Homeಕರ್ನಾಟಕಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

ಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

- Advertisement -
- Advertisement -

ಆರೆಸ್ಸೆಸ್ ಹಾಗೂ ಬಿಜೆಪಿ ಮಾಜಿ ನಾಯಕ ಕೆ.ಎನ್. ಗೋವಿಂದಾಚಾರ್ಯ ಮತ್ತು ಭಾರತ ವಿಕಾಸ ಸಂಗಮದ ಮುಖ್ಯಸ್ಥ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಕಲಬುರಗಿಯ ಸೇಡಂನಲ್ಲಿ ಬಲಪಂಥೀಯ ಗುಂಪುಗಳು ನಡೆಸುತ್ತಿರುವ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಪ್ರಗತಿಪರ ಗುಂಪುಗಳು ‘ಸೌಹಾರ್ದ ಭಾರತ ಉತ್ಸವ’ ನಡೆಸುವುದಾಗಿ ತೀರ್ಮಾನ ಕೈಗೊಂಡಿವೆ. ಕಲಬುರಗಿ

ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಯು ಜನವರಿ 29 ಮತ್ತು ಫೆಬ್ರವರಿ 6 ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಜನವರಿ 17ರಂದು ಪ್ರಗತಿಪರ ಸಂಘಟನೆಗಳು ತಮ್ಮ ಆದ ಕಾರ್ಯಕ್ರಮವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದೆ.

ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರು 2016ರಲ್ಲಿ ನೀಡಿದ್ದ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕಲಬುರಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಷ್ಟೆ ಅಲ್ಲದೆ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು ಹಾಗೂ ಹಲವು ಕಾಂಗ್ರೆಸ್ ನಾಯಕ ಹೆಸರುಗಳು ಕಾಣಿಸಿಕೊಂಡಿದೆ. ಅದಾಗ್ಯೂ, ಈ ಕಾರ್ಯಕ್ರಮಕ್ಕೆ ತಾವು ತೆರಳುವುದಿಲ್ಲ ಮತ್ತು ತಮಗೆ ತಿಳಿಯದಂತೆ ನಮ್ಮ ಹೆಸರು ಸೇರಿಸಲಾಗಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರು. ಉಳಿದ ಕಾಂಗ್ರೆಸ್ ನಾಯಕರು ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿದ್ದು ವರದಿಯಾಗಿಲ್ಲ.

ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ವಿದ್ವಾಂಸರಾದ ಪ್ರೊ. ಮೀನಾಕ್ಷಿ ಬಾಳಿ ಅವರು, ”ಇದು ಸಾಮಾನ್ಯ ಪ್ರತಿಭಟನೆಯಲ್ಲ. ನಾವು ಅವರನ್ನು ತಡೆಯಲು ಬಯಸುವುದಿಲ್ಲ, ಆದರೆ ಯಾವುದೇ ಸಂಭವನೀಯ ಕೋಮುವಾದಿ ಕಾರ್ಯಚಟುವಟಿಕೆ ಇದ್ದರೆ, ಬಲಪಂಥೀಯರ ರ್ಯಾಲಿಯು ಫಲಪ್ರದವಾಗದಂತೆ ಮತ್ತು ಅದರ ಉದ್ದೇಶವನ್ನು ಈಡೇರದಂತೆ ಕೆಲಸ ಮಾಡುತ್ತೇವೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 19 ರಂದು ಬೆಂಗಳೂರಿನಲ್ಲಿ ನಿರ್ಣಾಯಕ ಪೂರ್ವಸಿದ್ಧತಾ ಸಭೆಗಳು ನಡೆದಿದ್ದು, ನಂತರದ ಕಾರ್ಯತಂತ್ರದ ಸಭೆಗಳನ್ನು ದಾವಣಗೆರೆ, ವಿಜಯಪುರ ಮತ್ತು ಇತರ ಪಟ್ಟಣಗಳಲ್ಲಿ ನಡೆಸಲಾಗಿದೆ ಎಂದು ಬಾಳಿ ಅವರು ಹೇಳಿದ್ದಾರೆ.

ಅದಾಗ್ಯೂ, ಪ್ರಗತಿಪರ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಈ ಆಂದೋಲನಕ್ಕೆ ಹಣದ ಕೊರತೆಯಿದೆ, ಆದರೆ, ಬಲಪಂಥೀಯರು ತಮ್ಮ ಕಾರ್ಯಕ್ರಮಕ್ಕೆ ಅಪಾರ ಪ್ರಮಾಣದ ಹಣವನ್ನು ಸುರಿಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಗತಿಪರ ನಾಯಕರು ತಮ್ಮ ಕಾರ್ಯಕ್ರಮವನ್ನು ನಡೆಸಲು ಹರಸಾಹಸ ಪಡುತ್ತಿದ್ದು, “ನಾವು ನಮ್ಮಲ್ಲಿರುವ ಸ್ವಲ್ಪ ಸ್ವಲ್ಪ ಹಣವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಲಿದ್ದೇವೆ” ಎಂದು ಬಾಳಿ ಹೇಳಿದ್ದಾರೆ.

ಪ್ರಗತಿಪರರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ ಬಾಳಿ, “ಈ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ತಂತ್ರವಿಲ್ಲ. ಈ ಕಾರ್ಯಕ್ರಮದಿಂದ ಏನು ಅಪಾಯವಿದೆ ಎಂದು ಅವರಿಗೆ ಅರ್ಥವಾಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ಜನವರಿ 29 ರ ಆರೆಸ್ಸೆಸ್ ಕಾರ್ಯಕ್ರಮದ ಪ್ರಮುಖ ವ್ಯಕ್ತಿ ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಪ್ರತಿಕ್ರಿಯಿಸಿ, ಪ್ರಗತಿಪರರ ಕಾರ್ಯಕ್ರಮವನ್ನು ‘ಕೇವಲ ಸೈಡ್‌ಶೋ’ ಎಂದು ಹೇಳಿದ್ದಾರೆ. “ಇದು ಭಾರತ ವಿಕಾಸ ಸಂಗಮ್ ಮೂಲಕ ಗೋವಿಂದಾಚಾರ್ಯರು ಯೋಜಿಸಿರುವ ಪ್ರಮುಖ ಕಾರ್ಯಕ್ರಮವಾಗಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕೂಟಗಳ ಸರಣಿಯಲ್ಲಿ ಇದು ಏಳನೆಯದು. ಈ ಹಿಂದಿನ ಕಾರ್ಯಕ್ರಮಗಳಲ್ಲಿ ಭಾರಿ ಜನ ಸೇರಿದ್ದರು. ಕಲಬುರಗಿಯ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...