Homeಕರ್ನಾಟಕಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಲ್ಕುಳಿ ವಿಠಲ್‌ ಹೆಗ್ಡೆಯವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಸಮರ್ಥಿಸಿ ಹಲವಾರು ಸಾಹಿತಿ-ಪ್ರಗತಿಪರರು ಬಹಿರಂಗ ಪತ್ರ ಬರೆದಿದ್ದಾರೆ.

ಚಂದ್ರಶೇಖರ್ ಪಾಟೀಲ್ (ಚಂಪಾ), ಡಾ. ಕೆ. ಮರಳುಸಿದ್ದಪ್ಪ, ಜಿ.ರಾಜಶೇಖರ, ದಿನೇಶ್ ಅಮೀನ್‌ಮಟ್ಟು, ಬಿ.ಟಿ.ಲಲಿತಾ ನಾಯ್ಕ್, ಡಾ. ಕಾಳೇಗೌಡ ನಾಗವಾರ, ಜಗದೀಶ್ ಕೊಪ್ಪ, ಯೋಗೇಶ್ ಮಾಸ್ತರ್, ಪ್ರೊ.ಶ್ರೀಕಂಠ ಕೂಡಿಗೆ, ಬಂಜಗೆರೆ ಜಯಪ್ರಕಾಶ್, ಸುರೇಶ್ ಭಟ್ ಬಾಕ್ರಬೈಲ್, ಕಡಿದಾಳು ಶಾಮಣ್ಣ, ಡಾ.ವಿಜಯಮ್ಮ, ಪ್ರೊ. ಎಂ. ಚಂದ್ರಶೇಖರಯ್ಯ, ಡಾ. ರಹಮತ್‌ ತರೀಕೆರೆ, ಪ್ರೋ. ಕೆ ಫಣಿರಾಜ್ ಮತ್ತು ಡಾ. ಉಮಾಶಂಕರ್ ಸೇರಿದಂತೆ ಹಲವರು ಸಹಿ ಹಾಕಿರುವ ಪತ್ರದ ಪೂರ್ಣ ವಿವರ ಕೆಳಗಿನಂತಿದೆ.

ಮಲೆನಾಡಿನ ಖ್ಯಾತ ಪರಿಸರವಾದಿ ಮತ್ತು ಸಮಾಜಮುಖಿ ಚಿಂತಕರಾದ ಕಲ್ಕುಳಿ ವಿಠಲ್ ಹೆಗ್ಡೆಯವರನ್ನ ಚಿಕ್ಕಮಗಳೂರು ಜಿಲ್ಲಾ 10ನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ತೀರ್ಮಾನಿಸಿರುವುದನ್ನು ಕೇಳಿ ನಮ್ಮಗಳಿಗೆ ಅತೀವ ಸಂತೋಷವೆನಿಸಿತು. ಕಳೆದ ನಾಲ್ಕು ದಶಕಗಳಿಂದ ಪಶ್ಚಿಮಘಟ್ಟಗಳನ್ನು ಉಳಿಸಲು, ಅಲ್ಲಿನ ಜನರ ಬದುಕನ್ನು ಹಸನಾಗಿಸಲು ಹೋರಾಟ ಮಾಡುತ್ತಿರುವುದಲ್ಲದೇ, ಅವರಿಗಿರುವ ಪರಿಸರ ಸೂಕ್ಷ್ಮ ತಜ್ಞತೆಯನ್ನು ನಾವು ಗಮನಿಸಿದ್ದೇವೆ. ಮತ್ತು ಇಷ್ಟಲ್ಲದೆ ಕಲ್ಕುಳಿಗಿರುವ ಜನರ ಬದುಕು ಮತ್ತು ಪರಿಸರದೊಳಗಿನ ಸಂಬಂಧಗಳ ಒಳನೋಟಗಳನ್ನು ಕೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಮಂಗನ ಬ್ಯಾಟೆ ಎನ್ನುವ ವಿಶಿಷ್ಟ ಮತ್ತು ಅನನ್ಯವಾದ ಪುಸ್ತಕವನ್ನು ಹೊರತಂದಿದ್ದಾರೆ. ಇದನ್ನು ಗುರುತಿಸಿಯೇ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

ಇಂತಹ ಪ್ರತಿಭಾವಂತ ಹೋರಾಟಗಾರ ಮತ್ತು ಲೇಖಕನನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿರುವುದನ್ನು ಸರ್ವರೂ ಸ್ವಾಗತಿಸಬೇಕಾಗಿತ್ತು. ವಿಪರ್ಯಾಸವೆಂದರೆ ಬಲಪಂಥೀಯ ಪಟ್ಟಭದ್ರ ಹಿತಾಸಕ್ತಿಗಳು, ಕೆಲವು ಜಾತಿವಾದಿಗಳು, ನಕ್ಸಲೀಯ ಬೆಂಬಲಿಗ ಎಂಬಂತೆ ಚಿತ್ರಿಸಿ ಆಕ್ಷೇಪಗಳನ್ನ ಎತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ

ವಿಠಲ್ ಹೆಗ್ಡೆಯವರು ನಕ್ಸಲ್ ಹಿಂಸಾಚಾರವನ್ನ ಮತ್ತು ಅವರ ಮಾರ್ಗವನ್ನ ಎಂದೂ ಒಪ್ಪಿದವರಲ್ಲ. ನಕ್ಸಲೀಯ ಹೋರಾಟ ಆರಂಭವಾದಾಗಿನಿಂದಲೂ ಅದರ ಬಗ್ಗೆ ತಕರಾರುಗಳನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿಯೇ ವ್ಯಕ್ತಪಡಿಸುತ್ತಾ ಬಂದಿದ್ದಾರೆ.

ಮಲೆನಾಡಿನಲ್ಲಿ ನಡೆಯುವ ಆದಿವಾಸಿ ದೌರ್ಜನ್ಯಗಳ ವಿರುದ್ಧ, ಎತ್ತಂಗಡಿಗಳ ವಿರುದ್ಧ, ಜಾತಿ ದೌರ್ಜನ್ಯಗಳ ವಿರುದ್ಧ ಅವರೆಂದೂ ರಾಜಿ ಮಾಡಿಕೊಂಡವರಲ್ಲ. ಇಂತಹ ಕಲ್ಕುಳಿಯವರನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಷಡ್ಯಂತ್ರವನ್ನು ನಾವು ಒಪ್ಪುವುದಿಲ್ಲ. ಇದು ಮಲೆನಾಡಿಗರಿಗೆ ಹೆಮ್ಮೆ ಎಂದು ಭಾವಿಸಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹಮಂತ್ರಿಗಳು ಮಧ್ಯಪ್ರವೇಶಿಸಬೇಕು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ- ಸಿರಿಮನೆ ನಾಗರಾಜ್‌

ಮಲೆನಾಡಿನ ಜ್ವಲಂತ ಸಮಸ್ಯೆಗಳು, ಪರಿಸರ ಬಿಕ್ಕಟ್ಟುಗಳ ಕುರಿತು ಸಾಹಿತ್ಯ ಸಮ್ಮೇಳನದಲ್ಲಿ ಆಳವಾದ ಚರ್ಚೆ ನಡೆದು ಸ್ವಸ್ಥ ಮತ್ತು ಸುಂದರ ಮಲೆನಾಡಿಗೆ ಈ ಸಾಹಿತ್ಯ ಸಮ್ಮೇಳನ ನಾಂದಿಯಾಗಲಿ ಎಂದು ಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...