Homeಮುಖಪುಟಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಕಲಬುರ್ಗಿ: ಉಮರ್ ಖಾಲಿದ್ ಬಂಧನ ಖಂಡಿಸಿ WPI ಪ್ರತಿಭಟನೆ

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

- Advertisement -
- Advertisement -

ವಿದ್ಯಾರ್ಥಿ ನಾಯಕ ಹಾಗೂ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ರವರ ಬಂಧನವನ್ನು ಖಂಡಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (WPI) ಇಂದು ಪ್ರತಿಭಟನೆ ನಡೆಸಿದೆ. ಕಲಬುರ್ಗಿ ಜಿಲ್ಲಾಡಳಿತ ಮುಂಭಾಗದಲ್ಲಿ ಪ್ರತಿಭಟಿಸಿ, ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇರೆಗೆ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಅವರ ವ್ಯಕ್ತಿತ್ವ ತೇಜೋವಧೆಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರಕಾರ ದ್ವೇಷ ಭಾಷಣಗಳನ್ನು ಮಾಡಿ ಹಿಂಸಾಚಾರವನ್ನು ಪ್ರಚೋದಿಸಿದ ಉನ್ನತ ಬಿಜೆಪಿ ಮುಖಂಡರನ್ನು ರಕ್ಷಿಸಿ, ಸಿಎಎ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಯುವಜನಗಳ ಮೇಲೆ ಗುರಿಯಿಡುತ್ತಿದೆ. ಸಿಎಎ-ವಿರೋಧಿ ಪ್ರತಿಭಟನೆಗಳು ಮತ್ತು ಕೋಮು ಹಿಂಸಾಚಾರವನ್ನು ತಳಕು ಹಾಕುವ ದೇಶದ ಗೃಹ ಸಚಿವಾಲಯ ಮತ್ತು ದೆಹಲಿ ಪೋಲೀಸರ ಅತ್ಯಂತ ಕಪೋಲಕಲ್ಪಿತ ಆವೃತ್ತಿಯನ್ನು ತೋರಿಸಿ ಬಂಧಿಸಲಾಗುತ್ತಿದೆ.

ಇದನ್ನೂ ಓದಿ: ಉಮರ್ ಖಾಲಿದ್ ಬಂಧನಕ್ಕೆ ಟ್ವಿಟರ್‌ನಲ್ಲಿ ಖಂಡನೆ: #StandWithUmarKhalid ಟ್ರೆಂಡಿಂಗ್

“UAPAಯನ್ನು ಸಾಮಾನ್ಯ ನ್ಯಾಯ ಪ್ರಕ್ರಿಯೆಯನ್ನು ತಡೆಗಟ್ಟಲು ಬಳಸಲಾಗುತ್ತಿದೆ. ಸಾಮಾನ್ಯ ಪ್ರಕ್ರಿಯೆಯ ಮೂಲಕ ಅವರು ಜಾಮೀನಿನಲ್ಲಿ ಹೊರಬರಬಹುದಿತ್ತು. ಏಕೆಂದರೆ ಹಲವಾರು ಕೆಳಗಣ ನ್ಯಾಯಾಲಯಗಳು ಹೇಳಿರುವಂತೆ ಅವರ ಯಾರ ವಿರುದ್ಧವೂ ಹಿಂಸಾಚಾರವನ್ನು ಪ್ರಚೋದಿಸುವ ಎಳ್ಳಷ್ಟೂ ಸಾಕ್ಷ್ಯ ಇರುವುದಿಲ್ಲ. ಈ ಬಂಧನಗಳು ಅಸಮ್ಮತಿ ವ್ಯಕ್ತಪಡಿಸುವ, ಪ್ರಜಾಪ್ರಭುತ್ವದ ಹಕ್ಕಿಗೆ ಇರುವ ಸಂವಿಧಾನಿಕ ಖಾತ್ರಿಯ ಮೇಲೆ ನಡೆಸಿರುವ ಒಂದು ಆಕ್ರಮಣವಾಗಿದೆ” ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಅಭಿಪ್ರಾಯ ಪಟ್ಟಿದೆ.

CAA ವಿರುದ್ಧ ಪ್ರತಿಭಟಿಸುವುದು, ಜನರ ಮತ್ತು ವಿದ್ಯಾರ್ಥಿ ಕಾರ್ಯಕರ್ತರ ಪ್ರಜಾಪ್ರಭುತ್ವದ ಹಕ್ಕು ಎಂಬುದನ್ನು ಸರ್ಕಾರ ಮರೆಯಬಾರದು. ಆದ್ದರಿಂದ ಉಮರ್ ಖಾಲಿದ್ ಸೇರಿದಂತೆ ಎಲ್ಲಾ ಅಮಾಯಕ ಕಾರ್ಯಕರ್ತರನ್ನು ಬೇಷರತ್ತಾಗಿ, ನಷ್ಟ ಪರಿಹಾರದೊಂದಿಗೆ ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಉಮರ್ ಖಾಲಿದ್ ಮತ್ತು ಕೆ.ಎಲ್.ಅಶೋಕ್: ನಮ್ಮ ಕಣ್ಣೆದುರಿಗಿನ ಸತ್ಯವೊಂದನ್ನು ಚರ್ಚಿಸೋಣ

ಅಧಿಕಾರ ದುರ್ಬಳಕೆ ಮಾಡಿಕೊಂಡ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತವರ ರಾಜಕೀಯ ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ, ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಶಾಂತಿಯುತ ರಾಜಕೀಯ ಪ್ರತಿಭಟನೆಗಳನ್ನು ಕ್ರಿಮಿನಲ್ ಅಪರಾಧ ಎಂದು ಬಿಂಬಿಸುವ ಸಂವಿಧಾನ ವಿರೋಧಿ ನಿಲುವನ್ನು ಕೂಡಲೇ ನಿಲ್ಲಿಸಬೇಕು. ಸುಳ್ಳು ಮೊಕದ್ದಮೆಗಳನ್ನು ಹೂಡಿ ಜೈಲಿಗೆ ಕಳುಹಿಸಲಾಗಿರುವ ಎಲ್ಲಾ ರಾಜಕೀಯ ಖೈದಿಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ, WPI ಜಿಲ್ಲಾಧ್ಯಕ್ಷರಾದ ಸೈಯದ್ ಅಬ್ದುಲ್ ಬಾರಿ, WPI ಪ್ರಧಾನ ಕಾರ್ಯದರ್ಶಿ ಸಲೀಂ ಅಹ್ಮದ್ ಚಿತಾಪುರ, WPI ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮೋಬಿನ್ ಅಹ್ಮದ್, ಮುನಿರ್ ಹಾಸ್ಮಿ, ಸಲೀಂ ಸದರಿ, ಇನ್ನಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿಗಳ ಬೇಟೆ: ದೆಹಲಿ ಗಲಭೆಗೆ ಉಮರ್‌ ಖಾಲಿದ್‌‌ರನ್ನು ಸಿಲುಕಿಸಿದ್ದು ಹೇಗೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...