಧಿಕ, ಕೆಲವೊಂದು ಪ್ರಶ್ನೆಗೆ ಅವರು ಉತ್ತರಿಸುವುದಿಲ್ಲ. ಮೌನವೇ ಉತ್ತರ ನೀಡುತ್ತದೆ.

ಪ್ರಶ್ನೆ: ಏನ್ ಸಾರ್ ದೇಶ ಹಿಂಗೆ ಮಾಡಿದ್ರು?
ಉತ್ತರ: ಮಾಡ್ತರೆ, ಅವುರಿಬ್ರು ಜೊತೆಯಾಗ್ಯವುರೆ, ಅವುರ್ಯಂಗೆ ಜೊತೆಯಾಗ್ಯವುರೆ ಅಂದ್ರೇ ಅವುರಿಗೆ ಕೌಂಟ್ರು ಕೊಡಕ್ಕೆ ನಮ್ಮಲ್ಯಾರು ಇಲ್ಲ. ಪಾಪ ಆ ಯಮ್ಮ ಮಮತಾ ಬ್ಯಾನರ್ಜಿ ಒಬ್ಬಳೆ ಎಷ್ಟು ಅಂತ ಹೋರಾಟ ಕೊಡಕ್ಕಾಯ್ತದೆ. ಒಂದು ಎಂಟತ್ತು ಸ್ಟೇಟಲ್ಲಿ ಅವುಳ ತರ ಹೋರಾಟ ಕೊಡೋರಿದ್ರೆ ಇವುರಿಂಗಾಡಕ್ಕಾಯ್ತಿರಲಿಲ್ಲ.

ಪ್ರಶ್ನೆ: ಕಾಂಗ್ರೆಸ್ ಏನ್ ಸಾರ್ ಹಿಂಗಾಯ್ತು?
ಉತ್ತರ: ಬಣ ಮಾಡಿಕಂಡು ಕಿತ್ತಾಡ್ತಾ ಅವೆ. ಮೋದಿಗೆ ಉತ್ತರ ಕೊಡೋನು ಯಾರು ಇಲ್ಲ. ಕಾಂಗ್ರೆಸ್ ಅಧೋಗತಿಗಿಳಿದದೆ ಏನು ಮಾಡದು. ಆಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹತ್ತು ವರ್ಷ ಪ್ರಧಾನಿಯಾಗಿದ್ದೋರು. ಮೋದಿ ಎದುರಿಗೆ ಮಾತಾಡಲಿಲ್ಲ. ಈಗ್ಲು ಯಾರೂ ಮಾತಾಡಲಿಲ್ಲ.

ಪ್ರಶ್ನೆ: ಜನಗಳಿಗೆ ದುಡ್ಡು ಕೊಡ್ತಾ ಅವುರೆ ಸಾರ್, ದುಡ್ಡು ತಗಂಡು ಓಟು ಮಾಡ್ತರೆ, ಇನ್ನ ನಿಮ್ಮಂಥೋರು ಗೆಲ್ಲಕ್ಕಾಗಲ್ಲ ಅಲವೆ?
ಉತ್ತರ: ದುಡ್ಡು ತಗೋಬ್ಯಾಡಿ ಅಂತ ಹೇಳಬೇಕು. ಒಂಥರದ ಜನಾಂದೋಲನ ನ್ಯಡಿ ಬೇಕು. ಆಗ ದುಡ್ಡಿದ್ದೋರ ಸೋಲಸಬವುದು.

ಪ್ರಶ್ನೆ: ಜನ ಸಾರ್, ನಾನು ಮಂಡ್ಯದ ಲೋಕಸಭಾ ಚುನಾವಣೆ ನೋಡಿದೆ. ಕಾಂಗ್ರೆಸ್ಸಿನೋರು ನೋರ್ರುಪಾಯಿ ಕೊಟ್ಟು ಕುಮಾರಸ್ವಾಮಿ ಕಡಿಯೋರು ಐದು ನೂರ್ರುಪಾಯಿ ಕೊಟ್ರು. ಆದ್ರು ಜನ ನೂರ್ರುಪಾಯಿ ಕಡಿಕೆ ಓಟು ಮಾಡಿದ್ರು. (ನಗು)
ಉತ್ತರ: ಥೂ ಅವ್ಯಲ್ಲ ಅಲ್ಲ, ಹಣ ತಗಂಡು ಓಟು ಮಾಡಿದ ಅಪಾಯನ ನಮ್ಮ ಜನಗಳಿಗೆ ಹೇಳಬೇಕು ಕೇಳ್ತರೆ.

ಪ್ರಶ್ನೆ: ಎಡೂರಪ್ಪನ ಆಡಳಿತದ ಬಗ್ಗೆ ಏನನ್ನಸತ್ತೆ ಸಾರ್?
ಉತ್ತರ: ಅವುನ ರಾಜಕಾರಣನೆ ಬೇರೆ ಕಂಡ್ರೀ ಮೊನ್ನೆ ಅವುನ್ಯಾರೋ ಸ್ವಾಮಿ ಯಾರವುನು?
ನಾನು: ವಚನಾನಂದ
ಉತ್ತರ: ಹಾ| ಅವನು ಏನೊ ಅಂದ ಅಂತ ಉಳದೋರೆಲ್ಲ ಯಂಗೆ ಮ್ಯಾಲೆ ಬಿದ್ರು. ಅಂಗೆ ಮಠಮಾನ್ಯ ಎಡೂರಪ್ಪನ ಬೆನ್ನಿಗವೆ. ಟೀಕೆ ಮಾಡಿದೊರು ಓಲೈಸೋರು ಯಲ್ರು ಅವುನ ಕಡಿಕವುರೆ ಆದ್ರಿಂದ ಆತನ ರಾಜಕಾರಣದ ಆಲೋಚನೆ ಬೇರೆ. ನಾವು ನಿರೀಕ್ಷೆ ಮಾಡೋದೆ ಬೇರೆ.

ಪ್ರಶ್ನೆ: ಮಂತ್ರಿಗಳು ಎಮ್ಮೆಲ್ಲೆಗಳು ನೇರವಾಗಿ ಮತೀಯವಾಗಿ ಮಾತಾಡ್ತರಲ್ಲ ಸಾರ್?
ಉತ್ತರ: ಮಾತಾಡ್ತರೆ, ಅವುರ ಮನಸಲ್ಲಿ ಇದ್ದದ್ದೇ ಅದಲ್ವ. ಈಗ ಬಾಯಿ ಬಿಡ್ತರಷ್ಟೇಯ ಯಾವನಾದ್ರು ಎಂಪಿ ಬಾಯಿ ಬಿಡ್ತನ ಮೋದಿ ಶಾ ಇಬ್ರೆ ಇರದೀಗ, ಏನು ಮಾಡಿದ್ರು ಜೊತೆಲಿ ಮಾಡ್ತರೆ, ಈ ದೇಶಕ್ಕೆ ಏನು ಮಾಡದಕ್ಕೂ ಜೊತೆಯಾಗ್ಯವುರೆ, ನೋಡನ ಇರಿ ಅದೇನಾಯ್ತದೊ ನೋಡನ.”

ನಾನು: ನಮಸ್ಕಾರ ಸರ್ ಬರ್ತೀನಿ.
ತಿಮ್ಮಪ್ಪನವರು: ಆಯ್ತು ಹೋಗಿ ಬನ್ನಿ.

ಬಿ.ಚಂದ್ರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...