Homeಕರ್ನಾಟಕಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕಲ್ಕುಳಿ ವಿಠಲ್ ಹೆಗ್ಡೆ ಸಂಪೂರ್ಣ ಸಮರ್ಥರು : ಸಾಹಿತಿ-ಪ್ರಗತಿಪರರ ಬಹಿರಂಗ ಪತ್ರ

- Advertisement -
- Advertisement -

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಲ್ಕುಳಿ ವಿಠಲ್‌ ಹೆಗ್ಡೆಯವರನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಬಲಪಂಥೀಯ ಸಂಘಟನೆಗಳು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಸಮರ್ಥಿಸಿ ಹಲವಾರು ಸಾಹಿತಿ-ಪ್ರಗತಿಪರರು ಬಹಿರಂಗ ಪತ್ರ ಬರೆದಿದ್ದಾರೆ.

ಚಂದ್ರಶೇಖರ್ ಪಾಟೀಲ್ (ಚಂಪಾ), ಡಾ. ಕೆ. ಮರಳುಸಿದ್ದಪ್ಪ, ಜಿ.ರಾಜಶೇಖರ, ದಿನೇಶ್ ಅಮೀನ್‌ಮಟ್ಟು, ಬಿ.ಟಿ.ಲಲಿತಾ ನಾಯ್ಕ್, ಡಾ. ಕಾಳೇಗೌಡ ನಾಗವಾರ, ಜಗದೀಶ್ ಕೊಪ್ಪ, ಯೋಗೇಶ್ ಮಾಸ್ತರ್, ಪ್ರೊ.ಶ್ರೀಕಂಠ ಕೂಡಿಗೆ, ಬಂಜಗೆರೆ ಜಯಪ್ರಕಾಶ್, ಸುರೇಶ್ ಭಟ್ ಬಾಕ್ರಬೈಲ್, ಕಡಿದಾಳು ಶಾಮಣ್ಣ, ಡಾ.ವಿಜಯಮ್ಮ, ಪ್ರೊ. ಎಂ. ಚಂದ್ರಶೇಖರಯ್ಯ, ಡಾ. ರಹಮತ್‌ ತರೀಕೆರೆ, ಪ್ರೋ. ಕೆ ಫಣಿರಾಜ್ ಮತ್ತು ಡಾ. ಉಮಾಶಂಕರ್ ಸೇರಿದಂತೆ ಹಲವರು ಸಹಿ ಹಾಕಿರುವ ಪತ್ರದ ಪೂರ್ಣ ವಿವರ ಕೆಳಗಿನಂತಿದೆ.

ಮಲೆನಾಡಿನ ಖ್ಯಾತ ಪರಿಸರವಾದಿ ಮತ್ತು ಸಮಾಜಮುಖಿ ಚಿಂತಕರಾದ ಕಲ್ಕುಳಿ ವಿಠಲ್ ಹೆಗ್ಡೆಯವರನ್ನ ಚಿಕ್ಕಮಗಳೂರು ಜಿಲ್ಲಾ 10ನೆಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ತೀರ್ಮಾನಿಸಿರುವುದನ್ನು ಕೇಳಿ ನಮ್ಮಗಳಿಗೆ ಅತೀವ ಸಂತೋಷವೆನಿಸಿತು. ಕಳೆದ ನಾಲ್ಕು ದಶಕಗಳಿಂದ ಪಶ್ಚಿಮಘಟ್ಟಗಳನ್ನು ಉಳಿಸಲು, ಅಲ್ಲಿನ ಜನರ ಬದುಕನ್ನು ಹಸನಾಗಿಸಲು ಹೋರಾಟ ಮಾಡುತ್ತಿರುವುದಲ್ಲದೇ, ಅವರಿಗಿರುವ ಪರಿಸರ ಸೂಕ್ಷ್ಮ ತಜ್ಞತೆಯನ್ನು ನಾವು ಗಮನಿಸಿದ್ದೇವೆ. ಮತ್ತು ಇಷ್ಟಲ್ಲದೆ ಕಲ್ಕುಳಿಗಿರುವ ಜನರ ಬದುಕು ಮತ್ತು ಪರಿಸರದೊಳಗಿನ ಸಂಬಂಧಗಳ ಒಳನೋಟಗಳನ್ನು ಕೇಳಿದ್ದೇವೆ. ಅದರ ಮುಂದುವರಿದ ಭಾಗವಾಗಿ ಮಂಗನ ಬ್ಯಾಟೆ ಎನ್ನುವ ವಿಶಿಷ್ಟ ಮತ್ತು ಅನನ್ಯವಾದ ಪುಸ್ತಕವನ್ನು ಹೊರತಂದಿದ್ದಾರೆ. ಇದನ್ನು ಗುರುತಿಸಿಯೇ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ.

