Homeಅಂಕಣಗಳುಕಾಫಿ ವಲಯದ ಜನರು ತಮ್ಮ ಉಳಿವಿಗಾಗಿ ಏನೂ ಪ್ರಯತ್ನವೇ ಮಾಡಲಿಲ್ಲವೇ?

ಕಾಫಿ ವಲಯದ ಜನರು ತಮ್ಮ ಉಳಿವಿಗಾಗಿ ಏನೂ ಪ್ರಯತ್ನವೇ ಮಾಡಲಿಲ್ಲವೇ?

- Advertisement -
- Advertisement -

ಕಳೆದು ಹೋದ ದಿನಗಳು….. ಭಾಗ -2, ಅಧ್ಯಾಯ -14

ಕೇವಲ ಮೂರು ನಾಲ್ಕು ವರ್ಷ ಕಳೆಯುವುದರೊಳಗೆ ಕಾಫಿಯ ಬೆಲೆ ಮೂರು ದಶಕಗಳ ಹಿಂದಿನ ಕಾಫಿ ಬೆಲೆಗೆ ಬಂದು ನಿಂತಿತ್ತು. ಕಾಫಿ ಕೊಳ್ಳುವ ಸಂಸ್ಥೆಗಳ ಸಂಖ್ಯೆ ಕೇವಲ ಕೆಲವೇ ಇದ್ದವು. ಸ್ಥಳೀಯ ವ್ಯವಹಾರಸ್ಥರು, ಕಾಫಿ ಕೊಳ್ಳುವುದನ್ನು ನಿಲ್ಲಿಸಿದ್ದರು. ಕೆಲವರು ಸಾಲದಲ್ಲಿ ಮುಳುಗಿ ಊರುಬಿಟ್ಟಿದ್ದರು.

ಕಾಫಿ ವಲಯ ನಿರಂತರ ಸಂಕಷ್ಟಕ್ಕೊಳಗಾಗಿತ್ತು. ಪ್ರಾಕೃತಿಕ ಬದಲಾವಣೆಗಳಿಂದ ಮಳೆಗಾಲದಲ್ಲಿಯೂ ಉಷ್ಣಾಂಶದ ಏರಿಕೆ ಕಂಡು ಬರತೊಡಗಿತು. ಇದು ಅರೆಬಿಕಾ ಕಾಫಿಯ ಬಹುಮುಖ್ಯ ಶತ್ರುವಾದ ಕಾಂಡ ಕೊರಕ ಕೀಟಗಳಿಗೆ ಅತ್ಯುತ್ತಮ ಸ್ಥಿತಿ. ಇದರಿಂದಾಗಿ ಅರೆಬಿಕಾ ತೋಟಗಳು ನಾಶವಾಗತೊಡಗಿದವು. ಜೊತೆಗೆ ಶುಂಠಿ ಮತ್ತಿತರ ಕೃಷಿಗಳಿಗೆ ಬಳಸಿದ ಅತಿಯಾದ ವಿಷಗಳ ಪರಿಣಾಮವೋ ಕೆಲವು ಜಾತಿಯ ಕೀಟಾಹಾರಿ ಇರುವೆಗಳು ನಾಶವಾಗಿ ಅದುವರೆಗೆ ಯಾವುದೇ ರೋಗವಿಲ್ಲದ ಸುರಕ್ಷಿತ ಬೆಳೆಯಾಗಿದ್ದ ರೊಬಸ್ಟ ಕಾಫಿಗೂ ಕಾಯಿ ಕೊರಕವೆಂಬ ಮಾರಿಯೊಂದು ಪ್ರಾರಂಭವಾಗಿ ಮೊದಲೇ ಬೆಳೆ ಇಳಿಕೆಯಿಂದಾದ ಸಂಕಷ್ಟಕ್ಕೆ ಮತ್ತೊಂದು ಸಮಸ್ಯೆ ಸೇರಿತ್ತು.

