Homeಕರ್ನಾಟಕಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಲ್ಕುಳಿ ವಿಠಲ್‌ ಹೆಗ್ಡೆಯವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಸಮರ್ಥಿಸಿ ಹಲವಾರು ಸಾಹಿತಿ-ಪ್ರಗತಿಪರರು ಬಹಿರಂಗ ಪತ್ರ ಬರೆದಿದ್ದಾರೆ.

ಚಂದ್ರಶೇಖರ್ ಪಾಟೀಲ್ (ಚಂಪಾ), ಡಾ. ಕೆ. ಮರಳುಸಿದ್ದಪ್ಪ, ಜಿ.ರಾಜಶೇಖರ, ದಿನೇಶ್ ಅಮೀನ್‌ಮಟ್ಟು, ಬಿ.ಟಿ.ಲಲಿತಾ ನಾಯ್ಕ್, ಡಾ. ಕಾಳೇಗೌಡ ನಾಗವಾರ, ಜಗದೀಶ್ ಕೊಪ್ಪ, ಯೋಗೇಶ್ ಮಾಸ್ತರ್, ಪ್ರೊ.ಶ್ರೀಕಂಠ ಕೂಡಿಗೆ, ಬಂಜಗೆರೆ ಜಯಪ್ರಕಾಶ್, ಸುರೇಶ್ ಭಟ್ ಬಾಕ್ರಬೈಲ್, ಕಡಿದಾಳು ಶಾಮಣ್ಣ, ಡಾ.ವಿಜಯಮ್ಮ, ಪ್ರೊ. ಎಂ. ಚಂದ್ರಶೇಖರಯ್ಯ, ಡಾ. ರಹಮತ್‌ ತರೀಕೆರೆ, ಪ್ರೋ. ಕೆ ಫಣಿರಾಜ್ ಮತ್ತು ಡಾ. ಉಮಾಶಂಕರ್ ಸೇರಿದಂತೆ ಹಲವರು ಸಹಿ ಹಾಕಿರುವ ಪತ್ರದ ಪೂರ್ಣ ವಿವರ ಕೆಳಗಿನಂತಿದೆ.

ಮಲೆನಾಡಿನ ಖ್ಯಾತ ಪರಿಸರವಾದಿ ಮತ್ತು ಸಮಾಜಮುಖಿ ಚಿಂತಕರಾದ ಕಲ್ಕುಳಿ ವಿಠಲ್ ಹೆಗ್ಡೆಯವರನ್ನ ಚಿಕ್ಕಮಗಳೂರು ಜಿಲ್ಲಾ 10ನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ತೀರ್ಮಾನಿಸಿರುವುದನ್ನು ಕೇಳಿ ನಮ್ಮಗಳಿಗೆ ಅತೀವ ಸಂತೋಷವೆನಿಸಿತು. ಕಳೆದ ನಾಲ್ಕು ದಶಕಗಳಿಂದ ಪಶ್ಚಿಮಘಟ್ಟಗಳನ್ನು ಉಳಿಸಲು, ಅಲ್ಲಿನ ಜನರ ಬದುಕನ್ನು ಹಸನಾಗಿಸಲು ಹೋರಾಟ ಮಾಡುತ್ತಿರುವುದಲ್ಲದೇ, ಅವರಿಗಿರುವ ಪರಿಸರ ಸೂಕ್ಷ್ಮ ತಜ್ಞತೆಯನ್ನು ನಾವು ಗಮನಿಸಿದ್ದೇವೆ. ಮತ್ತು ಇಷ್ಟಲ್ಲದೆ ಕಲ್ಕುಳಿಗಿರುವ ಜನರ ಬದುಕು ಮತ್ತು ಪರಿಸರದೊಳಗಿನ ಸಂಬಂಧಗಳ ಒಳನೋಟಗಳನ್ನು ಕೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಮಂಗನ ಬ್ಯಾಟೆ ಎನ್ನುವ ವಿಶಿಷ್ಟ ಮತ್ತು ಅನನ್ಯವಾದ ಪುಸ್ತಕವನ್ನು ಹೊರತಂದಿದ್ದಾರೆ. ಇದನ್ನು ಗುರುತಿಸಿಯೇ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

ಇಂತಹ ಪ್ರತಿಭಾವಂತ ಹೋರಾಟಗಾರ ಮತ್ತು ಲೇಖಕನನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿರುವುದನ್ನು ಸರ್ವರೂ ಸ್ವಾಗತಿಸಬೇಕಾಗಿತ್ತು. ವಿಪರ್ಯಾಸವೆಂದರೆ ಬಲಪಂಥೀಯ ಪಟ್ಟಭದ್ರ ಹಿತಾಸಕ್ತಿಗಳು, ಕೆಲವು ಜಾತಿವಾದಿಗಳು, ನಕ್ಸಲೀಯ ಬೆಂಬಲಿಗ ಎಂಬಂತೆ ಚಿತ್ರಿಸಿ ಆಕ್ಷೇಪಗಳನ್ನ ಎತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ

ವಿಠಲ್ ಹೆಗ್ಡೆಯವರು ನಕ್ಸಲ್ ಹಿಂಸಾಚಾರವನ್ನ ಮತ್ತು ಅವರ ಮಾರ್ಗವನ್ನ ಎಂದೂ ಒಪ್ಪಿದವರಲ್ಲ. ನಕ್ಸಲೀಯ ಹೋರಾಟ ಆರಂಭವಾದಾಗಿನಿಂದಲೂ ಅದರ ಬಗ್ಗೆ ತಕರಾರುಗಳನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿಯೇ ವ್ಯಕ್ತಪಡಿಸುತ್ತಾ ಬಂದಿದ್ದಾರೆ.

ಮಲೆನಾಡಿನಲ್ಲಿ ನಡೆಯುವ ಆದಿವಾಸಿ ದೌರ್ಜನ್ಯಗಳ ವಿರುದ್ಧ, ಎತ್ತಂಗಡಿಗಳ ವಿರುದ್ಧ, ಜಾತಿ ದೌರ್ಜನ್ಯಗಳ ವಿರುದ್ಧ ಅವರೆಂದೂ ರಾಜಿ ಮಾಡಿಕೊಂಡವರಲ್ಲ. ಇಂತಹ ಕಲ್ಕುಳಿಯವರನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಷಡ್ಯಂತ್ರವನ್ನು ನಾವು ಒಪ್ಪುವುದಿಲ್ಲ. ಇದು ಮಲೆನಾಡಿಗರಿಗೆ ಹೆಮ್ಮೆ ಎಂದು ಭಾವಿಸಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹಮಂತ್ರಿಗಳು ಮಧ್ಯಪ್ರವೇಶಿಸಬೇಕು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ- ಸಿರಿಮನೆ ನಾಗರಾಜ್‌

ಮಲೆನಾಡಿನ ಜ್ವಲಂತ ಸಮಸ್ಯೆಗಳು, ಪರಿಸರ ಬಿಕ್ಕಟ್ಟುಗಳ ಕುರಿತು ಸಾಹಿತ್ಯ ಸಮ್ಮೇಳನದಲ್ಲಿ ಆಳವಾದ ಚರ್ಚೆ ನಡೆದು ಸ್ವಸ್ಥ ಮತ್ತು ಸುಂದರ ಮಲೆನಾಡಿಗೆ ಈ ಸಾಹಿತ್ಯ ಸಮ್ಮೇಳನ ನಾಂದಿಯಾಗಲಿ ಎಂದು ಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...