Homeಅಂಕಣಗಳುಕಳೆದುಹೋದ ದಿನಗಳು -31: ಕರ್ನಾಟಕ ಕಾಫಿ ಮತ್ತು ಗಣಪಯ್ಯನವರ ನಂಟು

ಕಳೆದುಹೋದ ದಿನಗಳು -31: ಕರ್ನಾಟಕ ಕಾಫಿ ಮತ್ತು ಗಣಪಯ್ಯನವರ ನಂಟು

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ಕಾಫಿ ತೋಟಗಳನ್ನು ನೋಡುವವರಿಗೆ 1992-93 ನೇ ಇಸವಿಗೂ ಹಿಂದೆ ಕಾಫಿ ಬೆಳೆಯನ್ನು ಸರ್ಕಾರ ಕಾಫಿ ಬೋರ್ಡಿನ ಮೂಲಕ ಹೇಗೆ ನಿಯಂತ್ರಿಸುತ್ತಿತ್ತು? ಇದಕ್ಕೆ ಕಾರಣಗಳೇನು, ಅದಕ್ಕೆ ಯಾವ ರೀತಿಯ ವ್ಯವಸ್ಥೆ ಇತ್ತು ಎನ್ನುವುದು ತಿಳಿದಿಲ್ಲ. ಕಾಫಿ ಬೋರ್ಡ್ ಅಥವಾ ಕಾಫಿ ಮಂಡಳಿ 1942 ರಲ್ಲಿ ಬ್ರಿಟಿಷ್ ಸರ್ಕಾರದಲ್ಲಿ ಪ್ರಾರಂಭವಾಯಿತು. ಕಾಫಿ ಪ್ರಮುಖವಾಗಿ ಒಂದು ರಫ್ತು ಬೆಳೆ. ಸರ್ಕಾರಕ್ಕೆ ಅಂದಿನ ಕಾಲಕ್ಕೆ ದೊಡ್ಡ ವಿದೇಶೀ ವಿನಿಮಯ  ಕಾಫಿಯಿಂದ ದೊರೆಯುತ್ತಿತ್ತು. ಆದ್ದರಿಂದ ಅದನ್ನು ಕೇಂದ್ರ ಅಬಕಾರಿ ಕಾನೂನಿನಡಿಯಲ್ಲಿ ತಂದು ಕಾಫಿ ಬೆಳೆಯ ನಿಯಂತ್ರಣ ಮತ್ತು ಮಾರಾಟದ ಸಂಪೂರ್ಣ ಹಕ್ಕನ್ನು ಕಾಫಿ ಮಂಡಳಿಗೆ ಒಪ್ಪಿಸಲಾಯಿತು. ಇದರಿಂದ ಹಲವು ವರ್ಷಗಳ ಕಾಲ ಬೆಳೆಗಾರರು ನಿಶ್ಚಿಂತರಾದದ್ದೂ ನಿಜವೇ.  ಆದರೆ ನಾನಿಲ್ಲಿ ಕಾಫಿ ಮಂಡಳಿಯ ಸಾಧಕ ಬಾಧಕಗಳನ್ನಾಗಲೀ, ಕಾಫಿ ಮಂಡಳಿ ಮುಂದೇನಾಯಿತು ಎನ್ನುವುದನ್ನಾಗಲೀ ಈಗ ಪ್ರಸ್ತಾಪಿಸುತ್ತಿಲ್ಲ. ಬದಲಿಗೆ ಕಾಫಿ ಬೆಳೆಗಾರ ಕಾಫಿಯನ್ನು ಬೆಳೆದು ಕಾಫಿ ಮಂಡಳಿಗೆ ಒಪ್ಪಿಸುವವರೆಗೆ ಏನೇನು ಕ್ರಮ ಕೈಗೊಳ್ಳ ಬೇಕಾಗಿತ್ತು ಅದು ಹೇಗೆ ನಡೆಯುತ್ತಿತ್ತು ಎಂಬುದರ ಸ್ಥೂಲ ಚಿತ್ರಣ ಕೊಡುವುದಷ್ಟೇ ಇಲ್ಲಿ ನನ್ನ ಉದ್ದೇಶವಾಗಿದೆ.

