Homeಕರ್ನಾಟಕಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

- Advertisement -
- Advertisement -

ಇಂದು (ಅಕ್ಟೋಬರ್ 19) ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಹಮ್ಮಿಕೊಂಡಿದ್ದ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಆದೇಶಿಸಿದ್ದಾರೆ.

ಪಥ ಸಂಚಲನಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಆರ್‌ಎಸ್‌ಎಸ್‌ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಪ್ರಹ್ಲಾದ ವಿಶ್ವಕರ್ಮ ಅವರಿಗೆ ಶನಿವಾರ (ಅಕ್ಟೋಬರ್ 18) ರಾತ್ರಿ ಪತ್ರ ಬರೆದಿರುವ ತಹಶೀಲ್ದಾರ್, “ಆರ್‌ಎಸ್‌ಎಸ್‌ ಪಥ ಸಂಚಲನ ನಡೆಸುವ ಸಮಯದಲ್ಲೇ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ ಸಂಘಟನೆಯವರು ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ಕೋರಿದ್ದಾರೆ. ಒಂದೇ ಸಮಯದಲ್ಲಿ ಪಥ ಸಂಚಲನಕ್ಕೆ ಎಲ್ಲಾ ಸಂಘಟನೆಗಳು ಅನುಮತಿ ಕೇಳಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಹಾಗಾಗಿ, ಅನುಮತಿ ನೀಡಬಾರದು ಎಂದು ಪೊಲೀಸ್‌ ಅಧಿಕಾರಿಗಳು ವರದಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾಗಿರುವ ಚಿತ್ತಾಪುರ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಿಮಿತ್ತ ಭಗವಾಧ್ವಜ, ಬ್ಯಾನ‌ರ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸಲಾಗಿತ್ತು. ಇದಕ್ಕೆ ಸೂಕ್ತ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪುರಸಭೆ ಅಧಿಕಾರಿಗಳು ಶನಿವಾರ ನಸುಕಿನಲ್ಲಿಯೇ ಅವುಗಳನ್ನು ತೆರವುಗೊಳಿಸಿದ್ದರು. ಈಗ ಸ್ವತಃ ತಹಶೀಲ್ದಾ‌ರ್ ಅವರೇ ಪಥ ಸಂಚಲನ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ.

ಅಕ್ಟೋಬರ್ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಇದಕ್ಕೂ ಮುನ್ನ, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದರು. ಸಚಿವರ ಪತ್ರ ಪರಿಗಣಿಸಿ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗ್ತಿದೆ. ಆದರೆ, ಇದು ಆರ್‌ಎಸ್‌ಎಸ್‌ ಅನ್ನು ಮಾತ್ರ ಗುರಿಯಾಗಿಸಿ ತೆಗೆದುಕೊಂಡ ತೀರ್ಮಾನ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದ ಬಳಿಕ ಅವರಿಗೆ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವನ್ನು ಪ್ರಿಯಾಂಕ್ ಖರ್ಗೆ ಅಕ್ಟೋಬರ್ 15ರಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆ ಬೆದರಿಕೆ ಕರೆ ಮಾಡಿದ ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಅಕ್ಟೋಬರ್ 16ರಂದು ಪೊಲೀಸರು ಬಂಧಿಸಿದ್ದಾರೆ.

ಈ ನಡುವೆ ಅಕ್ಟೋಬರ್ 16ರಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಿತ್ತಾಪುರದ ಪರಾಜಿತ ಬಿಜೆಪಿ ಅಭ್ಯರ್ಥಿ, ಮಣಿಕಂಠ ರಾಠೋಡ್ “ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ಇವತ್ತು ಫೋನ್ ಮೂಲಕ ಬೆದರಿಕೆ ಹಾಕಿದವರು, ಮುಂದೆ ನಿಮ್ಮ ಮನೆಗೂ ಬರಬಹುದು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನವರು ಬಹಳ ಕಟ್ಟರ್ ಪಂಥದವರು, ಸ್ವಾಭಿಮಾನಿ ದೇಶ ಭಕ್ತರು, ಹಣಕ್ಕಾಗಿ ಯಾವುದೋ ಪರಿವಾರದ ಗುಲಾಮಗಿರಿ ಬೆಳೆಸುವವರು ಆರ್‌ಎಸ್‌ಎಸ್‌ನವರು ಅಲ್ಲ” ಎಂದಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಿಷೇಧ ಮಾಡಲಿ ಮುಂದೆ ನೋಡುವ, ಸರ್ಕಾರ ಶಾಶ್ವತ ಇರುವುದಿಲ್ಲವಲ್ಲ. ಸಚಿವ ಸಂಪುಟದಲ್ಲಿ ತೀರ್ಮಾನ ಆದರೆ ಇಡೀ ಕರ್ನಾಟಕದ ಕಾನೂನು, ಸುವ್ಯವಸ್ಥೆ ಕೆಟ್ಟು ಹೋಗುವ ಪರಿಸ್ಥಿತಿ ಬರುತ್ತದೆ” ಎಂದು ಹೇಳಿದ್ದಾರೆ. ಈ ಮೂಲಕ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ.

ಆರ್‌ಎಸ್ಎಸ್‌ನವರು ಮನೆಗೂ ಬರಬಹುದು, ಕಾನೂನು ಸುವ್ಯವಸ್ಥೆ ಕೆಡಬಹುದು: ಪ್ರಿಯಾಂಕ್ ಖರ್ಗೆಗೆ ಬಹಿರಂಗ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...