Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ

- Advertisement -
- Advertisement -

ಶೃಂಗೇರಿಯಲ್ಲಿ ಜನವರಿ 10 ಮತ್ತು 11ರಂದು ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತವಾದುದು.
ವಿಠಲ ಹೆಗ್ಡೆಯವರು ಸಾಹಿತಿಯಾಗಿ ದೊಡ್ಡ ಹೆಸರೇನೂ ಮಾಡಿಲ್ಲ, ಹೆಚ್ಚು ಕೃತಿಗಳನ್ನೂ ಪ್ರಕಟಿಸಿಲ್ಲ, ನಿಜ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ ಎಂಬುದನ್ನು ಗಮನಿಸಿದರೆ ಅವರ ಸಾಹಿತ್ಯ ಕೃಷಿ ‘ಸಣ್ಣ’ದಾದರೂ ಅದರ ಮೌಲಿಕತೆ ಅರ್ಥವಾಗುತ್ತದೆ.

ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಹಾಸುಹೊಕ್ಕಾಗಿ ಬೆರೆತುಹೋಗಿದ್ದಾರೆ. ಪುಸ್ತಕಗಳನ್ನು ಬರೆದು ಪ್ರಕಟಿಸುವುದನ್ನೇ ಪ್ರಧಾನ ವೃತ್ತಿಯಾಗಿ ಅವರು ಮಾಡಿಕೊಂಡಿದ್ದಲ್ಲಿ, ಜಿಲ್ಲೆಯ ಹಾಗೂ ಶೃಂಗೇರಿ ಮತ್ತು ಆ ಪರಿಸರದ ಪ್ರಕೃತಿ, ಬದುಕು ಮತ್ತು ಇತಿಹಾಸದ ಕುರಿತು ಅವರು ಸಂಶೋಧನೆ ಮಾಡಿ ಹಾಕಿಟ್ಟುಕೊಂಡಿರುವ ಟಿಪ್ಪಣಿಗಳೆಲ್ಲ ಕೃತಿ ರೂಪಕ್ಕಿಳಿದಿದ್ದೇ ಆಗಿದ್ದಲ್ಲಿ ಕನಿಷ್ಠ ಅರ್ಧ ಡಜನ್ ಮೌಲಿಕ ಕೃತಿಗಳಿಗೆ ಸಾಕಾಗುತ್ತಿದ್ದವು ಎಂದು ನನ್ನ ನಂಬಿಕೆ.

ವಿಠಲ ಹೆಗ್ಡೆಯವರು ಮಲೆನಾಡಿಗಷ್ಟೇ ಸೀಮಿತರಾಗದೆ, ಕನ್ನಡ ನಾಡು-ನುಡಿ-ಜನಜೀವನ-ಕೃಷಿ-ಪ್ರಕೃತಿ ಸಂಪತ್ತು-ಚಳವಳಿ-ಇತಿಹಾಸ … ಈ ಎಲ್ಲ ರಂಗಗಳಲ್ಲೂ ನಿರಂತರ ಕ್ರಿಯಾಶೀಲವಾಗಿರುವ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಜನಜನಿತರಾಗಿದ್ದಾರೆ.

ಅವರ ಕೃತಿಗಳ ವಿಷಯಕ್ಕೆ ಬಂದರೆ, ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಇವು ಅವರ ಪ್ರಕಟವಾಗಿರುವ ಮೂರೇ ಮೂರು ಕೃತಿಗಳು. ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲ ಮಲೆನಾಡಿನ ಈ ಭಾಗದ ಜನಜೀವನದಲ್ಲಿ ಗಮನಾರ್ಹ ಸಮೃದ್ಧಿಗೆ ಕಾರಣವಾಗಿದ್ದ ಅಡಿಕೆಯ ಬೆಲೆ ಇದ್ದಕ್ಕಿದ್ದಂತೆ ತಥಾಕಥಿತ ‘ಮಾರುಕಟ್ಟೆ’ ಅರ್ಥವ್ಯವಸ್ಥೆ ಮತ್ತು ‘ಮಾರುಕಟ್ಟೆ ರಾಜಕಾರಣ’ದಿಂದಾಗಿ ಯದ್ವಾತದ್ವಾ ಏರುಪೇರಾಗಿ ಅಡಿಕೆ ಸೀಮೆಯಾದ್ಯಂತ ಅತಂತ್ರ ಸೃಷ್ಟಿಸಿದ ಸಂದರ್ಭದಲ್ಲಿ ‘ಅಡಿಕೆಯ ಮಾನ’ ರಚಿತವಾಯಿತು. ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬರೊಲ್ಲ’ ಎಂಬ ಗಾದೆಮಾತು ಈ ಶೀರ್ಷಿಕೆಗೆ ಪ್ರೇರಣೆ.

