HomeUncategorizedಕಾಳಿ ದೇವಿಯ ಸಾಕ್ಷ್ಯ ಚಿತ್ರ ನಿರ್ಮಾಪಕಿ ಲೀನಾರನ್ನು ಬಂಧನದಿಂದ ಪಾರುಮಾಡಿದ ಸುಪ್ರೀಂ

ಕಾಳಿ ದೇವಿಯ ಸಾಕ್ಷ್ಯ ಚಿತ್ರ ನಿರ್ಮಾಪಕಿ ಲೀನಾರನ್ನು ಬಂಧನದಿಂದ ಪಾರುಮಾಡಿದ ಸುಪ್ರೀಂ

- Advertisement -
- Advertisement -

ಕಾಳಿ ದೇವಿಯ ವೇಷ ಧರಿಸಿ ಧೂಮಪಾನ ಮಾಡುತ್ತಿರುವ ಸಾಕ್ಷ್ಯ ಚಿತ್ರದ ಪೋಸ್ಟರ್‌ ಹಾಗೂ ಅನೇಕ ಕ್ರಿಮಿನಲ್ ಕೇಸ್ ಗೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರನ್ನು ಬಂಧನದ ಪ್ರಕ್ರಿಯೆಯಿಂದ ಸುಪ್ರೀಂ ಕೋರ್ಟ್ ಶುಕ್ರವಾರ ರಕ್ಷಿಸಿದೆ.

ಮಣಿಮೇಕಲೈ ಅವರು ಯಾರೊಬ್ಬರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಮಾಡಿದ್ದಲ್ಲ. ದೇವಿಯ ಚಿತ್ರಣವು ಅವಳನ್ನು “ಒಳಗೊಳ್ಳುವ ಅರ್ಥದಲ್ಲಿ” ತೋರಿಸುವುದಾಗಿತ್ತು ಎಂದು ನ್ಯಾಯಾಲಯದಲ್ಲಿ ಮಣಿಮೇಕಲೈ ಅವರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.

ಪೋಸ್ಟರ್‌ ಗೆ ಸಂಬಂಧಿಸಿದಂತೆ ಮಣಿಮೇಕಲೈ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಿನ್ನೆಲೆಯಲ್ಲಿ ಬಂಧನ ಸೇರಿದಂತೆ ಯಾವುದೇ ಬಲವಂತದ ಪ್ರಕ್ರಿಯೆಗೆ ಒಳಪಡಿಸುವುದಿಲ್ಲ ಎಂದು ನ್ಯಾಯಮೂರ್ತಿ ಪಿಎಸ್ ನರಸಿಮಹ ಅವರನ್ನೊಳಗೊಂಡ ಪೀಠ ಸೂಚಿಸಿದೆ.

ಬಾಕಿ ಉಳಿದಿರುವ ಎಲ್ಲ ಎಫ್‌ಐಆರ್ ಗಳನ್ನು ಒಂದೇ ಸ್ಥಳದಲ್ಲಿ ಸೇರಿಸುವಂತೆ ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ನ್ಯಾಯಾಲಯವು ನೋಟಿಸ್ ಜಾರಿಗೊಳಿಸಿದೆ.

“ಫೆಬ್ರವರಿ 20, 2023 ರಂದು ಅರ್ಜಿಯನ್ನು ಪಟ್ಟಿ ಮಾಡಿ. ಈ ಮಧ್ಯೆ ಅರ್ಜಿದಾರರ ವಿರುದ್ಧ ಮೇಲೆ ತಿಳಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಅಥವಾ ಅದೇ ಅಪರಾಧಕ್ಕೆ ಸಂಬಂಧಿಸಿದಂತೆ ಯಾವುದೇ ಇತರ ಎಫ್‌ಐಆರ್‌ಗೆ ಅನುಗುಣವಾಗಿ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದಿಲ್ಲ” ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ.

