Homeಅಂಕಣಗಳುಕಳೆದುಹೋದ ದಿನಗಳುಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

ಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

- Advertisement -
- Advertisement -

1930 ರ ದಶಕ ಬ್ರಿಟಿಷರ ಆಳ್ವಿಕೆ. ಕೊಡಗು ಜಿಲ್ಲೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಮಡಿಕೇರಿಯ ಕೋಟೆ ಹೆಬ್ಬಾಗಿಲ ಬಳಿ ಈಗ ಇರುವ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ ಅಂದಿನ ಜಿಲ್ಲಾ ಕಲೆಕ್ಟರ್‌ರ ನಿವಾಸ. ಅದು ಈಗ ಇರುವಂತಹ ವಿದ್ಯುತ್, ಗ್ಯಾಸ್, ಸೀಮೆಎಣ್ಣೆ ಸ್ಟವ್ ಮುಂತಾದ ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲ. ಮಡಿಕೇರಿ ಪೇಟೆಯಲ್ಲಿ ಒಲೆ ಉರಿಯಬೇಕಾದರೆ ಹಳ್ಳಿಯಿಂದ ಸೌದೆ ಬರಬೇಕು.

ಪ್ರತಿದಿನ ಮದ್ಯಾಹ್ನ ಮೂರುಗಂಟೆಯ ವೇಳೆಗೆ ಸೌದೆ ತುಂಬಿದ ಎತ್ತಿನ ಗಾಡಿಗಳು ಟೋಲ್ ಗೇಟ್ (ಇಂದಿನ ಜನರಲ್ ತಿಮ್ಮಯ್ಯ ಸರ್ಕಲ್) ನಲ್ಲಿ ಸುಂಕ ಕಟ್ಟಿ ಊರೊಳಗೆ ಬರಬೇಕು.

ಅಲ್ಲಿಂದ ಮುಂದೆ ಬಂದು ಕೋಟೆ ಬಾಗಿಲು ದಾಟಿದ ಕೂಡಲೇ ರಸ್ತೆ ಕಡಿದಾದ ಇಳಿಜಾರು. ಸೌದೆ ತುಂಬಿದ ಎತ್ತಿನಗಾಡಿಗಳು ಬಿರಿ (ಎತ್ತಿನ ಗಾಡಿಗಳ ದೇಸೀ ಬ್ರೇಕ್) ಹಾಕಿಯೇ ಮುಂದೆ ಸಾಗಬೇಕು. ಎತ್ತಿನ ಗಾಡಿಗೆ ಬಿರಿ ಹಾಕಿದರೆ ಆಗುವ ಕಿರ್ರೋಂ….. ಎನ್ನುವ ಸದ್ದು ಮೈಲು ದೂರಕ್ಕೂ ಕೇಳುತ್ತದೆ.

ಕೋಟೆ ಬಾಗಿಲ ಮುಂದಿದ್ದ ಜಿಲ್ಲಾ ಕಲೆಕ್ಟರ್ ಮನೆಯಲ್ಲಿ ಕಲೆಕ್ಟರ್‌ರ ಪತ್ನಿ‌ಗೆ ಅದು ಮದ್ಯಾಹ್ನದ ನಿದ್ದೆಯ ಸಮಯ. ಈ ಎತ್ತಿನ ಗಾಡಿಗಳ ಬಿರಿಗಳ ಸದ್ದಿನಿಂದ ಆಕೆಯ ಮಧ್ಯಾಹ್ನದ ನಿದ್ದೆಗೆ ಬಾಧೆ ಬಂತು. ಆಕೆ ಗಂಡನಲ್ಲಿ ದೂರಿರಬಹುದು.

ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ

ಸೌದೆ ತುಂಬಿದ ಎತ್ತಿನಗಾಡಿಗಳು ಟೋಲ್ ಗೇಟ್ ನಿಂದ ಮುಂದೆ ಊರೊಳಕ್ಕೆ ಬರಬಾರದು, ಎಂದು ಕಲೆಕ್ಟರ್ ಸಾಹೇಬರು ಫರ್ಮಾನು ಹೊರಡಿಸಿದರು. ಗಾಡಿಗಳು ಊರೊಳಗೆ ಬರುವುದು ನಿಂತುಹೋಯಿತು.

ಶ್ರೀಮಂತರು ಕೈಗಾಡಿಗಳ ಮೂಲಕ ಅಲ್ಲಿಂದಲೇ ಸೌದೆಯನ್ನು ತರಿಸಿಕೊಂಡರು. ಆದರೆ ಬಡವರ ಮನೆಯಲ್ಲಿ ಒಲೆ ಉರಿಯುವುದು ಕಷ್ಟವಾಯಿತು. ಹಾಗೇ ಎತ್ತಿನ ಗಾಡಿಗಳಲ್ಲಿ ಹಳ್ಳಿಯಿಂದ ಸೌದೆ ತಂದು ಮಾರಿ ಅದರಿಂದ ನಿತ್ಯದ ಅನ್ನ ಕಾಣುತ್ತಿದ್ದವರಿಗೂ ಸಮಸ್ಯೆಯಾಯಿತು.

ಆ ಸಮಯದಲ್ಲಿ ಮಂಗಳೂರಿನಿಂದ “ದೀನ ಬಂಧು” ಎನ್ನುವ ಪತ್ರಿಕೆಯೊಂದು ಪ್ರಕಟವಾಗುತ್ತಿತ್ತು. ಕೆಲವೇ ದಿನಗಳಲ್ಲಿ ಆ ಪತ್ರಿಕೆಯಲ್ಲಿ “ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು” ಎಂಬ ಲೇಖನ ಪ್ರಕಟವಾಯಿತು.