ಬಂಡವಾಳಶಾಹಿ ಹಿತಾಸಕ್ತಿಗಳೂ ಅಧಿಕಾರಶಾಹಿ ಮತ್ತು ರಾಜಕೀಯ ಶಕ್ತಿಗಳೂ ಒಟ್ಟಾಗಿ, ವಿವಿಧ ರೀತಿಗಳಲ್ಲಿ ಮಲೆನಾಡಿನ ಅಪಾರ ವನರಾಶಿಯನ್ನು ಒಳಗೊಂಡ ಅಮೂಲ್ಯ ಪರಿಸರ ಸಂಪತ್ತನ್ನು ಸೂರೆಗೈದು ಬರಿದಾಗಿಸುತ್ತಿದ್ದರೆ, ಅರಣ್ಯಾಧಿಕಾರಿಗಳು ಮತ್ತು ಕೆಲವು ಪಟ್ಟಭದ್ರ ‘ಪರಿಸರ’ ವೃತ್ತಿಪರರು ಸುಪ್ರೀಂ ಕೋರ್ಟಿನ ಸದಾಶಯವನ್ನು ದುರುಪಯೋಗ ಪಡಿಸಿಕೊಂಡು, ಈ ಪರಿಸರ ನಾಶಕ್ಕೆಲ್ಲ ಇಲ್ಲಿನ ರೈತಾಪಿಯೇ ಕಾರಣವೆಂಬಂತೆ ಬಿಂಬಿಸಿ, ರೈತಾಪಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಒಟ್ಟಾರೆ ವಿದ್ಯಮಾನವನ್ನು ವರ್ಣಿಸಿ ಬರೆದ ಪುಸ್ತಕ ‘ಕಾಡು-ಕಿರುಕುಳ’.

ಹೆಗ್ಡೆಯವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯಕ್ಕೊಂದು ಪಠ್ಯವಾಗಿಯೂ, ಇಂಗ್ಲಿಷ್ ವಿಷಯದಲ್ಲಿ ಒಂದು ಪೂರಕ ಓದಿನ ಕೃತಿಯಾಗಿಯೂ ನಿಗದಿಯಾಗಿದೆ. ಕುವೆಂಪು ಮತ್ತು ತೇಜಸ್ವಿಯವರ ನಂತರ ಮಲೆನಾಡಿನ ಬದುಕಿನ ಚಿತ್ರಣವನ್ನು ಇಷ್ಟು ಸೊಗಸಾಗಿ ಸಮಗ್ರವಾಗಿಯೂ ಪರಿಣಾಮಕಾರಿಯೂ ಆಗಿ ಕಟ್ಟಿಕೊಟ್ಟಿರುವ ಕೃತಿ ಇನ್ನೊಂದಿಲ್ಲ ಎಂದು ಯು.ಆರ್. ಅನಂತ ಮೂರ್ತಿಯವರು ಇದನ್ನು ಶ್ಲಾಘಿಸಿರುವುದು ಸುಮ್ಮನೇ ಅಲ್ಲ. ಮಲೆನಾಡಿನ ‘ಮುಖ್ಯಧಾರೆ’ ಜೀವನ ಚಿತ್ರಣದಿಂದ ಸ್ವಲ್ಪ ‘ಕೆಳ’ಕ್ಕಿಳಿದು ತಳಸಮುದಾಯಗಳ ಬದುಕಿನ ಚಿತ್ರಣವನ್ನು ತುಂಬ ಲವಲವಿಕೆಯ ಶೈಲಿಯಲ್ಲಿ ‘ಮಂಗನ ಬ್ಯಾಟೆ’ ಅತ್ಯಂತ ವಿವರವಾಗಿಯೂ ಆಪ್ತವಾಗಿಯೂ ಬಿಚ್ಚಿಟ್ಟಿದೆ.

ಹೆಗ್ಡೆಯವರ ಬದುಕು ಬರಹ ಹೋರಾಟಗಳ ಕುರಿತು ಬರೆಯಬಹುದಾದ್ದು ಬಹಳಷ್ಟಿದೆ. ಇಂದಿಗೂ ಶೃಂಗೇರಿ ತಾಲೂಕಿನಲ್ಲಿ ದಲಿತರು, ಆದಿವಾಸಿಗಳು ಮತ್ತು ಎಲ್ಲ ತಳ ಸಮುದಾಯಗಳ ಬಡಜನರು ತಮಗೆ ಅನ್ಯಾಯವಾದಾಗ ಮೊದಲು ಆಶ್ರಯಿಸುವುದೇ ವಿಠಲ ಹೆಗ್ಡೆಯವರನ್ನು. ಪತ್ರಕರ್ತರಾಗಿಯೂ ಅವರು ಒಳ್ಳೆಯ ಹೆಸರು ಮಾಡಿದ್ದಾರೆ. ಹೀಗೆ ಸಾಹಿತ್ಯಕ-ಸಾಮಾಜಿಕ-ಸಾಂಸ್ಕೃತಿಕ ರಂಗಗಳೆಲ್ಲದರಲ್ಲೂ ಕ್ರಿಯಾಶೀಲರಾದ ವ್ಯಕ್ತಿಯೊಬ್ಬರನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಗೂ ಗೆಳೆಯ ಕಲ್ಕುಳಿ ವಿಠಲ ಹೆಗ್ಡೆಯವರನ್ನು ಆತ್ಮೀಯವಾಗಿ ಅಭಿನಂದಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...