Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ: ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (CUK) ಭೂವಿಜ್ಞಾನ ಕೋರ್ಸ್‌ನ ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಜಯಶ್ರೀ (22) ಅವರ ಆತ್ಮಹತ್ಯೆ ಪ್ರಕರಣವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಒಡಿಶಾ ಮೂಲದ ದಲಿತ ವಿದ್ಯಾರ್ಥಿನಿಯಾದ ಜಯಶ್ರೀ ಅವರು ಬುಧವಾರ ತಮ್ಮ ಹಾಸ್ಟೆಲ್ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕೇವಲ ಒಂದು ವೈಯಕ್ತಿಕ ದುರಂತವಲ್ಲ, ಬದಲಾಗಿ ವಿಶ್ವವಿದ್ಯಾಲಯದ ಆಡಳಿತದಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ವ್ಯವಸ್ಥಿತ ನಿರ್ಲಕ್ಷ್ಯದ ಪರಿಣಾಮ ಎಂದು ವಿದ್ಯಾರ್ಥಿ ಸಮುದಾಯ ಹಾಗೂ ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಘಟನೆಯ ಸುತ್ತ ಹಲವಾರು ಅನುಮಾನಗಳು: ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ.

ಆರೋಪಿತರಿಗೆ ಆಡಳಿತದ ಕುಮ್ಮಕ್ಕು: ವಿಶ್ವವಿದ್ಯಾಲಯದಲ್ಲಿ ಈ ಹಿಂದೆ ಲೈಂಗಿಕ ಕಿರುಕುಳದ ಪ್ರಕರಣಗಳು ನಡೆದಿದ್ದರೂ, ಆಡಳಿತ ಮಂಡಳಿ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಸಂಧಾನದ ಮೂಲಕ ಪ್ರಕರಣ ಮುಚ್ಚಿಹಾಕಲು ಪ್ರಯತ್ನಿಸಿದೆ ಎಂದು ವಿದ್ಯಾರ್ಥಿಗಳು ಆಪಾದಿಸಿದ್ದಾರೆ. ಕ್ಯಾಂಟೀನ್ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಾಗ, ಆತನ ಸಹೋದರನಾದ ಪ್ರಾಧ್ಯಾಪಕ ಮಲ್ಲಿಕಾರ್ಜುನ ಹೂಗಾರ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಸಂಧಾನ ನಡೆಸಿದೆ ಎನ್ನಲಾಗಿದೆ.

ಸಾವಿಗೂ ಮುನ್ನ ದೂರು: ಜಯಶ್ರೀ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ದಿನಗಳ ಮೊದಲು ವಿಶ್ವವಿದ್ಯಾಲಯದ ಡೀನ್ ಆಗಿರುವ ಪ್ರೊ. ಬಸವರಾಜ ಕುಬಕಡ್ಡಿ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಆದರೆ ಆ ದೂರಿನ ಕುರಿತು ಯಾವುದೇ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಇಲ್ಲ.

ನಿರ್ಲಕ್ಷ್ಯದ ಇ-ಮೇಲ್ ದೂರು: ಈ ಹಿಂದೆ, ತೆಲಂಗಾಣ ಮೂಲದ ಬಿಜೆಪಿ ನಾಯಕ ಮತ್ತು ಕ್ಯಾಂಟೀನ್ ಗುತ್ತಿಗೆದಾರನ ವಿರುದ್ಧ ದಲಿತ ವಿದ್ಯಾರ್ಥಿನಿಯೊಬ್ಬಳು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೇರವಾಗಿ ಡೀನ್ ಅವರಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಳು. ಆದರೂ, ಆ ದೂರಿನ ಬಗ್ಗೆಯೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಡಾ. ಪಿ. ನಂದಕುಮಾರ್ ದೂರಿದ್ದಾರೆ.

ಪೊಲೀಸರ ಆಗಮನಕ್ಕೂ ಮುನ್ನ ಬಾಗಿಲು ಮುರಿಯುವ ಯತ್ನ: ಜಯಶ್ರೀ ಅವರು ನೇಣಿಗೆ ಶರಣಾದ ದೃಶ್ಯವನ್ನು ಕಿಟಕಿಯಿಂದ ನೋಡಬಹುದಾಗಿತ್ತು. ಆದರೆ ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಕೆಲವು ಪ್ರಾಧ್ಯಾಪಕರು ಉಪಕುಲಪತಿಗಳ ಅನುಪಸ್ಥಿತಿಯಲ್ಲೇ ಕೊಠಡಿಯ ಬಾಗಿಲು ಮುರಿಯಲು ಪ್ರಯತ್ನಿಸಿರುವುದು ಅನುಮಾನಕ್ಕೆ ಮತ್ತಷ್ಟು ಇಂಬು ಕೊಟ್ಟಿದೆ. ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆಯೇ ಎಂಬ ಪ್ರಶ್ನೆಯೂ ಈಗ ಎದುರಾಗಿದೆ.

