Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

- Advertisement -
- Advertisement -

ಇಲ್ಲಿ ಅನ್ಯಾಯವನ್ನು ಯಾರೂ ಪ್ರಶ್ನೆ ಮಾಡೋ ಹಂಗೇ ಇಲ್ಲ. ಹಾಗೆಲ್ಲ ಪ್ರಶ್ನೆ ಮಾಡಿದ ಸಿಬ್ಬಂದಿಗೆ ಶೋ-ಕಾಸ್ ನೊಟಿಸ್ ನೀಡಿ, ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಲಾಗುತ್ತದೆ.
ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿ.ಸಿ. ಮತ್ತು ರಿಜಿಸ್ಟ್ರಾರ್ ಇಬ್ಬರೂ ನಿಯಮಿತ ಹುದ್ದೆ ಹೊಂದಿದವರಲ್ಲ. ಇಬ್ಬರೂ ಪ್ರಭಾರಿ ಹುದ್ದೆಯಲ್ಲಿರುವವರು. ಒಬ್ಬರು ವಿ.ಸಿ. ಎಂ.ವಿ ಅಳಗವಾಡಿ ಮತ್ತು ಇನ್ನೊಬ್ಬರು ರಿಜಿಸ್ಟ್ರಾರ್ ಬಸವರಾಜ್ ಡೋಣೂರ್. ಇವರಿಬ್ಬರ ಕಾರ್ಯಶೈಲಿ ಹೇಗಿದೆ ಎಂದರೆ ತಮ್ಮ ಮನಸೋ ಇಚ್ಛೆಯಂತೆ ಅವರು ನಿಯಮಗಳನ್ನು ಮುರಿಯುತ್ತಾರೆ. ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಹಣಕಾಸು ವ್ಯವಹಾರ ಮಾಡುತ್ತಾರೆ. ಇದಕ್ಕೆಲ್ಲ ಸಹಕರಿಸುವ ಹಣಕಾಸು ಅಧಿಕಾರಿಯನ್ನು ಡೆಪ್ಯುಟೇಷನ್ ಅವಧಿ ಮುಗಿದರೂ ಮುಂದುವರೆಸುತ್ತಾರೆ ಎಂಬ ಆರೋಪಗಳು ದಟ್ಟವಾಗಿವೆ.

ಕೇಂದ್ರೀಯ ವಿವಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಎಲ್ಲ ಅಪರಾತಪರಾಗಳ ವಿರುದ್ಧ ಆಕ್ಷೇಪ ಸಲ್ಲಿಸಿದ್ದಾರೆ. ಹಲವು ಸಂಘಟನೆಗಳು ರಾಷ್ಟ್ರಪತಿಗೂ ದೂರು ಸಲ್ಲಿಸಿವೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಅಹಿಂದ ಫೋರಂ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆ ಸೇರಿದಂತೆ ಕೆಲವು ಸಂಸ್ಥೆಗಳು ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಉಪಕುಲಪತಿ ಎಂ.ವಿ. ಅಳಗವಾಡಿ ಮತ್ತು ರಿಜಿಸ್ಟ್ರಾರ್ ಬಸವರಾಜ್ ಡೋಣೂರ್ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಸ್.ಆರ್. ಕೊಲ್ಲೂರು, ಅಹಿಂದ ಫೋರಂ ರಾಜ್ಯ ಅಧ್ಯಕ್ಷ ಸೈಬಣ್ಣ ಜಮಾದಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವಿಭಾಗೀಯ ಸಂಚಾಲಕ ಶೌಕತ್ ಅಲಿ ಆಲೂರ್ ಮತ್ತು ಸಾಮಾಜಿಕ ಕಾರ್ಯಕರ್ತ ರಮೇಶ್ ನೀಲೂರ್ ಅವರು, ಪ್ರಭಾರಿ ಉಪಕುಲಪತಿ ಮತ್ತು ಪ್ರಭಾರಿ ರಿಜಿಸ್ಟ್ರಾರ್ ಅವರ ವಿವಿಧ ಅಕ್ರಮಗಳನ್ನು ಪಟ್ಟಿ ಮಾಡಿದ್ದಾರೆ. ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪತ್ರದ ಪ್ರತಿಗಳನ್ನು ಶಿಕ್ಷಣ ಸಚಿವಾಲಯ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರು, ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ, ಕಾರ್ಯಕಾರಿ ಮಂಡಳಿ ಮತ್ತು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸದಸ್ಯರಿಗೆ ಕಳುಹಿಸಲಾಗಿದೆ.

