Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ

- Advertisement -
- Advertisement -

ಶೃಂಗೇರಿಯಲ್ಲಿ ಜನವರಿ 10 ಮತ್ತು 11ರಂದು ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತವಾದುದು.
ವಿಠಲ ಹೆಗ್ಡೆಯವರು ಸಾಹಿತಿಯಾಗಿ ದೊಡ್ಡ ಹೆಸರೇನೂ ಮಾಡಿಲ್ಲ, ಹೆಚ್ಚು ಕೃತಿಗಳನ್ನೂ ಪ್ರಕಟಿಸಿಲ್ಲ, ನಿಜ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ ಎಂಬುದನ್ನು ಗಮನಿಸಿದರೆ ಅವರ ಸಾಹಿತ್ಯ ಕೃಷಿ ‘ಸಣ್ಣ’ದಾದರೂ ಅದರ ಮೌಲಿಕತೆ ಅರ್ಥವಾಗುತ್ತದೆ.

ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಹಾಸುಹೊಕ್ಕಾಗಿ ಬೆರೆತುಹೋಗಿದ್ದಾರೆ. ಪುಸ್ತಕಗಳನ್ನು ಬರೆದು ಪ್ರಕಟಿಸುವುದನ್ನೇ ಪ್ರಧಾನ ವೃತ್ತಿಯಾಗಿ ಅವರು ಮಾಡಿಕೊಂಡಿದ್ದಲ್ಲಿ, ಜಿಲ್ಲೆಯ ಹಾಗೂ ಶೃಂಗೇರಿ ಮತ್ತು ಆ ಪರಿಸರದ ಪ್ರಕೃತಿ, ಬದುಕು ಮತ್ತು ಇತಿಹಾಸದ ