Homeಮುಖಪುಟಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

ಕೇಂದ್ರೀಯ ವಿವಿ ನೇಮಕಾತಿ ಹಗರಣ: ಅಭ್ಯರ್ಥಿಗಳ ಪಟ್ಟಿ ಅನುಮೋದನೆಗೆ ವಿವಿಯ ಕಾರ್ಯಕಾರಿ ಮಂಡಳಿ ನಕಾರ..

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ಪತ್ರಿಕಾ ವರದಿಗಳು ಸ್ಫೋಟಗೊಂಡ ನಂತರ ನಿಯಮಾವಳಿ ಉಲ್ಲಂಘಿಸಿ ಕಾನೂನುಬಾಹಿರವಾಗಿ ಆಯ್ಕೆ ಮಾಡಿದ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ಕೊಡಲು ವಿವಿಯ ಕಾರ್ಯಕಾರಿ ಮಂಡಳಿ (ಎಕ್ಸಿಕ್ಯುಟಿವ್ ಕೌನ್ಸಿಲ್) ನಿರಾಕರಿಸಿದೆ.

ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತಾಂಗವಾದ ಕಾರ್ಯಕಾರಿ ಮಂಡಳಿ ಒಪ್ಪಿಗೆ ಇಲ್ಲದೇ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಕೊಡುವುದಕ್ಕೆ ಸಾಧ್ಯವಿಲ್ಲ. ದಿ ಹಿಂದೂ ಮತ್ತು ನಾನುಗೌರಿ.ಕಾಂನಲ್ಲಿ ಅಕ್ರಮ ನೇಮಕಾತಿಯ ವಿವರಗಳು ಬಹಿರಂಗಗೊಂಡನಂತರ ಈ ಘಟನೆ ಜರುಗಿದ್ದು ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದೆ.

ಅಕ್ರಮ ನೇಮಕಾತಿಯನ್ನು ತಡೆಯಲು ಸಾಲು ಸಾಲು ಪ್ರಯತ್ನಗಳು ಜರುಗಿವೆ. ಮೊನ್ನೆ ತಾನೆ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್ ಕೇಂದ್ರದ ಮಾನವ ಸಂಪನ್ಮೂಲ ಸಚಿವರಿಗೆ ಪತ್ರ ಬರೆದು ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಕೋರಿದ್ದರು. ಅದಕ್ಕೂ ಮೊದಲು ಅಖಿಲ ಭಾರತ ವಿಶ್ವವಿದ್ಯಾಲಯಗಳ ನವಕರರ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಎಂ.ಬಿ. ಸಜ್ಜನ್ ರಾಷ್ಟಪತಿಗೆ ಪತ್ರ ಬರೆದು ನೇಮಕಾತಿ ಅಕ್ರಮಗಳನ್ನು ಅವರ ಗಮನಕ್ಕೆ ತಂದು ನೇಮಕಾತಿ ರದ್ದುಗೊಳಿಸುವಂತೆ ಆಗ್ರಹಿಸಿದ್ದರು.


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌


ಅಲ್ಲದೇ ಕಲ್ಯಾಣ ಕರ್ನಾಟಕದ ಹೋರಾಟಗಾರ ಲಕ್ಮಣ್ ದಸ್ತಿಯವರು ವಿಶ್ವವಿದ್ಯಾಲಯದ ಉಪಕುಲಪತಿ ಎಚ್.ಎಂ. ಮಹೇಶ್ವರಯ್ಯ ಅವರನ್ನು ಭೇಟಿ ಮಾಡಿ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಹೊಸದಾಗಿ ಶುರು ಮಾಡುವಂತೆ ಕೋರಿದ್ದರು. ನಿನ್ನೆ ಮತ್ತೊಬ್ಬ ಹೋರಾಟಗಾರ ಮಹೇಶ್ ರಾಥೋಡ್ ನೇತೃತ್ವದಲ್ಲಿ ಕೆಲವು ಕಾರ್ಯಕರ್ತರು ಹೋಗಿ ಅಕ್ರಮ ನೇಮಕಾತಿ ರದ್ದು ಮಾಡುವಂತೆ ಆಗ್ರಹಿಸಿದ್ದರು.

