Homeಅಂಕಣಗಳುಕಳೆದುಹೋದ ದಿನಗಳುಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

ಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

- Advertisement -
- Advertisement -

1930 ರ ದಶಕ ಬ್ರಿಟಿಷರ ಆಳ್ವಿಕೆ. ಕೊಡಗು ಜಿಲ್ಲೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಮಡಿಕೇರಿಯ ಕೋಟೆ ಹೆಬ್ಬಾಗಿಲ ಬಳಿ ಈಗ ಇರುವ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ ಅಂದಿನ ಜಿಲ್ಲಾ ಕಲೆಕ್ಟರ್‌ರ ನಿವಾಸ. ಅದು ಈಗ ಇರುವಂತಹ ವಿದ್ಯುತ್, ಗ್ಯಾಸ್, ಸೀಮೆಎಣ್ಣೆ ಸ್ಟವ್ ಮುಂತಾದ ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲ. ಮಡಿಕೇರಿ ಪೇಟೆಯಲ್ಲಿ ಒಲೆ ಉರಿಯಬೇಕಾದರೆ ಹಳ್ಳಿಯಿಂದ ಸೌದೆ ಬರಬೇಕು.

ಪ್ರತಿದಿನ ಮದ್ಯಾಹ್ನ ಮೂರುಗಂಟೆಯ ವೇಳೆಗೆ ಸೌದೆ ತುಂಬಿದ ಎತ್ತಿನ ಗಾಡಿಗಳು ಟೋಲ್ ಗೇಟ್ (ಇಂದಿನ ಜನರಲ್ ತಿಮ್ಮಯ್ಯ ಸರ್ಕಲ್) ನಲ್ಲಿ ಸುಂಕ ಕಟ್ಟಿ ಊರೊಳಗೆ ಬರಬೇಕು.

ಅಲ್ಲಿಂದ ಮುಂದೆ ಬಂದು ಕೋಟೆ ಬಾಗಿಲು ದಾಟಿದ ಕೂಡಲೇ ರಸ್ತೆ ಕಡಿದಾದ ಇಳಿಜಾರು. ಸೌದೆ ತುಂಬಿದ ಎತ್ತಿನಗಾಡಿಗಳು ಬಿರಿ (ಎತ್ತಿನ ಗಾಡಿಗಳ ದೇಸೀ ಬ್ರೇಕ್) ಹಾಕಿಯೇ ಮುಂದೆ ಸಾಗಬೇಕು. ಎತ್ತಿನ ಗಾಡಿಗೆ ಬಿರಿ ಹಾಕಿದರೆ ಆಗುವ ಕಿರ್ರೋಂ….. ಎನ್ನುವ ಸದ್ದು ಮೈಲು ದೂರಕ್ಕೂ ಕೇಳುತ್ತದೆ.

ಕೋಟೆ ಬಾಗಿಲ ಮುಂದಿದ್ದ ಜಿಲ್ಲಾ ಕಲೆಕ್ಟರ್ ಮನೆಯಲ್ಲಿ ಕಲೆಕ್ಟರ್‌ರ ಪತ್ನಿ‌ಗೆ ಅದು ಮದ್ಯಾಹ್ನದ ನಿದ್ದೆಯ ಸಮಯ. ಈ ಎತ್ತಿನ ಗಾಡಿಗಳ ಬಿರಿಗಳ ಸದ್ದಿನಿಂದ ಆಕೆಯ ಮಧ್ಯಾಹ್ನದ ನಿದ್ದೆಗೆ ಬಾಧೆ ಬಂತು. ಆಕೆ ಗಂಡನಲ್ಲಿ ದೂರಿರಬಹುದು.

ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ

ಸೌದೆ ತುಂಬಿದ ಎತ್ತಿನಗಾಡಿಗಳು ಟೋಲ್ ಗೇಟ್ ನಿಂದ ಮುಂದೆ ಊರೊಳಕ್ಕೆ ಬರಬಾರದು, ಎಂದು ಕಲೆಕ್ಟರ್ ಸಾಹೇಬರು ಫರ್ಮಾನು ಹೊರಡಿಸಿದರು. ಗಾಡಿಗಳು ಊರೊಳಗೆ ಬರುವುದು ನಿಂತುಹೋಯಿತು.

ಶ್ರೀಮಂತರು ಕೈಗಾಡಿಗಳ ಮೂಲಕ ಅಲ್ಲಿಂದಲೇ ಸೌದೆಯನ್ನು ತರಿಸಿಕೊಂಡರು. ಆದರೆ ಬಡವರ ಮನೆಯಲ್ಲಿ ಒಲೆ ಉರಿಯುವುದು ಕಷ್ಟವಾಯಿತು. ಹಾಗೇ ಎತ್ತಿನ ಗಾಡಿಗಳಲ್ಲಿ ಹಳ್ಳಿಯಿಂದ ಸೌದೆ ತಂದು ಮಾರಿ ಅದರಿಂದ ನಿತ್ಯದ ಅನ್ನ ಕಾಣುತ್ತಿದ್ದವರಿಗೂ ಸಮಸ್ಯೆಯಾಯಿತು.

ಆ ಸಮಯದಲ್ಲಿ ಮಂಗಳೂರಿನಿಂದ “ದೀನ ಬಂಧು” ಎನ್ನುವ ಪತ್ರಿಕೆಯೊಂದು ಪ್ರಕಟವಾಗುತ್ತಿತ್ತು. ಕೆಲವೇ ದಿನಗಳಲ್ಲಿ ಆ ಪತ್ರಿಕೆಯಲ್ಲಿ “ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು” ಎಂಬ ಲೇಖನ ಪ್ರಕಟವಾಯಿತು.