ಇಷ್ಟುವರ್ಷಗಳ ನಂತರವೂ 10102021 ರಂದು ಕಾರ್ಮಿಕ ಸಂಘಟನೆಗಳಿಂದ ಕಾಫಿ ಉದ್ಯಮ ಉಳಿಸಿ ಚಳುವಳಿ

ಎಷ್ಟೋ ತೋಟಗಳು ಕೆಲಸ ನಿಲ್ಲಿಸಬೇಕಾದ ಪರಿಸ್ಥಿತಿ ತಲೆದೋರಿತು. ನೂರಾರು ಸಣ್ಣ ಬೆಳೆಗಾರರು ಅಕ್ಷರಶಃ ಕೆಲಸ ನಿಲ್ಲಿಸಿದರು. ಇಲ್ಲವೇ ಸಿಕ್ಕಿದ ಫಸನ್ನು ಕೊಯ್ದು ಸುಮ್ಮನಾದರು. ಮದ್ಯಮ ಗಾತ್ರದ ತೋಟಗಳವರೂ ಕಾಟಾಚಾರಕ್ಕೆಂಬತೆ ಕೆಲಸ ಮಾಡಿಸಬೇಕಾದ ಸ್ಥಿತಿಯಿತ್ತು. ಮೊದಲ ಬಾರಿಗೆ ಕಾಫಿ ವಲಯದಲ್ಲಿ ಕಾರ್ಮಿಕರು ಮತ್ತು ಮಾಲಿಕರು ಒಟ್ಟಾಗಿ “ಕಾಫಿ ಉದ್ಯಮ ಉಳಿಸಿ” ಎಂದು ಬೀದಿಗಿಳಿದರು. ಎಷ್ಟೋ ಜನರು ಕೆಲಸವಿಲ್ಲದೆ  ನಗರ ಸೇರಿದರು. (ಪರಿಸ್ಥಿತಿಯ ವ್ಯಂಗ್ಯವೆಂದರೆ, ಈ ಘಟನೆ ನಡೆದದ್ದು 2003-04 ರಲ್ಲಿ ಈಗ ನಾನಿದನ್ನು ಬರೆಯುತ್ತಿರುವ 2021-22 ರಲ್ಲಿಯೂ  ಅಂದರೆ ಹದಿನೆಂಟು ವರ್ಷಗಳ ನಂತರವೂ ಅದೇ ಪರಿಸ್ಥಿತಿ,  ಕಾರ್ಮಿಕರು ಕಾಫಿ ಉದ್ಯಮ ಉಳಿಸಿ ಎಂದು ತಮ್ಮ ಮತ್ತು ಬೆಳೆಗಾರರ ಪರವಾಗಿ ಹೋರಾಟಕ್ಕಿಳಿಯುತ್ತಿದ್ದಾರೆ.- ಪೋಟೋ ನೋಡಿ)

ಕಾಫಿ ವಲಯದ ಜನರು ತಮ್ಮ ಉಳಿವಿಗಾಗಿ ಏನೂ ಪ್ರಯತ್ನವೇ ಮಾಡಲಿಲ್ಲವೇ?

ಎಲ್ಲ ಕಡೆಗಳಲ್ಲಿ ಇರುವಂತೆಯೇ ಪ್ರಜ್ಞಾವಂತರು, ಪ್ರಯೋಗಶೀಲರು ಇಲ್ಲಿಯೂ ಇದ್ದಾರೆ. ಆದರೆ ಇಲ್ಲಿನ ಪ್ರಾಕೃತಿಕ ಮತ್ತು ಸಾಮಾಜಿಕ ಜೊತೆಯಲ್ಲಿ ಕೃಷಿ ವೈವಿದ್ಯಗಳ ಮಿತಿಯೇನೆಂದು ಅರಿಯದ ಹೊರಗಿನ ಜನರು ಕೆಲವರು, ಇವರೆಲ್ಲ ಸುಖಜೀವಿಗಳು, ಐಷಾರಾಮಿಗಳು, ಪ್ರಕೃತಿಯ ಶೋಷಣೆ ಮಾಡಿಯೇ ಬದುಕಲು ಬಯಸುವವರು ಎಂಬಂತಹ ಅಭಿಪ್ರಾಯಗಳನ್ನು ಹೊಂದಿದ್ದಾರೆ.

ಮಲೆನಾಡಿನಲ್ಲಿ ಸತತ ಮಳೆ ಕಡಿಮೆಯಾಗಿ ನೀರಿಗೆ ಕೊರತೆ ಉಂಟಾದಾಗ ಹಲವು ಪ್ರಯತ್ನಗಳು ನಡೆದವು. ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿಯವರಾದ ರಾಮಚಂದ್ರ ಎಂಬವರು ಗುಂಡೂರಾವ್ ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಸ್ಟೈಪೆಂಡರಿ ಉದ್ಯೋಗಿಯಾಗಿ ಕೆಲಸಕ್ಕೆ ಸೇರಿದವರು. ನಂತರ ಪಂಚಾಯತ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಅವರು ಕೃಷಿಕರೂ ಕೂಡಾ. ಸಕಲೇಶಪುರ ತಾಲ್ಲೂಕಿನಲ್ಲಿ ಸಂಘ ಸಂಸ್ಥೆಗಳನ್ನು ಕಟ್ಟಿ ರಂಗ ಚಟುವಟಿಕೆ ಮತ್ತು ಇತರ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದರು, ಸಾಕ್ಷರತಾ ಆಂದೋಲನದಲ್ಲಿ ನಿರಂತರ ತೊಡಗಿಸಿಕೊಂಡವರು. ನಾವೆಲ್ಲ ಜೊತೆಯಾಗಿ ಕೆಲಸಮಾಡುತ್ತಿದ್ದೆವು.

