Homeಮುಖಪುಟಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ...

ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ ಸಂಸದ ಜಾಧವ್‌

ಗುರುವಾರ ಪತ್ರವನ್ನು ಕೇಂದ್ರ ಸಚಿವರಿಗೆ ರವಾನಿಸಿರುವ ಅವರು, ದಿ ಹಿಂದೂ ಮತ್ತು ನಾನುಗೌರಿ ವರದಿಯ ವಿವರಗಳನ್ನು ಗಂಭೀರವಾಗಿ ಪರಿಗಣಿಸಿ ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಸಂಸದರು ಕೋರಿದ್ದಾರೆ.

- Advertisement -
- Advertisement -

ಕಲಬುರಗಿಯ ಕೇಂದ್ರೀಯ ವಿ.ವಿಯಲ್ಲಿ ಕಳೆದ ವರ್ಷ 67 ಹುದ್ದೆಗಳ ನೇಮಕಾತಿಯಲ್ಲಿ ನಡೆದಿದ್ದ ಭಾರೀ ಭ್ರಷ್ಟಾಚಾರದ ಕುರಿತು ತನಿಖೆ ನಡೆಸಲು ಸಮಿತಿ ನೇಮಿಸುವಂತೆ ಒತ್ತಾಯಿಸಿ ಕಲಬುರಗಿ ಲೋಕಸಭಾ ಸದಸ್ಯರಾದ ಉಮೇಶ್ ಜಾಧವ್‌ರವರು ಕೇಂದ್ರದ ಮಾನವ ಸಂಪನ್ಮೂಲ ಸಚಿವ ರಮೇಶ್‌ ನಿಶಾಂಕ್‌ ಪೋಖ್ರಿಯಾಲ್‌ರವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯವಾದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಕುರಿತು ’ದಿ ಹಿಂದೂ’ ಪತ್ರಿಕೆ ಪ್ರಕಟಿಸಿದ ತನಿಖಾ ವರದಿ ಮತ್ತು ಅದರ ಜಾಡು ಹಿಡಿದು GauriLankeshnews.com  ಮತ್ತು ನಾನುಗೌರಿ.ಕಾಂ ಪತ್ರಿಕೆಗಳು ವಿಸ್ತೃತ ವರದಿ ಪ್ರಕಟಿಸಿದ್ದವು. ಪತ್ರದಲ್ಲಿ ಈ ವರದಿಗಳನ್ನು ಉಲ್ಲೇಖಿಸಿ ಲಗತ್ತಿಸಿದ್ದಾರೆ.

ಗುರುವಾರ ಪತ್ರವನ್ನು ಕೇಂದ್ರ ಸಚಿವರಿಗೆ ರವಾನಿಸಿರುವ ಅವರು, ದಿ ಹಿಂದೂ ಮತ್ತು ನಾನುಗೌರಿ ವರದಿಯ ವಿವರಗಳನ್ನು ಗಂಭೀರವಾಗಿ ಪರಿಗಣಿಸಿ ಹಗರಣದ ತನಿಖೆ ನಡೆಸುವಂತೆ ಹಾಗೂ ಈ ನೇಮಕಾತಿಯನ್ನು ರದ್ದುಗೊಳಿಸಿ ಹೊಸದಾಗಿ ನೇಮಕಾತಿ ನಡೆಸುವಂತೆ ಸಂಸದರು ಕೋರಿದ್ದಾರೆ.

ಸಂಸದ ಉಮೇಶ್‌ ಜಾಧವ್‌ರವರು ಬರೆದ ಪತ್ರ

25.09.2019ರಂದು ಹೊರಡಿಸಿದ ಅಧಿಸೂಚನೆಯಂತೆ ವಿ.ವಿಯ 30 ವಿಭಾಗಗಳಲ್ಲಿನ 67 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಯಲ್ಲಿ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ, ಅರ್ಹರಲ್ಲದ, ಬೋಧನಾ ಅನುಭವವಿಲ್ಲದ ವ್ಯಕ್ತಿಗಳನ್ನೂ ಸಹ ಹಲವು ಹುದ್ದೆಗಳಿಗೆ ಕುಲಪತಿಗಳಾದ ಎಚ್.ಎಂ ಮಹೇಶ್ವರಯ್ಯನವರು ನೇಮಿಸಿಕೊಂಡಿದ್ದರು.


