Homeಮುಖಪುಟಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

- Advertisement -
- Advertisement -

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ ಹೇಳಿದ್ದಾರೆ.

ಭಾನುವಾರ ಶಿರಸಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಾಗುವಳಿದಾರರು ಕಾಡು ನಾಶಮಾಡಿ ಕೃಷಿ ಮಾಡುತ್ತಿಲ್ಲ. ಈಗ ನಗರಗಳು ನಿರ್ಮಾಣವಾಗಿರುವ ಪ್ರದೇಶದಲ್ಲಿ ಹಿಂದೆ ಅರಣ್ಯವಿತ್ತು. ಬಡವರಿಗೊಂದು- ಶ್ರೀಮಂತರಿಗೊಂದು ನಿಯಮ ಸರ್ಕಾರಗಳು ಮಾಡುತ್ತಿವೆ. ಈ ತಾರತಮ್ಯ ಪರಿಹಾರಕ್ಕೆ ಹೋರಾಟ ಒಂದೇ ದಾರಿ ಎಂದರು.

1972ರಲ್ಲಿ ಗೇಣಿ ಹೋರಾಟ ಆರಂಭಿಸಿ ಲಕ್ಷಾಂತರ ಬಡವರಿಗೆ ಗೇಣಿ ಭೂಮಿ ಕೊಡಿಸಿದ್ದೆವು. ಇಂದು ಅರಣ್ಯ ಅತಿಕ್ರಮಣದಾರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತಿದ್ದೇನೆ. ಸರ್ಕಾರ ಇಷ್ಟರಲ್ಲೆ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕಿತ್ತು. ಶಿರಸಿಯ ರವಿ ನಾಯ್ಕ್ರ ಮುಂದಾಳತ್ವದಲ್ಲಿ ಈಗ ನಡೆಯುತ್ತಿರುವ ಹೋರಾಟ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲಿದೆಯೆಂಬ ವಿಶ್ವಾಸವಿದೆ. ನಾನಂತೂ ಕೊನೆಯ ಉಸಿರಿರುವ ತನಕ ಅತಿಕ್ರಮಣದಾರರ ಪರವಿರುತ್ತೇನೆ ಎಂದು ಕಾಗೋಡು ಹೇಳಿದರು.

ಅಧಿಕಾರಿಗಳು ಅನಗತ್ಯ ಗೊಂದಲ, ದೌರ್ಜನ್ಯ ಮಾಡುತ್ತಿದ್ದಾರೆ. ಅರಣ್ಯದ ನಡುವೆ ಬದುಕಿರುವ ಮಂದಿಯ ಕಷ್ಟ ಇವರಿಗೆ ಅರ್ಥಮಾಡಿಕೊಳ್ಳುವ ವ್ಯವದಾನವಿಲ್ಲ. ಕಂದಾಯ ಮಂತ್ರಿಯಾಗಿದ್ದಾಗ ಬಗರ್ ಹುಕುಮ್‌ದಾರರಿಗೆ ಹಕ್ಕು ಪತ್ರ ಕೊಡಿಸಲು ಸಾಕಷ್ಟು ಪ್ರಯತ್ನ ಮಾಡಿ ಯಶಸ್ವಿಯಾದೆ. ಅರಣ್ಯ ಅತಿಕ್ರಮಣದಾರರ ಸಂಕಷ್ಟದ ಅರಿವು ಶಿರಸಿ ಶಾಸಕ (ಸ್ಪೀಕರ್ ಕಾಗೇರಿ) ಸೇರಿದಂತೆ ಹಲವು ಎಮ್ಮೆಲ್ಲೆ, ಮಂತ್ರಿಗಳಿಗೆ ಗೊತ್ತಿದೆ. ಆದರೆ ಸಮಸ್ಯೆ ಪರಿಹರಿಸುವ ಇಚ್ಚಾ ಶಕ್ತಿ ಇಲ್ಲದಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2,95,018 ಅತಿಕ್ರಮಣದಾರರು ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ 15,798 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 1,84,358 ಅರ್ಜಿಗಳು ತಿರಸ್ಕೃತವಾಗಿವೆ. ಅಂದರೆ ಮಂಜೂರಿ ಪ್ರಮಾಣ ಶೇ.5.35ರಷ್ಟು ಅಷ್ಟೆ. ಹಾಗಾಗಿ ಹೋರಾಟವಿಲ್ಲದೆ ಮಂಜೂರಿ ಸಾಧ್ಯವೇ ಇಲ್ಲ. ಅಗತ್ಯ ಇದ್ದರೆ ನಾನೂ ಹೋರಾಟಕ್ಕೆ ಇಳಿಯುತ್ತೇನೆ. ಸಧ್ಯಕ್ಕೆ ಸರ್ಚೋಚ್ಛ ನ್ಯಾಯಾಲಯ ಕೂಡ ಅತಿಕ್ರಮಣದಾರರ ತೆರವಿನ ತನ್ನ ಆದೇಶ ತಡೆಹಿಡಿದಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗೆ ಸೂಚಿಸಿದೆ ಎಂದು ಕಾಗೋಡು ಹೇಳಿದರು.


ಇದನ್ನೂ ಓದಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...