ಅವರು ಜಲ ಸಂರಕ್ಷಣೆ ಮತ್ತು ನೀರಿಂಗಿಸುವ ವಿಚಾರದ ಕಾರ್ಯಾಗಾರಗಳನ್ನು ಆಯೋಜಿಸಿದರು. ಖ್ಯಾತ ಪರಿಸರ ತಜ್ಞ ಶ್ರೀ ಪಡ್ರೆಯವರನ್ನೂಕರೆಸಿ ಶಿಬಿರಗಳನ್ನು ನಡೆಸಿದರು. ಸಕಲೇಶಪುರ ತಾಲ್ಲೂಕಿನಾದ್ಯಂತ ಹಲವು ಕಡೆಗಳಲ್ಲಿ ಜಲ ಸಾಕ್ಷರತೆಯ ಕಾರ್ಯಕ್ರಮಗಳಾದವು. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಇದೇ ರೀತಿಯ ಪ್ರಯತ್ನಗಳು ನಡೆದವು.

ಈ ಎಲ್ಲ ವಿಚಾರಗಳ ಬಗ್ಗೆ ಪ್ರತಿಕೆಗಳಲ್ಲಿ ಹಲವಾರು ಜನರು ಲೇಖನಗಳನ್ನು ಬರೆದರು. ಕಾಫಿ ವಲಯದ ಸಮಸ್ಯೆಗಳ ಬಗ್ಗೆ ದೊಡ್ಡ ಮಟ್ಟದಲ್ಲೇ ಸುದ್ದಿಯಾಯಿತು.

ಹಾರ್ಲೆ ಎಸ್ಟೇಟಿನಲ್ಲಿ ಸುವರ್ಣ ಸಂಭ್ರಮ

ಬೆಂಗಳೂರು ದೂರದರ್ಶನ ಕೇಂದ್ರದವರು ಕಾಫಿ ಬೆಳೆಯ ಬಗ್ಗೆ ಒಂದು ಸಮಗ್ರ ಚಿತ್ರಣ ನೀಡುವ ಉದ್ದೇಶದಿಂದ ಒಂದು ಕಾರ್ಯಕ್ರಮವನ್ನು ರೂಪಿಸಿದರು. ಆಗ ಕವಿ ಸುಬ್ಬು ಹೊಲೆಯಾರ್ ಅವರು ಬೆಂಗಳೂರು ದೂರದರ್ಶನದಲ್ಲಿದ್ದರು. ಅವರು ನನ್ನನ್ನು ಸಂಪರ್ಕಿಸಿ ಒಂದು ಸಮಗ್ರ ಚಿತ್ರಣ ನೀಡುವ ಕಾರ್ಯಕ್ರಮಕ್ಕೆ ರೂಪು ರೇಷೆಯನ್ನು ಚರ್ಚಿಸಿದರು. ಅದರಂತೆ ಕಾಫಿ ಕೃಷಿಗೆ ಸಂಬಂಧ ಪಟ್ಟ ಎಲ್ಲ ವಿಭಾಗಗಳ ಸಮಸ್ಯೆಗಳನ್ನು ಬಿಂಬಿಸುವ ಹಾಗೆ ಕಾಫಿ ಬೆಳೆಗಾರರರು, ಕಾರ್ಮಿಕರು, ನೌಕಕರು, ವ್ಯಾಪಾರಿಗಳು, ಉದ್ಯಮಿಗಳು, ಕೊಮಾರ್ಕ್ ಸಂಸ್ಥೆಯವರು, ರೈತ ನಾಯಕರು ಹಾಗೂ ಕಾಫಿ ಸೀಮೆಯ ಇತರ ಉದ್ಯೋಗಿಗಳನ್ನೂ ಒಳಗೊಂಡಂತೆ ಒಂದು ಚಿತ್ರೀಕರಣ ಪಠ್ಯವನ್ನು ರೂಪಿಸಿಕೊಂಡೆವು.