ಪ್ರತಿಯೊಬ್ಬ ಕೃಷಿಕನೂ ತನ್ನ ಜಮೀನಿನಲ್ಲಿ ಕಾಫಿ ಬೆಳೆಯನ್ನು ಬೆಳೆಯಲು ಪರವಾನಗಿ ಪಡೆಯುವುದು ಕಡ್ಡಾಯವಾಗಿತ್ತು. ಅಂದರೆ ಆ ಜಮೀನಿನ ಸರ್ವೆ ನಂಬರುಗಳು ಪಹಣಿ ದಾಖಲೆಯಲ್ಲಿ ಕಾಫಿ ನಂಬರ್ ಎಂದು ಇದ್ದರೆ ಅದಕ್ಕೆ ಪರವಾನಿಗೆ ಪಡೆಯುವುದು ಸುಲಭವಿತ್ತು. ಕಾಫಿ ಬೆಳೆಯುವ ಪ್ರದೇಶಗಳಲ್ಲಿ ಆ ರೀತಿಯಲ್ಲಿ ಸಾವಿರಾರು ಸರ್ವೆ ನಂಬರುಗಳು ಬ್ರಿಟಿಷರ ಕಾಲದಲ್ಲಿಯೇ ಕಾಫಿ ನಂಬರುಗಳೆಂದು ದಾಖಲಿಸಲಾಗಿತ್ತು. ಈ ರೀತಿಯ ಕಾಫಿ ಬೆಳೆಯಲು ಅರ್ಜಿಯನ್ನು ಜಿಲ್ಲಾಧಿಕಾರಿಗಳಿಗೆ (ಈ ಅಧಿಕಾರವನ್ನು ಕೆಲಕಾಲ ತಾಲ್ಲೂಕಿನ ತಹಸೀಲ್ದಾರರಿಗೆ ಕೊಡಲಾಗಿತ್ತು) ಸಲ್ಲಿಸಿ ಅವರಿಂದ ಸಾಮಾನ್ಯವಾಗಿ ಸಿ.ಆರ್.ಸಿ. ಕರೆಯಲಾಗುವ ಕಾಫಿ ರಿಜಿಸ್ಟ್ರೇಷನ್ ಸರ್ಟಿಫಿಕೇಟನ್ನು ಪಡೆಯಬೇಕಿತ್ತು.

ಒಂದು ವೇಳೆ ಜಮೀನಿನ ಸರ್ವೆ ನಂಬರು ಕಾಫಿ ನಂಬರು ಅಲ್ಲದೆ ಕುಷ್ಕಿ ಇತ್ಯಾದಿ ಇದ್ದರೆ ಅದನ್ನು ಬದಲಾಯಿಸಲು ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ, ಆ ಜಮೀನಿಗೆ ಸರ್ಕಾರ ವಿಧಿಸುವ ಪರಿವರ್ತನಾ ಶುಲ್ಕವನ್ನು ಕಟ್ಟಿ ಅದನ್ನು ಕಾಫಿ ನಂಬರ್ ಆಗಿ ಬದಲಾವಣೆ ಮಾಡಿದ ನಂತರವಷ್ಟೇ ಸಿ.ಆರ್.ಸಿಗೆ ಅರ್ಜಿ ಸಲ್ಲಿಸಬಹುದಾಗಿತ್ತು.

ಒಂದು ವೇಳೆ ಕಾಫಿ ನಂಬರು ಅಲ್ಲದ ಜಮೀನಿನಲ್ಲಿ ಕಾಫಿ ಬೆಳೆ ಇದ್ದರೆ. ಅದಕ್ಕೆ ಕೇಂದ್ರ ಅಬಕಾರಿ ಇಲಾಖೆ ಒಂದು ತಾತ್ಕಾಲಿಕ ಲೈಸನ್ಸ್ ಅನ್ನು ಕೊಡುತ್ತಿತ್ತು.

