Homeಅಂಕಣಗಳುಕಳೆದುಹೋದ ದಿನಗಳುಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

ಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

- Advertisement -
- Advertisement -

1930 ರ ದಶಕ ಬ್ರಿಟಿಷರ ಆಳ್ವಿಕೆ. ಕೊಡಗು ಜಿಲ್ಲೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಮಡಿಕೇರಿಯ ಕೋಟೆ ಹೆಬ್ಬಾಗಿಲ ಬಳಿ ಈಗ ಇರುವ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ ಅಂದಿನ ಜಿಲ್ಲಾ ಕಲೆಕ್ಟರ್‌ರ ನಿವಾಸ. ಅದು ಈಗ ಇರುವಂತಹ ವಿದ್ಯುತ್, ಗ್ಯಾಸ್, ಸೀಮೆಎಣ್ಣೆ ಸ್ಟವ್ ಮುಂತಾದ ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲ. ಮಡಿಕೇರಿ ಪೇಟೆಯಲ್ಲಿ ಒಲೆ ಉರಿಯಬೇಕಾದರೆ ಹಳ್ಳಿಯಿಂದ ಸೌದೆ ಬರಬೇಕು.

ಪ್ರತಿದಿನ ಮದ್ಯಾಹ್ನ ಮೂರುಗಂಟೆಯ ವೇಳೆಗೆ ಸೌದೆ ತುಂಬಿದ ಎತ್ತಿನ ಗಾಡಿಗಳು ಟೋಲ್ ಗೇಟ್ (ಇಂದಿನ ಜನರಲ್ ತಿಮ್ಮಯ್ಯ ಸರ್ಕಲ್) ನಲ್ಲಿ ಸುಂಕ ಕಟ್ಟಿ ಊರೊಳಗೆ ಬರಬೇಕು.

ಅಲ್ಲಿಂದ ಮುಂದೆ ಬಂದು ಕೋಟೆ ಬಾಗಿಲು ದಾಟಿದ ಕೂಡಲೇ ರಸ್ತೆ ಕಡಿದಾದ ಇಳಿಜಾರು. ಸೌದೆ ತುಂಬಿದ ಎತ್ತಿನಗಾಡಿಗಳು ಬಿರಿ (ಎತ್ತಿನ ಗಾಡಿಗಳ ದೇಸೀ ಬ್ರೇಕ್) ಹಾಕಿಯೇ ಮುಂದೆ ಸಾಗಬೇಕು. ಎತ್ತಿನ ಗಾಡಿಗೆ ಬಿರಿ ಹಾಕಿದರೆ ಆಗುವ ಕಿರ್ರೋಂ….. ಎನ್ನುವ ಸದ್ದು ಮೈಲು ದೂರಕ್ಕೂ ಕೇಳುತ್ತದೆ.

ಕೋಟೆ ಬಾಗಿಲ ಮುಂದಿದ್ದ ಜಿಲ್ಲಾ ಕಲೆಕ್ಟರ್ ಮನೆಯಲ್ಲಿ ಕಲೆಕ್ಟರ್‌ರ ಪತ್ನಿ‌ಗೆ ಅದು ಮದ್ಯಾಹ್ನದ ನಿದ್ದೆಯ ಸಮಯ. ಈ ಎತ್ತಿನ ಗಾಡಿಗಳ ಬಿರಿಗಳ ಸದ್ದಿನಿಂದ ಆಕೆಯ ಮಧ್ಯಾಹ್ನದ ನಿದ್ದೆಗೆ ಬಾಧೆ ಬಂತು. ಆಕೆ ಗಂಡನಲ್ಲಿ ದೂರಿರಬಹುದು.

ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ

ಸೌದೆ ತುಂಬಿದ ಎತ್ತಿನಗಾಡಿಗಳು ಟೋಲ್ ಗೇಟ್ ನಿಂದ ಮುಂದೆ ಊರೊಳಕ್ಕೆ ಬರಬಾರದು, ಎಂದು ಕಲೆಕ್ಟರ್ ಸಾಹೇಬರು ಫರ್ಮಾನು ಹೊರಡಿಸಿದರು. ಗಾಡಿಗಳು ಊರೊಳಗೆ ಬರುವುದು ನಿಂತುಹೋಯಿತು.

ಶ್ರೀಮಂತರು ಕೈಗಾಡಿಗಳ ಮೂಲಕ ಅಲ್ಲಿಂದಲೇ ಸೌದೆಯನ್ನು ತರಿಸಿಕೊಂಡರು. ಆದರೆ ಬಡವರ ಮನೆಯಲ್ಲಿ ಒಲೆ ಉರಿಯುವುದು ಕಷ್ಟವಾಯಿತು. ಹಾಗೇ ಎತ್ತಿನ ಗಾಡಿಗಳಲ್ಲಿ ಹಳ್ಳಿಯಿಂದ ಸೌದೆ ತಂದು ಮಾರಿ ಅದರಿಂದ ನಿತ್ಯದ ಅನ್ನ ಕಾಣುತ್ತಿದ್ದವರಿಗೂ ಸಮಸ್ಯೆಯಾಯಿತು.

ಆ ಸಮಯದಲ್ಲಿ ಮಂಗಳೂರಿನಿಂದ “ದೀನ ಬಂಧು” ಎನ್ನುವ ಪತ್ರಿಕೆಯೊಂದು ಪ್ರಕಟವಾಗುತ್ತಿತ್ತು. ಕೆಲವೇ ದಿನಗಳಲ್ಲಿ ಆ ಪತ್ರಿಕೆಯಲ್ಲಿ “ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು” ಎಂಬ ಲೇಖನ ಪ್ರಕಟವಾಯಿತು.