ಇವರೆಲ್ಲರ ಜೊತೆಯಲ್ಲಿ ಸ್ವತಃ ಕಾಫಿ ಬೆಳೆಗಾರರರೂ ಆಗಿರುವ ಪೂರ್ಣಚಂದ್ರ ತೇಜಸ್ವಿಯವರ ದು ಪುಟ್ಟ ಸಂದರ್ಶನ ಮಾಡುವುದು ನಮ್ಮ ಉದ್ದೇಶವಾಗಿತ್ತು. ಆ ಸಮಯದಲ್ಲಿ ಅವರು ಯಾವುದೇ ಟಿ.ವಿ. ಮಾದ್ಯಮಕ್ಕೆ ಸಂದರ್ಶನ ನೀಡದೆ ಏಳು ವರ್ಷಗಳಾಗಿತ್ತು. ಆದ್ದರಿಂದ ಏನನ್ನುತ್ತಾರೋ ಎಂಬ ಅಳುಕು ನಮ್ಮಲ್ಲಿತ್ತು. ಎಲ್ಲ ಕಡೆ ಚಿತ್ರೀಕರಣ ಮುಗಿಸಿ ನಾವು ಮೂಡಿಗೆರೆಗೆ ಹೋದೆವು. ತೇಜಸ್ವಿಯವರೂ ಕೂಡಾ ಅವರ ತೋಟದಲ್ಲಿ ನೀರಿನ ಕೊರತೆಯುಂಟಾಗಿ ಹರಿಯುತ್ತಿದ್ದ ಸಣ್ಣ ಕವಲಿಯೊಂದರ ನೀರನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಇದ್ದರು. ಆದರೆ ಕೃಷಿಕರ ಸಮಸ್ಯೆಯ ಬಗ್ಗೆ ನೀವು ಮಾತಾಡಬೇಕು ಒಪ್ಪಿಕೊಂಡರು.

ದೂರದರ್ಶನಕ್ಕೆ ಸಂದರ್ಶನ ನೀಡುತ್ತಿರುವ ತೇಜಸ್ವಿಯವರು

ಅವರ ತೋಟದ ಮಧ್ಯದಲ್ಲೇ ನಿಂತು, ಸಂದರ್ಶನವೂ ನಡೆಯಿತು. ತೇಜಸ್ವಿ ಕಾಫಿ ಬೆಳೆಗಾರರ ಬಗ್ಗೆ ಮಾತನಾಡುತ್ತಾ ‘ನಾವು ಕಳೆದ ನಲುವತ್ತು ವರ್ಷಗಳಿಂದ ಕಾಫಿ ಮಾರಾಟದ ಸಂಪೂರ್ಣ ಜವಾಬ್ಧಾರಿಯನ್ನು ಕಾಫಿಬೋರ್ಡನ ಕೈಗೊಪ್ಪಿಸಿ ಕುಳಿತು ಬಿಟ್ಟಿದ್ದೆವು. ಕಾಫಿಗೆ ತಕ್ಕಮಟ್ಟಿನ ಒಳ್ಳೆಯಬೆಲೆ ದೊರಕುತ್ತಿದ್ದುದರಿಂದ ಈ ಸ್ಥಿತಿ ಶಾಶ್ವತ ಎಂಬಂತೆ ನಿರಾಳವಾಗಿದ್ದೆವು. ಈಗ ನಮ್ಮ ಉತ್ಪನ್ನದ ಮಾರಾಟದ ಜವಾಬ್ದಾರಿಯನ್ನು ಸಮರ್ಥವಾಗಿ ನಾವೇ ನಿರ್ವಹಿಸಲು ಕಲಿಯಬೇಕಾಗಿದೆ.’ ಕೃಷಿಯಲ್ಲಿನ ಅನಿಶ್ಚಿತ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ಅದಕ್ಕೆ ಹೊಂದಿಕೊಂಡು ಬದುಕಲು ಅಗತ್ಯವಾದ ಆರ್ಥಿಕ ಶಿಸ್ತನ್ನು ಕಲಿಯುವ ಬಗ್ಗೆ ಮಾತ್ರವಲ್ಲ ಸಮಗ್ರವಾಗಿ ರೈತರ ಬಗ್ಗೆ, ಅದರಲ್ಲೂ ಕಾಫಿ ಬೆಳೆಗಾರರಿಗಿಂತಲೂ ಇನ್ನೂ ಅನಿಶ್ಚಿತ ಸ್ಥಿತಿಯಲ್ಲಿ ಬದುಕುವ-ಹಣ್ಣು ತರಕಾರಿ ಬೆಳೆಯುವ ರೈತರ ಬಗ್ಗೆಯೂ ಮಾತನಾಡಿದರು. ಆ ರೈತರಿಗೆ ಹೋಲಿಸಿದರೆ ಕಾಫಿ ಬೆಳೆಗಾರರ ಸ್ಥಿತಿ ಅವರಷ್ಟು ಚಿಂತಾಜನಕವಲ್ಲವೆಂದು ನನ್ನ ಅಭಿಪ್ರಾಯ ಎಂದರು. ನಂತರ ಯಾವ ಸರ್ಕಾರನೂ ರೈತನ ನೆರವಿಗೆ ಬರೋದಿಲ್ಲ, ಹೆಚ್ಚೆಂದರೆ ಸಾಲ ವಸೂಲಿಯನ್ನು ಮುಂದೂಡೋದೋ ಇಲ್ಲಾ ಬಡ್ಡಿ ಒಂದ್ಸೊಲ್ಪ ಕಡಿಮೆ ಮಾಡೋದೋ ಇಂಥಾ ಸಣ್ಣಪುಟ್ಟ ರಿಯಾಯಿತಿ ಕೊಡಬಹುದಷ್ಟೆ ನಮ್ಮನ್ನು ನಾವೇ ನೋಡಿಕೊಳ್ಳಲು ಕಲೀಬೇಕು ಎಂದರು.