ವ್ಯಾಪ್ತಿ ಮೀರಿ ಹಣಕಾಸು ವ್ಯವಹಾರ

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವಿಭಾಗೀಯ ಸಂಚಾಲಕ ಶೌಕತ್ ಅಲಿ ಆಲೂರ್, ‘ಇಲ್ಲಿ ಹಣಕಾಸು ಭ್ರಷ್ಟಾಚಾರವಷ್ಟೇ ಅಲ್ಲ, ಅಹಿಂದ ನೌಕರರನ್ನು ತುಳಿಯುವ ಕೆಲಸವೂ ನಡೆಯುತ್ತಿದೆ. ಭ್ರಷ್ಟಾಚಾರವನ್ನು ಪ್ರಶ್ನಿಸಿದ ನೌಕರರಿಗೆ ಶೋ-ಕಾಸ್ ನೋಟಿಸ್ ನೀಡುವಂತಹ ಸರ್ವಾಧಿಕಾರಿ ಧೋರಣೆಯನ್ನು ವಿ.ಸಿ. ಮತ್ತು ರಿಜಿಸ್ಟ್ರಾರ್ ಅನುಸರಿಸುತ್ತಿದ್ದಾರೆ. ಇದರಿಂದ ಇಲ್ಲಿನ ಶೈಕ್ಷಣಿಕ ವಾತಾವರಣವೇ ಹದಗೆಟ್ಟು ಹೋಗಿದೆ’ ಎಂದರು.

‘ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತ ಮಂಡಳಿಯಾದ ಕಾರ್ಯನಿರ್ವಾಹಕ ಮಂಡಳಿಯು ಪ್ರಭಾರಿ ರಿಜಿಸ್ಟ್ರಾರ್ ಅವರಿಗೆ 50,000 ರೂ.ವರೆಗೆ ಮಾತ್ರ ಖರ್ಚು ಮಾಡಲು ಅಧಿಕಾರ ನೀಡಿದೆ. ಆದರೆ ರಿಜಿಸ್ಟ್ರಾರ್ 4 ಲಕ್ಷ ರೂವರೆಗೆ ಹಣವನ್ನು ಖರ್ಚು ಮಾಡುವ ಮೂಲಕ ನಿಯಮ ಮುರಿದಿದ್ದಾರೆ’ ಎಂದು ಶೌಕತ್ ಆರೋಪಿಸಿದ್ದಾರೆ.

ಪ್ರೊ.ಅಳಗವಾಡಿ ಮತ್ತು ಪ್ರೊ.ಡೋಣೂರ್ ಉಸ್ತುವಾರಿ ಉಪಕುಲಪತಿ ಮತ್ತು ಉಸ್ತುವಾರಿ ರಿಜಿಸ್ಟ್ರಾರ್ ಆಗಿದ್ದು, ತಮ್ಮ ಸ್ಥಾನಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಅಧ್ಯಾಪಕರೊಬ್ಬರು ನಾನುಗೌರಿ.ಕಾಂ ಗೆ ತಿಳಿಸಿದರು. ಅಹಿಂದ ವರ್ಗದ ನೌಕರರಿಗೆ ಕಿರುಕುಳ ನೀಡುವ ಮತ್ತು ಅಲ್ಪಸಂಖ್ಯಾತ ನೌಕರರನ್ನು ದ್ವೇಷ ಮಾಡುವ ಕೆಲಸದಲ್ಲಿ ವಿ.ಸಿ ಮತ್ತು ರಿಜಿಸ್ಟ್ರಾರ್ ನಿರತರಾಗಿದ್ದಾರೆ ಎಂದು ಅವರು ತಿಳಿಸಿದರು.

‘ಟೆಂಡರ್‌ಗಳನ್ನು ಕರೆಯದೇ 5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಖರೀದಿಸುವ ಮೂಲಕ ಖರೀದಿ ಪ್ರಕ್ರಿಯೆಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಡಿಎಸ್‌ಎಸ್ ಮತ್ತು ಅಹಿಂದ ಫೋರಂ ಕಾರ್ಯಕರ್ತರು ಆರೋಪಿಸಿದ್ದಾರೆ.

ಶಿವಾನಂದಂ ಮುಂದುವರಿಕೆ ಏಕೆ?

