Homeಅಂಕಣಗಳುಕಳೆದುಹೋದ ದಿನಗಳುಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

ಕಳೆದುಹೋದ ದಿನಗಳು -1: ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು

- Advertisement -
- Advertisement -

1930 ರ ದಶಕ ಬ್ರಿಟಿಷರ ಆಳ್ವಿಕೆ. ಕೊಡಗು ಜಿಲ್ಲೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಮಡಿಕೇರಿಯ ಕೋಟೆ ಹೆಬ್ಬಾಗಿಲ ಬಳಿ ಈಗ ಇರುವ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ ಅಂದಿನ ಜಿಲ್ಲಾ ಕಲೆಕ್ಟರ್‌ರ ನಿವಾಸ. ಅದು ಈಗ ಇರುವಂತಹ ವಿದ್ಯುತ್, ಗ್ಯಾಸ್, ಸೀಮೆಎಣ್ಣೆ ಸ್ಟವ್ ಮುಂತಾದ ಯಾವುದೇ ಆಧುನಿಕ ಸೌಲಭ್ಯಗಳು ಇಲ್ಲದ ಕಾಲ. ಮಡಿಕೇರಿ ಪೇಟೆಯಲ್ಲಿ ಒಲೆ ಉರಿಯಬೇಕಾದರೆ ಹಳ್ಳಿಯಿಂದ ಸೌದೆ ಬರಬೇಕು.

ಪ್ರತಿದಿನ ಮದ್ಯಾಹ್ನ ಮೂರುಗಂಟೆಯ ವೇಳೆಗೆ ಸೌದೆ ತುಂಬಿದ ಎತ್ತಿನ ಗಾಡಿಗಳು ಟೋಲ್ ಗೇಟ್ (ಇಂದಿನ ಜನರಲ್ ತಿಮ್ಮಯ್ಯ ಸರ್ಕಲ್) ನಲ್ಲಿ ಸುಂಕ ಕಟ್ಟಿ ಊರೊಳಗೆ ಬರಬೇಕು.

ಅಲ್ಲಿಂದ ಮುಂದೆ ಬಂದು ಕೋಟೆ ಬಾಗಿಲು ದಾಟಿದ ಕೂಡಲೇ ರಸ್ತೆ ಕಡಿದಾದ ಇಳಿಜಾರು. ಸೌದೆ ತುಂಬಿದ ಎತ್ತಿನಗಾಡಿಗಳು ಬಿರಿ (ಎತ್ತಿನ ಗಾಡಿಗಳ ದೇಸೀ ಬ್ರೇಕ್) ಹಾಕಿಯೇ ಮುಂದೆ ಸಾಗಬೇಕು. ಎತ್ತಿನ ಗಾಡಿಗೆ ಬಿರಿ ಹಾಕಿದರೆ ಆಗುವ ಕಿರ್ರೋಂ….. ಎನ್ನುವ ಸದ್ದು ಮೈಲು ದೂರಕ್ಕೂ ಕೇಳುತ್ತದೆ.

ಕೋಟೆ ಬಾಗಿಲ ಮುಂದಿದ್ದ ಜಿಲ್ಲಾ ಕಲೆಕ್ಟರ್ ಮನೆಯಲ್ಲಿ ಕಲೆಕ್ಟರ್‌ರ ಪತ್ನಿ‌ಗೆ ಅದು ಮದ್ಯಾಹ್ನದ ನಿದ್ದೆಯ ಸಮಯ. ಈ ಎತ್ತಿನ ಗಾಡಿಗಳ ಬಿರಿಗಳ ಸದ್ದಿನಿಂದ ಆಕೆಯ ಮಧ್ಯಾಹ್ನದ ನಿದ್ದೆಗೆ ಬಾಧೆ ಬಂತು. ಆಕೆ ಗಂಡನಲ್ಲಿ ದೂರಿರಬಹುದು.

