Homeಕರ್ನಾಟಕಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಲ್ಕುಳಿ ವಿಠಲ್‌ ಹೆಗ್ಡೆಯವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಸಮರ್ಥಿಸಿ ಹಲವಾರು ಸಾಹಿತಿ-ಪ್ರಗತಿಪರರು ಬಹಿರಂಗ ಪತ್ರ ಬರೆದಿದ್ದಾರೆ.

ಚಂದ್ರಶೇಖರ್ ಪಾಟೀಲ್ (ಚಂಪಾ), ಡಾ. ಕೆ. ಮರಳುಸಿದ್ದಪ್ಪ, ಜಿ.ರಾಜಶೇಖರ, ದಿನೇಶ್ ಅಮೀನ್‌ಮಟ್ಟು, ಬಿ.ಟಿ.ಲಲಿತಾ ನಾಯ್ಕ್, ಡಾ. ಕಾಳೇಗೌಡ ನಾಗವಾರ, ಜಗದೀಶ್ ಕೊಪ್ಪ, ಯೋಗೇಶ್ ಮಾಸ್ತರ್, ಪ್ರೊ.ಶ್ರೀಕಂಠ ಕೂಡಿಗೆ, ಬಂಜಗೆರೆ ಜಯಪ್ರಕಾಶ್, ಸುರೇಶ್ ಭಟ್ ಬಾಕ್ರಬೈಲ್, ಕಡಿದಾಳು ಶಾಮಣ್ಣ, ಡಾ.ವಿಜಯಮ್ಮ, ಪ್ರೊ. ಎಂ. ಚಂದ್ರಶೇಖರಯ್ಯ, ಡಾ. ರಹಮತ್‌ ತರೀಕೆರೆ, ಪ್ರೋ. ಕೆ ಫಣಿರಾಜ್ ಮತ್ತು ಡಾ. ಉಮಾಶಂಕರ್ ಸೇರಿದಂತೆ ಹಲವರು ಸಹಿ ಹಾಕಿರುವ ಪತ್ರದ ಪೂರ್ಣ ವಿವರ ಕೆಳಗಿನಂತಿದೆ.

ಮಲೆನಾಡಿನ ಖ್ಯಾತ ಪರಿಸರವಾದಿ ಮತ್ತು ಸಮಾಜಮುಖಿ ಚಿಂತಕರಾದ ಕಲ್ಕುಳಿ ವಿಠಲ್ ಹೆಗ್ಡೆಯವರನ್ನ ಚಿಕ್ಕಮಗಳೂರು ಜಿಲ್ಲಾ 10ನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ತೀರ್ಮಾನಿಸಿರುವುದನ್ನು ಕೇಳಿ ನಮ್ಮಗಳಿಗೆ ಅತೀವ ಸಂತೋಷವೆನಿಸಿತು. ಕಳೆದ ನಾಲ್ಕು ದಶಕಗಳಿಂದ ಪಶ್ಚಿಮಘಟ್ಟಗಳನ್ನು ಉಳಿಸಲು, ಅಲ್ಲಿನ ಜನರ ಬದುಕನ್ನು ಹಸನಾಗಿಸಲು ಹೋರಾಟ ಮಾಡುತ್ತಿರುವುದಲ್ಲದೇ, ಅವರಿಗಿರುವ ಪರಿಸರ ಸೂಕ್ಷ್ಮ ತಜ್ಞತೆಯನ್ನು ನಾವು ಗಮನಿಸಿದ್ದೇವೆ. ಮತ್ತು ಇಷ್ಟಲ್ಲದೆ ಕಲ್ಕುಳಿಗಿರುವ ಜನರ ಬದುಕು ಮತ್ತು ಪರಿಸರದೊಳಗಿನ ಸಂಬಂಧಗಳ ಒಳನೋಟಗಳನ್ನು ಕೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಮಂಗನ ಬ್ಯಾಟೆ ಎನ್ನುವ ವಿಶಿಷ್ಟ ಮತ್ತು ಅನನ್ಯವಾದ ಪುಸ್ತಕವನ್ನು ಹೊರತಂದಿದ್ದಾರೆ. ಇದನ್ನು ಗುರುತಿಸಿಯೇ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

ಇಂತಹ ಪ್ರತಿಭಾವಂತ ಹೋರಾಟಗಾರ ಮತ್ತು ಲೇಖಕನನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿರುವುದನ್ನು ಸರ್ವರೂ ಸ್ವಾಗತಿಸಬೇಕಾಗಿತ್ತು. ವಿಪರ್ಯಾಸವೆಂದರೆ ಬಲಪಂಥೀಯ ಪಟ್ಟಭದ್ರ ಹಿತಾಸಕ್ತಿಗಳು, ಕೆಲವು ಜಾತಿವಾದಿಗಳು, ನಕ್ಸಲೀಯ ಬೆಂಬಲಿಗ ಎಂಬಂತೆ ಚಿತ್ರಿಸಿ ಆಕ್ಷೇಪಗಳನ್ನ ಎತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ

ವಿಠಲ್ ಹೆಗ್ಡೆಯವರು ನಕ್ಸಲ್ ಹಿಂಸಾಚಾರವನ್ನ ಮತ್ತು ಅವರ ಮಾರ್ಗವನ್ನ ಎಂದೂ ಒಪ್ಪಿದವರಲ್ಲ. ನಕ್ಸಲೀಯ ಹೋರಾಟ ಆರಂಭವಾದಾಗಿನಿಂದಲೂ ಅದರ ಬಗ್ಗೆ ತಕರಾರುಗಳನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿಯೇ ವ್ಯಕ್ತಪಡಿಸುತ್ತಾ ಬಂದಿದ್ದಾರೆ.

ಮಲೆನಾಡಿನಲ್ಲಿ ನಡೆಯುವ ಆದಿವಾಸಿ ದೌರ್ಜನ್ಯಗಳ ವಿರುದ್ಧ, ಎತ್ತಂಗಡಿಗಳ ವಿರುದ್ಧ, ಜಾತಿ ದೌರ್ಜನ್ಯಗಳ ವಿರುದ್ಧ ಅವರೆಂದೂ ರಾಜಿ ಮಾಡಿಕೊಂಡವರಲ್ಲ. ಇಂತಹ ಕಲ್ಕುಳಿಯವರನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಷಡ್ಯಂತ್ರವನ್ನು ನಾವು ಒಪ್ಪುವುದಿಲ್ಲ. ಇದು ಮಲೆನಾಡಿಗರಿಗೆ ಹೆಮ್ಮೆ ಎಂದು ಭಾವಿಸಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹಮಂತ್ರಿಗಳು ಮಧ್ಯಪ್ರವೇಶಿಸಬೇಕು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ- ಸಿರಿಮನೆ ನಾಗರಾಜ್‌

ಮಲೆನಾಡಿನ ಜ್ವಲಂತ ಸಮಸ್ಯೆಗಳು, ಪರಿಸರ ಬಿಕ್ಕಟ್ಟುಗಳ ಕುರಿತು ಸಾಹಿತ್ಯ ಸಮ್ಮೇಳನದಲ್ಲಿ ಆಳವಾದ ಚರ್ಚೆ ನಡೆದು ಸ್ವಸ್ಥ ಮತ್ತು ಸುಂದರ ಮಲೆನಾಡಿಗೆ ಈ ಸಾಹಿತ್ಯ ಸಮ್ಮೇಳನ ನಾಂದಿಯಾಗಲಿ ಎಂದು ಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...