ಮೂರನೆಯ ಪ್ರಮುಖ ಆರೋಪವೆಂದರೆ, ವಿ.ಸಿ ಮತ್ತು ರಿಜಿಸ್ಟ್ರಾರ್ ಅವರು ವಿಶ್ವವಿದ್ಯಾನಿಲಯದಲ್ಲಿ ಹಣಕಾಸು ಅಧಿಕಾರಿಯಾಗಿ ಡೆಪ್ಯುಟೇಷನ್‌ನಲ್ಲಿದ್ದ ಶಿವಾನಂದಂ ಅವರನ್ನು ಡೆಪ್ಯುಟೇಷನ್ ಅವಧಿ ಮುಗಿದ ನಂತರವೂ ಮುಂದುವರೆಸಿದ್ದಾರೆ. ‘ಹೈದರಾಬಾದ್ ವಿವಿಯಿಂದ ಶಿವಾನಂದಂ ಇಲ್ಲಿಗೆ ಡೆಪ್ಯೂಟ್ ಆಗಿದ್ದಾರೆ. ಅವರ ಡೆಪ್ಯುಟೇಷನ್ ಅವಧಿ ಮುಗಿದರೂ ಕೂಡ ಅವರನ್ನು ಇಲ್ಲಿ ಉಳಿಸಿಕೊಂಡಿರುವುದು ನಿಯಮಬಾಹಿರ. ಅವರು ಪ್ರಭಾರಿ ವಿ.ಸಿ ಮತ್ತು ಪ್ರಭಾರಿ ರಿಜಿಸ್ಟ್ರಾರ್ ಅವರ ಜೊತೆ ಅಕ್ರಮಗಳಲ್ಲಿ ಹೊಂದಾಣಿಕೆಯಾಗಿದ್ದೆ ಇದಕ್ಕೆ ಕಾರಣ. ಸದ್ಯ ಶಿವಾನಂದಂ ಹೈದರಾಬಾದ್ ವಿವಿಯ ತಮ್ಮ ಕೆಲಸದಿಂದ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಹೀಗಾಗಿ, ಅಲ್ಲಿಯ ಉದ್ಯೋಗಿಯೇ ಅಲ್ಲದ ಅವರು ಇಲ್ಲಿ ಡೆಪ್ಯುಟೇಷನ್ ಮೇಲೆ ಕೆಲಸ ಮಾಡುವುದೇ ನಿಯಮಬಾಹಿರ’ ಎಂದು ಶೌಕತ್ ಅಲಿ ಆಲೂರು ವಿವರಿಸಿದರು.

“ಪ್ರೊ. ಅಳಗವಾಡಿ ಮತ್ತು ಪ್ರೊ. ಡೋಣೂರ್ ಪೂರ್ಣಪ್ರಮಾಣದ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅಲ್ಲ. ಅವರು ಪ್ರಮುಖ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಇಬ್ಬರೂ ದೈನಂದಿನ ವಿಷಯಗಳಲ್ಲಿ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ, ಅವರು ನೇಮಕಾತಿಗಳು ಮತ್ತು ಹಣಕಾಸಿನ ವಿಷಯಗಳಂತಹ ಪ್ರಮುಖ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ಪತ್ರಕ್ಕೆ ಕೇಂದ್ರ ವಿಶ್ವವಿದ್ಯಾಲಯದ ಸಂದರ್ಶಕರಾಗಿರುವ ರಾಷ್ಟ್ರಪತಿ ಪ್ರತಿಕ್ರಿಯೆ ನೀಡುತ್ತಾರೆ ಎಂದು ಭಾವಿಸಿದ್ದೇವೆ. ಪ್ರಭಾರಿ ಉಪಕುಲಪತಿ ಮತ್ತು ಪ್ರಭಾರಿ ರಿಜಿಸ್ಟ್ರಾರ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ನಾವು ದೊಡ್ಡ ಹೋರಾಟ ನಡೆಸಲಿದ್ದೇವೆ” ಎಂದು ಶೌಕತ್ ಆಲೂರು ನಾನುಗೌರಿ.ಕಾಂಗೆ ತಿಳಿಸಿದರು.

ಸಿಬ್ದಂದಿ ಮೇಲೆ ಸರ್ವಾಧಿಕಾರ!