ಇವೆಲ್ಲ ದೂರದರ್ಶನದಲ್ಲಿ ಪ್ರಸಾರವೂ ಆಯಿತು.

ಸುವರ್ಣ ಸಂಭ್ರಮದ ದಿನ ಕಾರ್ಮಿಕರಿಗೆ ಸನ್ಮಾನ

ಕಾರ್ಯಕ್ರಮವನ್ನು ಟಿ.ವಿ.ಯಲ್ಲಿ ನೋಡಿದ ಕೆಲವರು ಕಾಫಿ ಬೆಳೆಗಾರರು, ನನ್ನಲ್ಲಿ ನೀನು ನಮ್ಮೆಲ್ಲರ ಸಂದರ್ಶನ ಮಾಡಬೇಕಿತ್ತು. ನಮ್ಮೆಲ್ಲರನ್ನು ಬಿಟ್ಟು ಆ ತೇಜಸ್ವಿಯವರನ್ನು ಸಂದರ್ಶನ ಮಾಡಿದ್ದೀಯ ಅವರು ನಮ್ಮ ವಿರುದ್ದವೇ ಮಾತಾಡಿದರು ಎಂದು ಜಗಳಕ್ಕೆ ಬಂದರು!

ಆದರೆ ವಾಸ್ತವದ ನೆಲೆಗಟ್ಟಿನ ಅವರ ಕೆಲವು ಮಾತುಗಳ ಅಂದು ಕೆಲವರು ಕಾಫಿ ಬೆಳೆಗಾರರರಿಗೆ ಇಷ್ಟವಾಗಲಿಲ್ಲ ಎನ್ನುವುದು ಬೇರೆ ಮಾತು. (ಈ ಬಗ್ಗೆ ನಾನು ಬೇರೆ ಕಡೆ ವಿವರವಾಗಿ ಬರೆದಿರುವುದರಿಂದ ಮತ್ತೆ ಇಲ್ಲಿ ಪ್ರಸ್ತಾಪಿಸುವುದಿಲ್ಲ)

ಆದರೆ ಈ ವಿಚಾರಗಳಿಗೆ ಇನ್ನೂ ಒಂದು ಮುಖವಿದೆ. ತೇಜಸ್ವಿಯವರು ಕಾಫಿ ಬೆಳೆಗಾರರು ಹೌದು. ಅವರ ಮಾತುಗಳಲ್ಲಿ ಒಟ್ಟಾರೆಯಾಗಿ ಕೃಷಿಯ ಬಗೆಗಿನ ಅಭಿಪ್ರಾಯಗಳು ಸರಿಯೂ ಹೌದು ಆದರೆ. ಅವರು ಕಾಫಿ ಅಥವಾ ಬೆಳೆಯನ್ನೇ ಅವಲಂಬಿಸಿ ಬದುಕುವ ಬೆಳೆಗಾರರಲ್ಲ. ಬೇರೆ ಆದಾಯ ಮೂಲಗಳ ಬೆಂಬಲವಿರುವ ಕೃಷಿಕನ ಸಮಸ್ಯೆ ಮತ್ತು ಆತ ಯೋಚಿಸುವ ರೀತಿಗೂ ಬರಿಯ ಕೃಷಿಯನ್ನೇ ನಂಬಿ ಬದುಕುವ, ಬೇರೆ ಯಾವುದೇ ಆದಾಯ ಇಲ್ಲದಿರುವವರ ಸಮಸ್ಯೆ ಮತ್ತು ಯೋಚನಾ ಕ್ರಮಕ್ಕೂ ವ್ಯತ್ಯಾಸ ಇದೆ.

