Homeಕರ್ನಾಟಕಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

ಕಲಬುರಗಿ| ಚಿತ್ತಾಪುರ ಪಥಸಂಚಲನ ವಿವಾದ: ವಾಗ್ವಾದದಲ್ಲಿ ಕೊನೆಗೊಂಡ ಶಾಂತಿ ಸಭೆ

- Advertisement -
- Advertisement -

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಶಾಂತಿ ಸಭೆಯು ಯಾವುದೇ ಒಪ್ಪಂದ ಕಾಣದೇ ವಾಗ್ವಾದದಲ್ಲಿ ಕೊನೆಯಾಗಿದೆ. 

ಆರ್.ಎಸ್.ಎಸ್ ತನ್ನ ಶತಮಾನೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ಆಯೋಜಿಸಿದ್ದ ಪಥಸಂಚಲನ ನಡೆಸಲು ಚಿತ್ತಾಪುರ ತಹಶೀಲ್ದಾರ್ ಅನುಮತಿ ನಿರಾಕರಿಸಿದ ನಂತರ ಆರೆಸ್ಸೆಸ್‌ನ ಕಲಬುರಗಿ ವಿಭಾಗದ ಮುಖ್ಯಸ್ಥ ಅಶೋಕ್ ಪಾಟೀಲ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಹೈಕೋರ್ಟ್ ನವೆಂಬರ್ 2ರಂದು ಪಥಸಂಚಲನ ನಡೆಸುವಂತೆ ಅನುಮತಿ ಪಡೆಯಲು ಸಂಘಟನೆಗೆ ಅವಕಾಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ಭೀಮ್ ಆರ್ಮಿ ಮತ್ತು ದಲಿತ್ ಪ್ಯಾಂಥರ್ಸ್ ಸೇರಿದಂತೆ ಹಲವು ಸಂಘಟನೆಗಳು ಅದೇ ದಿನ ಅಂದರೆ ನವೆಂಬರ್ 2ರಂದು ರ‍್ಯಾಲಿಗಳನ್ನು ಆಯೋಜಿಸಲು ಅನುಮತಿ ಕೋರಿ ಅಕ್ಟೋಬರ್‌ 21ರ ಮಂಗಳವಾರ ಕಲಬುರಗಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು. 

“ಆರೆಸ್ಸೆಸ್‌ನ ಕಾರ್ಯಗಳು ಮತ್ತು ಆಲೋಚನೆಗಳು ಯುವಜನರು ಹಾಗೂ ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ ದಲಿತ ಪ್ಯಾಂಥರ್ಸ್, ಒಂದು ಕೈಯಲ್ಲಿ ಸಂವಿಧಾನದ ಪೀಠಿಕೆ, ಇನ್ನೊಂದು ಕೈಯಲ್ಲಿ ನೀಲಿ ಧ್ವಜ ಹಿಡಿದುಕೊಂಡು ರ‍್ಯಾಲಿ ನಡೆಸಲು ಅನುಮತಿ ಕೋರಿತ್ತು. ಇದರ ನಡುವೆ ಭೀಮ್ ಆರ್ಮಿ ಕೂಡ ತ್ರಿವರ್ಣ ಧ್ವಜ, ಬೌದ್ಧ ಧರ್ಮದ ಪಂಚಶೀಲ ಧ್ವಜ ಮತ್ತು ಬಿದಿರಿನ ಕೋಲು ಹಿಡಿದು ರ‍್ಯಾಲಿ ನಡೆಸಲು ಅನುಮತಿ ಕೇಳಿತ್ತು. ಇದಾದ ನಂತರ ಈವರೆಗೆ ಸುಮಾರು 12 ಸಂಘಟನೆಗಳು ನವೆಂಬರ್‌ 2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದವು. 

ಈ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ. “ಈ ವಿಷಯವನ್ನು ಹೆಚ್ಚು ದಿನ ಎಳೆಯುವುದು ಒಳಿತಲ್ಲ, ಆದಷ್ಟು ಬೇಗ ಇದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ,” ಎಂದು ಎರಡೂ ಕಡೆಯವರಿಗೆ ಮೌಖಿಕವಾಗಿ ಸಲಹೆ ನೀಡಿತ್ತು.

ಹೈಕೋರ್ಟ್ ಸೂಚನೆಯಂತೆ ಶಾಂತಿ ಸಭೆ ನೇತೃತ್ವ ವಹಿಸಿದ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಸೇಡಂ ಸಹಾಯ ಆಯುಕ್ತರು, ಚಿತ್ತಾಪೂರ ತಹಸೀಲ್ದಾರ, ಪುರಸಭೆಯ ಮುಖ್ಯಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡಿರು ಶ್ರೀನಿವಾಸಲು, ನಗರ ಪೊಲೀಸ್ ಆಯುಕ್ತರಾದ ಶರಣಪ್ಪ ಎಸ್.ಡಿ, ಶಹಾಬಾದ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು, ಚಿತ್ತಾಪೂರ ಪೊಲೀಸ್ ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಂಭಾಗಣದಲ್ಲಿ ಎಲ್ಲಾ ಸಂಘಟನೆಗಳಿ 10 ನಿಮಿಷ ಮಾತನಾಡುವ ಅವಕಾಶ ನೀಡಲಾಗಿತ್ತು. ಆರೆಸ್ಸೆಸ್ ಸಂಘಟಕರು ನ್ಯಾಯಾಲಯ ನೀಡುವ ದಿನಾಂಕಕ್ಕೆ ಪಥಸಂಚಲನ ಮಾಡುವುದಾಗಿ ತಿಳಿಸಿದರು.

ಇದರಿಂದಾಗಿ ದಲಿತ ಸಂಘಟನೆಗಳು ಹಾಗೂ ಆರ್.ಎಸ್.ಎಸ್ ಸಂಘಟನೆಗಳ ನಡುವೆ ವಾಗ್ವಾದ ಏರ್ಪಟ್ಟಿದ್ದು, ಶಾಂತಿ ಸಭೆಯಲ್ಲಿ ಒಮ್ಮತದ ಒಪ್ಪಂದ ಸಾಧ್ಯವಾಗದೆ ವಾಗ್ವಾದದಲ್ಲಿ ಸಭೆ ಮುಕ್ತಾಯಗೊಂಡಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...