ಈ ಸಿ.ಆರ್.ಸಿ ಅಥವಾ ಲೈಸನ್ಸ್ ಇದ್ದವರಿಗೆ ಮಾತ್ರ ಕಾಫಿ ಕೊಯ್ಲಿನ ನಂತರ ಕಾಫಿಯನ್ನು ಸಾಗಾಟ ಮಾಡಲು ಸಾಗಾಣಿಕೆ ಪರ್ಮಿಟ್ ನಮೂನೆ ಪತ್ರ ದೊರೆಯುತ್ತಿತ್ತು. ಅದಕ್ಕೆ T.P.-3 ಎಂದು ಹೆಸರು. ಅದನ್ನು ಬೆಳೆಗಾರರು ಭರ್ತಿಮಾಡಿ ಜಮೀನಿನ ಮಾಲಿಕ ಅಥವಾ ಅವರಿಂದ ಅಧಿಕೃತರಾದವರು ರುಜು ಮಾಡಿ, ಕಾಫಿ ಸಾಗಾಣಿಕೆ  ವಾಹನದೊಂದಿಗೆ ಕಳುಹಿಸಬೇಕು. ಇದಿಲ್ಲದೆ ಯಾವುದೇ ವಾಹನ, ಗಾಡಿ, ಕಾಫಿ ಸಾಗಾಟ ಮಾಡಿದರೆ ಆತನನ್ನು ಬಂಧಿಸಿ ಮಾಲನ್ನು ಗಾಡಿ ಸಹಿತ ವಶಪಡಿಸಿಕೊಳ್ಳಲಾಗುತ್ತಿತ್ತು. ಹೀಗಾಗಿ ಪ್ರತಿಯೊಬ್ಬ ಬೆಳೆಗಾರನೂ ತಾನು ಬೆಳೆದದ್ದನ್ನು ಕಾಫಿ ಬೋರ್ಡ್ ಅನುಮೋದಿಸಿದ ಡಿಪೋಗಳು ಅಥವಾ ಕಾಫಿ ಕ್ಯೂರಿಂಗ್ ವರ್ಕ್ಸ್‌ಗಳಿಗೆ ,ಮಾತ್ರ ಒಯ್ದು ಹಾಕಬೇಕಿತ್ತು. ಪ್ರತಿಯೊಂದು ಕ್ಯೂರಿಂಗ್ ವರ್ಕ್ಸ್‌ನಲ್ಲೂ ಕೇಂದ್ರ ಅಬಕಾರಿ ಇಲಾಖೆಯ ಒಬ್ಬ ಅಧಿಕಾರಿ ಇದರ ತಪಾಸಣೆ ಮತ್ತು ಉಸ್ತುವಾರಿಗೆ ಇರುತ್ತಿದ್ದರು.

ಇನ್ನು ಕಾಫಿ ಬೆಳೆದು ಕೊಯ್ಲು ಮಾಡುವಾಗಲೂ ಅಷ್ಟೇ ಪ್ರತಿದಿನ ಕೊಯ್ದ ಕಾಫಿಯನ್ನು ಅಳತೆ ಮಾಡಿ ಬರೆಯಬೇಕು. ಅದಕ್ಕೆಂದೇ ಎಸ್ಟೇಟ್ ಬುಕ್-2 (E.B-2) ಎಂಬ ನಮೂನೆಗಳಿದ್ದವು. ಮತ್ತೆ ಕಾಫಿ ಹಣ್ಣನ್ನು ಪಲ್ಪರ್ ಮಾಡಿದರೆ ಆಯಾ ದಿನದ ಅದರ ವಿವರಗಳು, ಮತ್ತು ಉಳಿಕೆ ಉಂಡೆ ಕಾಫಿಯ ವಿವರ ಬರೆಯಬೇಕು. ಹಾಗೇಯೇ ಒಣಗಿ ಬರಲು ಪ್ರಾರಂಭವಾದೊಡನೆ ಪ್ರತಿದಿನದ ಒಣಗಿದ ಕಾಫಿಯ ತೂಕ ಮತ್ತು ಮೂಟೆಗಳ ಸಂಖ್ಯೆಗಳನ್ನು ದಾಖಲಿಸಬೇಕು ಅಷ್ಟೇ ಅಲ್ಲ ಕಾಫಿ ಗೋದಾಮಿನಲ್ಲಿ ಎದುರಿಗೇ ಕಾಣುವಂತೆ ಬೋರ್ಡೊಂದನ್ನು ಇಟ್ಟು ಅದರಲ್ಲಿ ಈ ವಿವರಗಳು ದಾಖಲಾಗಬೇಕು.