ಮಡಿಕೇರಿಯ ಕಾಸ್ಮೋಪಾಲಿಟನ್ ಕ್ಲಬ್ ನ ಕಟ್ಟಡ

ಸೌದೆ ತುಂಬಿದ ಎತ್ತಿನಗಾಡಿಗಳು ಟೋಲ್ ಗೇಟ್ ನಿಂದ ಮುಂದೆ ಊರೊಳಕ್ಕೆ ಬರಬಾರದು, ಎಂದು ಕಲೆಕ್ಟರ್ ಸಾಹೇಬರು ಫರ್ಮಾನು ಹೊರಡಿಸಿದರು. ಗಾಡಿಗಳು ಊರೊಳಗೆ ಬರುವುದು ನಿಂತುಹೋಯಿತು.

ಶ್ರೀಮಂತರು ಕೈಗಾಡಿಗಳ ಮೂಲಕ ಅಲ್ಲಿಂದಲೇ ಸೌದೆಯನ್ನು ತರಿಸಿಕೊಂಡರು. ಆದರೆ ಬಡವರ ಮನೆಯಲ್ಲಿ ಒಲೆ ಉರಿಯುವುದು ಕಷ್ಟವಾಯಿತು. ಹಾಗೇ ಎತ್ತಿನ ಗಾಡಿಗಳಲ್ಲಿ ಹಳ್ಳಿಯಿಂದ ಸೌದೆ ತಂದು ಮಾರಿ ಅದರಿಂದ ನಿತ್ಯದ ಅನ್ನ ಕಾಣುತ್ತಿದ್ದವರಿಗೂ ಸಮಸ್ಯೆಯಾಯಿತು.

ಆ ಸಮಯದಲ್ಲಿ ಮಂಗಳೂರಿನಿಂದ “ದೀನ ಬಂಧು” ಎನ್ನುವ ಪತ್ರಿಕೆಯೊಂದು ಪ್ರಕಟವಾಗುತ್ತಿತ್ತು. ಕೆಲವೇ ದಿನಗಳಲ್ಲಿ ಆ ಪತ್ರಿಕೆಯಲ್ಲಿ “ಜಿಲ್ಲಾ ಕಲೆಕ್ಟರ್‌ರ ಪತ್ನಿಯ ಮಧ್ಯಾಹ್ನದ ನಿದ್ದೆಗಾಗಿ ಬಡವರ ಅನ್ನಕ್ಕೆ ಕಲ್ಲು” ಎಂಬ ಲೇಖನ ಪ್ರಕಟವಾಯಿತು.

ಒಂದೆರಡು ದಿನಗಳಲ್ಲಿಯೇ ಬ್ರಿಟಿಷ್ ಅಧಿಕಾರಿಯ ವಿರುದ್ಧ ಬರೆಯುವ ದುಸ್ಸಾಹಸ ಮಾಡಿದ  ವ್ಯಕ್ತಿಯನ್ನು ಬಂಧಿಸಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಆ ಲೇಖನ ಬರೆದವನು ಒಂಬತ್ತನೇ ತರಗತಿ ಓದುತ್ತಿರುವ ಒಬ್ಬ ಶಾಲಾ ಬಾಲಕ ಎಂದು ಗೊತ್ತಾಗಿ ನ್ಯಾಯಾಲಯದಲ್ಲಿ ಜನ ಸೇರಿದರು. ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಕೂಡಾ ಅಲ್ಲಿ ಜಮಾಯಿಸಿದರು.

ಆ  ಲೇಖನವನ್ನು ಬರೆದ ಶಾಲಾ ಬಾಲಕ ಎನ್.ಕೆ ಗಣಪಯ್ಯ.

ಆಗ ಜಿಲ್ಲಾ ನ್ಯಾಯಾಧೀಶರಾಗಿದ್ದವರು ಕೊಡಗಿನವರೇ ಆದ ಬೋಪಯ್ಯ ಎಂಬವರು. ಅವರಿಗೆ ಪರಿಸ್ಥಿತಿ ಅರಿವಾಯಿತು

ಅವರು ಬಾಲಕ ಗಣಪಯ್ಯನಿಗೆ ಇನ್ನು ಮುಂದೆ ಹೀಗೆ ಮಾಡಿದರೆ ಶಿಕ್ಷೆ ವಿಧಿಸುತ್ತೇನೆ. ಎಂದು ಎಚ್ಚರಿಸಿ ಬಿಟ್ಟು ಬಿಟ್ಟರಂತೆ.