“ಫೆಬ್ರವರಿ 20, 2023 ರಂದು ಅರ್ಜಿಯನ್ನು ಪಟ್ಟಿ ಮಾಡಿ. ಇದೇ ವಿಚಾರಕ್ಕೆ ಸಂಬಂಧಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ಅಥವಾ ಯಾವುದೇ ಇತರ ಎಫ್‌ಐಆರ್‌ಗೆ ಅನುಗುಣವಾಗಿ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದಿಲ್ಲ” ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಿದೆ.

ಮಣಿಮೇಕಲೈ ಅವರು ಕೆನಡಾ ಮೂಲದ ಚಲನಚಿತ್ರ ನಿರ್ಮಾಪಕಿಯಾಗಿರುವುದರಿಂದ ಮಧ್ಯಪ್ರದೇಶ ಪೊಲೀಸರು ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ ಎಂದು ಪೀಠವು ಗಮನಿಸಿದೆ. ಎಲ್‌ಒಸಿ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

“ಹಲವು ರಾಜ್ಯಗಳಲ್ಲಿ ಈ ಬಗ್ಗೆ ಬಹಳಷ್ಟು ಎಫ್‌ಐಆರ್‌ಗಳು ದಾಖಲಾಗಿವೆ ಮತ್ತು ಅವು ಪೂರ್ವಾಗ್ರಹ ಪೀಡಿತದಿಂದ ಕೂಡಿವೆ ಹಾಗಾಗಿ ಎಲ್ಲಾ ಎಫ್‌ಐಆರ್‌ಗಳನ್ನು ಒಂದೇ ಸ್ಥಳದಲ್ಲಿ ಕ್ರೋಢೀಕರಿಸಲು ನಾವು ಸೂಚನೆ ನೀಡುತ್ತೇವೆ. ನಂತರ ಅರ್ಜಿದಾರರು ಸೆಕ್ಷನ್ 482 ಸಿಆರ್‌ಪಿಸಿ ಮನವಿಯನ್ನು ಸಲ್ಲಿಸಲು ಸ್ವತಂತ್ರರಾಗಿರುತ್ತಾರೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.

ಎಫ್‌ಐಆರ್‌ಗಳನ್ನು ರದ್ದುಪಡಿಸಲು ಸಂಬಂಧಿಸಿದಿಂತೆ ಹೈಕೋರ್ಟ್‌ಗೆ ಹೋಗಲು ಸಿಆರ್‌ಪಿಸಿ ಸೆಕ್ಷನ್ 482 ರಲ್ಲಿ ಅವಕಾಶವಿದೆ.

ಚಿತ್ರ ನಿರ್ಮಾಪಕರ ಪರ ವಕೀಲ ಕಾಮಿನಿ ಜೈಸ್ವಾಲ್ ವಾದ ಮಂಡಿಸಿದ್ದು, ಮಧುರೈ ಮೂಲದ ಚಲನಚಿತ್ರ ನಿರ್ಮಾಪಕರು ಜುಲೈ 2022 ರಲ್ಲಿ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್, ಟ್ವಿಟರ್‌ನಲ್ಲಿ ‘ಕಾಳಿ’ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ‘ರಿದಮ್ಸ್ ಆಫ್ ಕೆನಡಾ’ ವಿಭಾಗದ ಭಾಗವಾಗಿದೆ ಎಂದು ಹೇಳಿದರು.

ಈ ಪೊಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅದು ಕೆಲವರ ಕೋಪಕ್ಕೆ ಕಾರಣವಾಗಿತ್ತು. ಇದು ಪೋಸ್ಟರ್‌ಗಳನ್ನು ತೆಗೆದುಹಾಕಲು ಕೆನಡಾದ ಅಧಿಕಾರಿಗಳನ್ನು ಕೇಳಲು ಟೊರೊಂಟೊದಲ್ಲಿನ ಭಾರತೀಯ ಹೈಕಮಿಷನರನ್ನು ಪ್ರೇರೇಪಿಸಿತು.