ಕಾಫಿಯನ್ನು ಸಂಪೂರ್ಣವಾಗಿ ಡಿಪೋ ಅಥವಾ ಕ್ಯೂರಿಂಗ್ ವರ್ಕ್ಸ್‌ಗೆ ಕಳುಹಿಸಿದ ಮೇಲೆ ಈ ಎಲ್ಲ ವಿವರಗಳನ್ನು ಕೇಂದ್ರ ಅಬಕಾರಿ ಅಧಿಕಾರಿಗೆ ಒಪ್ಪಿಸಿ (ಇವರು ತಾಲ್ಲೂಕಿನಲ್ಲೇ ಇರುತ್ತಿದ್ದರು) ಲೆಕ್ಕ ಚುಕ್ತಾ ಮಾಡಬೇಕು. ಹಾಗೆ ಮಾಡುವಾಗ ಸ್ವಂತ ಉಪಯೋಗಕ್ಕೆ ಇಟ್ಟುಕೊಂಡ ಕಾಫಿಯ ಲೆಕ್ಕವನ್ನೂ ಕೊಡಬೇಕಿತ್ತು!

ದೊಡ್ಡ ಎಸ್ಟೇಟುಗಳಲ್ಲಿ ಇವೆಲ್ಲ ಒಂದಿಷ್ಟೂ ವ್ಯತ್ಯಾಸವಾಗದೆ ನಡೆಯುತ್ತಿತ್ತು. ಇದರಿಂದಾಗಿ ಕಾಫಿಯ ಕಳ್ಳತನವೂ ಸುಲಭದಲ್ಲಿ ಸಾಧ್ಯವಿರಲಿಲ್ಲ.

ಸಣ್ಣ ಬೆಳೆಗಾರರರು ತಾವು ಬೆಳೆದ ಕಾಫಿಯನ್ನು ಟಿ.ಪಿ-3 ಪಡೆದು ಕಾಫಿ ಮಂಡಳಿ ಡಿಪೋಗಳಿಗೆ ಹಾಕುತ್ತಿದ್ದರು. ಬಾಕಿ ಲೆಕ್ಕಾಚಾರಗಳನ್ನು (ಇ.ಬಿ-2 ಇತ್ಯಾದಿ) ಕೇಂದ್ರ ಅಬಕಾರಿ ಕಛೇರಿಯ ಸಿಬ್ಬಂದಿಯೇ ಯಾರಾದರೂ ಒಂದಷ್ಟು ಹಣ ಪಡೆದು ಬರೆದು ಕೊಡುತ್ತಿದ್ದರು!

1943 ರಿಂದ 1995 ರವರೆಗೆ ಇದು ಹೀಗೇಯೇ ನಡೆದು ಬಂತು.

**************

ಗಣಪಯ್ಯನವರಿಗೆ ಒಂದೆರಡು ದಿನಗಳಿಂದ ಸ್ವಲ್ಪ ಜ್ವರವಿತ್ತು. ಹಿಂದೆ ಕಾಲಿಗೆ ಆದ ಪೆಟ್ಟಿನಿಂದ ಸಂಪೂರ್ಣ ಗುಣವಾಗಿದ್ದರೂ ಕೆಲವು ಸಲ ಕಾಲು ನೋವೆಂದು ಮೀನ ಖಂಡಕ್ಕೆ ಪಟ್ಟಿ ಸುತ್ತಿಕೊಂಡಿರುತ್ತಿದ್ದರು.