ಕೆಲವು ದಿನಗಳ ಹಿಂದೆ, ಶಿವಾನಂದಂ ಅವರ ಡೆಪ್ಯುಟೇಶನ್ ಅವಧಿ ಮುಗಿದ ನಂತರವೂ ವಿಶ್ವವಿದ್ಯಾಲಯದಲ್ಲಿ ಹಣಕಾಸು ಅಧಿಕಾರಿಯಾಗಿ ಮುಂದುವರಿಸುವ ಕಾನೂನು ಬದ್ಧತೆಯನ್ನು ವಿಶ್ವವಿದ್ಯಾಲಯದ ಸಿಬ್ಬಂದಿ ಪ್ರಶ್ನಿಸಿದ್ದಾರೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ 26 ಸದಸ್ಯರು ಇತ್ತೀಚೆಗೆ ಈ ನಿರ್ಧಾರವನ್ನು ಆಕ್ಷೇಪಿಸಿ ಪ್ರಭಾರಿ ಉಪಕುಲಪತಿ ಅಳಗವಾಡಿಯವರಿಗೆ ಪತ್ರ ಬರೆದಿದ್ದಾರೆ. ಆದರೆ, ಅಳಗವಾಡಿಯವರು ಹೀಗೆ ಆಕ್ಷೇಪ ಸಲ್ಲಿಸಿದ 26 ನೌಕರರ ಪೈಕಿ 12 ಜನರಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯರಾಗಿರುವ ಗೋರಖ್‌ಪುರ ವಿಶ್ವವಿದ್ಯಾಲಯದ ಉಪಕುಲಪತಿ ರಾಜೇಶ್ ಸಿಂಗ್ ಗುರುವಾರ ಪ್ರಭಾರಿ ರಿಜಿಸ್ಟ್ರಾರ್‌ಗೆ ಬರೆದ ಪತ್ರದಲ್ಲಿ ಇದೇ ರೀತಿಯ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಡೆಯಬೇಕಿದ್ದ 54 ನೇ ಕಾರ್ಯಕಾರಿ ಮಂಡಳಿ ಸಭೆಯನ್ನು ಮುಂದೂಡಲು ಅವರು ಪ್ರಭಾರಿ ರಿಜಿಸ್ಟ್ರಾರ್ ಅವರಿಗೆ ರಾಜೇಶ್ ಸಿಂಗ್ ಸೂಚಿಸಿದರು. ಆ ಸಭೆಯಲ್ಲಿ ಶಿವಾನಂದಂ ಅವರನ್ನು ಹಣಕಾಸು ಅಧಿಕಾರಿಯಾಗಿ ಮುಂದುವರೆಸುವ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕಾಗಿತ್ತು. ಅಂತಹ ಮಹತ್ವದ ವಿಷಯವನ್ನು ಸಾಮಾನ್ಯ ಉಪಕುಲಪತಿ ಮತ್ತು ಸಾಮಾನ್ಯ ರಿಜಿಸ್ಟ್ರಾರ್ ಮಾತ್ರ ಚರ್ಚಿಸಬಹುದಾಗಿದೆ, ತಾತ್ಕಾಲಿಕ ಆಧಾರದ ಮೇಲೆ ಸ್ಥಾನಗಳನ್ನು ಅಲಂಕರಿಸಿದ ಪ್ರಭಾರಿಗಳಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದರು.
ಆದರೆ, ಕಾರ್ಯಕಾರಿ ಮಂಡಳಿ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿನ ಚರ್ಚೆಗಳ ವಿವರಗಳನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಭಾರಿ ರಿಜಿಸ್ಟ್ರಾರ್ ಡೋಣೂರ್ ಹೇಳಿದ್ದಾರೆ. “ಸಭೆಯಲ್ಲಿ ಹಾಜರಿರುವ ಎಲ್ಲ ಸದಸ್ಯರ ಅನುಮೋದನೆಯ ನಂತರವೇ ಮಿನಟ್‌ಗಳನ್ನು ಅಂತಿಮಗೊಳಿಸಲಾಗುತ್ತದೆ ಮತ್ತು ಇದು ಸಮಯ ತೆಗೆದುಕೊಳ್ಳುತ್ತದೆ. ಅಂತಹ ವಿವರಗಳನ್ನು ಅದಕ್ಕೂ ಮೊದಲು ಬಹಿರಂಗಪಡಿಸಲಾಗುವುದಿಲ್ಲ” ಎಂದು ಡೋಣೂರ್ ತಿಳಿಸಿದ್ದಾರೆ.

ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿರುವ ಪ್ರೊ. ಡೋಣೂರ್, ‘ಆರೋಪಗಳು ಆಧಾರರಹಿತ’ ಎಂದು ಹೇಳಿದ್ದಾರೆ. ಶಿವಾನಂದಂ ಅವರ ಮುಂದುವರಿಕೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ನೌಕರರಿಗೆ ಅವರು ನೀಡಿದ ನೋಟಿಸ್‌ಗಳನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಭಾಗದ ಅತ್ಯಂತ ಗುಣಮಟ್ಟದ ಶಿಕ್ಷಣ ನೀಡುವ ಪ್ರಮುಖ ವಿಶ್ವವಿದ್ಯಾಲಯವಾಗಿರುವ ಇಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಈ ರೀತಿ ಹಾಳುಗೆಡವುತ್ತಿರುವ ಇಂತಹ ನೀಚರಿಗೆ ಶಿಕ್ಷೆ ಆಗಲೇಬೇಕು.

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...