Homeಕರ್ನಾಟಕಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌...

ಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌ ಅಸಮಾಧಾನ

- Advertisement -
- Advertisement -

ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ವಿಚಾರಣೆಗೆ ತ್ವರಿತಗತಿಯ ವಿಶೇಷ ನ್ಯಾಯಾಲಯ ಸ್ಥಾಪಿಸುವ ಸಂಬಂಧ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜು.22) ಹೈಕೋರ್ಟ್‌ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ವಾಸುದೇವ್‌ ಭಗವಾನ್‌ ಸೂರ್ಯವಂಶಿ, ಆರನೇ ಆರೋಪಿ ಅಮಿತ್‌ ಬಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಕಲಬುರ್ಗಿ ಅವರ ಕೊಲೆಗೆ ಬಳಸಲಾದ ವಾಹನ ಕಳವು ಮಾಡಲಾದ ಆರೋಪ ಮಾತ್ರ ಅರ್ಜಿದಾರರ ಮೇಲಿದೆ. ಈ ಸಂಬಂಧ ಆರೋಪಿಗಳು ಕಳೆದ ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲೂ ಆರೋಪಿಗಳ ಪಾತ್ರವಿದೆ. ಈ ಸಂಬಂಧ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಆ ಕೆಲಸವಾಗಿಲ್ಲ. ಕಲಬುರ್ಗಿ ಅವರ ಪ್ರಕರಣದಲ್ಲಿ 138 ಸಾಕ್ಷ್ಯಗಳ ಪೈಕಿ ಕೇವಲ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ಈಗ ಮುಗಿದಿದೆ. ಉಳಿದ ಸಾಕ್ಷಿಗಳ ವಿಚಾರಣೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಹೀಗಾಗಿ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು “ಕಳೆದ ಮಾರ್ಚ್‌ನಲ್ಲಿ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಪ್ರಾಸಿಕ್ಯೂಷನ್‌ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ಹೇಳಿತ್ತು. ಈಗ ಜುಲೈ ಅಂತ್ಯ ಸಮೀಪಿಸುತ್ತಿದ್ದು, ಇದುವರೆಗೂ ವಿಶೇಷ ನ್ಯಾಯಾಲಯವೇಕೆ ಸ್ಥಾಪನೆಯಾಗಿಲ್ಲ?” ಎಂದು ಪ್ರಶ್ನಿಸಿತು.

ಆಗ ಪ್ರಾಸಿಕ್ಯೂಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ ಅವರು “ಹೈಕೋರ್ಟ್‌ನಲ್ಲಿ ಸಂಬಂಧಿತರ ಜೊತೆ ಅಡ್ವೊಕೇಟ್‌ ಜನರಲ್‌ ಮಾತುಕತೆ ನಡೆಸಿದ್ದಾರೆ. ಮುಂದಿನ ವಿಚಾರಣೆ ವೇಳೆಗೆ ಈ ವಿಚಾರದ ಬಗೆಗಿನ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದರು.

ಆಗ ಪೀಠವು “ವಿಶೇಷ ನ್ಯಾಯಾಲಯ ಆರಂಭಿಸಿ, ನ್ಯಾಯಾಧೀಶರನ್ನು ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದು ನಮಗೆ ಗೊತ್ತಿದೆ ಬಿಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ, ಅರುಣ್‌ ಶ್ಯಾಮ್‌ ಅವರು “2019ರ ಜುಲೈ 14ರಂದು ತನಿಖಾಧಿಕಾರಿ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದುವರೆಗೆ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ನಡೆದಿದೆ. ವಿಚಾರಣೆಯ ನೆಪದಲ್ಲಿ ದೀರ್ಘಕಾಲ ಆರೋಪಿಗಳನ್ನು ಜೈಲಿನಲ್ಲಿಡಬಾರದು ಎಂದು ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಗೌರಿ ಲಂಕೇಶ್‌ ಪ್ರಕರಣದಲ್ಲಿ ಈಗಾಗಲೇ ಕರ್ನಾಟಕ ಹೈಕೋರ್ಟ್‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ” ಎಂದರು.

ಆಗ ಎಸ್‌ಪಿಪಿ ಅಶೋಕ್‌ ನಾಯಕ್‌ ಅವರು “ಅರ್ಜಿದಾರರು ಕೊಲೆಯಂಥಹ ಹೀನ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸೂರ್ಯವಂಶಿಯು ಅನಿಲ್‌ ಜೊತೆ ಸೇರಿ ಎರಡನೇ ಆರೋಪಿಯ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ಬೈಕ್‌ ಕಳವು ಮಾಡಿದ್ದಾನೆ. ಅದನ್ನು ಕೊಲೆ ಬಳಕೆ ಮಾಡಲಾಗಿದೆ” ಎಂದು ತಿಳಿಸಿದರು.

ಆಗ ಪೀಠವು “ಕಳವು ಮಾಡಿದ ಬೈಕ್‌ ಅನ್ನು ಕೊಲೆಗೆ ಬಳಸಲಾಗಿದೆ ಎಂಬ ಆರೋಪ ಹೊರತುಪಡಿಸಿ ಅರ್ಜಿದಾರರ ಮೇಲೆ ಇರುವ ನಿರ್ದಿಷ್ಟ ಮತ್ತು ಗುರುತರ ಆರೋಪವೇನು?” ಎಂದು ಎಸ್‌ಪಿಪಿಗೆ ಪ್ರಶ್ನಿಸಿತು.

ಆಗ ಎಸ್‌ಪಿಪಿಯವರು “ಪ್ರಕರಣದ ಮೆರಿಟ್‌ ಮೇಲೆ ವಾದಿಸಲು ಒಂದು ದಿನ ಕಾಲಾವಕಾಶ ನೀಡಬೇಕು” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ಮೆರಿಟ್‌ ಮೇಲೆ ವಾದಿಸಲು ಹೇಳುತ್ತಿಲ್ಲ. ಮೆರಿಟ್‌ ಮೇಲಿನ ವಾದ ಆಲಿಸುವುದು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಅದು ಹೈಕೋರ್ಟ್‌ ಕೆಲಸವಲ್ಲ. ಆರೋಪಪಟ್ಟಿ ಸಲ್ಲಿಸುವಾಗ ಸಂಗ್ರಹಿಸಿರುವ ದಾಖಲೆಯನ್ನು ಆಧರಿಸಿ, ಮೇಲ್ನೋಟಕ್ಕೆ ಪ್ರಕರಣವಿದೆ ಎಂದು ಸಾಬೀತುಪಡಿಸಿ” ಎಂದಿತು. ಅಂತಿಮವಾಗಿ ಎಸ್‌ಪಿಪಿ ಕೋರಿಕೆಯಂತೆ ಇಂದು (ಜು.23) ಮಧ್ಯಾಹ್ನಕ್ಕೆ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಶೈಕ್ಷಣಿಕ ವಲಯದ ಮಹಾ ದುರಂತ’: ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...