ನಾನು ಸ್ವಂತ ಕೆಲಸಕ್ಕೆಂದು ಎರಡು ದಿನ ರಜೆಯಲ್ಲಿ ಹೋದವನು, ಹೋದಲ್ಲಿ ಏನೋ ತೊಂದರೆಯಾಗಿ ವಾಪಸ್ ಬರುವಾಗ ಮತ್ತೆರಡು ದಿನ ಆಗಿ ಹೋಯಿತು. ಆ ವಾರ ನಾನು ಅವರನ್ನು ಭೇಟಿಯಾದಾಗ “ನಿನಗೆ ಇನ್ನೂ ಜವಾಬ್ದಾರಿ ಎನ್ನುವುದು ಬಂದಿಲ್ಲ ಹೇಳಿದ ದಿನಕ್ಕೆ ಬರಲಿಲ್ಲ ಎಲ್ಲಿ ಹೋಗಿದ್ದೆ” ಎಂದರು. ಅದು ಕಾಫಿ ಕೊಯ್ಲಿನ ಸಮಯ ಬೇರೆ, ಸಾಮಾನ್ಯವಾಗಿ ಆ ಸಮಯದಲ್ಲಿ ಯಾರೂ ರಜೆ ಕೊಡುವುದಿಲ್ಲ. ನನ್ನ ಸ್ವಭಾವದ ಮತ್ತು ನೂರೆಂಟು ಕೆಲಸಗಳಿಗೆ ಕೈಹಾಕುವ ಮತ್ತು ಬೇಡದನ್ನು ಅಂಟಿಸಿಕೊಳ್ಳುವ ಗುಣಗಳ ಪರಿಚಯ ಇದ್ದ ಅವರು ಇವನೆಲ್ಲೋ ಉಡಾಫೆಯಿಂದ ಹೋಗಿದ್ದಾನೆ ಅಂದುಕೊಂಡಿದ್ದರು. ನಾನು ಹೆಚ್ಚೇನೂ ಹೇಳದೆ ಸುಮ್ಮನಿದ್ದೆ.“ನಿನಿಗೆ ಎಚ್ಚರಿಕೆ ಕೊಡುತ್ತಿದ್ದೇನೆ ಇನ್ನು ಮುಂದೆ ಹಾಗೆ ಮಾಡಬೇಡ, ಈ ವರ್ಷವಾದರೂ ಅಗಲಟ್ಟಿ ಗ್ರಾಮದ ದಲಿತರ ಜಮೀನಿನಲ್ಲಿ ಗಿಡ ಹಾಕಬೇಕು” ಎಂದರು.

ನಾನು ವಾಪಸ್ ಬಂದೆ. ಎರಡು ದಿನಗಳನಂತರ ಪೂರ್ಣಿಮಾ ಎಸ್ಟೇಟಿಗೆ ಭೇಟಿಗೆಂದು ಅವರೇ ಬಂದರು. ಕಣದಲ್ಲಿ ಕಾಫಿ ಒಣಗುತ್ತಿತ್ತು. ಜ್ವರದ ಲಕ್ಷಣ ಮುಖದಲ್ಲಿ ಕಾಣುತ್ತಿತ್ತು. ಕಾಫಿ ಕಣದಲ್ಲಿ ಮೆಟ್ಟಿಲು ಹತ್ತುವಾಗ ಕಾಲಿಗೆ ಕಟ್ಟಿದ್ದ ಪಟ್ಟಿ ಬಿಚ್ಚಿಹೋಯಿತು, ಅವರೇ ಬಗ್ಗಿ ಕಟ್ಟಿ ಕೊಳ್ಳಲು ಪ್ರಯತ್ನಿಸಿದರು, ಸಾಧ್ಯವಾಗಲಿಲ್ಲ, ಆಗ ನಾನೇ ಅವರನ್ನು ಕೂರಲು ಹೇಳಿ ಕಾಲಿನ ಪಟ್ಟಿ ಕಟ್ಟಿದೆ. ನಂತರ ಹಾರ್ಲೆಗೆ ವಾಪಸ್ ಹೋದರು.

ಹಾರ್ಲೆಯಲ್ಲಿಯೂ ಅಂದು ಮ್ಯಾನೇಜರ್ ಎಂ.ನಾರಾಯಣ ಭಟ್ ಅವರು ಇರಲಿಲ್ಲ. ಸ್ವಂತ ಕೆಲಸದ ಮೇಲೆ ರಜೆ ಹಾಕಿ ಹೋಗಿದ್ದರಂತೆ. ಅವರು ಮಾರನೆಯ ದಿನ ಬರುವವರಿದ್ದರು. ಅಂದು ಮಧ್ಯಾಹ್ನದ ವೇಳೆಗೇ ಅವರು ಹೋದ ಕೆಲಸ ಮುಗಿದಿತ್ತು. ಅಷ್ಟರಲ್ಲಿ ಅವರ ಬಂಧುಗಳೊಬ್ಬರ ಲಾರಿ ಹಾಸನದತ್ತ ಬರುವುದಿತ್ತು ಹಾಗಾಗಿ ಅವರು ಲಾರಿಯಲ್ಲಿ ಕುಳಿತು ಅಂದು ಸಂಜೆಯೇ ತೋಟಕ್ಕೆ ವಾಪಸ್ ಬಂದು ತಲುಪಿದರು.

