Homeಮುಖಪುಟಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

ಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ಪತ್ರಿಕಾ ವರದಿಗಳು ಸ್ಫೋಟಗೊಂಡ ನಂತರ ನಿಯಮಾವಳಿ ಉಲ್ಲಂಘಿಸಿ ಕಾನೂನುಬಾಹಿರವಾಗಿ ಆಯ್ಕೆ ಮಾಡಿದ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಕೊಡಲು ವಿವಿಯ ಕಾರ್ಯಕಾರಿ ಮಂಡಳಿ (ಎಕ್ಸಿಕ್ಯುಟಿವ್ ಕೌನ್ಸಿಲ್) ನಿರಾಕರಿಸಿದೆ.

ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತಾಂಗವಾದ ಕಾರ್ಯಕಾರಿ ಮಂಡಳಿ ಒಪ್ಪಿಗೆ ಇಲ್ಲದೇ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಕೊಡುವುದಕ್ಕೆ ಸಾಧ್ಯವಿಲ್ಲ. ದಿ ಹಿಂದೂ ಮತ್ತು ನಾನುಗೌರಿ.ಕಾಂನಲ್ಲಿ ಅಕ್ರಮ ನೇಮಕಾತಿಯ ವಿವರಗಳು ಬಹಿರಂಗಗೊಂಡನಂತರ ಈ ಘಟನೆ ಜರುಗಿದ್ದು ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದೆ.

ಅಕ್ರಮ ನೇಮಕಾತಿಯನ್ನು ತಡೆಯಲು ಸಾಲು ಸಾಲು ಪ್ರಯತ್ನಗಳು ಜರುಗಿವೆ. ಮೊನ್ನೆ ತಾನೆ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್ ಕೇಂದ್ರದ ಮಾನವ ಸಂಪನ್ಮೂಲ ಸಚಿವರಿಗೆ ಪತ್ರ ಬರೆದು ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಕೋರಿದ್ದರು. ಅದಕ್ಕೂ ಮೊದಲು ಅಖಿಲ ಭಾರತ ವಿಶ್ವವಿದ್ಯಾಲಯಗಳ ನವಕರರ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಎಂ.ಬಿ. ಸಜ್ಜನ್ ರಾಷ್ಟಪತಿಗೆ ಪತ್ರ ಬರೆದು ನೇಮಕಾತಿ ಅಕ್ರಮಗಳನ್ನು ಅವರ ಗಮನಕ್ಕೆ ತಂದು ನೇಮಕಾತಿ ರದ್ದುಗೊಳಿಸುವಂತೆ ಆಗ್ರಹಿಸಿದ್ದರು.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌


ಅಲ್ಲದೇ ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಮಣ್ ದಸ್ತಿಯವರು ವಿಶ್ವವಿದ್ಯಾಲಯದ ಉಪಕುಲಪತಿ ಎಚ್.ಎಂ. ಮಹೇಶ್ವರಯ್ಯ ಅವರನ್ನು ಭೇಟಿ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಹೊಸದಾಗಿ ಶುರು ಮಾಡುವಂತೆ ಕೋರಿದ್ದರು. ನಿನ್ನೆ ಮತ್ತೊಬ್ಬ ಹೋರಾಟಗಾರ ಮಹೇಶ್ ರಾಥೋಡ್ ನೇತೃತ್ವದಲ್ಲಿ ಕೆಲವು ಕಾರ್ಯಕರ್ತರು ಹೋಗಿ ಅಕ್ರಮ ನೇಮಕಾತಿ ರದ್ದು ಮಾಡುವಂತೆ ಆಗ್ರಹಿಸಿದ್ದರು.

ಆದರೂ ಛಲ ಬಿಡದ ಉಪಕುಲಪತಿಗಳು ಎಕ್ಸಿಕ್ಯುಟಿವ್ ಕೌನ್ಸಿಲ್ ಸಭೆಯಲ್ಲಿ ಈ ವಿಷಯ ಇಟ್ಟು ಅಕ್ರಮ ನೇಮಕಾತಿಗಳಿಗೆ ಕೌನ್ಸಿಲ್ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಆ ಮೂಲಕ, ನೇಮಕಾತಿಯಲ್ಲಾದ ಅಕ್ರಮಗಳಿಗೆ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರನ್ನೂ ಹೊಣೆಗಾರರನ್ನಾಗಿಸಲು ಪ್ರಯತ್ನಿಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ. “ನೇಮಕಾತಿಯಲ್ಲಿ ಏನೂ ಅಕ್ರಮ ನಡೆದಿಲ್ಲ. ಮುಂದೆ ತನಿಖೆ ನಡೆದು ಏನಾದರೂ ಅಕ್ರಮ ಕಂಡುಬಂದರೆ ಅದಕ್ಕೆ ಸಂಪುರ್ಣ ನಾನೇ ಜವಾಬ್ದಾರ” ಅಂತ ಉಪಕುಲಪತಿಗಳು undertaking ಬರೆದು ಕೊಟ್ಟರೆ ಆಯ್ಕೆ ಪಟ್ಟಿಯನ್ನು ಅನುಮೋದಿಸುವುದಾಗಿ ಕೆಲ ಸದಸ್ಯರು ಪಟ್ಟು ಹಿಡಿದರು. ಅದಕ್ಕೆ ಉಪಕುಲಪತಿಗಳು ಒಪ್ಪಲಿಲ್ಲ, ಸದಸ್ಯರು ಆಯ್ಕೆ ಪಟ್ಟಿಗೆ ಅನುಮೋದನೆ‌ ನೀಡದೆ ಸಭೆ ಮುಗಿದಿದೆ.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಮಹೇಶ್ವರಯ್ಯನವರು ಏಪ್ರಿಲ್ 19ಕ್ಕೆ ನಿವೃತ್ತಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಅವರನ್ನು ಮುಂದುವರೆಸುವಂತೆ ಕುಲಸಚಿವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಆ ಬೇಡಿಕೆಯನ್ನು ಸಾರಾಸಗಟಾಗಿ ನಿರಾಕರಿಸಿತು. ಕುಲಸಚಿವರಿಗೆ ಪತ್ರ ಬರೆದ ಇಲಾಖೆಯ ಕಾರ್ಯದರ್ಶಿಗಳು ನೇಮಕಾತಿ ಪ್ರಕ್ರಿಯೆಯನ್ನು ಮುಂದೆ ಬರುವ ಹೊಸ ಉಪಕುಲಪತಿಗಳು ಮುಂದುವರೆಸುತ್ತಾರೆ ಎಂದರಲ್ಲದೇ ಫೆಬ್ರುವರಿ 18ರ ನಂತರ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದೂ ಹೇಳಿದರು. ಇಷ್ಟು ಸ್ಪಷ್ಟವಾಗಿ ಹೇಳಿದ‌ ಮೇಲೂ ಮಹೇಶ್ವರಯ್ಯನವರು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿ ಎಕ್ಸಿಕ್ಯೂಟಿವ್ ಕೌನ್ಸಿಲ್ ಸಭೆಯಲ್ಲಿ ಆಯ್ಕೆ ಪಟ್ಟಿ ಇಟ್ಟು ಅನುಮೋದನೆ ಪಡೆಯುವ ಪ್ರಯತ್ನ‌ ನಡೆಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...