Homeಮುಖಪುಟಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ...

ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌

ಗುರುವಾರ ಪತ್ರವನ್ನು ಕೇಂದ್ರ ಸಚಿವರಿಗೆ ರವಾನಿಸಿರುವ ಅವರು, ದಿ ಹಿಂದೂ ಮತ್ತು ನಾನುಗೌರಿ ವರದಿಯ ವಿವರಗಳನ್ನು ಗಂಭೀರವಾಗಿ ಪರಿಗಣಿಸಿ ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಸಂಸದರು ಕೋರಿದ್ದಾರೆ.

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಲು ಸಮಿತಿ ನೇಮಿಸುವಂತೆ ಒತ್ತಾಯಿಸಿ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್‌ರವರು ಕೇಂದ್ರದ ಮಾನವ ಸಂಪನ್ಮೂಲ ಸಚಿವ ರಮೇಶ್‌ ನಿಶಾಂಕ್‌ ಪೋಖ್ರಿಯಾಲ್‌ರವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಕುರಿತು ’ದಿ ಹಿಂದೂ’ ಪತ್ರಿಕೆ ಪ್ರಕಟಿಸಿದ ತನಿಖಾ ವರದಿ ಮತ್ತು ಅದರ ಜಾಡು ಹಿಡಿದು GauriLankeshnews.com  ಮತ್ತು ನಾನುಗೌರಿ.ಕಾಂ ಪತ್ರಿಕೆಗಳು ವಿಸ್ತೃತ ವರದಿ ಪ್ರಕಟಿಸಿದ್ದವು. ಪತ್ರದಲ್ಲಿ ಈ ವರದಿಗಳನ್ನು ಉಲ್ಲೇಖಿಸಿ ಲಗತ್ತಿಸಿದ್ದಾರೆ.

ಗುರುವಾರ ಪತ್ರವನ್ನು ಕೇಂದ್ರ ಸಚಿವರಿಗೆ ರವಾನಿಸಿರುವ ಅವರು, ದಿ ಹಿಂದೂ ಮತ್ತು ನಾನುಗೌರಿ ವರದಿಯ ವಿವರಗಳನ್ನು ಗಂಭೀರವಾಗಿ ಪರಿಗಣಿಸಿ ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಸಂಸದರು ಕೋರಿದ್ದಾರೆ.

ಸಂಸದ ಉಮೇಶ್‌ ಜಾಧವ್‌ರವರು ಬರೆದ ಪತ್ರ

25.09.2019ರಂದು ಹೊರಡಿಸಿದ ಅಧಿಸೂಚನೆಯಂತೆ ವಿ.ವಿಯ 30 ವಿಭಾಗಗಳಲ್ಲಿನ 67 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ, ಅರ್ಹರಲ್ಲದ, ಬೋಧನಾ ಅನುಭವವಿಲ್ಲದ ವ್ಯಕ್ತಿಗಳನ್ನೂ ಸಹ ಹಲವು ಹುದ್ದೆಗಳಿಗೆ ಕುಲಪತಿಗಳಾದ ಎಚ್.ಎಂ ಮಹೇಶ್ವರಯ್ಯನವರು ನೇಮಿಸಿಕೊಂಡಿದ್ದರು.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಯುಜಿಸಿ ನಿಯಮಾವಳಿಗಳಲ್ಲಿ ಇಂತಿಷ್ಟು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಬೇಕೆಂಬ ನಿಯಮವನ್ನು ಮೀರಿ ಕೆಲವರನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ. ಅನರ್ಹ ಅಭ್ಯರ್ಥಿಗಳನ್ನು ಸಹ ತಜ್ಞರ ಸಮಿತಿಯು ಮುಂದಿನ ಹಂತಕ್ಕೆ ಕಳಿಸಿ “ಅಂತಿಮ ತೀರ್ಮಾನ ಸಕ್ಷಮ ಪ್ರಾಧಿಕಾರಕ್ಕೆ ಬಿಟ್ಟಿದ್ದು” ಎಂದು ಷರಾ ಬರೆದು ಕಳಿಸಿಲಾಗಿದೆ. ಏಕೆಂದರೆ ಸಂದರ್ಶನ ಮಾಡುವವರು ಮತ್ತು ಸಕ್ಷಮ ಪ್ರಾಧಿಕಾರವೆಂದರೆ ಕುಲಪತಿಗಳಾದ ಮಹೇಶ್ವರಯ್ಯನವರೇ ಆಗಿದ್ದಾರೆ. ಇದಕ್ಕಾಗಿ ಅವರಿಂದ ತಲಾ 30-40 ಲಕ್ಷ ರೂ ಪಡೆದಿದ್ದಾರೆಂಬ ಸುದ್ದಿ ಇಡೀ ವಲಯದಲ್ಲಿ ಹರಿದಾಡುತ್ತಿದೆ.

ಕುಲಪತಿ ಎಚ್‌.ಎಂ ಮಹೇಶ್ವರಯ್ಯ

ಇಂತಹ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ಒಂದು ಕಡೆಯಾದರೆ, ಹೀಗೆ ಅನರ್ಹರು ಆಯ್ಕೆಯಾಗುವುದರಿಂದ ವಿ.ವಿಯ ಗುಣಮಟ್ಟ ಹಾಳಾಗುತ್ತಿದೆ. ಅಲ್ಲದೇ ಅರ್ಹ ಅಭ್ಯರ್ಥಿಗಳು ಪ್ರತಿಭಾವಂತರಾದರೂ ಸಹ ಈ ಹಗರಣದ ಬಲಿಪಶುಗಳಾಗುತ್ತಿದ್ದಾರೆ. ಹಾಗಾಗಿ ಈ ಕುರಿತು ತ್ವರಿತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ. ಇದು ಬೇರೆ ಬೇರೆ ವಿವಿಗಳಿಗೂ ಪಾಠವಾಗಬೇಕಿದೆ. ಶೈಕ್ಷಣಿಕ ಕ್ಷೇತ್ರ ಪಾರದರ್ಶಕವಾಗಿ, ಗುಣಮಟ್ಟದಿಂದ ಕೂಡಿರಬೇಕಾಗಿದೆ.

ಈ ನಿಟ್ಟಿನಲ್ಲಿ ಈ ಬೃಹತ್‌ ಹಗರಣದ ಕುರಿತು ಕಾಳಜಿವಹಿಸಿ ಸಂಸದರು ಪತ್ರ ಬರೆದಿರುವುದು ಪ್ರಕರಣಕ್ಕೆ ಮತ್ತಷ್ಟು ಬಲ ತುಂಬಿದೆ. ತನಿಖೆ ಬೇಗ ನಡೆಯಲಿ ಎಂಬುದು ನಮ್ಮ ಆಶಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...