ಒಂದೆರಡು ದಿನಗಳಲ್ಲಿಯೇ ಬ್ರಿಟಿಷ್ ಅಧಿಕಾರಿಯ ವಿರುದ್ಧ ಬರೆಯುವ ದುಸ್ಸಾಹಸ ಮಾಡಿದ  ವ್ಯಕ್ತಿಯನ್ನು ಬಂಧಿಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಆ ಲೇಖನ ಬರೆದವನು ಒಂಬತ್ತನೇ ತರಗತಿ ಓದುತ್ತಿರುವ ಒಬ್ಬ ಶಾಲಾ ಬಾಲಕ ಎಂದು ಗೊತ್ತಾಗಿ ನ್ಯಾಯಾಲಯದಲ್ಲಿ ಜನ ಸೇರಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಕೂಡಾ ಅಲ್ಲಿ ಜಮಾಯಿಸಿದರು.

ಆ  ಲೇಖನವನ್ನು ಬರೆದ ಶಾಲಾ ಬಾಲಕ ಎನ್.ಕೆ ಗಣಪಯ್ಯ.

ಆಗ ಜಿಲ್ಲಾ ನ್ಯಾಯಾಧೀಶರಾಗಿದ್ದವರು ಕೊಡಗಿನವರೇ ಆದ ಬೋಪಯ್ಯ ಎಂಬವರು. ಅವರಿಗೆ ಪರಿಸ್ಥಿತಿ ಅರಿವಾಯಿತು

ಅವರು ಬಾಲಕ ಗಣಪಯ್ಯನಿಗೆ ಇನ್ನು ಮುಂದೆ ಹೀಗೆ ಮಾಡಿದರೆ ಶಿಕ್ಷೆ ವಿಧಿಸುತ್ತೇನೆ. ಎಂದು ಎಚ್ಚರಿಸಿ ಬಿಟ್ಟು ಬಿಟ್ಟರಂತೆ.

ಬಹುಶಃ ಕಲೆಕ್ಟರ್ ಸಾಹೇಬರಿಗೂ ತಮ್ಮ ತಪ್ಪು ಅರಿವಾಯಿತೋ ಅಥವಾ ಯಾರಾದರೂ ತಿಳಿಹೇಳಿದರೋ ಗಾಡಿಗಳು ಊರೊಳಗೆ ಬರಬಹುದೆಂದು ಅಪ್ಪಣೆಯಾಯಿತು.

ಈ ವಿಚಾರವನ್ನು ನನಗೆ ತಿಳಿಸಿದವರು ಸಿ.ಎಂ. ಪೂಣಚ್ಚನವರು. ಮೇಲಿನ ಘಟನೆ ನಡೆದಾಗ ಅವರು ಅದೇ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ.

“ನಾವೆಲ್ಲ ಆಶ್ಚರ್ಯ, ಕುತೂಹಲಗಳಿಂದ ಗಣಪಯ್ಯನವರನ್ನು ನೋಡುತ್ತಿದ್ದೆವು. ನಮ್ಮಂತವರ ಕಣ್ಣಿನಲ್ಲಿ ಅವರೊಬ್ಬ ಹೀರೋ… ಮುಂದೆ ಅವರನ್ನು ನನ್ನ ಗುರುಗಳೆಂದೇ ಪರಿಗಣಿಸಿದೆ ಎಂದರು ಪೂಣಚ್ಚ. ಆ ಘಟನೆಯ ನಂತರ ಗಣಪಯ್ಯನವರನ್ನು ಸಹಪಾಠಿಗಳು ಮತ್ತು ಕೆಲವರು ಪರಿಚಿತರು “ದೀನಬಂಧು ಗಣಪಯ್ಯ” ಎನ್ನುತ್ತಿದ್ದರಂತೆ!

ಕೊಡಗಿನ ವಿರಾಜಪೇಟೆ ತಾಲ್ಲೂಕು ನರಿಯಂದಡ ಗ್ರಾಮದ ಕೃಷ್ಣಯ್ಯನವರ ಮಗ   ಗಣಪಯ್ಯನವರದ್ದು ಕಷ್ಟದ ಬದುಕು. ಮನೆಯಲ್ಲಿ ಬಡತನ, ಪ್ರೌಢಶಾಲೆ ತಲಪಿದ್ದೇ ದೊಡ್ಡದು. ಅಲ್ಲಿಗೇ ವಿದ್ಯೆ ಮೊಟಕಾಯಿತು, ಜೀವನ ನಿರ್ವಹಣೆಗೆ ಹಲವು ಸಣ್ಣ ಪುಟ್ಟ ಚಾಕರಿಗಳನ್ನು ಮಾಡಿದರು.

ಬಾಲ್ಯದಿಂದ ಬಂದ ಕೃಷಿ ಅನುಭವವಿತ್ತು. ನಂತರದ ದಿನಗಳಲ್ಲಿ ಸಣ್ಣ ಪ್ರಾಯದಲ್ಲೇ ಕೊಡಗಿನ ಸಾಕಮ್ಮನವರ ಕಾಫಿತೋಟದಲ್ಲಿ ಕೆಲಸಕ್ಕೆ ಸೇರಿದರು.

(ಮುಂದುವರೆಯುತ್ತದೆ…)

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ: ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚೆನ್ನಾಗಿದೆ. ಪ್ರಸಾದರೆ. ಕೆಲವೊಂದನ್ನು ಓದಿದ್ದೆ. ಇನ್ನು ಮುಂದೆ ಎಲ್ಲವನ್ನೂ ಓದಬಹುದು. ಶುಭಾಶಯಗಳು.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...