Homeಕರ್ನಾಟಕ‘ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸ್‌ ಕಮಿಷನರ್‌ ಹಲ್ಲೆ’ - ಆರೋಪ

‘ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಪೊಲೀಸ್‌ ಕಮಿಷನರ್‌ ಹಲ್ಲೆ’ – ಆರೋಪ

- Advertisement -
- Advertisement -

ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ಅವರ ಅಳಿಯ, ಕಾಂಗ್ರೆಸ್‌ ಕಾರ್ಯಕರ್ತ ಆದಿಲ್ ಸುಲೇಮಾನ್ ಶೇಖ್ ಅವರನ್ನು ಕಲಬುರಗಿ ನಗರ ಪೊಲೀಸ್‌ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ಥಳಿಸಿರುವ ಆರೋಪ ಕೇಳಿಬಂದಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆದಿಲ್ ಸುಲೇಮಾನ್ ಶೇಖ್, ನಮ್ಮ ಅತ್ತೆ ಖನೀಜ್ ಫಾತಿಮಾ ಅವರನ್ನು ಮನೆಗೆ ಬಿಟ್ಟು ವಾಪಸ್ ಬರುವಾಗ ಕಲಬುರಗಿ ನಗರದ ಹಫ್ತ್ ಗುಂಬಜ್ ಬಳಿ ಬುಧವಾರ ತಡರಾತ್ರಿ ಕಾರು ತಡೆದ ಆಯುಕ್ತರು ಮನಬಂದಂತೆ ಥಳಿಸಿದ್ದಾರೆ ಎಂದು ದೂರಿದ್ದಾರೆ.

ಮೊದಲಿಗೆ ಪೊಲೀಸ್ ಸಿಬ್ಬಂದಿಗೆ ನನಗೆ ಹೊಡೆದು ಕಾಲು ಮುರಿಯುವಂತೆ ಹೇಳಿದರು. ಅವರು ಹೊಡೆಯಲು ಹಿಂದೆ ಮುಂದೆ ನೋಡಿದಾಗ ಅವರೇ ಬಂದು ಥಳಿಸಿದರು ಎಂದಿದ್ದಾರೆ.

ಇದನ್ನೂ ಓದಿ: ‘ಬೆಲೆ ಏರಿಕೆಗೆ ಕಾಂಗ್ರೆಸ್‌ ಕಾರಣ’ ಎಂದ ಬಿಜೆಪಿ ಸಂಸದ ಸಂಗಣ್ಣ ಕರಡಿ!

ಈ ಕುರಿತು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು, “ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಮೇಲೆ ಆಯುಕ್ತರು ನಡೆಸಿರುವ ಅಮಾನವೀಯ ಹಲ್ಲೆ ಅಕ್ಷಮ್ಯ ಹಾಗೂ ಖಂಡನೀಯ. ಸರ್ಕಾರ ಹಾಗೂ ಗೃಹಸಚಿವರು ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ತನಿಖೆಗೆ ಆದೇಶಿಸಬೇಕು. ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಒಳಗಾಗಿ ಆಡಳಿತ ಪಕ್ಷದ ಕೈಗೊಂಬೆಯಾಗಿರುವುದು ದುರಂತ” ಎಂದಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಘಟನೆಯನ್ನು ಖಂಡಿಸಿದ್ದಾರೆ. ಆಯುಕ್ತರನ್ನು ಅಮಾನತು ಮಾಡಿ, ಸೂಕ್ತ ಕ್ರಮ ಕೈಗೊಂಡು ದಾಳಿಗೊಳಗಾದ ಕಾಂಗ್ರೆಸ್‌ ಕಾರ್ಯಕರ್ತನಿಗೆ ನ್ಯಾಯ ದೊರಕಿಸಿಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಶಾಸಕಿ ಖನೀಜ್‌ ಫಾತಿಮಾ, ಪಾಲಿಕೆ ಚುನಾವಣೆಯಲ್ಲಿ ಸೋಲುವ ಭಯದಿಂದಾಗಿ ಬಿಜೆಪಿಯವರು ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, “ನಿಯಮ ಉಲ್ಲಂಘಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಅದು ಬಿಟ್ಟು ಇನ್ನೊಬ್ಬರ ಮೇಲೆ ಹಲ್ಲೆ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...