ಒಂದೆರಡು ದಿನಗಳಲ್ಲಿಯೇ ಬ್ರಿಟಿಷ್ ಅಧಿಕಾರಿಯ ವಿರುದ್ಧ ಬರೆಯುವ ದುಸ್ಸಾಹಸ ಮಾಡಿದ  ವ್ಯಕ್ತಿಯನ್ನು ಬಂಧಿಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಆ ಲೇಖನ ಬರೆದವನು ಒಂಬತ್ತನೇ ತರಗತಿ ಓದುತ್ತಿರುವ ಒಬ್ಬ ಶಾಲಾ ಬಾಲಕ ಎಂದು ಗೊತ್ತಾಗಿ ನ್ಯಾಯಾಲಯದಲ್ಲಿ ಜನ ಸೇರಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಕೂಡಾ ಅಲ್ಲಿ ಜಮಾಯಿಸಿದರು.

ಆ  ಲೇಖನವನ್ನು ಬರೆದ ಶಾಲಾ ಬಾಲಕ ಎನ್.ಕೆ ಗಣಪಯ್ಯ.

ಆಗ ಜಿಲ್ಲಾ ನ್ಯಾಯಾಧೀಶರಾಗಿದ್ದವರು ಕೊಡಗಿನವರೇ ಆದ ಬೋಪಯ್ಯ ಎಂಬವರು. ಅವರಿಗೆ ಪರಿಸ್ಥಿತಿ ಅರಿವಾಯಿತು

ಅವರು ಬಾಲಕ ಗಣಪಯ್ಯನಿಗೆ ಇನ್ನು ಮುಂದೆ ಹೀಗೆ ಮಾಡಿದರೆ ಶಿಕ್ಷೆ ವಿಧಿಸುತ್ತೇನೆ. ಎಂದು ಎಚ್ಚರಿಸಿ ಬಿಟ್ಟು ಬಿಟ್ಟರಂತೆ.

ಬಹುಶಃ ಕಲೆಕ್ಟರ್ ಸಾಹೇಬರಿಗೂ ತಮ್ಮ ತಪ್ಪು ಅರಿವಾಯಿತೋ ಅಥವಾ ಯಾರಾದರೂ ತಿಳಿಹೇಳಿದರೋ ಗಾಡಿಗಳು ಊರೊಳಗೆ ಬರಬಹುದೆಂದು ಅಪ್ಪಣೆಯಾಯಿತು.

ಈ ವಿಚಾರವನ್ನು ನನಗೆ ತಿಳಿಸಿದವರು ಸಿ.ಎಂ. ಪೂಣಚ್ಚನವರು. ಮೇಲಿನ ಘಟನೆ ನಡೆದಾಗ ಅವರು ಅದೇ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ.

“ನಾವೆಲ್ಲ ಆಶ್ಚರ್ಯ, ಕುತೂಹಲಗಳಿಂದ ಗಣಪಯ್ಯನವರನ್ನು ನೋಡುತ್ತಿದ್ದೆವು. ನಮ್ಮಂತವರ ಕಣ್ಣಿನಲ್ಲಿ ಅವರೊಬ್ಬ ಹೀರೋ… ಮುಂದೆ ಅವರನ್ನು ನನ್ನ ಗುರುಗಳೆಂದೇ ಪರಿಗಣಿಸಿದೆ ಎಂದರು ಪೂಣಚ್ಚ. ಆ ಘಟನೆಯ ನಂತರ ಗಣಪಯ್ಯನವರನ್ನು ಸಹಪಾಠಿಗಳು ಮತ್ತು ಕೆಲವರು ಪರಿಚಿತರು “ದೀನಬಂಧು ಗಣಪಯ್ಯ” ಎನ್ನುತ್ತಿದ್ದರಂತೆ!

ಕೊಡಗಿನ ವಿರಾಜಪೇಟೆ ತಾಲ್ಲೂಕು ನರಿಯಂದಡ ಗ್ರಾಮದ ಕೃಷ್ಣಯ್ಯನವರ ಮಗ   ಗಣಪಯ್ಯನವರದ್ದು ಕಷ್ಟದ ಬದುಕು. ಮನೆಯಲ್ಲಿ ಬಡತನ, ಪ್ರೌಢಶಾಲೆ ತಲಪಿದ್ದೇ ದೊಡ್ಡದು. ಅಲ್ಲಿಗೇ ವಿದ್ಯೆ ಮೊಟಕಾಯಿತು, ಜೀವನ ನಿರ್ವಹಣೆಗೆ ಹಲವು ಸಣ್ಣ ಪುಟ್ಟ ಚಾಕರಿಗಳನ್ನು ಮಾಡಿದರು.

ಬಾಲ್ಯದಿಂದ ಬಂದ ಕೃಷಿ ಅನುಭವವಿತ್ತು. ನಂತರದ ದಿನಗಳಲ್ಲಿ ಸಣ್ಣ ಪ್ರಾಯದಲ್ಲೇ ಕೊಡಗಿನ ಸಾಕಮ್ಮನವರ ಕಾಫಿತೋಟದಲ್ಲಿ ಕೆಲಸಕ್ಕೆ ಸೇರಿದರು.

(ಮುಂದುವರೆಯುತ್ತದೆ…)

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ: ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚೆನ್ನಾಗಿದೆ. ಪ್ರಸಾದರೆ. ಕೆಲವೊಂದನ್ನು ಓದಿದ್ದೆ. ಇನ್ನು ಮುಂದೆ ಎಲ್ಲವನ್ನೂ ಓದಬಹುದು. ಶುಭಾಶಯಗಳು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...