Homeಕರ್ನಾಟಕಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌...

ಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌ ಅಸಮಾಧಾನ

- Advertisement -
- Advertisement -

ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ವಿಚಾರಣೆಗೆ ತ್ವರಿತಗತಿಯ ವಿಶೇಷ ನ್ಯಾಯಾಲಯ ಸ್ಥಾಪಿಸುವ ಸಂಬಂಧ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜು.22) ಹೈಕೋರ್ಟ್‌ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ವಾಸುದೇವ್‌ ಭಗವಾನ್‌ ಸೂರ್ಯವಂಶಿ, ಆರನೇ ಆರೋಪಿ ಅಮಿತ್‌ ಬಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಕಲಬುರ್ಗಿ ಅವರ ಕೊಲೆಗೆ ಬಳಸಲಾದ ವಾಹನ ಕಳವು ಮಾಡಲಾದ ಆರೋಪ ಮಾತ್ರ ಅರ್ಜಿದಾರರ ಮೇಲಿದೆ. ಈ ಸಂಬಂಧ ಆರೋಪಿಗಳು ಕಳೆದ ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲೂ ಆರೋಪಿಗಳ ಪಾತ್ರವಿದೆ. ಈ ಸಂಬಂಧ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಆ ಕೆಲಸವಾಗಿಲ್ಲ. ಕಲಬುರ್ಗಿ ಅವರ ಪ್ರಕರಣದಲ್ಲಿ 138 ಸಾಕ್ಷ್ಯಗಳ ಪೈಕಿ ಕೇವಲ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ಈಗ ಮುಗಿದಿದೆ. ಉಳಿದ ಸಾಕ್ಷಿಗಳ ವಿಚಾರಣೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಹೀಗಾಗಿ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು “ಕಳೆದ ಮಾರ್ಚ್‌ನಲ್ಲಿ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಪ್ರಾಸಿಕ್ಯೂಷನ್‌ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ಹೇಳಿತ್ತು. ಈಗ ಜುಲೈ ಅಂತ್ಯ ಸಮೀಪಿಸುತ್ತಿದ್ದು, ಇದುವರೆಗೂ ವಿಶೇಷ ನ್ಯಾಯಾಲಯವೇಕೆ ಸ್ಥಾಪನೆಯಾಗಿಲ್ಲ?” ಎಂದು ಪ್ರಶ್ನಿಸಿತು.

ಆಗ ಪ್ರಾಸಿಕ್ಯೂಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ ಅವರು “ಹೈಕೋರ್ಟ್‌ನಲ್ಲಿ ಸಂಬಂಧಿತರ ಜೊತೆ ಅಡ್ವೊಕೇಟ್‌ ಜನರಲ್‌ ಮಾತುಕತೆ ನಡೆಸಿದ್ದಾರೆ. ಮುಂದಿನ ವಿಚಾರಣೆ ವೇಳೆಗೆ ಈ ವಿಚಾರದ ಬಗೆಗಿನ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದರು.

ಆಗ ಪೀಠವು “ವಿಶೇಷ ನ್ಯಾಯಾಲಯ ಆರಂಭಿಸಿ, ನ್ಯಾಯಾಧೀಶರನ್ನು ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದು ನಮಗೆ ಗೊತ್ತಿದೆ ಬಿಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ, ಅರುಣ್‌ ಶ್ಯಾಮ್‌ ಅವರು “2019ರ ಜುಲೈ 14ರಂದು ತನಿಖಾಧಿಕಾರಿ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದುವರೆಗೆ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ನಡೆದಿದೆ. ವಿಚಾರಣೆಯ ನೆಪದಲ್ಲಿ ದೀರ್ಘಕಾಲ ಆರೋಪಿಗಳನ್ನು ಜೈಲಿನಲ್ಲಿಡಬಾರದು ಎಂದು ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಗೌರಿ ಲಂಕೇಶ್‌ ಪ್ರಕರಣದಲ್ಲಿ ಈಗಾಗಲೇ ಕರ್ನಾಟಕ ಹೈಕೋರ್ಟ್‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ” ಎಂದರು.

ಆಗ ಎಸ್‌ಪಿಪಿ ಅಶೋಕ್‌ ನಾಯಕ್‌ ಅವರು “ಅರ್ಜಿದಾರರು ಕೊಲೆಯಂಥಹ ಹೀನ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸೂರ್ಯವಂಶಿಯು ಅನಿಲ್‌ ಜೊತೆ ಸೇರಿ ಎರಡನೇ ಆರೋಪಿಯ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ಬೈಕ್‌ ಕಳವು ಮಾಡಿದ್ದಾನೆ. ಅದನ್ನು ಕೊಲೆ ಬಳಕೆ ಮಾಡಲಾಗಿದೆ” ಎಂದು ತಿಳಿಸಿದರು.

ಆಗ ಪೀಠವು “ಕಳವು ಮಾಡಿದ ಬೈಕ್‌ ಅನ್ನು ಕೊಲೆಗೆ ಬಳಸಲಾಗಿದೆ ಎಂಬ ಆರೋಪ ಹೊರತುಪಡಿಸಿ ಅರ್ಜಿದಾರರ ಮೇಲೆ ಇರುವ ನಿರ್ದಿಷ್ಟ ಮತ್ತು ಗುರುತರ ಆರೋಪವೇನು?” ಎಂದು ಎಸ್‌ಪಿಪಿಗೆ ಪ್ರಶ್ನಿಸಿತು.

ಆಗ ಎಸ್‌ಪಿಪಿಯವರು “ಪ್ರಕರಣದ ಮೆರಿಟ್‌ ಮೇಲೆ ವಾದಿಸಲು ಒಂದು ದಿನ ಕಾಲಾವಕಾಶ ನೀಡಬೇಕು” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ಮೆರಿಟ್‌ ಮೇಲೆ ವಾದಿಸಲು ಹೇಳುತ್ತಿಲ್ಲ. ಮೆರಿಟ್‌ ಮೇಲಿನ ವಾದ ಆಲಿಸುವುದು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಅದು ಹೈಕೋರ್ಟ್‌ ಕೆಲಸವಲ್ಲ. ಆರೋಪಪಟ್ಟಿ ಸಲ್ಲಿಸುವಾಗ ಸಂಗ್ರಹಿಸಿರುವ ದಾಖಲೆಯನ್ನು ಆಧರಿಸಿ, ಮೇಲ್ನೋಟಕ್ಕೆ ಪ್ರಕರಣವಿದೆ ಎಂದು ಸಾಬೀತುಪಡಿಸಿ” ಎಂದಿತು. ಅಂತಿಮವಾಗಿ ಎಸ್‌ಪಿಪಿ ಕೋರಿಕೆಯಂತೆ ಇಂದು (ಜು.23) ಮಧ್ಯಾಹ್ನಕ್ಕೆ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಶೈಕ್ಷಣಿಕ ವಲಯದ ಮಹಾ ದುರಂತ’: ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...