Homeಮುಖಪುಟಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

ಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ಪತ್ರಿಕಾ ವರದಿಗಳು ಸ್ಫೋಟಗೊಂಡ ನಂತರ ನಿಯಮಾವಳಿ ಉಲ್ಲಂಘಿಸಿ ಕಾನೂನುಬಾಹಿರವಾಗಿ ಆಯ್ಕೆ ಮಾಡಿದ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಕೊಡಲು ವಿವಿಯ ಕಾರ್ಯಕಾರಿ ಮಂಡಳಿ (ಎಕ್ಸಿಕ್ಯುಟಿವ್ ಕೌನ್ಸಿಲ್) ನಿರಾಕರಿಸಿದೆ.

ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತಾಂಗವಾದ ಕಾರ್ಯಕಾರಿ ಮಂಡಳಿ ಒಪ್ಪಿಗೆ ಇಲ್ಲದೇ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಕೊಡುವುದಕ್ಕೆ ಸಾಧ್ಯವಿಲ್ಲ. ದಿ ಹಿಂದೂ ಮತ್ತು ನಾನುಗೌರಿ.ಕಾಂನಲ್ಲಿ ಅಕ್ರಮ ನೇಮಕಾತಿಯ ವಿವರಗಳು ಬಹಿರಂಗಗೊಂಡನಂತರ ಈ ಘಟನೆ ಜರುಗಿದ್ದು ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದೆ.

ಅಕ್ರಮ ನೇಮಕಾತಿಯನ್ನು ತಡೆಯಲು ಸಾಲು ಸಾಲು ಪ್ರಯತ್ನಗಳು ಜರುಗಿವೆ. ಮೊನ್ನೆ ತಾನೆ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್ ಕೇಂದ್ರದ ಮಾನವ ಸಂಪನ್ಮೂಲ ಸಚಿವರಿಗೆ ಪತ್ರ ಬರೆದು ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಕೋರಿದ್ದರು. ಅದಕ್ಕೂ ಮೊದಲು ಅಖಿಲ ಭಾರತ ವಿಶ್ವವಿದ್ಯಾಲಯಗಳ ನವಕರರ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಎಂ.ಬಿ. ಸಜ್ಜನ್ ರಾಷ್ಟಪತಿಗೆ ಪತ್ರ ಬರೆದು ನೇಮಕಾತಿ ಅಕ್ರಮಗಳನ್ನು ಅವರ ಗಮನಕ್ಕೆ ತಂದು ನೇಮಕಾತಿ ರದ್ದುಗೊಳಿಸುವಂತೆ ಆಗ್ರಹಿಸಿದ್ದರು.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌


ಅಲ್ಲದೇ ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಮಣ್ ದಸ್ತಿಯವರು ವಿಶ್ವವಿದ್ಯಾಲಯದ ಉಪಕುಲಪತಿ ಎಚ್.ಎಂ. ಮಹೇಶ್ವರಯ್ಯ ಅವರನ್ನು ಭೇಟಿ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಹೊಸದಾಗಿ ಶುರು ಮಾಡುವಂತೆ ಕೋರಿದ್ದರು. ನಿನ್ನೆ ಮತ್ತೊಬ್ಬ ಹೋರಾಟಗಾರ ಮಹೇಶ್ ರಾಥೋಡ್ ನೇತೃತ್ವದಲ್ಲಿ ಕೆಲವು ಕಾರ್ಯಕರ್ತರು ಹೋಗಿ ಅಕ್ರಮ ನೇಮಕಾತಿ ರದ್ದು ಮಾಡುವಂತೆ ಆಗ್ರಹಿಸಿದ್ದರು.

ಆದರೂ ಛಲ ಬಿಡದ ಉಪಕುಲಪತಿಗಳು ಎಕ್ಸಿಕ್ಯುಟಿವ್ ಕೌನ್ಸಿಲ್ ಸಭೆಯಲ್ಲಿ ಈ ವಿಷಯ ಇಟ್ಟು ಅಕ್ರಮ ನೇಮಕಾತಿಗಳಿಗೆ ಕೌನ್ಸಿಲ್ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಆ ಮೂಲಕ, ನೇಮಕಾತಿಯಲ್ಲಾದ ಅಕ್ರಮಗಳಿಗೆ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರನ್ನೂ ಹೊಣೆಗಾರರನ್ನಾಗಿಸಲು ಪ್ರಯತ್ನಿಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ. “ನೇಮಕಾತಿಯಲ್ಲಿ ಏನೂ ಅಕ್ರಮ ನಡೆದಿಲ್ಲ. ಮುಂದೆ ತನಿಖೆ ನಡೆದು ಏನಾದರೂ ಅಕ್ರಮ ಕಂಡುಬಂದರೆ ಅದಕ್ಕೆ ಸಂಪುರ್ಣ ನಾನೇ ಜವಾಬ್ದಾರ” ಅಂತ ಉಪಕುಲಪತಿಗಳು undertaking ಬರೆದು ಕೊಟ್ಟರೆ ಆಯ್ಕೆ ಪಟ್ಟಿಯನ್ನು ಅನುಮೋದಿಸುವುದಾಗಿ ಕೆಲ ಸದಸ್ಯರು ಪಟ್ಟು ಹಿಡಿದರು. ಅದಕ್ಕೆ ಉಪಕುಲಪತಿಗಳು ಒಪ್ಪಲಿಲ್ಲ, ಸದಸ್ಯರು ಆಯ್ಕೆ ಪಟ್ಟಿಗೆ ಅನುಮೋದನೆ‌ ನೀಡದೆ ಸಭೆ ಮುಗಿದಿದೆ.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಮಹೇಶ್ವರಯ್ಯನವರು ಏಪ್ರಿಲ್ 19ಕ್ಕೆ ನಿವೃತ್ತಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಅವರನ್ನು ಮುಂದುವರೆಸುವಂತೆ ಕುಲಸಚಿವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಆ ಬೇಡಿಕೆಯನ್ನು ಸಾರಾಸಗಟಾಗಿ ನಿರಾಕರಿಸಿತು. ಕುಲಸಚಿವರಿಗೆ ಪತ್ರ ಬರೆದ ಇಲಾಖೆಯ ಕಾರ್ಯದರ್ಶಿಗಳು ನೇಮಕಾತಿ ಪ್ರಕ್ರಿಯೆಯನ್ನು ಮುಂದೆ ಬರುವ ಹೊಸ ಉಪಕುಲಪತಿಗಳು ಮುಂದುವರೆಸುತ್ತಾರೆ ಎಂದರಲ್ಲದೇ ಫೆಬ್ರುವರಿ 18ರ ನಂತರ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದೂ ಹೇಳಿದರು. ಇಷ್ಟು ಸ್ಪಷ್ಟವಾಗಿ ಹೇಳಿದ‌ ಮೇಲೂ ಮಹೇಶ್ವರಯ್ಯನವರು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿ ಎಕ್ಸಿಕ್ಯೂಟಿವ್ ಕೌನ್ಸಿಲ್ ಸಭೆಯಲ್ಲಿ ಆಯ್ಕೆ ಪಟ್ಟಿ ಇಟ್ಟು ಅನುಮೋದನೆ ಪಡೆಯುವ ಪ್ರಯತ್ನ‌ ನಡೆಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...