Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

- Advertisement -
- Advertisement -

ಇಲ್ಲಿ ಅನ್ಯಾಯವನ್ನು ಯಾರೂ ಪ್ರಶ್ನೆ ಮಾಡೋ ಹಂಗೇ ಇಲ್ಲ. ಹಾಗೆಲ್ಲ ಪ್ರಶ್ನೆ ಮಾಡಿದ ಸಿಬ್ಬಂದಿಗೆ ಶೋ-ಕಾಸ್ ನೊಟಿಸ್ ನೀಡಿ, ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಲಾಗುತ್ತದೆ.
ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿ.ಸಿ. ಮತ್ತು ರಿಜಿಸ್ಟ್ರಾರ್ ಇಬ್ಬರೂ ನಿಯಮಿತ ಹುದ್ದೆ ಹೊಂದಿದವರಲ್ಲ. ಇಬ್ಬರೂ ಪ್ರಭಾರಿ ಹುದ್ದೆಯಲ್ಲಿರುವವರು. ಒಬ್ಬರು ವಿ.ಸಿ. ಎಂ.ವಿ ಅಳಗವಾಡಿ ಮತ್ತು ಇನ್ನೊಬ್ಬರು ರಿಜಿಸ್ಟ್ರಾರ್ ಬಸವರಾಜ್ ಡೋಣೂರ್. ಇವರಿಬ್ಬರ ಕಾರ್ಯಶೈಲಿ ಹೇಗಿದೆ ಎಂದರೆ ತಮ್ಮ ಮನಸೋ ಇಚ್ಛೆಯಂತೆ ಅವರು ನಿಯಮಗಳನ್ನು ಮುರಿಯುತ್ತಾರೆ. ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಹಣಕಾಸು ವ್ಯವಹಾರ ಮಾಡುತ್ತಾರೆ. ಇದಕ್ಕೆಲ್ಲ ಸಹಕರಿಸುವ ಹಣಕಾಸು ಅಧಿಕಾರಿಯನ್ನು ಡೆಪ್ಯುಟೇಷನ್ ಅವಧಿ ಮುಗಿದರೂ ಮುಂದುವರೆಸುತ್ತಾರೆ ಎಂಬ ಆರೋಪಗಳು ದಟ್ಟವಾಗಿವೆ.

ಕೇಂದ್ರೀಯ ವಿವಿಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಎಲ್ಲ ಅಪರಾತಪರಾಗಳ ವಿರುದ್ಧ ಆಕ್ಷೇಪ ಸಲ್ಲಿಸಿದ್ದಾರೆ. ಹಲವು ಸಂಘಟನೆಗಳು ರಾಷ್ಟ್ರಪತಿಗೂ ದೂರು ಸಲ್ಲಿಸಿವೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಅಹಿಂದ ಫೋರಂ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆ ಸೇರಿದಂತೆ ಕೆಲವು ಸಂಸ್ಥೆಗಳು ಕರ್ನಾಟಕ ಕೇಂದ್ರ ವಿಶ್ವವಿದ್ಯಾಲಯದ ಉಪಕುಲಪತಿ ಎಂ.ವಿ. ಅಳಗವಾಡಿ ಮತ್ತು ರಿಜಿಸ್ಟ್ರಾರ್ ಬಸವರಾಜ್ ಡೋಣೂರ್ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬರೆದ ಪತ್ರದಲ್ಲಿ ದೂರಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಸ್.ಆರ್. ಕೊಲ್ಲೂರು, ಅಹಿಂದ ಫೋರಂ ರಾಜ್ಯ ಅಧ್ಯಕ್ಷ ಸೈಬಣ್ಣ ಜಮಾದಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವಿಭಾಗೀಯ ಸಂಚಾಲಕ ಶೌಕತ್ ಅಲಿ ಆಲೂರ್ ಮತ್ತು ಸಾಮಾಜಿಕ ಕಾರ್ಯಕರ್ತ ರಮೇಶ್ ನೀಲೂರ್ ಅವರು, ಪ್ರಭಾರಿ ಉಪಕುಲಪತಿ ಮತ್ತು ಪ್ರಭಾರಿ ರಿಜಿಸ್ಟ್ರಾರ್ ಅವರ ವಿವಿಧ ಅಕ್ರಮಗಳನ್ನು ಪಟ್ಟಿ ಮಾಡಿದ್ದಾರೆ. ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಪತ್ರದ ಪ್ರತಿಗಳನ್ನು ಶಿಕ್ಷಣ ಸಚಿವಾಲಯ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರು, ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ, ಕಾರ್ಯಕಾರಿ ಮಂಡಳಿ ಮತ್ತು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿಯ ಸದಸ್ಯರಿಗೆ ಕಳುಹಿಸಲಾಗಿದೆ.