ಸಂಜೆ ಗಣಪಯ್ಯನವರನ್ನು ಭೇಟಿ ಮಾಡಿದಾಗ ನಾಳೆ ಕಾಫಿ ಕಳುಹಿಸಬೇಕು ಸಾಗಾಣಿಕೆಗೆ ಟಿ.ಪಿ -3 ಫಾರ್ಮುಗಳನ್ನು ಭರ್ತಿ ಮಾಡಿಸಿ ಈಗಲೇ ತಾ ರುಜು ಮಾಡುತ್ತೇನೆ ಎಂದರಂತೆ. ಮ್ಯಾನೇಜರ್ ಅವರಿಗೆ, ಅದನ್ನು ಬೆಳಿಗ್ಗೆ ಮಾಡಬಹುದಿತ್ತು ಲಾರಿ ಲೋಡು ಆಗುವಷ್ಟರಲ್ಲಿ ಮಾಡುವುದು ಅದೆಷ್ಟು ಹೊತ್ತು, ಈಗೇನು ಅವಸರ ಅನ್ನಿಸಿದರೂ ಏನೂ ಮಾತಾಡದೆ, ಫಾರ್ಮ್ ಭರ್ತಿ ಮಾಡಿ ಒಯ್ದು ಗಣಪಯ್ಯನವರ ರುಜು ಹಾಕಿಸಿಕೊಂಡರು. ನಾನು ಮೊದಲು ಹೇಳಿದಂತೆ ಆ ಕಾಲದಲ್ಲಿ ಕಾಫಿ ಸಾಗಣೆಯಲ್ಲಿ ಟಿ.ಪಿ-3 ಫಾರ್ಮು ಬಹಳ ಮುಖ್ಯವಾದ ದಾಖಲೆ ಪತ್ರ ಮತ್ತು ಅದಕ್ಕೆ ಯಾರು ಅಧಿಕೃತರೋ ಅವರೇ ರುಜುಮಾಡಬೇಕು.

ಗಣಪಯ್ಯ ರಾತ್ರಿ ಊಟವನ್ನೇನೂ ಮಾಡದೆ ಸ್ವಲ್ಪ ಹಾಲು ಕುಡಿದು ಮಲಗಲು ಹೋಗುವಾಗ ಮತ್ತೆ ಮ್ಯಾನೇಜರ್ ನಾರಾಯಣ ಭಟ್ಟರನ್ನು ಬರಹೇಳಿದರಂತೆ. ಇದೇನು ಮತ್ತೆ ಕರೆದರು ಎಂದುಕೊಂಡು ಅವರು ಬಂದಾಗ ಗಣಪಯ್ಯ ಮಂಚದಲ್ಲಿ ಮಲಗಿದ್ದರಂತೆ. ಆಗ ಗಣಪಯ್ಯ “ನಾರಾಯಣ ನೋಡು ಅಲ್ಲಿ ಭಗವದ್ಗೀತೆ ಇದೆ ಅದನ್ನು ತೆಗೆದು ಇಷ್ಟನೇ ಪುಟಗಳನ್ನು ಓದು ಎಂದು ನಿರ್ದಿಷ್ಟವಾಗಿ ಹೇಳಿದರಂತೆ. ಅವರಿಗೆ ಇವರು ಯಾಕೆ ಹೀಗೆ ಹೇಳುತ್ತಿದ್ದಾರೆ ಎಂದು ಮನಸ್ಸಿನಲ್ಲೇ ಏನೋ ಒಂದು ರೀತಿ ಆದರೂ ಭಗವಧ್ಗೀತೆಯನ್ನು ತೆಗೆದು ಓದಿದರು. ಸ್ವಲ್ಪ ಹೊತ್ತಿನ ನಂತರ “ಸಾಕು ನೀನು ಹೋಗಿ ಮಲಗು” ಎಂದರು ಗಣಪಯ್ಯ.

