Homeಕರ್ನಾಟಕಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

ಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

- Advertisement -
- Advertisement -

ಕರ್ನಾಟಕ ರಾಜ್ಯ ತಳವಾರ ಎಸ್‌ಟಿ ಹೋರಾಟ ಸಮಿತಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಗಿ ಭದ್ರತೆಯ ನಡುವೆಯೂ, ಕರ್ನಾಟಕ ರಾಜ್ಯ ತಳವಾರ ಎಸ್ಟಿ ಹೋರಾಟ ಸಮಿತಿಯ ಸದಸ್ಯರು ಕಲಬುರಗಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಚೌಕ್‌ನಲ್ಲಿ ಶನಿವಾರ (ಸೆಪ್ಟೆಂಬರ್ 17, 2022) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಾವುಟವನ್ನು ಪ್ರದರ್ಶಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬೊಮ್ಮಾಯಿಯವರು ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಕಾರ್ಯಕರ್ತರು ಗುಂಪುಗುಂಪಾಗಿ ಎದ್ದು ಕಪ್ಪು ಬಾವುಟ ಪ್ರದರ್ಶಿಸಿದರು. ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡಗಳ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಪೊಲೀಸರು ತಕ್ಷಣ ಧಾವಿಸಿ ಪ್ರತಿಭಟನಾಕಾರರನ್ನು ಮುಂದೆ ಸಾಗದಂತೆ ತಡೆದು ಮುಖ್ಯಮಂತ್ರಿ ಸುರಕ್ಷಿತವಾಗಿ ತೆರಳಲು ಅನುಕೂಲ ಮಾಡಿಕೊಟ್ಟರು. ನಂತರ ಧರಣಿ ನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಬಸವಕಲ್ಯಾಣ, ಮಾಸ್ಕಿ ಮತ್ತು ಸಿಂದಗಿ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಸರ್ಕಾರವು ಉಪಚುನಾವಣೆ ಮುಗಿದ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು, ತಳವಾರ ಸಮುದಾಯದವರಿಗೆ ಎಸ್‌ಟಿ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಭರವಸೆ ನೀಡಿತ್ತು. ಆದರೆ ಬಿಜೆಪಿ ತನ್ನ ಮಾತನ್ನು ಉಳಿಸಿಕೊಳ್ಳಲಿಲ್ಲ.

ಪೊಲೀಸ್ ಕಸ್ಟಡಿಯಲ್ಲಿರುವ ಕರ್ನಾಟಕ ರಾಜ್ಯ ತಳವಾರ ಎಸ್‌ಟಿ ಹೋರಾಟ ಸಮಿತಿಯ ಅಧ್ಯಕ್ಷ ಸರ್ದಾರ್ ರಾಯಪ್ಪ ಪ್ರತಿಕ್ರಿಯಿಸಿ, “ಕಳೆದ ವರ್ಷ ನವೆಂಬರ್ 17ರಂದು ಕಲಬುರಗಿಯಲ್ಲಿ ನಡೆದ ಪತ್ರಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “48 ಗಂಟೆಗಳಲ್ಲಿ ತಳವಾರ ಸಮುದಾಯದವರಿಗೆ ಎಸ್‌ಟಿ ಪ್ರಮಾಣಪತ್ರ ನೀಡಲಾಗುವುದು, ಮಾತಿಗೆ ತಪ್ಪಿದರೆ ಕಲಬುರಗಿಗೆ ಮತ್ತೆ ಬರಲು ಅವಕಾಶ ನೀಡಬೇಡಿ” ಎಂದು ಹೇಳಿದ್ದರು. ಆದರೆ ಬೊಮ್ಮಾಯಿ ಮಾತು ತಪ್ಪಿದ್ದಾರೆ. ಆದ್ದರಿಂದ ಅವರೇ ನಮಗೆ ಹೇಳಿದಂತೆ ನಾವು ಇಂದು ಪ್ರತಿಭಟನೆ ನಡೆಸಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬಾಗಲಕೋಟೆ: ಲಿಂಗಾಯತ ಯುವತಿಯನ್ನು ಪ್ರೀತಿಸಿದ ಕುರುಬ ಯುವಕನಿಗೆ ಬೂಟು ನೆಕ್ಕಿಸಿದ ಪೊಲೀಸರು, ಜಾತಿವಾದಿಗಳು!

“ಸರ್ಕಾರ ನಮ್ಮ ಬೇಡಿಕೆಯನ್ನು ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ, ನಾವು ನಮ್ಮ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಈ ವಿಚಾರವನ್ನೇ ಪ್ರಧಾನವಾಗಿ ಪರಿಗಣಿಸಿ ಪ್ರಚಾರ ಮಾಡುತ್ತೇವೆ. ತಂಡಗಳನ್ನು ರಚಿಸಿ ಪ್ರತಿ ಗ್ರಾಮಕ್ಕೆ ತೆರಳಿ ತಳವಾರ ಸಮುದಾಯದವರಿಗೆ ಮನವರಿಕೆ ಮಾಡಿ ಬಿಜೆಪಿಯನ್ನು ಸೋಲಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿರುವ ಇನ್ನೊಬ್ಬ ಕಾರ್ಯಕರ್ತ ರಾಜೇಂದ್ರ ರಾಜ್ವಾಲ್ ಪ್ರತಿಕ್ರಿಯಿಸಿ, “ಎಲ್ಲಾ ಸಮುದಾಯದವರು, ಯಾವುದೇ ಪಕ್ಷಬೇಧವಿಲ್ಲದೆ, ಸೈದ್ಧಾಂತಿಕ ಭಿನ್ನಾಭಿಪ್ರಾಯ ಮರೆತು ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಾವು ಬಿಜೆಪಿಗೆ ಪಾಠ ಕಲಿಸುತ್ತೇವೆ” ಎಂದು ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...