ಸಾಮಾಜಿಕ ಕಾರ್ಯಕರ್ತರ ಆಕ್ರೋಶ: ಈ ಪ್ರಕರಣದ ಕುರಿತು ಸಾಮಾಜಿಕ ಕಾರ್ಯಕರ್ತರಾದ ವಿಕಾಸ್ ಆರ್. ಮೌರ್ಯ ಮತ್ತು ಹುಲಿಕುಂಟೆ ಮೂರ್ತಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸೌಜನ್ಯ ಪರ ದನಿ ಎತ್ತಿದ ಕರ್ನಾಟಕ ಜಯಶ್ರೀ ವಿಷಯದಲ್ಲಿ ಮೌನವಾಗಿದೆ. ಯಾಕೆ? ಜಾತಿ ತಿಳಿಯಿತೆ?” ಎಂದು ವಿಕಾಸ್ ಮೌರ್ಯ ಅವರು ನೇರವಾಗಿ ಪ್ರಶ್ನಿಸಿದ್ದಾರೆ.

“ಇದು ಮತ್ತೊಂದು ಸಾಂಸ್ಥಿಕ ಹತ್ಯೆ… ದಲಿತರ ಬದುಕುಗಳು ಹೀಗೆ ಹುಳ ಉಪ್ಪಟೆಗಳ ಹಾಗೆ ನಶಿಸಿಹೋಗುತ್ತಿದ್ದರೆ ಮುಂದೇನು?” ಎಂದು ಹುಲಿಕುಂಟೆ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿ ಕೇಂದ್ರೀಯ ವಿವಿಯಲ್ಲಿ(ಸಿಯುಕೆ) ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಇಲ್ಲಿ ದೌರ್ಜನ್ಯ, ಹಿಂಸೆ ನಡೆದಿದೆ.‌ ನಿಷ್ಪಕ್ಷಪಾತ ತನಿಖೆ ನಡೆಸಬೇಕು.  ಆದರೆ ನಾಗರಿಕ ಸಮಾಜದ ಮೌನ ಮಾತ್ರ … ಸಿಯುಕೆನಲ್ಲಿ ಆರೆಸ್ಸಸ್ ನ ಪ್ರಾಬಲ್ಯ, ದಲಿತರ ಮೇಲಿನ ಶೋಷಣೆ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದರ‌ ವಿರುದ್ಧ ಕಲ್ಬುರ್ಗಿಯ‌ ಸ್ಥಳೀಯ ಹೋರಾಟ ಯಾಕೆ ರೂಪುಗೊಳ್ಳಲಿಲ್ಲ ಎನ್ನುವುದು ಯಕ್ಷಪ್ರಶ್ನೆ. ಒಂದು ವಿವಿಯೊಳಗಿನ ಮತಧರ್ಮಾಂದರು, ಜಾತಿವಾದಿಗಳ ವಿರುದ್ಧ ಹೋರಾಟ ರೂಪಿಸಲು ಸೋ ಕಾಲ್ಡ್ ಚಳುವಳಿಗಳು‌ ವಿಫಲವಾಗಿವೆ ಎಂದರೆ ಇನ್ನು ಜಿಲ್ಲೆ, ರಾಜ್ಯ, ದೇಶಾದ್ಯಂತ ಈ ದುಷ್ಟರ ವಿರುದ್ಧ ಸಂಘಟನೆ ಕಟ್ಟುವುದು ಕನಸಿನ ಮಾತು. ಈಗ ಹೇಗೆ ಸಾಂಕೇತಿಕ ಮಟ್ಟದಲ್ಲಿದೆಯೋ ಹಾಗೆ ಮುಂದುವರಿಸಿಕೊಂಡು ಹೋಗುವುದು ‘ಎಲ್ಲರಿಗೂ ಅನುಕೂಲ’… ಇದಕ್ಕೆ ಮುಖ್ಯ ಕಾರಣಗಳನ್ನು ಹೇಳುತ್ತಾ ಹೋದರೆ… ಎಂದು ಶ್ರೀಪಾದ್ ಭಟ್ ಅವರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಹೇಳಿಕೆಗಳು, ವಿಶ್ವವಿದ್ಯಾಲಯದ ಆಡಳಿತವು ದಲಿತ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾತಾವರಣ ಒದಗಿಸುವಲ್ಲಿ ವಿಫಲವಾಗಿದೆ ಎಂಬುದನ್ನು ತೋರಿಸುತ್ತವೆ.

ತನಿಖೆಗೆ ಒತ್ತಾಯ: ವಿದ್ಯಾರ್ಥಿಗಳು ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಆಡಳಿತ ಮಂಡಳಿಯ ನಿರ್ಲಕ್ಷ್ಯ, ಲೈಂಗಿಕ ಕಿರುಕುಳದ ಆರೋಪಗಳು ಮತ್ತು ಸಾಕ್ಷ್ಯ ನಾಶದ ಸಾಧ್ಯತೆಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಈ ಘಟನೆಯು ವಿಶ್ವವಿದ್ಯಾಲಯದ ಆಡಳಿತಕ್ಕೆ ಒಂದು ಸವಾಲಾಗಿ ಪರಿಣಮಿಸಿದ್ದು, ವಿದ್ಯಾರ್ಥಿನಿಯರಿಗೆ ಸೂಕ್ತ ನ್ಯಾಯ ದೊರೆಯುವುದೇ ಎಂದು ಕಾದು ನೋಡಬೇಕಿದೆ.

ಮಾಲೆಗಾಂವ್ ಸ್ಫೋಟ ಪ್ರಕರಣ: ಆರೋಪಿಗಳ ದೋಷಮುಕ್ತಿ, ನ್ಯಾಯಕ್ಕಾಗಿ ಬಾಂಬೆ ಹೈಕೋರ್ಟ್ ಕಡೆಗೆ ಸಂತ್ರಸ್ತರ ಚಿತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...