ವ್ಯಾಪ್ತಿ ಮೀರಿ ಹಣಕಾಸು ವ್ಯವಹಾರ

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವಿಭಾಗೀಯ ಸಂಚಾಲಕ ಶೌಕತ್ ಅಲಿ ಆಲೂರ್, ‘ಇಲ್ಲಿ ಹಣಕಾಸು ಭ್ರಷ್ಟಾಚಾರವಷ್ಟೇ ಅಲ್ಲ, ಅಹಿಂದ ನೌಕರರನ್ನು ತುಳಿಯುವ ಕೆಲಸವೂ ನಡೆಯುತ್ತಿದೆ. ಭ್ರಷ್ಟಾಚಾರವನ್ನು ಪ್ರಶ್ನಿಸಿದ ನೌಕರರಿಗೆ ಶೋ-ಕಾಸ್ ನೋಟಿಸ್ ನೀಡುವಂತಹ ಸರ್ವಾಧಿಕಾರಿ ಧೋರಣೆಯನ್ನು ವಿ.ಸಿ. ಮತ್ತು ರಿಜಿಸ್ಟ್ರಾರ್ ಅನುಸರಿಸುತ್ತಿದ್ದಾರೆ. ಇದರಿಂದ ಇಲ್ಲಿನ ಶೈಕ್ಷಣಿಕ ವಾತಾವರಣವೇ ಹದಗೆಟ್ಟು ಹೋಗಿದೆ’ ಎಂದರು.

‘ವಿಶ್ವವಿದ್ಯಾಲಯದ ಅತ್ಯುನ್ನತ ಆಡಳಿತ ಮಂಡಳಿಯಾದ ಕಾರ್ಯನಿರ್ವಾಹಕ ಮಂಡಳಿಯು ಪ್ರಭಾರಿ ರಿಜಿಸ್ಟ್ರಾರ್ ಅವರಿಗೆ 50,000 ರೂ.ವರೆಗೆ ಮಾತ್ರ ಖರ್ಚು ಮಾಡಲು ಅಧಿಕಾರ ನೀಡಿದೆ. ಆದರೆ ರಿಜಿಸ್ಟ್ರಾರ್ 4 ಲಕ್ಷ ರೂವರೆಗೆ ಹಣವನ್ನು ಖರ್ಚು ಮಾಡುವ ಮೂಲಕ ನಿಯಮ ಮುರಿದಿದ್ದಾರೆ’ ಎಂದು ಶೌಕತ್ ಆರೋಪಿಸಿದ್ದಾರೆ.

