Homeಕರ್ನಾಟಕಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ...

ಕಳಸ| ದಲಿತ ಯುವಕನ ಆತ್ಮಹತ್ಯೆಗೆ ಪೊಲೀಸ್ ದೌರ್ಜನ್ಯವೇ ಕಾರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜನಶಕ್ತಿ ಸಂಘಟನೆ ಆಗ್ರಹ; ಕಳಸ ಚಲೋ’ ಎಚ್ಚರಿಕೆ

- Advertisement -
- Advertisement -

ಕಳಸ: ಕಳಸ ಸಮೀಪದ ಸಂಸೆ ಗ್ರಾಮದ ದಲಿತ ಯುವಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕುದುರೆಮುಖ ಪೊಲೀಸರ ವಿರುದ್ಧ ಜನಶಕ್ತಿ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರ ದೌರ್ಜನ್ಯ ಹಾಗೂ ಸ್ಥಳೀಯ ಗೂಂಡಾಗಳ ಹಲ್ಲೆಯೇ ನಾಗೇಶ್ ಸಾವಿಗೆ ನೇರ ಕಾರಣ ಎಂದು ಸಂಘಟನೆ ಗಂಭೀರ ಆರೋಪ ಮಾಡಿದೆ. ಈ ಕೂಡಲೇ ತಪ್ಪಿತಸ್ಥ ಪೊಲೀಸರು ಮತ್ತು ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸಮಿತಿ ಎಚ್ಚರಿಕೆ ನೀಡಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಸಂಘಟನೆ ತಿಳಿಸಿರುವ ಪ್ರಕಾರ, ನಾಗೇಶ್ ಮೇಲೆ ಕುದುರೆಮುಖ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಮತ್ತು ಸ್ಥಳೀಯ ಮೇಲ್ಜಾತಿ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಂತರ, ನಾಗೇಶ್ ಅವರ ಬದುಕಿಗೆ ಆಧಾರವಾಗಿದ್ದ ಆಟೋವನ್ನು ಸುಳ್ಳು ಪ್ರಕರಣ ದಾಖಲಿಸಿ ಜಪ್ತಿ ಮಾಡಲಾಗಿದೆ. ಇದರಿಂದ ತೀವ್ರವಾಗಿ ನೊಂದ ನಾಗೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಪೊಲೀಸರು ಮತ್ತು ಗೂಂಡಾಗಳು ಸೇರಿಕೊಂಡು ನಡೆಸಿದ ವ್ಯವಸ್ಥಿತ ದೌರ್ಜನ್ಯ ಎಂದು ಸಂಘಟನೆ ಖಂಡಿಸಿದೆ.

ಸಂಘಟನೆಯ ಪ್ರಮುಖ ಬೇಡಿಕೆಗಳು ಇವು:

ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಅವರನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿ, ಕೊಲೆ ಪ್ರಕರಣ ದಾಖಲಿಸಬೇಕು.

ಸುಳ್ಳು ಪ್ರಕರಣ ದಾಖಲಿಸಿ, ನಾಗೇಶ್ ಆತ್ಮಹತ್ಯೆಗೆ ಕಾರಣರಾದ ಕುದುರೆಮುಖ ಸಬ್ ಇನ್ಸ್‌ಪೆಕ್ಟರ್ ಆದರ್ಶ್ ಅವರನ್ನು ಕೂಡಲೇ ಬಂಧಿಸಿ, ಅವರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು.

ಹಲ್ಲೆ ನಡೆಸಿದ ಸ್ಥಳೀಯ ಗೂಂಡಾಗಳಾದ ರಕ್ಷಿತ್ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು.

ಪೊಲೀಸ್ ಇಲಾಖೆಯೇ ನಾಗೇಶ್ ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊರಬೇಕು.

ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು.

ಈ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದರೆ, ಜಿಲ್ಲೆಯ ಎಲ್ಲ ದಲಿತ ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಸೇರಿ ‘ಕಳಸ ಚಲೋ’ ಬೃಹತ್ ಪ್ರತಿಭಟನೆಯನ್ನು ಆಯೋಜಿಸುವುದಾಗಿ ಜನಶಕ್ತಿ ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ. ಈ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಸಂಘಟನೆ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ದಲಿತ ಯುವಕ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಬಸ್ತಿಗದ್ದೆ ವ್ಯಾಪ್ತಿಯಲ್ಲಿ ನಡೆದಿತ್ತು.

ಮೃತ ಯುವಕ ನಾಗೇಶ್ (29), ಕುದುರೆಮುಖ ಠಾಣೆಯ ಪೊಲೀಸ್ ಪೇದೆ ಸಿದ್ದೇಶ್​ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕ ನಾಗೇಶನಿಗೆ ಮನಸೋ ಇಚ್ಛೆ ಬಂದಂಗೆ ಹಲ್ಲೆ ಮಾಡಲಾಗಿತ್ತು ಎಂದು ಎಲ್ಲೆಡೆ ಸುದ್ದಿ ಹರಡಿತ್ತು ಹಾಗೂ ಎಫ್​ಐಅರ್ ಕೂಡ ದಾಖಲಾಗಿತ್ತು. ಹಾಗೆಯೇ, ನಾಗೇಶ್​ ವಿರುದ್ಧ ಸುಳ್ಳು ಎಫ್​ಐಆರ್ ಪೊಲೀಸರು ದಾಖಲಿಸಿದ್ದರು ಎನ್ನಲಾಗಿದೆ. ಮೃತ ಯುವಕನ ಜೀಪ್ ಸಹ ಪೊಲೀಸರು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಗೇಶ್​ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣದ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್​ ಆಮಟೆ, ಕೊಪ್ಪ DYSP ನೇತೃತ್ವದಲ್ಲಿ ತಂಡ ರಚಿಸಿದ್ದರು. ಮಂಗಳವಾರ ಪೊಲೀಸ್ ಠಾಣೆಯಲ್ಲಿ ಎಂಟು ಸಾವಿರ ಹಣ ದಂಡ ಕಟ್ಟುವಂತೆ ನಾಗೇಶ್​ ಗೆ ತಿಳಿಸಿದರು. ಈ ಕುರಿತು ಹಣ ಸಂಗ್ರಹಿಸಲು ಎಲ್ಲರ ಬಳಿ ಕೇಳಿದಾಗ ಇಲ್ಲವೆಂದು ತಿಳಿದಾಗ, ಮಾಡದ ತಪ್ಪಿಗೆ ದಂಡ ಕಟ್ಟಬೇಕೆಂದು ಬುಧಾವಾರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಮಾಹಿತಿ  ನೀಡಿದ್ದರು.

ಈ ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಕ್ರಮ್ ಆಮಟೆ ಪೊಲೀಸ್ ಪೇದೆ ಸಿದ್ದೇಶ್​ ನನ್ನು ಅಮಾನತ್ತು ಮಾಡಿದ್ದಾರೆ. ಆದರೆ, ಕುದುರೆಮುಖ ಠಾಣೆಯ ಪಿಎಸ್​ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

ಚೆನ್ನೈಯಲ್ಲಿ ನೈರ್ಮಲ್ಯ ಕಾರ್ಮಿಕರ ಪ್ರತಿಭಟನೆ: ಸ್ವಾತಂತ್ರ್ಯ ಮುನ್ನಾದಿನ 2000 ಕಾರ್ಮಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...