ಬಹುಶಃ ಕಲೆಕ್ಟರ್ ಸಾಹೇಬರಿಗೂ ತಮ್ಮ ತಪ್ಪು ಅರಿವಾಯಿತೋ ಅಥವಾ ಯಾರಾದರೂ ತಿಳಿಹೇಳಿದರೋ ಗಾಡಿಗಳು ಊರೊಳಗೆ ಬರಬಹುದೆಂದು ಅಪ್ಪಣೆಯಾಯಿತು.

ಈ ವಿಚಾರವನ್ನು ನನಗೆ ತಿಳಿಸಿದವರು ಸಿ.ಎಂ. ಪೂಣಚ್ಚನವರು. ಮೇಲಿನ ಘಟನೆ ನಡೆದಾಗ ಅವರು ಅದೇ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ.

“ನಾವೆಲ್ಲ ಆಶ್ಚರ್ಯ, ಕುತೂಹಲಗಳಿಂದ ಗಣಪಯ್ಯನವರನ್ನು ನೋಡುತ್ತಿದ್ದೆವು. ನಮ್ಮಂತವರ ಕಣ್ಣಿನಲ್ಲಿ ಅವರೊಬ್ಬ ಹೀರೋ… ಮುಂದೆ ಅವರನ್ನು ನನ್ನ ಗುರುಗಳೆಂದೇ ಪರಿಗಣಿಸಿದೆ ಎಂದರು ಪೂಣಚ್ಚ. ಆ ಘಟನೆಯ ನಂತರ ಗಣಪಯ್ಯನವರನ್ನು ಸಹಪಾಠಿಗಳು ಮತ್ತು ಕೆಲವರು ಪರಿಚಿತರು “ದೀನಬಂಧು ಗಣಪಯ್ಯ” ಎನ್ನುತ್ತಿದ್ದರಂತೆ!

ಕೊಡಗಿನ ವಿರಾಜಪೇಟೆ ತಾಲ್ಲೂಕು ನರಿಯಂದಡ ಗ್ರಾಮದ ಕೃಷ್ಣಯ್ಯನವರ ಮಗ   ಗಣಪಯ್ಯನವರದ್ದು ಕಷ್ಟದ ಬದುಕು. ಮನೆಯಲ್ಲಿ ಬಡತನ, ಪ್ರೌಢಶಾಲೆ ತಲಪಿದ್ದೇ ದೊಡ್ಡದು. ಅಲ್ಲಿಗೇ ವಿದ್ಯೆ ಮೊಟಕಾಯಿತು, ಜೀವನ ನಿರ್ವಹಣೆಗೆ ಹಲವು ಸಣ್ಣ ಪುಟ್ಟ ಚಾಕರಿಗಳನ್ನು ಮಾಡಿದರು.

ಬಾಲ್ಯದಿಂದ ಬಂದ ಕೃಷಿ ಅನುಭವವಿತ್ತು. ನಂತರದ ದಿನಗಳಲ್ಲಿ ಸಣ್ಣ ಪ್ರಾಯದಲ್ಲೇ ಕೊಡಗಿನ ಸಾಕಮ್ಮನವರ ಕಾಫಿತೋಟದಲ್ಲಿ ಕೆಲಸಕ್ಕೆ ಸೇರಿದರು.

(ಮುಂದುವರೆಯುತ್ತದೆ…)

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ: ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚೆನ್ನಾಗಿದೆ. ಪ್ರಸಾದರೆ. ಕೆಲವೊಂದನ್ನು ಓದಿದ್ದೆ. ಇನ್ನು ಮುಂದೆ ಎಲ್ಲವನ್ನೂ ಓದಬಹುದು. ಶುಭಾಶಯಗಳು.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...