ಇದನ್ನೂ ಓದಿ: ಚುನಾವಣಾ ಆಯುಕ್ತರನ್ನು ಭಾರಿ ಆತುರದಲ್ಲಿ ನೇಮಿಸಿದ್ದೇಕೆ?: ಒಕ್ಕೂಟ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಪ್ರಶ್ನೆ

ಟ್ವಿಟರ್ ಈ ಪೋಸ್ಟ್ ಅನ್ನು ತಗೆದುಹಾಕಿದಾಗ, ಆಕೆಯ ವಿರುದ್ಧ ಸೆಕ್ಷನ್ 153A (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 295A (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಯಿತು.

ಕಾಳಿ ಎಂಬುದು ಮಣಿಮೇಕಲೈ ಅವರ ದೇಹ ದೇವತೆ ಕಾಳಿ ನಗರದ ಬೀದಿಗಳಲ್ಲಿ ವಾಸಿಸುವ ಮತ್ತು ತಿರುಗಾಡುವ ಕುರಿತಾದ ಚಲನಚಿತ್ರವಾಗಿದೆ. ಒಂದು ದೃಶ್ಯದಲ್ಲಿ, ತನ್ನ ದೇಹದಲ್ಲಿರುವ ದೇವಿಯು ಮನೆಯಿಲ್ಲದ ವ್ಯಕ್ತಿಯೊಂದಿಗೆ ಸಿಗರೇಟನ್ನು ಹಂಚಿಕೊಳ್ಳುತ್ತಾಳೆ.

ಮಣಿಮೇಕಲೈ ಅವರ ಸಾಕ್ಷ್ಯ ಚಿತ್ರದಲ್ಲಿ ಕಾಳಿ ಎಂಬುದು ದೇಹ ದೇವತೆ. ಆ ಕಾಳಿ ನಗರದ ಬೀದಿಗಳಲ್ಲಿ ವಾಸಿಸುವ ಮತ್ತು ತಿರುಗಾಡುವಂತಹ ಚಿತ್ರ ಇದಾಗಿದೆ. ಒಂದು ದೃಶ್ಯದಲ್ಲಿ ದೇವಿಯು ವ್ಯಕ್ತಿಯೊಂದಿಗೆ ಸಿಗರೇಟನ್ನು ಹಂಚಿಕೊಳ್ಳುತ್ತಾಳೆ.

“ನಾನು ತಮಿಳುನಾಡಿನ ಗ್ರಾಮೀಣ ಪ್ರದೇಶದಿಂದ ಬಂದಿದ್ದೇನೆ. ಅಲ್ಲಿ ಕಾಳಿಯನ್ನು ಪೇಗನ್ ದೇವತೆ ಎಂದು ನಂಬಲಾಗಿದೆ. ಅವಳು ಆಡಿನ ರಕ್ತದಲ್ಲಿ ಬೇಯಿಸಿದ ಮಾಂಸವನ್ನು ತಿನ್ನುತ್ತಾಳೆ, ಅರಕ್ ಕುಡಿಯುತ್ತಾಳೆ, ಬೀಡಿ [ಸಿಗರೇಟ್] ಸೇದುತ್ತಾಳೆ ಮತ್ತು ಕಾಡು ಕುಣಿತವನ್ನು ಮಾಡುತ್ತಾಳೆ. ಅದು ನಾನು ಚಿತ್ರಕ್ಕಾಗಿ ಸಿದ್ದಗೊಳಿಸಿಕೊಂಡಿದ್ದ ಕಾಳಿ,” ಎಂದು ಮಣಿಮೇಕಲೈ ಗಾರ್ಡಿಯನ್ ಅವರು ವರ್ಷದ ಕೊನೆಯ ಸಂದರ್ಶನದಲ್ಲಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....