Homeಕರ್ನಾಟಕಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ...

ಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ ಆಗ್ರಹ; ಕಳಸ ಚಲೋ’ ಎಚ್ಚರಿಕೆ

- Advertisement -
- Advertisement -

ಕಳಸ: ಕಳಸ ಸಮೀಪದ ಸಂಸೆ ಗ್ರಾಮದ ದಲಿತ ಯುವಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುದುರೆಮುಖ ಪೊಲೀಸರ ವಿರುದ್ಧ ಜನಶಕ್ತಿ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರ ದೌರ್ಜನ್ಯ ಹಾಗೂ ಸ್ಥಳೀಯ ಗೂಂಡಾಗಳ ಹಲ್ಲೆಯೇ ನಾಗೇಶ್ ಸಾವಿಗೆ ನೇರ ಕಾರಣ ಎಂದು ಸಂಘಟನೆ ಗಂಭೀರ ಆರೋಪ ಮಾಡಿದೆ. ಈ ಕೂಡಲೇ ತಪ್ಪಿತಸ್ಥ ಪೊಲೀಸರು ಮತ್ತು ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಸಂಘಟನೆ ತಿಳಿಸಿರುವ ಪ್ರಕಾರ, ನಾಗೇಶ್ ಮೇಲೆ ಕುದುರೆಮುಖ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಮತ್ತು ಸ್ಥಳೀಯ ಮೇಲ್ಜಾತಿ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಂತರ, ನಾಗೇಶ್ ಅವರ ಬದುಕಿಗೆ ಆಧಾರವಾಗಿದ್ದ ಆಟೋವನ್ನು ಸುಳ್ಳು ಪ್ರಕರಣ ದಾಖಲಿಸಿ ಜಪ್ತಿ ಮಾಡಲಾಗಿದೆ. ಇದರಿಂದ ತೀವ್ರವಾಗಿ ನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಪೊಲೀಸರು ಮತ್ತು ಗೂಂಡಾಗಳು ಸೇರಿಕೊಂಡು ನಡೆಸಿದ ವ್ಯವಸ್ಥಿತ ದೌರ್ಜನ್ಯ ಎಂದು ಸಂಘಟನೆ ಖಂಡಿಸಿದೆ.

ಸಂಘಟನೆಯ ಪ್ರಮುಖ ಬೇಡಿಕೆಗಳು ಇವು:

ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಅವರನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ, ಕೊಲೆ ಪ್ರಕರಣ ದಾಖಲಿಸಬೇಕು.

ಸುಳ್ಳು ಪ್ರಕರಣ ದಾಖಲಿಸಿ, ನಾಗೇಶ್ ಆತ್ಮಹತ್ಯೆಗೆ ಕಾರಣರಾದ ಕುದುರೆಮುಖ ಸಬ್ ಇನ್ಸ್‌ಪೆಕ್ಟರ್ ಆದರ್ಶ್ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು.

ಹಲ್ಲೆ ನಡೆಸಿದ ಸ್ಥಳೀಯ ಗೂಂಡಾಗಳಾದ ರಕ್ಷಿತ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು.

ಪೊಲೀಸ್ ಇಲಾಖೆಯೇ ನಾಗೇಶ್ ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊರಬೇಕು.

ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು.

ಈ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ, ಜಿಲ್ಲೆಯ ಎಲ್ಲ ದಲಿತ ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಸೇರಿ ‘ಕಳಸ ಚಲೋ’ ಬೃಹತ್ ಪ್ರತಿಭಟನೆಯನ್ನು ಆಯೋಜಿಸುವುದಾಗಿ ಜನಶಕ್ತಿ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ. ಈ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸಂಘಟನೆ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿತ್ತು.

ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್​ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್​ ವಿರುದ್ಧ ಸುಳ್ಳು ಎಫ್​ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್​ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ  ನೀಡಿದ್ದರು.

ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಚೆನ್ನೈಯಲ್ಲಿ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆ: ಸ್ವಾತಂತ್ರ್ಯ ಮುನ್ನಾದಿನ 2000 ಕಾರ್ಮಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...