ಮರುದಿನ 1987ನೇ ಇಸವಿ ಫೆಬ್ರವರಿ ತಿಂಗಳ ಏಳನೇ ತಾರೀಖಿನ ಬೆಳಗ್ಗೆ ಆರು ಗಂಟೆಗೇ ನಮಗೆ ಗಣಪಯ್ಯ ತೀರಿಕೊಂಡರೆಂದು ಸುದ್ದಿ ಬಂತು. ಇಡೀ ತೋಟದ ಜನರೆಲ್ಲರೂ ಹೋದೆವು. ಆಗಲೇ ನೂರಾರು ಜನರು ಸೇರಿದ್ದರು. ಗಣ್ಯರು, ಸರ್ಕಾರಿ ಅಧಿಕಾರಿಗಳು ಬರುತ್ತಲೇ ಇದ್ದರು. ಅಂದು ಮಧ್ಯಾಹ್ನ ಹಾರ್ಲೆ ತೋಟದ ಅಂಚಿನಲ್ಲೇ ಹರಿಯುವ ಎತ್ತಿನ ಹಳ್ಳದ ಪಕ್ಕದಲ್ಲಿ ಗಣಪಯ್ಯ ಪ್ರಕೃತಿಯಲ್ಲಿ ಲೀನವಾದರು.

ಹಾರ್ಲೆಯ ಇತಿಹಾಸದೊಂದಿಗೆ ಕರ್ನಾಟಕದ ರಾಜಕಾರಣದ ಪ್ರಮುಖ ಅಧ್ಯಾಯವೊಂದು ಮುಗಿದು ಹೋಗಿತ್ತು

  • ಪ್ರಸಾದ್ ರಕ್ಷಿದಿ

(ಪ್ರಸಾದ್ ರಕ್ಷಿದಿಯವರು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳ್ಳೇಕೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ರಂಗಭೂಮಿ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದಾರೆ. ‘ಜೈ ಕರ್ನಾಟಕ ಸಂಘ’ ಎಂಬ ವೇದಿಕೆ ಸ್ಥಾಪಿಸಿದ ಅವರು ಸುತ್ತಲಿನ ಕಾರ್ಮಿಕರನ್ನೆಲ್ಲ ಒಟ್ಟುಹಾಕಿ ಅವರಿಗೆ ರಾತ್ರಿಶಾಲೆಗಳ ಮೂಲಕ ಅಕ್ಷರಾಭ್ಯಾಸ ಕಲಿಸಿದವರು. ಕೂಲಿ ಕಾರ್ಮಿಕರಿಗೆ ರಂಗಭೂಮಿಯ ಒಲವು ಮೂಡಿಸಿ, ನಾಟಕ ತಂಡವೊಂದನ್ನು ಕಟ್ಟಿ ಹತ್ತಾರು ನಾಟಕಗಳನ್ನು ಪ್ರದರ್ಶಿಸಿದ್ದಲ್ಲದೆ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ ಹೆಗ್ಗಳಿಕೆ ಅವರದು. ಶಾಲಾಭಿವೃದ್ದಿ, ಸಾವಯವ ಕೃಷಿ, ರಚನಾತ್ಮಕ ರಾಜಕೀಯ ಅವರ ಆಸಕ್ತಿಯ ಕ್ಷೇತ್ರಗಳು. ಅವರ `ಬೆಳ್ಳೇಕೆರೆ ಹಳ್ಳಿ ಥೇಟರ್’ ಈ ಎಲ್ಲಾ ಚಟುವಟಿಕೆಗಳನ್ನು ವಿವರಿಸುವ ಮಹತ್ವದ ಕೃತಿಯಾಗಿದೆ.)


ಇದನ್ನೂ ಓದಿ:ಕಳೆದುಹೋದ ದಿನಗಳು -26: ಗಣಪಯ್ಯನವರು ಹಾರ್ಲೆ ತೋಟ ಕೊಂಡಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...