Homeಕರ್ನಾಟಕಕಲಬುರಗಿ: ನವೆಂಬರ್‍ 27, 28ಕ್ಕೆ ಎಐಡಿವೈಓ ರಾಜ್ಯ ಮಟ್ಟದ ಯುವಜನ ಸಮ್ಮೇಳನ

ಕಲಬುರಗಿ: ನವೆಂಬರ್‍ 27, 28ಕ್ಕೆ ಎಐಡಿವೈಓ ರಾಜ್ಯ ಮಟ್ಟದ ಯುವಜನ ಸಮ್ಮೇಳನ

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಸಾಂಸ್ಕೃತಿಕ ಅವನತಿಗಳ ವಿರುದ್ಧ ಹೋರಾಟವನ್ನು ವ್ಯಾಪಕವಾಗಿ ಬೆಳೆಸುವ ಉದ್ದೇಶದೊಂದಿಗೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಕರ್ನಾಟಕ ರಾಜ್ಯ ಸಮಿತಿಯು ನವೆಂಬರ್ 27, 28ಕ್ಕೆ ಕಲಬುರಗಿಯಲ್ಲಿ 5ನೇ ರಾಜ್ಯ ಮಟ್ಟದ ಯುವಜನ ಸಮ್ಮೇಳನವನ್ನು ಹಮ್ಮಿಕೊಂಡಿದೆ.

ವಿಶ್ವದಲ್ಲೇ ಅತಿ ಹೆಚ್ಚು ಯುವಜನರಿಂದ ತುಂಬಿರುವ ದೇಶದಲ್ಲಿ ಇಂದು ಯುವಜನರು ಭವಿಷ್ಯದ ಬಗ್ಗೆ ಆತಂಕಗೊಂಡಿದ್ದಾರೆ. ನಿರುದ್ಯೋಗ, ಬಡತನ, ಬೆಲೆ ಏರಿಕೆಗಳು ಯುವಜನರನ್ನು ಆರ್ಥಿಕವಾಗಿ ಕುಗ್ಗಿಸಿವೆ. ಮೌಲ್ಯಗಳು ನಶಿಸಿ, ಯುವಜನರು ಇಂದು ಸಾಂಸ್ಕೃತಿಕವಾಗಿ ಅಧ:ಪತನದತ್ತ ಸಾಗುವಂತೆ ಮಾಡಲಾಗುತ್ತಿದೆ. ಇದಕ್ಕೆ ವಿರುದ್ಧವಾಗಿ ಬಲಿಷ್ಠ ಯುವಜನ ಚಳುವಳಿಯನ್ನು ಕಟ್ಟಬೇಕಿದೆ. ಕಳೆದ ಕೆಲವು ವರ್ಷಗಳಿಂದ ನಿರುದ್ಯೋಗಿ ಯುವಜನರ ಹೋರಾಟ ಸಮಿತಿಯನ್ನು ರಚಿಸಿಕೊಂಡು ರಾಜ್ಯವ್ಯಾಪಿ ಉದ್ಯೋಗಕ್ಕೆ ಆಗ್ರಹಿಸಿ ಬಲಿಷ್ಠ ಯುವಜನಾಂದೋಲವನ್ನು ಸಂಘಟನೆ ರೂಪಿಸುತ್ತಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಯುವಜನ ಚಳುವಳಿಯನ್ನು ಇನ್ನಷ್ಟು ತೀಕ್ಷ್ಣಗೊಳಿಸಲು ಹಾಗೂ ವಿಸ್ತರಿಸಲು ನವೆಂಬರ್ 27, 28 ರಂದು ಕಲಬುರಗಿಯಲ್ಲಿ 5ನೇ ರಾಜ್ಯಮಟ್ಟದ ಯುವಜನ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ನಾಡಿನ ಹೆಸರಾಂತ ಸಾಹಿತಿಗಳು ಮತ್ತು ಪ್ರಗತಿಪರ ಚಿಂತಕರಾದ ನಾಡೋಜ ಡಾ.ಬರಗೂರು ರಾಮಚಂದ್ರಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಕಾಮ್ರೇಡ್ ಕೆ.ಉಮಾ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಅತಿಥಿಗಳಾಗಿ ಎಐಡಿವೈಓನ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಗಳಾದ ಕಾಮ್ರೇಡ್ ಪ್ರತಿಭಾ ನಾಯಕ್ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಡಾ. ರಮೇಶ ಲಂಡನಕರ್, ಎಐಡಿವೈಓ ಅಧ್ಯಕ್ಷರಾದ ಕಾಮ್ರೇಡ್ ರಾಮಾಂಜನಪ್ಪ ಆಲ್ದಳ್ಳಿ ಇತರರು ಭಾಗಿಯಾಗಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಯ್ದ ಸುಮಾರು 500ಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಯುವಜನ ಸಮ್ಮೇಳನದ ಹಕ್ಕೊತ್ತಾಯಗಳು:
1. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಲ್ಲಿ ಗುತ್ತಿಗೆ-ಹೊರಗುತ್ತಿಗೆಯಡಿಯಲ್ಲಿ ದುಡಿಯುತ್ತಿರುವವರನ್ನು ಸೇರಿದಂತೆ ಖಾಯಂ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಬೇಕು.
2. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗುತ್ತಿರುವ ಅಶ್ಲೀಲತೆ-ಕುಸಂಸ್ಕೃತಿಯನ್ನು ಹರಡುವ ಸಿನಿಮಾ-ಸಾಹಿತ್ಯ ಹಾಗೂ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸಬೇಕು.
3. ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು.
5. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಒಂದು ಕುಟುಂಬಕ್ಕೆ ವಾರ್ಷಿಕ ಕನಿಷ್ಠ 200 ಮಾನವ ದಿನಗಳು ಉದ್ಯೋಗ ಖಾತ್ರಿಯಾಗಬೇಕು.


ಇದನ್ನೂ ಓದಿ: ಯುವಜನತೆಗೆ ಕೇಳಿಸಿದ ಗಾಂಧಿ, ಓದಿಸಿದ ಗಾಂಧಿ ಮತ್ತು ನಂಬಿಸಿದ ಗಾಂಧಿಯ ಕುರಿತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...