Homeಕರ್ನಾಟಕಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಲ್ಕುಳಿ ವಿಠಲ್‌ ಹೆಗ್ಡೆಯವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಸಮರ್ಥಿಸಿ ಹಲವಾರು ಸಾಹಿತಿ-ಪ್ರಗತಿಪರರು ಬಹಿರಂಗ ಪತ್ರ ಬರೆದಿದ್ದಾರೆ.

ಚಂದ್ರಶೇಖರ್ ಪಾಟೀಲ್ (ಚಂಪಾ), ಡಾ. ಕೆ. ಮರಳುಸಿದ್ದಪ್ಪ, ಜಿ.ರಾಜಶೇಖರ, ದಿನೇಶ್ ಅಮೀನ್‌ಮಟ್ಟು, ಬಿ.ಟಿ.ಲಲಿತಾ ನಾಯ್ಕ್, ಡಾ. ಕಾಳೇಗೌಡ ನಾಗವಾರ, ಜಗದೀಶ್ ಕೊಪ್ಪ, ಯೋಗೇಶ್ ಮಾಸ್ತರ್, ಪ್ರೊ.ಶ್ರೀಕಂಠ ಕೂಡಿಗೆ, ಬಂಜಗೆರೆ ಜಯಪ್ರಕಾಶ್, ಸುರೇಶ್ ಭಟ್ ಬಾಕ್ರಬೈಲ್, ಕಡಿದಾಳು ಶಾಮಣ್ಣ, ಡಾ.ವಿಜಯಮ್ಮ, ಪ್ರೊ. ಎಂ. ಚಂದ್ರಶೇಖರಯ್ಯ, ಡಾ. ರಹಮತ್‌ ತರೀಕೆರೆ, ಪ್ರೋ. ಕೆ ಫಣಿರಾಜ್ ಮತ್ತು ಡಾ. ಉಮಾಶಂಕರ್ ಸೇರಿದಂತೆ ಹಲವರು ಸಹಿ ಹಾಕಿರುವ ಪತ್ರದ ಪೂರ್ಣ ವಿವರ ಕೆಳಗಿನಂತಿದೆ.

ಮಲೆನಾಡಿನ ಖ್ಯಾತ ಪರಿಸರವಾದಿ ಮತ್ತು ಸಮಾಜಮುಖಿ ಚಿಂತಕರಾದ ಕಲ್ಕುಳಿ ವಿಠಲ್ ಹೆಗ್ಡೆಯವರನ್ನ ಚಿಕ್ಕಮಗಳೂರು ಜಿಲ್ಲಾ 10ನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ತೀರ್ಮಾನಿಸಿರುವುದನ್ನು ಕೇಳಿ ನಮ್ಮಗಳಿಗೆ ಅತೀವ ಸಂತೋಷವೆನಿಸಿತು. ಕಳೆದ ನಾಲ್ಕು ದಶಕಗಳಿಂದ ಪಶ್ಚಿಮಘಟ್ಟಗಳನ್ನು ಉಳಿಸಲು, ಅಲ್ಲಿನ ಜನರ ಬದುಕನ್ನು ಹಸನಾಗಿಸಲು ಹೋರಾಟ ಮಾಡುತ್ತಿರುವುದಲ್ಲದೇ, ಅವರಿಗಿರುವ ಪರಿಸರ ಸೂಕ್ಷ್ಮ ತಜ್ಞತೆಯನ್ನು ನಾವು ಗಮನಿಸಿದ್ದೇವೆ. ಮತ್ತು ಇಷ್ಟಲ್ಲದೆ ಕಲ್ಕುಳಿಗಿರುವ ಜನರ ಬದುಕು ಮತ್ತು ಪರಿಸರದೊಳಗಿನ ಸಂಬಂಧಗಳ ಒಳನೋಟಗಳನ್ನು ಕೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಮಂಗನ ಬ್ಯಾಟೆ ಎನ್ನುವ ವಿಶಿಷ್ಟ ಮತ್ತು ಅನನ್ಯವಾದ ಪುಸ್ತಕವನ್ನು ಹೊರತಂದಿದ್ದಾರೆ. ಇದನ್ನು ಗುರುತಿಸಿಯೇ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

ಇಂತಹ ಪ್ರತಿಭಾವಂತ ಹೋರಾಟಗಾರ ಮತ್ತು ಲೇಖಕನನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿರುವುದನ್ನು ಸರ್ವರೂ ಸ್ವಾಗತಿಸಬೇಕಾಗಿತ್ತು. ವಿಪರ್ಯಾಸವೆಂದರೆ ಬಲಪಂಥೀಯ ಪಟ್ಟಭದ್ರ ಹಿತಾಸಕ್ತಿಗಳು, ಕೆಲವು ಜಾತಿವಾದಿಗಳು, ನಕ್ಸಲೀಯ ಬೆಂಬಲಿಗ ಎಂಬಂತೆ ಚಿತ್ರಿಸಿ ಆಕ್ಷೇಪಗಳನ್ನ ಎತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ

ವಿಠಲ್ ಹೆಗ್ಡೆಯವರು ನಕ್ಸಲ್ ಹಿಂಸಾಚಾರವನ್ನ ಮತ್ತು ಅವರ ಮಾರ್ಗವನ್ನ ಎಂದೂ ಒಪ್ಪಿದವರಲ್ಲ. ನಕ್ಸಲೀಯ ಹೋರಾಟ ಆರಂಭವಾದಾಗಿನಿಂದಲೂ ಅದರ ಬಗ್ಗೆ ತಕರಾರುಗಳನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿಯೇ ವ್ಯಕ್ತಪಡಿಸುತ್ತಾ ಬಂದಿದ್ದಾರೆ.

ಮಲೆನಾಡಿನಲ್ಲಿ ನಡೆಯುವ ಆದಿವಾಸಿ ದೌರ್ಜನ್ಯಗಳ ವಿರುದ್ಧ, ಎತ್ತಂಗಡಿಗಳ ವಿರುದ್ಧ, ಜಾತಿ ದೌರ್ಜನ್ಯಗಳ ವಿರುದ್ಧ ಅವರೆಂದೂ ರಾಜಿ ಮಾಡಿಕೊಂಡವರಲ್ಲ. ಇಂತಹ ಕಲ್ಕುಳಿಯವರನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಷಡ್ಯಂತ್ರವನ್ನು ನಾವು ಒಪ್ಪುವುದಿಲ್ಲ. ಇದು ಮಲೆನಾಡಿಗರಿಗೆ ಹೆಮ್ಮೆ ಎಂದು ಭಾವಿಸಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹಮಂತ್ರಿಗಳು ಮಧ್ಯಪ್ರವೇಶಿಸಬೇಕು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ- ಸಿರಿಮನೆ ನಾಗರಾಜ್‌

ಮಲೆನಾಡಿನ ಜ್ವಲಂತ ಸಮಸ್ಯೆಗಳು, ಪರಿಸರ ಬಿಕ್ಕಟ್ಟುಗಳ ಕುರಿತು ಸಾಹಿತ್ಯ ಸಮ್ಮೇಳನದಲ್ಲಿ ಆಳವಾದ ಚರ್ಚೆ ನಡೆದು ಸ್ವಸ್ಥ ಮತ್ತು ಸುಂದರ ಮಲೆನಾಡಿಗೆ ಈ ಸಾಹಿತ್ಯ ಸಮ್ಮೇಳನ ನಾಂದಿಯಾಗಲಿ ಎಂದು ಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...