Homeಮುಖಪುಟಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

- Advertisement -
- Advertisement -

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ ಹೇಳಿದ್ದಾರೆ.

ಭಾನುವಾರ ಶಿರಸಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಾಗುವಳಿದಾರರು ಕಾಡು ನಾಶಮಾಡಿ ಕೃಷಿ ಮಾಡುತ್ತಿಲ್ಲ. ಈಗ ನಗರಗಳು ನಿರ್ಮಾಣವಾಗಿರುವ ಪ್ರದೇಶದಲ್ಲಿ ಹಿಂದೆ ಅರಣ್ಯವಿತ್ತು. ಬಡವರಿಗೊಂದು- ಶ್ರೀಮಂತರಿಗೊಂದು ನಿಯಮ ಸರ್ಕಾರಗಳು ಮಾಡುತ್ತಿವೆ. ಈ ತಾರತಮ್ಯ ಪರಿಹಾರಕ್ಕೆ ಹೋರಾಟ ಒಂದೇ ದಾರಿ ಎಂದರು.

1972ರಲ್ಲಿ ಗೇಣಿ ಹೋರಾಟ ಆರಂಭಿಸಿ ಲಕ್ಷಾಂತರ ಬಡವರಿಗೆ ಗೇಣಿ ಭೂಮಿ ಕೊಡಿಸಿದ್ದೆವು. ಇಂದು ಅರಣ್ಯ ಅತಿಕ್ರಮಣದಾರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತಿದ್ದೇನೆ. ಸರ್ಕಾರ ಇಷ್ಟರಲ್ಲೆ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕಿತ್ತು. ಶಿರಸಿಯ ರವಿ ನಾಯ್ಕ್ರ ಮುಂದಾಳತ್ವದಲ್ಲಿ ಈಗ ನಡೆಯುತ್ತಿರುವ ಹೋರಾಟ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲಿದೆಯೆಂಬ ವಿಶ್ವಾಸವಿದೆ. ನಾನಂತೂ ಕೊನೆಯ ಉಸಿರಿರುವ ತನಕ ಅತಿಕ್ರಮಣದಾರರ ಪರವಿರುತ್ತೇನೆ ಎಂದು ಕಾಗೋಡು ಹೇಳಿದರು.

ಅಧಿಕಾರಿಗಳು ಅನಗತ್ಯ ಗೊಂದಲ, ದೌರ್ಜನ್ಯ ಮಾಡುತ್ತಿದ್ದಾರೆ. ಅರಣ್ಯದ ನಡುವೆ ಬದುಕಿರುವ ಮಂದಿಯ ಕಷ್ಟ ಇವರಿಗೆ ಅರ್ಥಮಾಡಿಕೊಳ್ಳುವ ವ್ಯವದಾನವಿಲ್ಲ. ಕಂದಾಯ ಮಂತ್ರಿಯಾಗಿದ್ದಾಗ ಬಗರ್ ಹುಕುಮ್‌ದಾರರಿಗೆ ಹಕ್ಕು ಪತ್ರ ಕೊಡಿಸಲು ಸಾಕಷ್ಟು ಪ್ರಯತ್ನ ಮಾಡಿ ಯಶಸ್ವಿಯಾದೆ. ಅರಣ್ಯ ಅತಿಕ್ರಮಣದಾರರ ಸಂಕಷ್ಟದ ಅರಿವು ಶಿರಸಿ ಶಾಸಕ (ಸ್ಪೀಕರ್ ಕಾಗೇರಿ) ಸೇರಿದಂತೆ ಹಲವು ಎಮ್ಮೆಲ್ಲೆ, ಮಂತ್ರಿಗಳಿಗೆ ಗೊತ್ತಿದೆ. ಆದರೆ ಸಮಸ್ಯೆ ಪರಿಹರಿಸುವ ಇಚ್ಚಾ ಶಕ್ತಿ ಇಲ್ಲದಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2,95,018 ಅತಿಕ್ರಮಣದಾರರು ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ 15,798 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 1,84,358 ಅರ್ಜಿಗಳು ತಿರಸ್ಕೃತವಾಗಿವೆ. ಅಂದರೆ ಮಂಜೂರಿ ಪ್ರಮಾಣ ಶೇ.5.35ರಷ್ಟು ಅಷ್ಟೆ. ಹಾಗಾಗಿ ಹೋರಾಟವಿಲ್ಲದೆ ಮಂಜೂರಿ ಸಾಧ್ಯವೇ ಇಲ್ಲ. ಅಗತ್ಯ ಇದ್ದರೆ ನಾನೂ ಹೋರಾಟಕ್ಕೆ ಇಳಿಯುತ್ತೇನೆ. ಸಧ್ಯಕ್ಕೆ ಸರ್ಚೋಚ್ಛ ನ್ಯಾಯಾಲಯ ಕೂಡ ಅತಿಕ್ರಮಣದಾರರ ತೆರವಿನ ತನ್ನ ಆದೇಶ ತಡೆಹಿಡಿದಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗೆ ಸೂಚಿಸಿದೆ ಎಂದು ಕಾಗೋಡು ಹೇಳಿದರು.


ಇದನ್ನೂ ಓದಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...