ಪ್ರೊ.ಅಳಗವಾಡಿ ಮತ್ತು ಪ್ರೊ.ಡೋಣೂರ್ ಉಸ್ತುವಾರಿ ಉಪಕುಲಪತಿ ಮತ್ತು ಉಸ್ತುವಾರಿ ರಿಜಿಸ್ಟ್ರಾರ್ ಆಗಿದ್ದು, ತಮ್ಮ ಸ್ಥಾನಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ಅಧ್ಯಾಪಕರೊಬ್ಬರು ನಾನುಗೌರಿ.ಕಾಂ ಗೆ ತಿಳಿಸಿದರು. ಅಹಿಂದ ವರ್ಗದ ನೌಕರರಿಗೆ ಕಿರುಕುಳ ನೀಡುವ ಮತ್ತು ಅಲ್ಪಸಂಖ್ಯಾತ ನೌಕರರನ್ನು ದ್ವೇಷ ಮಾಡುವ ಕೆಲಸದಲ್ಲಿ ವಿ.ಸಿ ಮತ್ತು ರಿಜಿಸ್ಟ್ರಾರ್ ನಿರತರಾಗಿದ್ದಾರೆ ಎಂದು ಅವರು ತಿಳಿಸಿದರು.

‘ಟೆಂಡರ್‌ಗಳನ್ನು ಕರೆಯದೇ 5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಖರೀದಿಸುವ ಮೂಲಕ ಖರೀದಿ ಪ್ರಕ್ರಿಯೆಗಳನ್ನು ಉಲ್ಲಂಘಿಸಿದ್ದಾರೆ’ ಎಂದು ಡಿಎಸ್‌ಎಸ್ ಮತ್ತು ಅಹಿಂದ ಫೋರಂ ಕಾರ್ಯಕರ್ತರು ಆರೋಪಿಸಿದ್ದಾರೆ.

ಶಿವಾನಂದಂ ಮುಂದುವರಿಕೆ ಏಕೆ?

ಮೂರನೆಯ ಪ್ರಮುಖ ಆರೋಪವೆಂದರೆ, ವಿ.ಸಿ ಮತ್ತು ರಿಜಿಸ್ಟ್ರಾರ್ ಅವರು ವಿಶ್ವವಿದ್ಯಾನಿಲಯದಲ್ಲಿ ಹಣಕಾಸು ಅಧಿಕಾರಿಯಾಗಿ ಡೆಪ್ಯುಟೇಷನ್‌ನಲ್ಲಿದ್ದ ಶಿವಾನಂದಂ ಅವರನ್ನು ಡೆಪ್ಯುಟೇಷನ್ ಅವಧಿ ಮುಗಿದ ನಂತರವೂ ಮುಂದುವರೆಸಿದ್ದಾರೆ. ‘ಹೈದರಾಬಾದ್ ವಿವಿಯಿಂದ ಶಿವಾನಂದಂ ಇಲ್ಲಿಗೆ ಡೆಪ್ಯೂಟ್ ಆಗಿದ್ದಾರೆ. ಅವರ ಡೆಪ್ಯುಟೇಷನ್ ಅವಧಿ ಮುಗಿದರೂ ಕೂಡ ಅವರನ್ನು ಇಲ್ಲಿ ಉಳಿಸಿಕೊಂಡಿರುವುದು ನಿಯಮಬಾಹಿರ. ಅವರು ಪ್ರಭಾರಿ ವಿ.ಸಿ ಮತ್ತು ಪ್ರಭಾರಿ ರಿಜಿಸ್ಟ್ರಾರ್ ಅವರ ಜೊತೆ ಅಕ್ರಮಗಳಲ್ಲಿ ಹೊಂದಾಣಿಕೆಯಾಗಿದ್ದೆ ಇದಕ್ಕೆ ಕಾರಣ. ಸದ್ಯ ಶಿವಾನಂದಂ ಹೈದರಾಬಾದ್ ವಿವಿಯ ತಮ್ಮ ಕೆಲಸದಿಂದ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಹೀಗಾಗಿ, ಅಲ್ಲಿಯ ಉದ್ಯೋಗಿಯೇ ಅಲ್ಲದ ಅವರು ಇಲ್ಲಿ ಡೆಪ್ಯುಟೇಷನ್ ಮೇಲೆ ಕೆಲಸ ಮಾಡುವುದೇ ನಿಯಮಬಾಹಿರ’ ಎಂದು ಶೌಕತ್ ಅಲಿ ಆಲೂರು ವಿವರಿಸಿದರು.