ಇದನ್ನೂ ಓದಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೃಹತ್ ನೇಮಕಾತಿ ಹಗರಣ ಬಯಲು


ಯುಜಿಸಿ ನಿಯಮಾವಳಿಗಳಲ್ಲಿ ಇಂತಿಷ್ಟು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಬೇಕೆಂಬ ನಿಯಮವನ್ನು ಮೀರಿ ಕೆಲವರನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ. ಅನರ್ಹ ಅಭ್ಯರ್ಥಿಗಳನ್ನು ಸಹ ತಜ್ಞರ ಸಮಿತಿಯು ಮುಂದಿನ ಹಂತಕ್ಕೆ ಕಳಿಸಿ “ಅಂತಿಮ ತೀರ್ಮಾನ ಸಕ್ಷಮ ಪ್ರಾಧಿಕಾರಕ್ಕೆ ಬಿಟ್ಟಿದ್ದು” ಎಂದು ಷರಾ ಬರೆದು ಕಳಿಸಿಲಾಗಿದೆ. ಏಕೆಂದರೆ ಸಂದರ್ಶನ ಮಾಡುವವರು ಮತ್ತು ಸಕ್ಷಮ ಪ್ರಾಧಿಕಾರವೆಂದರೆ ಕುಲಪತಿಗಳಾದ ಮಹೇಶ್ವರಯ್ಯನವರೇ ಆಗಿದ್ದಾರೆ. ಇದಕ್ಕಾಗಿ ಅವರಿಂದ ತಲಾ 30-40 ಲಕ್ಷ ರೂ ಪಡೆದಿದ್ದಾರೆಂಬ ಸುದ್ದಿ ಇಡೀ ವಲಯದಲ್ಲಿ ಹರಿದಾಡುತ್ತಿದೆ.

ಕುಲಪತಿ ಎಚ್‌.ಎಂ ಮಹೇಶ್ವರಯ್ಯ

ಇಂತಹ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ಒಂದು ಕಡೆಯಾದರೆ, ಹೀಗೆ ಅನರ್ಹರು ಆಯ್ಕೆಯಾಗುವುದರಿಂದ ವಿ.ವಿಯ ಗುಣಮಟ್ಟ ಹಾಳಾಗುತ್ತಿದೆ. ಅಲ್ಲದೇ ಅರ್ಹ ಅಭ್ಯರ್ಥಿಗಳು ಪ್ರತಿಭಾವಂತರಾದರೂ ಸಹ ಈ ಹಗರಣದ ಬಲಿಪಶುಗಳಾಗುತ್ತಿದ್ದಾರೆ. ಹಾಗಾಗಿ ಈ ಕುರಿತು ತ್ವರಿತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ. ಇದು ಬೇರೆ ಬೇರೆ ವಿವಿಗಳಿಗೂ ಪಾಠವಾಗಬೇಕಿದೆ. ಶೈಕ್ಷಣಿಕ ಕ್ಷೇತ್ರ ಪಾರದರ್ಶಕವಾಗಿ, ಗುಣಮಟ್ಟದಿಂದ ಕೂಡಿರಬೇಕಾಗಿದೆ.

ಈ ನಿಟ್ಟಿನಲ್ಲಿ ಈ ಬೃಹತ್‌ ಹಗರಣದ ಕುರಿತು ಕಾಳಜಿವಹಿಸಿ ಸಂಸದರು ಪತ್ರ ಬರೆದಿರುವುದು ಪ್ರಕರಣಕ್ಕೆ ಮತ್ತಷ್ಟು ಬಲ ತುಂಬಿದೆ. ತನಿಖೆ ಬೇಗ ನಡೆಯಲಿ ಎಂಬುದು ನಮ್ಮ ಆಶಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...