ಕಾರಣಗಳು ಏನೇ ಇರಲಿ, ತಪ್ಪು ಯಾರದ್ದೇ ಆಗಿರಲಿ ಕಾಫಿ ವಲಯದಲ್ಲಿ ಬಹಳ ಸಂಕಷ್ಟದ ಪರಿಸ್ಥಿತಿ ಇತ್ತು.  ರವೀಂದ್ರನಾಥರು ತೋಟದ ಎಲ್ಲ ಕೆಲಸಗಾರರನ್ನು ಸಭೆ ಕರೆದು ಸಮಸ್ಯೆಗಳನ್ನು ವಿವರಿಸಿದರು. ಹೀಗೇ ಮುಂದುವರಿದರೆ ತೋಟ ಉಳಿಸಿಕೊಳ್ಳುವದೇ ಕಷ್ಟವಾಗಬಹುದು ಎಂದರು.

ಆಗ ಕಾರ್ಮಿಕರು ಹೌದು ಈಗಿನ ಸಂದರ್ಭ ನಮಗೂ ಅರ್ಥವಾಗಿದೆ ನಮ್ಮ ದಿನಗೂಲಿಯನ್ನು ಸ್ವಲ್ಪ ಕಡಿತಗೊಳಿಸಿ, ಈಗ ತೋಟ ಉಳಿದರೆ ಮುಂದೆ ಮತ್ತೆ ಒಳ್ಳೆಯ ದಿನಗಳು ಬರಬಹುದು ಎಂದರು.! ಶೇ ಹತ್ತರಷ್ಟು ಕಡಿಮೆ ದಿನಗೂಲಿಗೆ ಕೆಲಸಮಾಡಲು ಪ್ರಾರಂಭಿಸಿದರು. ಇದರಿಂದಾಗಿ ವರ್ಷಕ್ಕೆ ಕೆಲವು ಲಕ್ಷಗಳ ಉಳಿತಾಯವಾಗುತ್ತಿತ್ತು. ಈ ರೀತಿ ಎಲ್ಲ ಕೆಲಸಗಾರರನ್ನು ಉಳಿಸಿಕೊಂಡು ಮುಂದಿನ ಮೂರು ವರ್ಷಗಳ ಕಾಲ ತೋಟವನ್ನು ನಡೆಸಲು ಕಾರ್ಮಿಕರ ಈ ನಿರ್ಧಾರ ಸಹಕಾರಿಯಾಯಿತು.

ಮುಂದೆ ಹಾರ್ಲೆ ಎಸ್ಟೇಟಿಗೆ ಐವತ್ತು ವರ್ಷ ತುಂಬಿದ ನೆನಪಿನ ಕಾರ್ಯಕ್ರಮದಲ್ಲಿ ಈ ಎಲ್ಲ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಹಬ್ಬದಂತೆ ನಡೆದ ಅಂದಿನ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬಂದಿದ್ದ ಕಾರ್ಮಿಕ ಆಯುಕ್ತರು “ಎಲ್ಲ ಕಡೆ ಇದೇ ರೀತಿಯ ವಾತಾವರಣ ಇದ್ದರೆ ನಮ್ಮ ಕೆಲಸ ಹಗುರವಾಗುತ್ತದೆ” ಎಂದರು. ಇಂದು ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿರುವ ಶಿವಾನಂದ ತಗಡೂರ್ ಅವರೂ ಆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದರು.

* ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ: ಕಾಫಿ, ಯಾಲಕ್ಕಿ, ಮೆಣಸು, ವೆನಿಲ್ಲಾ, ಶುಂಠಿಯಂತಹ ಬೆಳೆ ಬದಲಾವಣೆಗಳು ಮತ್ತು ಕಷ್ಟನಷ್ಟಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...