Homeಕರ್ನಾಟಕಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

ಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

- Advertisement -
- Advertisement -

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ವಾಗ್ವಾದದಲ್ಲಿ ಕೊನೆಯಾಗಿದೆ. 

ಆರ್.ಎಸ್.ಎಸ್ ತನ್ನ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ಆಯೋಜಿಸಿದ್ದ ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ ನಂತರ ಆರೆಸ್ಸೆಸ್‌ನ ಕಲಬುರಗಿ ವಿಭಾಗದ ಮುಖ್ಯಸ್ಥ ಅಶೋಕ್ ಪಾಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ನವೆಂಬರ್ 2ರಂದು ಪಥಸಂಚಲನ ನಡೆಸುವಂತೆ ಅನುಮತಿ ಪಡೆಯಲು ಸಂಘಟನೆಗೆ ಅವಕಾಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಸೇರಿದಂತೆ ಹಲವು ಸಂಘಟನೆಗಳು ಅದೇ ದಿನ ಅಂದರೆ ನವೆಂಬರ್ 2ರಂದು ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ ಅಕ್ಟೋಬರ್‌ 21ರ ಮಂಗಳವಾರ ಕಲಬುರಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು. 

“ಆರೆಸ್ಸೆಸ್‌ನ ಕಾರ್ಯಗಳು ಮತ್ತು ಆಲೋಚನೆಗಳು ಯುವಜನರು ಹಾಗೂ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ದಲಿತ ಪ್ಯಾಂಥರ್ಸ್, ಒಂದು ಕೈಯಲ್ಲಿ ಸಂವಿಧಾನದ ಪೀಠಿಕೆ, ಇನ್ನೊಂದು ಕೈಯಲ್ಲಿ ನೀಲಿ ಧ್ವಜ ಹಿಡಿದುಕೊಂಡು ರ‍್ಯಾಲಿ ನಡೆಸಲು ಅನುಮತಿ ಕೋರಿತ್ತು. ಇದರ ನಡುವೆ ಭೀಮ್ ಆರ್ಮಿ ಕೂಡ ತ್ರಿವರ್ಣ ಧ್ವಜ, ಬೌದ್ಧ ಧರ್ಮದ ಪಂಚಶೀಲ ಧ್ವಜ ಮತ್ತು ಬಿದಿರಿನ ಕೋಲು ಹಿಡಿದು ರ‍್ಯಾಲಿ ನಡೆಸಲು ಅನುಮತಿ ಕೇಳಿತ್ತು. ಇದಾದ ನಂತರ ಈವರೆಗೆ ಸುಮಾರು 12 ಸಂಘಟನೆಗಳು ನವೆಂಬರ್‌ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು. 

ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ. “ಈ ವಿಷಯವನ್ನು ಹೆಚ್ಚು ದಿನ ಎಳೆಯುವುದು ಒಳಿತಲ್ಲ, ಆದಷ್ಟು ಬೇಗ ಇದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ,” ಎಂದು ಎರಡೂ ಕಡೆಯವರಿಗೆ ಮೌಖಿಕವಾಗಿ ಸಲಹೆ ನೀಡಿತ್ತು.

ಹೈಕೋರ್ಟ್ ಸೂಚನೆಯಂತೆ ಶಾಂತಿ ಸಭೆ ನೇತೃತ್ವ ವಹಿಸಿದ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಸೇಡಂ ಸಹಾಯ ಆಯುಕ್ತರು, ಚಿತ್ತಾಪೂರ ತಹಸೀಲ್ದಾರ, ಪುರಸಭೆಯ ಮುಖ್ಯಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡಿರು ಶ್ರೀನಿವಾಸಲು, ನಗರ ಪೊಲೀಸ್ ಆಯುಕ್ತರಾದ ಶರಣಪ್ಪ ಎಸ್.ಡಿ, ಶಹಾಬಾದ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು, ಚಿತ್ತಾಪೂರ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಭಾಗಣದಲ್ಲಿ ಎಲ್ಲಾ ಸಂಘಟನೆಗಳಿ 10 ನಿಮಿಷ ಮಾತನಾಡುವ ಅವಕಾಶ ನೀಡಲಾಗಿತ್ತು. ಆರೆಸ್ಸೆಸ್ ಸಂಘಟಕರು ನ್ಯಾಯಾಲಯ ನೀಡುವ ದಿನಾಂಕಕ್ಕೆ ಪಥಸಂಚಲನ ಮಾಡುವುದಾಗಿ ತಿಳಿಸಿದರು.

ಇದರಿಂದಾಗಿ ದಲಿತ ಸಂಘಟನೆಗಳು ಹಾಗೂ ಆರ್.ಎಸ್.ಎಸ್ ಸಂಘಟನೆಗಳ ನಡುವೆ ವಾಗ್ವಾದ ಏರ್ಪಟ್ಟಿದ್ದು, ಶಾಂತಿ ಸಭೆಯಲ್ಲಿ ಒಮ್ಮತದ ಒಪ್ಪಂದ ಸಾಧ್ಯವಾಗದೆ ವಾಗ್ವಾದದಲ್ಲಿ ಸಭೆ ಮುಕ್ತಾಯಗೊಂಡಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...