“ಪ್ರೊ. ಅಳಗವಾಡಿ ಮತ್ತು ಪ್ರೊ. ಡೋಣೂರ್ ಪೂರ್ಣಪ್ರಮಾಣದ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅಲ್ಲ. ಅವರು ಪ್ರಮುಖ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈ ಇಬ್ಬರೂ ದೈನಂದಿನ ವಿಷಯಗಳಲ್ಲಿ ಮಾತ್ರ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ, ಅವರು ನೇಮಕಾತಿಗಳು ಮತ್ತು ಹಣಕಾಸಿನ ವಿಷಯಗಳಂತಹ ಪ್ರಮುಖ ವಿಷಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ಪತ್ರಕ್ಕೆ ಕೇಂದ್ರ ವಿಶ್ವವಿದ್ಯಾಲಯದ ಸಂದರ್ಶಕರಾಗಿರುವ ರಾಷ್ಟ್ರಪತಿ ಪ್ರತಿಕ್ರಿಯೆ ನೀಡುತ್ತಾರೆ ಎಂದು ಭಾವಿಸಿದ್ದೇವೆ. ಪ್ರಭಾರಿ ಉಪಕುಲಪತಿ ಮತ್ತು ಪ್ರಭಾರಿ ರಿಜಿಸ್ಟ್ರಾರ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ನಾವು ದೊಡ್ಡ ಹೋರಾಟ ನಡೆಸಲಿದ್ದೇವೆ” ಎಂದು ಶೌಕತ್ ಆಲೂರು ನಾನುಗೌರಿ.ಕಾಂಗೆ ತಿಳಿಸಿದರು.

ಸಿಬ್ದಂದಿ ಮೇಲೆ ಸರ್ವಾಧಿಕಾರ!