ಒಂದೆರಡು ದಿನಗಳಲ್ಲಿಯೇ ಬ್ರಿಟಿಷ್ ಅಧಿಕಾರಿಯ ವಿರುದ್ಧ ಬರೆಯುವ ದುಸ್ಸಾಹಸ ಮಾಡಿದ  ವ್ಯಕ್ತಿಯನ್ನು ಬಂಧಿಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಆ ಲೇಖನ ಬರೆದವನು ಒಂಬತ್ತನೇ ತರಗತಿ ಓದುತ್ತಿರುವ ಒಬ್ಬ ಶಾಲಾ ಬಾಲಕ ಎಂದು ಗೊತ್ತಾಗಿ ನ್ಯಾಯಾಲಯದಲ್ಲಿ ಜನ ಸೇರಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಕೂಡಾ ಅಲ್ಲಿ ಜಮಾಯಿಸಿದರು.

ಆ  ಲೇಖನವನ್ನು ಬರೆದ ಶಾಲಾ ಬಾಲಕ ಎನ್.ಕೆ ಗಣಪಯ್ಯ.

ಆಗ ಜಿಲ್ಲಾ ನ್ಯಾಯಾಧೀಶರಾಗಿದ್ದವರು ಕೊಡಗಿನವರೇ ಆದ ಬೋಪಯ್ಯ ಎಂಬವರು. ಅವರಿಗೆ ಪರಿಸ್ಥಿತಿ ಅರಿವಾಯಿತು

ಅವರು ಬಾಲಕ ಗಣಪಯ್ಯನಿಗೆ ಇನ್ನು ಮುಂದೆ ಹೀಗೆ ಮಾಡಿದರೆ ಶಿಕ್ಷೆ ವಿಧಿಸುತ್ತೇನೆ. ಎಂದು ಎಚ್ಚರಿಸಿ ಬಿಟ್ಟು ಬಿಟ್ಟರಂತೆ.

ಬಹುಶಃ ಕಲೆಕ್ಟರ್ ಸಾಹೇಬರಿಗೂ ತಮ್ಮ ತಪ್ಪು ಅರಿವಾಯಿತೋ ಅಥವಾ ಯಾರಾದರೂ ತಿಳಿಹೇಳಿದರೋ ಗಾಡಿಗಳು ಊರೊಳಗೆ ಬರಬಹುದೆಂದು ಅಪ್ಪಣೆಯಾಯಿತು.

ಈ ವಿಚಾರವನ್ನು ನನಗೆ ತಿಳಿಸಿದವರು ಸಿ.ಎಂ. ಪೂಣಚ್ಚನವರು. ಮೇಲಿನ ಘಟನೆ ನಡೆದಾಗ ಅವರು ಅದೇ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ.

“ನಾವೆಲ್ಲ ಆಶ್ಚರ್ಯ, ಕುತೂಹಲಗಳಿಂದ ಗಣಪಯ್ಯನವರನ್ನು ನೋಡುತ್ತಿದ್ದೆವು. ನಮ್ಮಂತವರ ಕಣ್ಣಿನಲ್ಲಿ ಅವರೊಬ್ಬ ಹೀರೋ… ಮುಂದೆ ಅವರನ್ನು ನನ್ನ ಗುರುಗಳೆಂದೇ ಪರಿಗಣಿಸಿದೆ ಎಂದರು ಪೂಣಚ್ಚ. ಆ ಘಟನೆಯ ನಂತರ ಗಣಪಯ್ಯನವರನ್ನು ಸಹಪಾಠಿಗಳು ಮತ್ತು ಕೆಲವರು ಪರಿಚಿತರು “ದೀನಬಂಧು ಗಣಪಯ್ಯ” ಎನ್ನುತ್ತಿದ್ದರಂತೆ!

ಕೊಡಗಿನ ವಿರಾಜಪೇಟೆ ತಾಲ್ಲೂಕು ನರಿಯಂದಡ ಗ್ರಾಮದ ಕೃಷ್ಣಯ್ಯನವರ ಮಗ   ಗಣಪಯ್ಯನವರದ್ದು ಕಷ್ಟದ ಬದುಕು. ಮನೆಯಲ್ಲಿ ಬಡತನ, ಪ್ರೌಢಶಾಲೆ ತಲಪಿದ್ದೇ ದೊಡ್ಡದು. ಅಲ್ಲಿಗೇ ವಿದ್ಯೆ ಮೊಟಕಾಯಿತು, ಜೀವನ ನಿರ್ವಹಣೆಗೆ ಹಲವು ಸಣ್ಣ ಪುಟ್ಟ ಚಾಕರಿಗಳನ್ನು ಮಾಡಿದರು.

ಬಾಲ್ಯದಿಂದ ಬಂದ ಕೃಷಿ ಅನುಭವವಿತ್ತು. ನಂತರದ ದಿನಗಳಲ್ಲಿ ಸಣ್ಣ ಪ್ರಾಯದಲ್ಲೇ ಕೊಡಗಿನ ಸಾಕಮ್ಮನವರ ಕಾಫಿತೋಟದಲ್ಲಿ ಕೆಲಸಕ್ಕೆ ಸೇರಿದರು.

(ಮುಂದುವರೆಯುತ್ತದೆ…)

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ: ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚೆನ್ನಾಗಿದೆ. ಪ್ರಸಾದರೆ. ಕೆಲವೊಂದನ್ನು ಓದಿದ್ದೆ. ಇನ್ನು ಮುಂದೆ ಎಲ್ಲವನ್ನೂ ಓದಬಹುದು. ಶುಭಾಶಯಗಳು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....