Homeಮುಖಪುಟಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

ಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ಪತ್ರಿಕಾ ವರದಿಗಳು ಸ್ಫೋಟಗೊಂಡ ನಂತರ ನಿಯಮಾವಳಿ ಉಲ್ಲಂಘಿಸಿ ಕಾನೂನುಬಾಹಿರವಾಗಿ ಆಯ್ಕೆ ಮಾಡಿದ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಕೊಡಲು ವಿವಿಯ ಕಾರ್ಯಕಾರಿ ಮಂಡಳಿ (ಎಕ್ಸಿಕ್ಯುಟಿವ್ ಕೌನ್ಸಿಲ್) ನಿರಾಕರಿಸಿದೆ.

ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತಾಂಗವಾದ ಕಾರ್ಯಕಾರಿ ಮಂಡಳಿ ಒಪ್ಪಿಗೆ ಇಲ್ಲದೇ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಕೊಡುವುದಕ್ಕೆ ಸಾಧ್ಯವಿಲ್ಲ. ದಿ ಹಿಂದೂ ಮತ್ತು ನಾನುಗೌರಿ.ಕಾಂನಲ್ಲಿ ಅಕ್ರಮ ನೇಮಕಾತಿಯ ವಿವರಗಳು ಬಹಿರಂಗಗೊಂಡನಂತರ ಈ ಘಟನೆ ಜರುಗಿದ್ದು ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದೆ.

ಅಕ್ರಮ ನೇಮಕಾತಿಯನ್ನು ತಡೆಯಲು ಸಾಲು ಸಾಲು ಪ್ರಯತ್ನಗಳು ಜರುಗಿವೆ. ಮೊನ್ನೆ ತಾನೆ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್ ಕೇಂದ್ರದ ಮಾನವ ಸಂಪನ್ಮೂಲ ಸಚಿವರಿಗೆ ಪತ್ರ ಬರೆದು ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಕೋರಿದ್ದರು. ಅದಕ್ಕೂ ಮೊದಲು ಅಖಿಲ ಭಾರತ ವಿಶ್ವವಿದ್ಯಾಲಯಗಳ ನವಕರರ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಎಂ.ಬಿ. ಸಜ್ಜನ್ ರಾಷ್ಟಪತಿಗೆ ಪತ್ರ ಬರೆದು ನೇಮಕಾತಿ ಅಕ್ರಮಗಳನ್ನು ಅವರ ಗಮನಕ್ಕೆ ತಂದು ನೇಮಕಾತಿ ರದ್ದುಗೊಳಿಸುವಂತೆ ಆಗ್ರಹಿಸಿದ್ದರು.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌


ಅಲ್ಲದೇ ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಮಣ್ ದಸ್ತಿಯವರು ವಿಶ್ವವಿದ್ಯಾಲಯದ ಉಪಕುಲಪತಿ ಎಚ್.ಎಂ. ಮಹೇಶ್ವರಯ್ಯ ಅವರನ್ನು ಭೇಟಿ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಹೊಸದಾಗಿ ಶುರು ಮಾಡುವಂತೆ ಕೋರಿದ್ದರು. ನಿನ್ನೆ ಮತ್ತೊಬ್ಬ ಹೋರಾಟಗಾರ ಮಹೇಶ್ ರಾಥೋಡ್ ನೇತೃತ್ವದಲ್ಲಿ ಕೆಲವು ಕಾರ್ಯಕರ್ತರು ಹೋಗಿ ಅಕ್ರಮ ನೇಮಕಾತಿ ರದ್ದು ಮಾಡುವಂತೆ ಆಗ್ರಹಿಸಿದ್ದರು.

ಆದರೂ ಛಲ ಬಿಡದ ಉಪಕುಲಪತಿಗಳು ಎಕ್ಸಿಕ್ಯುಟಿವ್ ಕೌನ್ಸಿಲ್ ಸಭೆಯಲ್ಲಿ ಈ ವಿಷಯ ಇಟ್ಟು ಅಕ್ರಮ ನೇಮಕಾತಿಗಳಿಗೆ ಕೌನ್ಸಿಲ್ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಆ ಮೂಲಕ, ನೇಮಕಾತಿಯಲ್ಲಾದ ಅಕ್ರಮಗಳಿಗೆ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರನ್ನೂ ಹೊಣೆಗಾರರನ್ನಾಗಿಸಲು ಪ್ರಯತ್ನಿಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ. “ನೇಮಕಾತಿಯಲ್ಲಿ ಏನೂ ಅಕ್ರಮ ನಡೆದಿಲ್ಲ. ಮುಂದೆ ತನಿಖೆ ನಡೆದು ಏನಾದರೂ ಅಕ್ರಮ ಕಂಡುಬಂದರೆ ಅದಕ್ಕೆ ಸಂಪುರ್ಣ ನಾನೇ ಜವಾಬ್ದಾರ” ಅಂತ ಉಪಕುಲಪತಿಗಳು undertaking ಬರೆದು ಕೊಟ್ಟರೆ ಆಯ್ಕೆ ಪಟ್ಟಿಯನ್ನು ಅನುಮೋದಿಸುವುದಾಗಿ ಕೆಲ ಸದಸ್ಯರು ಪಟ್ಟು ಹಿಡಿದರು. ಅದಕ್ಕೆ ಉಪಕುಲಪತಿಗಳು ಒಪ್ಪಲಿಲ್ಲ, ಸದಸ್ಯರು ಆಯ್ಕೆ ಪಟ್ಟಿಗೆ ಅನುಮೋದನೆ‌ ನೀಡದೆ ಸಭೆ ಮುಗಿದಿದೆ.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಮಹೇಶ್ವರಯ್ಯನವರು ಏಪ್ರಿಲ್ 19ಕ್ಕೆ ನಿವೃತ್ತಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಅವರನ್ನು ಮುಂದುವರೆಸುವಂತೆ ಕುಲಸಚಿವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಆ ಬೇಡಿಕೆಯನ್ನು ಸಾರಾಸಗಟಾಗಿ ನಿರಾಕರಿಸಿತು. ಕುಲಸಚಿವರಿಗೆ ಪತ್ರ ಬರೆದ ಇಲಾಖೆಯ ಕಾರ್ಯದರ್ಶಿಗಳು ನೇಮಕಾತಿ ಪ್ರಕ್ರಿಯೆಯನ್ನು ಮುಂದೆ ಬರುವ ಹೊಸ ಉಪಕುಲಪತಿಗಳು ಮುಂದುವರೆಸುತ್ತಾರೆ ಎಂದರಲ್ಲದೇ ಫೆಬ್ರುವರಿ 18ರ ನಂತರ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದೂ ಹೇಳಿದರು. ಇಷ್ಟು ಸ್ಪಷ್ಟವಾಗಿ ಹೇಳಿದ‌ ಮೇಲೂ ಮಹೇಶ್ವರಯ್ಯನವರು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿ ಎಕ್ಸಿಕ್ಯೂಟಿವ್ ಕೌನ್ಸಿಲ್ ಸಭೆಯಲ್ಲಿ ಆಯ್ಕೆ ಪಟ್ಟಿ ಇಟ್ಟು ಅನುಮೋದನೆ ಪಡೆಯುವ ಪ್ರಯತ್ನ‌ ನಡೆಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...