Homeಮುಖಪುಟಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

- Advertisement -
- Advertisement -

ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ರವರ ಬಂಧನವನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (WPI) ಇಂದು ಪ್ರತಿಭಟನೆ ನಡೆಸಿದೆ. ಕಲಬುರ್ಗಿ ಜಿಲ್ಲಾಡಳಿತ ಮುಂಭಾಗದಲ್ಲಿ ಪ್ರತಿಭಟಿಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ದ್ವೇಷ ಭಾಷಣಗಳನ್ನು ಮಾಡಿ ಹಿಂಸಾಚಾರವನ್ನು ಪ್ರಚೋದಿಸಿದ ಉನ್ನತ ಬಿಜೆಪಿ ಮುಖಂಡರನ್ನು ರಕ್ಷಿಸಿ, ಸಿಎಎ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಯುವಜನಗಳ ಮೇಲೆ ಗುರಿಯಿಡುತ್ತಿದೆ. ಸಿಎಎ-ವಿರೋಧಿ ಪ್ರತಿಭಟನೆಗಳು ಮತ್ತು ಕೋಮು ಹಿಂಸಾಚಾರವನ್ನು ತಳಕು ಹಾಕುವ ದೇಶದ ಗೃಹ ಸಚಿವಾಲಯ ಮತ್ತು ದೆಹಲಿ ಪೋಲೀಸರ ಅತ್ಯಂತ ಕಪೋಲಕಲ್ಪಿತ ಆವೃತ್ತಿಯನ್ನು ತೋರಿಸಿ ಬಂಧಿಸಲಾಗುತ್ತಿದೆ.

ಇದನ್ನೂ ಓದಿ: ಉಮರ್ ಖಾಲಿದ್ ಬಂಧನಕ್ಕೆ ಟ್ವಿಟರ್‌ನಲ್ಲಿ ಖಂಡನೆ: #StandWithUmarKhalid ಟ್ರೆಂಡಿಂಗ್

“UAPAಯನ್ನು ಸಾಮಾನ್ಯ ನ್ಯಾಯ ಪ್ರಕ್ರಿಯೆಯನ್ನು ತಡೆಗಟ್ಟಲು ಬಳಸಲಾಗುತ್ತಿದೆ. ಸಾಮಾನ್ಯ ಪ್ರಕ್ರಿಯೆಯ ಮೂಲಕ ಅವರು ಜಾಮೀನಿನಲ್ಲಿ ಹೊರಬರಬಹುದಿತ್ತು. ಏಕೆಂದರೆ ಹಲವಾರು ಕೆಳಗಣ ನ್ಯಾಯಾಲಯಗಳು ಹೇಳಿರುವಂತೆ ಅವರ ಯಾರ ವಿರುದ್ಧವೂ ಹಿಂಸಾಚಾರವನ್ನು ಪ್ರಚೋದಿಸುವ ಎಳ್ಳಷ್ಟೂ ಸಾಕ್ಷ್ಯ ಇರುವುದಿಲ್ಲ. ಈ ಬಂಧನಗಳು ಅಸಮ್ಮತಿ ವ್ಯಕ್ತಪಡಿಸುವ, ಪ್ರಜಾಪ್ರಭುತ್ವದ ಹಕ್ಕಿಗೆ ಇರುವ ಸಂವಿಧಾನಿಕ ಖಾತ್ರಿಯ ಮೇಲೆ ನಡೆಸಿರುವ ಒಂದು ಆಕ್ರಮಣವಾಗಿದೆ” ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಅಭಿಪ್ರಾಯ ಪಟ್ಟಿದೆ.

CAA ವಿರುದ್ಧ ಪ್ರತಿಭಟಿಸುವುದು, ಜನರ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಪ್ರಜಾಪ್ರಭುತ್ವದ ಹಕ್ಕು ಎಂಬುದನ್ನು ಸರ್ಕಾರ ಮರೆಯಬಾರದು. ಆದ್ದರಿಂದ ಉಮರ್ ಖಾಲಿದ್ ಸೇರಿದಂತೆ ಎಲ್ಲಾ ಅಮಾಯಕ ಕಾರ್ಯಕರ್ತರನ್ನು ಬೇಷರತ್ತಾಗಿ, ನಷ್ಟ ಪರಿಹಾರದೊಂದಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಮರ್ ಖಾಲಿದ್ ಮತ್ತು ಕೆ.ಎಲ್.ಅಶೋಕ್: ನಮ್ಮ ಕಣ್ಣೆದುರಿಗಿನ ಸತ್ಯವೊಂದನ್ನು ಚರ್ಚಿಸೋಣ

ಅಧಿಕಾರ ದುರ್ಬಳಕೆ ಮಾಡಿಕೊಂಡ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತವರ ರಾಜಕೀಯ ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ, ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶಾಂತಿಯುತ ರಾಜಕೀಯ ಪ್ರತಿಭಟನೆಗಳನ್ನು ಕ್ರಿಮಿನಲ್ ಅಪರಾಧ ಎಂದು ಬಿಂಬಿಸುವ ಸಂವಿಧಾನ ವಿರೋಧಿ ನಿಲುವನ್ನು ಕೂಡಲೇ ನಿಲ್ಲಿಸಬೇಕು. ಸುಳ್ಳು ಮೊಕದ್ದಮೆಗಳನ್ನು ಹೂಡಿ ಜೈಲಿಗೆ ಕಳುಹಿಸಲಾಗಿರುವ ಎಲ್ಲಾ ರಾಜಕೀಯ ಖೈದಿಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ, WPI ಜಿಲ್ಲಾಧ್ಯಕ್ಷರಾದ ಸೈಯದ್ ಅಬ್ದುಲ್ ಬಾರಿ, WPI ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್ ಚಿತಾಪುರ, WPI ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೋಬಿನ್ ಅಹ್ಮದ್, ಮುನಿರ್ ಹಾಸ್ಮಿ, ಸಲೀಂ ಸದರಿ, ಇನ್ನಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...