Homeಮುಖಪುಟಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

- Advertisement -
- Advertisement -

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ ಹೇಳಿದ್ದಾರೆ.

ಭಾನುವಾರ ಶಿರಸಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಾಗುವಳಿದಾರರು ಕಾಡು ನಾಶಮಾಡಿ ಕೃಷಿ ಮಾಡುತ್ತಿಲ್ಲ. ಈಗ ನಗರಗಳು ನಿರ್ಮಾಣವಾಗಿರುವ ಪ್ರದೇಶದಲ್ಲಿ ಹಿಂದೆ ಅರಣ್ಯವಿತ್ತು. ಬಡವರಿಗೊಂದು- ಶ್ರೀಮಂತರಿಗೊಂದು ನಿಯಮ ಸರ್ಕಾರಗಳು ಮಾಡುತ್ತಿವೆ. ಈ ತಾರತಮ್ಯ ಪರಿಹಾರಕ್ಕೆ ಹೋರಾಟ ಒಂದೇ ದಾರಿ ಎಂದರು.

1972ರಲ್ಲಿ ಗೇಣಿ ಹೋರಾಟ ಆರಂಭಿಸಿ ಲಕ್ಷಾಂತರ ಬಡವರಿಗೆ ಗೇಣಿ ಭೂಮಿ ಕೊಡಿಸಿದ್ದೆವು. ಇಂದು ಅರಣ್ಯ ಅತಿಕ್ರಮಣದಾರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತಿದ್ದೇನೆ. ಸರ್ಕಾರ ಇಷ್ಟರಲ್ಲೆ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕಿತ್ತು. ಶಿರಸಿಯ ರವಿ ನಾಯ್ಕ್ರ ಮುಂದಾಳತ್ವದಲ್ಲಿ ಈಗ ನಡೆಯುತ್ತಿರುವ ಹೋರಾಟ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲಿದೆಯೆಂಬ ವಿಶ್ವಾಸವಿದೆ. ನಾನಂತೂ ಕೊನೆಯ ಉಸಿರಿರುವ ತನಕ ಅತಿಕ್ರಮಣದಾರರ ಪರವಿರುತ್ತೇನೆ ಎಂದು ಕಾಗೋಡು ಹೇಳಿದರು.

ಅಧಿಕಾರಿಗಳು ಅನಗತ್ಯ ಗೊಂದಲ, ದೌರ್ಜನ್ಯ ಮಾಡುತ್ತಿದ್ದಾರೆ. ಅರಣ್ಯದ ನಡುವೆ ಬದುಕಿರುವ ಮಂದಿಯ ಕಷ್ಟ ಇವರಿಗೆ ಅರ್ಥಮಾಡಿಕೊಳ್ಳುವ ವ್ಯವದಾನವಿಲ್ಲ. ಕಂದಾಯ ಮಂತ್ರಿಯಾಗಿದ್ದಾಗ ಬಗರ್ ಹುಕುಮ್‌ದಾರರಿಗೆ ಹಕ್ಕು ಪತ್ರ ಕೊಡಿಸಲು ಸಾಕಷ್ಟು ಪ್ರಯತ್ನ ಮಾಡಿ ಯಶಸ್ವಿಯಾದೆ. ಅರಣ್ಯ ಅತಿಕ್ರಮಣದಾರರ ಸಂಕಷ್ಟದ ಅರಿವು ಶಿರಸಿ ಶಾಸಕ (ಸ್ಪೀಕರ್ ಕಾಗೇರಿ) ಸೇರಿದಂತೆ ಹಲವು ಎಮ್ಮೆಲ್ಲೆ, ಮಂತ್ರಿಗಳಿಗೆ ಗೊತ್ತಿದೆ. ಆದರೆ ಸಮಸ್ಯೆ ಪರಿಹರಿಸುವ ಇಚ್ಚಾ ಶಕ್ತಿ ಇಲ್ಲದಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2,95,018 ಅತಿಕ್ರಮಣದಾರರು ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ 15,798 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 1,84,358 ಅರ್ಜಿಗಳು ತಿರಸ್ಕೃತವಾಗಿವೆ. ಅಂದರೆ ಮಂಜೂರಿ ಪ್ರಮಾಣ ಶೇ.5.35ರಷ್ಟು ಅಷ್ಟೆ. ಹಾಗಾಗಿ ಹೋರಾಟವಿಲ್ಲದೆ ಮಂಜೂರಿ ಸಾಧ್ಯವೇ ಇಲ್ಲ. ಅಗತ್ಯ ಇದ್ದರೆ ನಾನೂ ಹೋರಾಟಕ್ಕೆ ಇಳಿಯುತ್ತೇನೆ. ಸಧ್ಯಕ್ಕೆ ಸರ್ಚೋಚ್ಛ ನ್ಯಾಯಾಲಯ ಕೂಡ ಅತಿಕ್ರಮಣದಾರರ ತೆರವಿನ ತನ್ನ ಆದೇಶ ತಡೆಹಿಡಿದಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗೆ ಸೂಚಿಸಿದೆ ಎಂದು ಕಾಗೋಡು ಹೇಳಿದರು.


ಇದನ್ನೂ ಓದಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...