Homeಕರ್ನಾಟಕಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

ಕಲಬುರಗಿ | ಆರೆಸ್ಸೆಸ್‌ ನಾಯಕನ ಕಾರ್ಯಕ್ರಮದ ವಿರುದ್ಧ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮ

- Advertisement -
- Advertisement -

ಆರೆಸ್ಸೆಸ್ ಹಾಗೂ ಬಿಜೆಪಿ ಮಾಜಿ ನಾಯಕ ಕೆ.ಎನ್. ಗೋವಿಂದಾಚಾರ್ಯ ಮತ್ತು ಭಾರತ ವಿಕಾಸ ಸಂಗಮದ ಮುಖ್ಯಸ್ಥ, ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ನೇತೃತ್ವದಲ್ಲಿ ಕಲಬುರಗಿಯ ಸೇಡಂನಲ್ಲಿ ಬಲಪಂಥೀಯ ಗುಂಪುಗಳು ನಡೆಸುತ್ತಿರುವ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಪ್ರಗತಿಪರ ಗುಂಪುಗಳು ‘ಸೌಹಾರ್ದ ಭಾರತ ಉತ್ಸವ’ ನಡೆಸುವುದಾಗಿ ತೀರ್ಮಾನ ಕೈಗೊಂಡಿವೆ. ಕಲಬುರಗಿ

ಆರೆಸ್ಸೆಸ್‌ ಹಾಗೂ ಬಿಜೆಪಿ ಪರ ಬಲಪಂಥೀಯ ಸಂಘಟನೆಯು ಜನವರಿ 29 ಮತ್ತು ಫೆಬ್ರವರಿ 6 ರ ನಡುವೆ ‘ಭಾರತೀಯ ಸಂಸ್ಕೃತಿ ಉತ್ಸವ’ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಜನವರಿ 17ರಂದು ಪ್ರಗತಿಪರ ಸಂಘಟನೆಗಳು ತಮ್ಮ ಆದ ಕಾರ್ಯಕ್ರಮವನ್ನು ಪ್ರಾರಂಭಿಸಲು ಪ್ರತಿಜ್ಞೆ ಮಾಡಿದೆ.

ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರು 2016ರಲ್ಲಿ ನೀಡಿದ್ದ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಸಂವಿಧಾನ ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕಲಬುರಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಷ್ಟೆ ಅಲ್ಲದೆ, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು ಹಾಗೂ ಹಲವು ಕಾಂಗ್ರೆಸ್ ನಾಯಕ ಹೆಸರುಗಳು ಕಾಣಿಸಿಕೊಂಡಿದೆ. ಅದಾಗ್ಯೂ, ಈ ಕಾರ್ಯಕ್ರಮಕ್ಕೆ ತಾವು ತೆರಳುವುದಿಲ್ಲ ಮತ್ತು ತಮಗೆ ತಿಳಿಯದಂತೆ ನಮ್ಮ ಹೆಸರು ಸೇರಿಸಲಾಗಿದೆ ಎಂದು ಅವರು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರು. ಉಳಿದ ಕಾಂಗ್ರೆಸ್ ನಾಯಕರು ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡಿದ್ದು ವರದಿಯಾಗಿಲ್ಲ.

ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಕಾರ್ಯಕ್ರಮದ ಬಗ್ಗೆ ಮಾತನಾಡಿದ ವಿದ್ವಾಂಸರಾದ ಪ್ರೊ. ಮೀನಾಕ್ಷಿ ಬಾಳಿ ಅವರು, ”ಇದು ಸಾಮಾನ್ಯ ಪ್ರತಿಭಟನೆಯಲ್ಲ. ನಾವು ಅವರನ್ನು ತಡೆಯಲು ಬಯಸುವುದಿಲ್ಲ, ಆದರೆ ಯಾವುದೇ ಸಂಭವನೀಯ ಕೋಮುವಾದಿ ಕಾರ್ಯಚಟುವಟಿಕೆ ಇದ್ದರೆ, ಬಲಪಂಥೀಯರ ರ್ಯಾಲಿಯು ಫಲಪ್ರದವಾಗದಂತೆ ಮತ್ತು ಅದರ ಉದ್ದೇಶವನ್ನು ಈಡೇರದಂತೆ ಕೆಲಸ ಮಾಡುತ್ತೇವೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್ 19 ರಂದು ಬೆಂಗಳೂರಿನಲ್ಲಿ ನಿರ್ಣಾಯಕ ಪೂರ್ವಸಿದ್ಧತಾ ಸಭೆಗಳು ನಡೆದಿದ್ದು, ನಂತರದ ಕಾರ್ಯತಂತ್ರದ ಸಭೆಗಳನ್ನು ದಾವಣಗೆರೆ, ವಿಜಯಪುರ ಮತ್ತು ಇತರ ಪಟ್ಟಣಗಳಲ್ಲಿ ನಡೆಸಲಾಗಿದೆ ಎಂದು ಬಾಳಿ ಅವರು ಹೇಳಿದ್ದಾರೆ.

ಅದಾಗ್ಯೂ, ಪ್ರಗತಿಪರ ಸಂಘಟನೆಗಳು ನಡೆಸಲು ಉದ್ದೇಶಿಸಿರುವ ಈ ಆಂದೋಲನಕ್ಕೆ ಹಣದ ಕೊರತೆಯಿದೆ, ಆದರೆ, ಬಲಪಂಥೀಯರು ತಮ್ಮ ಕಾರ್ಯಕ್ರಮಕ್ಕೆ ಅಪಾರ ಪ್ರಮಾಣದ ಹಣವನ್ನು ಸುರಿಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಪ್ರಗತಿಪರ ನಾಯಕರು ತಮ್ಮ ಕಾರ್ಯಕ್ರಮವನ್ನು ನಡೆಸಲು ಹರಸಾಹಸ ಪಡುತ್ತಿದ್ದು, “ನಾವು ನಮ್ಮಲ್ಲಿರುವ ಸ್ವಲ್ಪ ಸ್ವಲ್ಪ ಹಣವನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸಲಿದ್ದೇವೆ” ಎಂದು ಬಾಳಿ ಹೇಳಿದ್ದಾರೆ.

ಪ್ರಗತಿಪರರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಮೀನಾಕ್ಷಿ ಬಾಳಿ, “ಈ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ತಂತ್ರವಿಲ್ಲ. ಈ ಕಾರ್ಯಕ್ರಮದಿಂದ ಏನು ಅಪಾಯವಿದೆ ಎಂದು ಅವರಿಗೆ ಅರ್ಥವಾಗುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ ಜನವರಿ 29 ರ ಆರೆಸ್ಸೆಸ್ ಕಾರ್ಯಕ್ರಮದ ಪ್ರಮುಖ ವ್ಯಕ್ತಿ ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಪ್ರತಿಕ್ರಿಯಿಸಿ, ಪ್ರಗತಿಪರರ ಕಾರ್ಯಕ್ರಮವನ್ನು ‘ಕೇವಲ ಸೈಡ್‌ಶೋ’ ಎಂದು ಹೇಳಿದ್ದಾರೆ. “ಇದು ಭಾರತ ವಿಕಾಸ ಸಂಗಮ್ ಮೂಲಕ ಗೋವಿಂದಾಚಾರ್ಯರು ಯೋಜಿಸಿರುವ ಪ್ರಮುಖ ಕಾರ್ಯಕ್ರಮವಾಗಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕೂಟಗಳ ಸರಣಿಯಲ್ಲಿ ಇದು ಏಳನೆಯದು. ಈ ಹಿಂದಿನ ಕಾರ್ಯಕ್ರಮಗಳಲ್ಲಿ ಭಾರಿ ಜನ ಸೇರಿದ್ದರು. ಕಲಬುರಗಿಯ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಲ್ಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...