Homeಕರ್ನಾಟಕಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

ಕಲಬುರಗಿ: ಚಿತ್ತಾಪುರ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ಆದೇಶ

- Advertisement -
- Advertisement -

ಇಂದು (ಅಕ್ಟೋಬರ್ 19) ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಜಿಲ್ಲೆ ಚಿತ್ತಾಪುರ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಹಮ್ಮಿಕೊಂಡಿದ್ದ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಆದೇಶಿಸಿದ್ದಾರೆ.

ಪಥ ಸಂಚಲನಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಆರ್‌ಎಸ್‌ಎಸ್‌ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಪ್ರಹ್ಲಾದ ವಿಶ್ವಕರ್ಮ ಅವರಿಗೆ ಶನಿವಾರ (ಅಕ್ಟೋಬರ್ 18) ರಾತ್ರಿ ಪತ್ರ ಬರೆದಿರುವ ತಹಶೀಲ್ದಾರ್, “ಆರ್‌ಎಸ್‌ಎಸ್‌ ಪಥ ಸಂಚಲನ ನಡೆಸುವ ಸಮಯದಲ್ಲೇ ಭೀಮ್ ಆರ್ಮಿ ಮತ್ತು ದಲಿತ ಪ್ಯಾಂಥರ್ ಸಂಘಟನೆಯವರು ಚಿತ್ತಾಪುರ ಪಟ್ಟಣದಲ್ಲಿ ಪಥ ಸಂಚಲನ ನಡೆಸಲು ಅನುಮತಿ ಕೋರಿದ್ದಾರೆ. ಒಂದೇ ಸಮಯದಲ್ಲಿ ಪಥ ಸಂಚಲನಕ್ಕೆ ಎಲ್ಲಾ ಸಂಘಟನೆಗಳು ಅನುಮತಿ ಕೇಳಿರುವುದರಿಂದ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಹಾಗಾಗಿ, ಅನುಮತಿ ನೀಡಬಾರದು ಎಂದು ಪೊಲೀಸ್‌ ಅಧಿಕಾರಿಗಳು ವರದಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾಗಿರುವ ಚಿತ್ತಾಪುರ ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಿಮಿತ್ತ ಭಗವಾಧ್ವಜ, ಬ್ಯಾನ‌ರ್ ಹಾಗೂ ಬಂಟಿಂಗ್ಸ್ ಗಳನ್ನು ಅಳವಡಿಸಲಾಗಿತ್ತು. ಇದಕ್ಕೆ ಸೂಕ್ತ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪುರಸಭೆ ಅಧಿಕಾರಿಗಳು ಶನಿವಾರ ನಸುಕಿನಲ್ಲಿಯೇ ಅವುಗಳನ್ನು ತೆರವುಗೊಳಿಸಿದ್ದರು. ಈಗ ಸ್ವತಃ ತಹಶೀಲ್ದಾ‌ರ್ ಅವರೇ ಪಥ ಸಂಚಲನ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ.

ಅಕ್ಟೋಬರ್ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಇದಕ್ಕೂ ಮುನ್ನ, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದರು. ಸಚಿವರ ಪತ್ರ ಪರಿಗಣಿಸಿ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗ್ತಿದೆ. ಆದರೆ, ಇದು ಆರ್‌ಎಸ್‌ಎಸ್‌ ಅನ್ನು ಮಾತ್ರ ಗುರಿಯಾಗಿಸಿ ತೆಗೆದುಕೊಂಡ ತೀರ್ಮಾನ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದ ಬಳಿಕ ಅವರಿಗೆ ಅಪರಿಚಿತರಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವನ್ನು ಪ್ರಿಯಾಂಕ್ ಖರ್ಗೆ ಅಕ್ಟೋಬರ್ 15ರಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆ ಬೆದರಿಕೆ ಕರೆ ಮಾಡಿದ ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನು ಅಕ್ಟೋಬರ್ 16ರಂದು ಪೊಲೀಸರು ಬಂಧಿಸಿದ್ದಾರೆ.

ಈ ನಡುವೆ ಅಕ್ಟೋಬರ್ 16ರಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚಿತ್ತಾಪುರದ ಪರಾಜಿತ ಬಿಜೆಪಿ ಅಭ್ಯರ್ಥಿ, ಮಣಿಕಂಠ ರಾಠೋಡ್ “ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ಕ್ಷಮೆ ಕೇಳಬೇಕು. ಇಲ್ಲದಿದ್ದರೆ, ಇವತ್ತು ಫೋನ್ ಮೂಲಕ ಬೆದರಿಕೆ ಹಾಕಿದವರು, ಮುಂದೆ ನಿಮ್ಮ ಮನೆಗೂ ಬರಬಹುದು” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್‌ನವರು ಬಹಳ ಕಟ್ಟರ್ ಪಂಥದವರು, ಸ್ವಾಭಿಮಾನಿ ದೇಶ ಭಕ್ತರು, ಹಣಕ್ಕಾಗಿ ಯಾವುದೋ ಪರಿವಾರದ ಗುಲಾಮಗಿರಿ ಬೆಳೆಸುವವರು ಆರ್‌ಎಸ್‌ಎಸ್‌ನವರು ಅಲ್ಲ” ಎಂದಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿಷೇಧ ಹೇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಿಷೇಧ ಮಾಡಲಿ ಮುಂದೆ ನೋಡುವ, ಸರ್ಕಾರ ಶಾಶ್ವತ ಇರುವುದಿಲ್ಲವಲ್ಲ. ಸಚಿವ ಸಂಪುಟದಲ್ಲಿ ತೀರ್ಮಾನ ಆದರೆ ಇಡೀ ಕರ್ನಾಟಕದ ಕಾನೂನು, ಸುವ್ಯವಸ್ಥೆ ಕೆಟ್ಟು ಹೋಗುವ ಪರಿಸ್ಥಿತಿ ಬರುತ್ತದೆ” ಎಂದು ಹೇಳಿದ್ದಾರೆ. ಈ ಮೂಲಕ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಲಾಗಿದೆ.

ಆರ್‌ಎಸ್ಎಸ್‌ನವರು ಮನೆಗೂ ಬರಬಹುದು, ಕಾನೂನು ಸುವ್ಯವಸ್ಥೆ ಕೆಡಬಹುದು: ಪ್ರಿಯಾಂಕ್ ಖರ್ಗೆಗೆ ಬಹಿರಂಗ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...