Homeಮುಖಪುಟಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

ಅರಣ್ಯ ಸಾಗುವಳಿ ಹಕ್ಕು ಕೇಳುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು: ಕಾಗೋಡು ತಿಮ್ಮಪ್ಪ ಸಿಡಿಮಿಡಿ

- Advertisement -
- Advertisement -

ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳದು ಒಂದೇ ನೀತಿ. ಅದು ನಿರ್ಲಕ್ಷ ನೀತಿ. ಅತಿಕ್ರಮಣದಾರರಿಗೆ ಸ್ಪಂದಿಸಲಾಗದ ಜನಪ್ರತಿನಿಧಿಗಳು ಸತ್ತಂತಿದ್ದಾರೆ. ಅತಿಕ್ರಮಣದಾರರ ಸ್ಥಿತಿ ಕಣ್ಣೀರು ತರಿಸುತ್ತಿದೆ ಎಂದು ಹಿರಿಯ ರಾಜಕಾರಣಿ, ಕಾಗೋಡು ಚಳುವಳಿಯ ನೇತಾರ ಕಾಗೋಡು ತಿಮ್ಮಪ್ಪ ಆಕ್ರೋಶ- ನೋವಿನಿಂದ ಹೇಳಿದ್ದಾರೆ.

ಭಾನುವಾರ ಶಿರಸಿಯಲ್ಲಿ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಾಗುವಳಿದಾರರು ಕಾಡು ನಾಶಮಾಡಿ ಕೃಷಿ ಮಾಡುತ್ತಿಲ್ಲ. ಈಗ ನಗರಗಳು ನಿರ್ಮಾಣವಾಗಿರುವ ಪ್ರದೇಶದಲ್ಲಿ ಹಿಂದೆ ಅರಣ್ಯವಿತ್ತು. ಬಡವರಿಗೊಂದು- ಶ್ರೀಮಂತರಿಗೊಂದು ನಿಯಮ ಸರ್ಕಾರಗಳು ಮಾಡುತ್ತಿವೆ. ಈ ತಾರತಮ್ಯ ಪರಿಹಾರಕ್ಕೆ ಹೋರಾಟ ಒಂದೇ ದಾರಿ ಎಂದರು.

1972ರಲ್ಲಿ ಗೇಣಿ ಹೋರಾಟ ಆರಂಭಿಸಿ ಲಕ್ಷಾಂತರ ಬಡವರಿಗೆ ಗೇಣಿ ಭೂಮಿ ಕೊಡಿಸಿದ್ದೆವು. ಇಂದು ಅರಣ್ಯ ಅತಿಕ್ರಮಣದಾರರ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತಿದ್ದೇನೆ. ಸರ್ಕಾರ ಇಷ್ಟರಲ್ಲೆ ಸಾಗುವಳಿದಾರರಿಗೆ ನ್ಯಾಯ ಒದಗಿಸಬೇಕಿತ್ತು. ಶಿರಸಿಯ ರವಿ ನಾಯ್ಕ್ರ ಮುಂದಾಳತ್ವದಲ್ಲಿ ಈಗ ನಡೆಯುತ್ತಿರುವ ಹೋರಾಟ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಲಿದೆಯೆಂಬ ವಿಶ್ವಾಸವಿದೆ. ನಾನಂತೂ ಕೊನೆಯ ಉಸಿರಿರುವ ತನಕ ಅತಿಕ್ರಮಣದಾರರ ಪರವಿರುತ್ತೇನೆ ಎಂದು ಕಾಗೋಡು ಹೇಳಿದರು.

ಅಧಿಕಾರಿಗಳು ಅನಗತ್ಯ ಗೊಂದಲ, ದೌರ್ಜನ್ಯ ಮಾಡುತ್ತಿದ್ದಾರೆ. ಅರಣ್ಯದ ನಡುವೆ ಬದುಕಿರುವ ಮಂದಿಯ ಕಷ್ಟ ಇವರಿಗೆ ಅರ್ಥಮಾಡಿಕೊಳ್ಳುವ ವ್ಯವದಾನವಿಲ್ಲ. ಕಂದಾಯ ಮಂತ್ರಿಯಾಗಿದ್ದಾಗ ಬಗರ್ ಹುಕುಮ್‌ದಾರರಿಗೆ ಹಕ್ಕು ಪತ್ರ ಕೊಡಿಸಲು ಸಾಕಷ್ಟು ಪ್ರಯತ್ನ ಮಾಡಿ ಯಶಸ್ವಿಯಾದೆ. ಅರಣ್ಯ ಅತಿಕ್ರಮಣದಾರರ ಸಂಕಷ್ಟದ ಅರಿವು ಶಿರಸಿ ಶಾಸಕ (ಸ್ಪೀಕರ್ ಕಾಗೇರಿ) ಸೇರಿದಂತೆ ಹಲವು ಎಮ್ಮೆಲ್ಲೆ, ಮಂತ್ರಿಗಳಿಗೆ ಗೊತ್ತಿದೆ. ಆದರೆ ಸಮಸ್ಯೆ ಪರಿಹರಿಸುವ ಇಚ್ಚಾ ಶಕ್ತಿ ಇಲ್ಲದಾಗಿದೆ ಎಂದವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 2,95,018 ಅತಿಕ್ರಮಣದಾರರು ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕೇವಲ 15,798 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ. 1,84,358 ಅರ್ಜಿಗಳು ತಿರಸ್ಕೃತವಾಗಿವೆ. ಅಂದರೆ ಮಂಜೂರಿ ಪ್ರಮಾಣ ಶೇ.5.35ರಷ್ಟು ಅಷ್ಟೆ. ಹಾಗಾಗಿ ಹೋರಾಟವಿಲ್ಲದೆ ಮಂಜೂರಿ ಸಾಧ್ಯವೇ ಇಲ್ಲ. ಅಗತ್ಯ ಇದ್ದರೆ ನಾನೂ ಹೋರಾಟಕ್ಕೆ ಇಳಿಯುತ್ತೇನೆ. ಸಧ್ಯಕ್ಕೆ ಸರ್ಚೋಚ್ಛ ನ್ಯಾಯಾಲಯ ಕೂಡ ಅತಿಕ್ರಮಣದಾರರ ತೆರವಿನ ತನ್ನ ಆದೇಶ ತಡೆಹಿಡಿದಿದೆ. ತಿರಸ್ಕೃತ ಅರ್ಜಿ ಮರುಪರಿಶೀಲನೆಗೆ ಸೂಚಿಸಿದೆ ಎಂದು ಕಾಗೋಡು ಹೇಳಿದರು.


ಇದನ್ನೂ ಓದಿ: ಹಿಂದಿ ಹೇರಿಕೆ ನಿಲ್ಲಿಸಿ: ಟ್ವಿಟರ್‌ನಲ್ಲಿ ಗಣ್ಯರು, ಕಲಾವಿದರಿಂದ StopHindiImposition ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...