ಕೆಲವು ದಿನಗಳ ಹಿಂದೆ, ಶಿವಾನಂದಂ ಅವರ ಡೆಪ್ಯುಟೇಶನ್ ಅವಧಿ ಮುಗಿದ ನಂತರವೂ ವಿಶ್ವವಿದ್ಯಾಲಯದಲ್ಲಿ ಹಣಕಾಸು ಅಧಿಕಾರಿಯಾಗಿ ಮುಂದುವರಿಸುವ ಕಾನೂನು ಬದ್ಧತೆಯನ್ನು ವಿಶ್ವವಿದ್ಯಾಲಯದ ಸಿಬ್ಬಂದಿ ಪ್ರಶ್ನಿಸಿದ್ದಾರೆ. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ 26 ಸದಸ್ಯರು ಇತ್ತೀಚೆಗೆ ಈ ನಿರ್ಧಾರವನ್ನು ಆಕ್ಷೇಪಿಸಿ ಪ್ರಭಾರಿ ಉಪಕುಲಪತಿ ಅಳಗವಾಡಿಯವರಿಗೆ ಪತ್ರ ಬರೆದಿದ್ದಾರೆ. ಆದರೆ, ಅಳಗವಾಡಿಯವರು ಹೀಗೆ ಆಕ್ಷೇಪ ಸಲ್ಲಿಸಿದ 26 ನೌಕರರ ಪೈಕಿ 12 ಜನರಿಗೆ ಶೋ-ಕಾಸ್ ನೋಟಿಸ್ ಜಾರಿ ಮಾಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಮಂಡಳಿಯ ಸದಸ್ಯರಾಗಿರುವ ಗೋರಖ್‌ಪುರ ವಿಶ್ವವಿದ್ಯಾಲಯದ ಉಪಕುಲಪತಿ ರಾಜೇಶ್ ಸಿಂಗ್ ಗುರುವಾರ ಪ್ರಭಾರಿ ರಿಜಿಸ್ಟ್ರಾರ್‌ಗೆ ಬರೆದ ಪತ್ರದಲ್ಲಿ ಇದೇ ರೀತಿಯ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ನಡೆಯಬೇಕಿದ್ದ 54 ನೇ ಕಾರ್ಯಕಾರಿ ಮಂಡಳಿ ಸಭೆಯನ್ನು ಮುಂದೂಡಲು ಅವರು ಪ್ರಭಾರಿ ರಿಜಿಸ್ಟ್ರಾರ್ ಅವರಿಗೆ ರಾಜೇಶ್ ಸಿಂಗ್ ಸೂಚಿಸಿದರು. ಆ ಸಭೆಯಲ್ಲಿ ಶಿವಾನಂದಂ ಅವರನ್ನು ಹಣಕಾಸು ಅಧಿಕಾರಿಯಾಗಿ ಮುಂದುವರೆಸುವ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕಾಗಿತ್ತು. ಅಂತಹ ಮಹತ್ವದ ವಿಷಯವನ್ನು ಸಾಮಾನ್ಯ ಉಪಕುಲಪತಿ ಮತ್ತು ಸಾಮಾನ್ಯ ರಿಜಿಸ್ಟ್ರಾರ್ ಮಾತ್ರ ಚರ್ಚಿಸಬಹುದಾಗಿದೆ, ತಾತ್ಕಾಲಿಕ ಆಧಾರದ ಮೇಲೆ ಸ್ಥಾನಗಳನ್ನು ಅಲಂಕರಿಸಿದ ಪ್ರಭಾರಿಗಳಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದರು.
ಆದರೆ, ಕಾರ್ಯಕಾರಿ ಮಂಡಳಿ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿನ ಚರ್ಚೆಗಳ ವಿವರಗಳನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಭಾರಿ ರಿಜಿಸ್ಟ್ರಾರ್ ಡೋಣೂರ್ ಹೇಳಿದ್ದಾರೆ. “ಸಭೆಯಲ್ಲಿ ಹಾಜರಿರುವ ಎಲ್ಲ ಸದಸ್ಯರ ಅನುಮೋದನೆಯ ನಂತರವೇ ಮಿನಟ್‌ಗಳನ್ನು ಅಂತಿಮಗೊಳಿಸಲಾಗುತ್ತದೆ ಮತ್ತು ಇದು ಸಮಯ ತೆಗೆದುಕೊಳ್ಳುತ್ತದೆ. ಅಂತಹ ವಿವರಗಳನ್ನು ಅದಕ್ಕೂ ಮೊದಲು ಬಹಿರಂಗಪಡಿಸಲಾಗುವುದಿಲ್ಲ” ಎಂದು ಡೋಣೂರ್ ತಿಳಿಸಿದ್ದಾರೆ.

ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿರುವ ಪ್ರೊ. ಡೋಣೂರ್, ‘ಆರೋಪಗಳು ಆಧಾರರಹಿತ’ ಎಂದು ಹೇಳಿದ್ದಾರೆ. ಶಿವಾನಂದಂ ಅವರ ಮುಂದುವರಿಕೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿದ ನೌಕರರಿಗೆ ಅವರು ನೀಡಿದ ನೋಟಿಸ್‌ಗಳನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

* ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿ ನೇಮಕಾತಿ ಹಗರಣ: ನಾನುಗೌರಿ, ದಿ ಹಿಂದೂ ವರದಿ ಆಧರಿಸಿ ತನಿಖೆಗೆ ಒತ್ತಾಯಿಸಿ ಪತ್ರ ಬರೆದ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಭಾಗದ ಅತ್ಯಂತ ಗುಣಮಟ್ಟದ ಶಿಕ್ಷಣ ನೀಡುವ ಪ್ರಮುಖ ವಿಶ್ವವಿದ್ಯಾಲಯವಾಗಿರುವ ಇಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನು ಈ ರೀತಿ ಹಾಳುಗೆಡವುತ್ತಿರುವ ಇಂತಹ ನೀಚರಿಗೆ ಶಿಕ್ಷೆ ಆಗಲೇಬೇಕು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...