ಆದರೂ ಛಲ ಬಿಡದ ಉಪಕುಲಪತಿಗಳು ಎಕ್ಸಿಕ್ಯುಟಿವ್ ಕೌನ್ಸಿಲ್ ಸಭೆಯಲ್ಲಿ ಈ ವಿಷಯ ಇಟ್ಟು ಅಕ್ರಮ ನೇಮಕಾತಿಗಳಿಗೆ ಕೌನ್ಸಿಲ್ ಒಪ್ಪಿಗೆ ಪಡೆಯಲು ಪ್ರಯತ್ನಿಸಿದರು. ಆ ಮೂಲಕ, ನೇಮಕಾತಿಯಲ್ಲಾದ ಅಕ್ರಮಗಳಿಗೆ ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರನ್ನೂ ಹೊಣೆಗಾರರನ್ನಾಗಿಸಲು ಪ್ರಯತ್ನಿಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ. “ನೇಮಕಾತಿಯಲ್ಲಿ ಏನೂ ಅಕ್ರಮ ನಡೆದಿಲ್ಲ. ಮುಂದೆ ತನಿಖೆ ನಡೆದು ಏನಾದರೂ ಅಕ್ರಮ ಕಂಡುಬಂದರೆ ಅದಕ್ಕೆ ಸಂಪುರ್ಣ ನಾನೇ ಜವಾಬ್ದಾರ” ಅಂತ ಉಪಕುಲಪತಿಗಳು undertaking ಬರೆದು ಕೊಟ್ಟರೆ ಆಯ್ಕೆ ಪಟ್ಟಿಯನ್ನು ಅನುಮೋದಿಸುವುದಾಗಿ ಕೆಲ ಸದಸ್ಯರು ಪಟ್ಟು ಹಿಡಿದರು. ಅದಕ್ಕೆ ಉಪಕುಲಪತಿಗಳು ಒಪ್ಪಲಿಲ್ಲ, ಸದಸ್ಯರು ಆಯ್ಕೆ ಪಟ್ಟಿಗೆ ಅನುಮೋದನೆ‌ ನೀಡದೆ ಸಭೆ ಮುಗಿದಿದೆ.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಮಹೇಶ್ವರಯ್ಯನವರು ಏಪ್ರಿಲ್ 19ಕ್ಕೆ ನಿವೃತ್ತಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಅವರನ್ನು ಮುಂದುವರೆಸುವಂತೆ ಕುಲಸಚಿವರು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಆ ಬೇಡಿಕೆಯನ್ನು ಸಾರಾಸಗಟಾಗಿ ನಿರಾಕರಿಸಿತು. ಕುಲಸಚಿವರಿಗೆ ಪತ್ರ ಬರೆದ ಇಲಾಖೆಯ ಕಾರ್ಯದರ್ಶಿಗಳು ನೇಮಕಾತಿ ಪ್ರಕ್ರಿಯೆಯನ್ನು ಮುಂದೆ ಬರುವ ಹೊಸ ಉಪಕುಲಪತಿಗಳು ಮುಂದುವರೆಸುತ್ತಾರೆ ಎಂದರಲ್ಲದೇ ಫೆಬ್ರುವರಿ 18ರ ನಂತರ ಯಾವುದೇ ಹೊಸ ನೇಮಕಾತಿ ಮಾಡುವಂತಿಲ್ಲ ಎಂದೂ ಹೇಳಿದರು. ಇಷ್ಟು ಸ್ಪಷ್ಟವಾಗಿ ಹೇಳಿದ‌ ಮೇಲೂ ಮಹೇಶ್ವರಯ್ಯನವರು ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿ ಎಕ್ಸಿಕ್ಯೂಟಿವ್ ಕೌನ್ಸಿಲ್ ಸಭೆಯಲ್ಲಿ ಆಯ್ಕೆ ಪಟ್ಟಿ ಇಟ್ಟು ಅನುಮೋದನೆ ಪಡೆಯುವ ಪ್ರಯತ್ನ‌ ನಡೆಸಿದರು. ಆದರೆ ಅದಕ್ಕೆ ಎಕ್ಸಿಕ್ಯುಟಿವ್ ಕೌನ್ಸಿಲ್ ಅವಕಾಶ ಕೊಡಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...