ಇಂತಹ ಪ್ರತಿಭಾವಂತ ಹೋರಾಟಗಾರ ಮತ್ತು ಲೇಖಕನನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿರುವುದನ್ನು ಸರ್ವರೂ ಸ್ವಾಗತಿಸಬೇಕಾಗಿತ್ತು. ವಿಪರ್ಯಾಸವೆಂದರೆ ಬಲಪಂಥೀಯ ಪಟ್ಟಭದ್ರ ಹಿತಾಸಕ್ತಿಗಳು, ಕೆಲವು ಜಾತಿವಾದಿಗಳು, ನಕ್ಸಲೀಯ ಬೆಂಬಲಿಗ ಎಂಬಂತೆ ಚಿತ್ರಿಸಿ ಆಕ್ಷೇಪಗಳನ್ನ ಎತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕಲ್ಕುಳಿ ಹೆಗ್ಗಡೆ ಬದಲಾಯಿಸಿದರೆ ಧರಣಿ: ಜಗದೀಶ್‌ ಕೊಪ್ಪ ಎಚ್ಚರಿಕೆ

ವಿಠಲ್ ಹೆಗ್ಡೆಯವರು ನಕ್ಸಲ್ ಹಿಂಸಾಚಾರವನ್ನ ಮತ್ತು ಅವರ ಮಾರ್ಗವನ್ನ ಎಂದೂ ಒಪ್ಪಿದವರಲ್ಲ. ನಕ್ಸಲೀಯ ಹೋರಾಟ ಆರಂಭವಾದಾಗಿನಿಂದಲೂ ಅದರ ಬಗ್ಗೆ ತಕರಾರುಗಳನ್ನು ಮತ್ತು ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿಯೇ ವ್ಯಕ್ತಪಡಿಸುತ್ತಾ ಬಂದಿದ್ದಾರೆ.

ಮಲೆನಾಡಿನಲ್ಲಿ ನಡೆಯುವ ಆದಿವಾಸಿ ದೌರ್ಜನ್ಯಗಳ ವಿರುದ್ಧ, ಎತ್ತಂಗಡಿಗಳ ವಿರುದ್ಧ, ಜಾತಿ ದೌರ್ಜನ್ಯಗಳ ವಿರುದ್ಧ ಅವರೆಂದೂ ರಾಜಿ ಮಾಡಿಕೊಂಡವರಲ್ಲ. ಇಂತಹ ಕಲ್ಕುಳಿಯವರನ್ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಷಡ್ಯಂತ್ರವನ್ನು ನಾವು ಒಪ್ಪುವುದಿಲ್ಲ. ಇದು ಮಲೆನಾಡಿಗರಿಗೆ ಹೆಮ್ಮೆ ಎಂದು ಭಾವಿಸಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಗೃಹಮಂತ್ರಿಗಳು ಮಧ್ಯಪ್ರವೇಶಿಸಬೇಕು.

ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ- ಸಿರಿಮನೆ ನಾಗರಾಜ್‌

ಮಲೆನಾಡಿನ ಜ್ವಲಂತ ಸಮಸ್ಯೆಗಳು, ಪರಿಸರ ಬಿಕ್ಕಟ್ಟುಗಳ ಕುರಿತು ಸಾಹಿತ್ಯ ಸಮ್ಮೇಳನದಲ್ಲಿ ಆಳವಾದ ಚರ್ಚೆ ನಡೆದು ಸ್ವಸ್ಥ ಮತ್ತು ಸುಂದರ ಮಲೆನಾಡಿಗೆ ಈ ಸಾಹಿತ್ಯ ಸಮ್ಮೇಳನ ನಾಂದಿಯಾಗಲಿ ಎಂದು ಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...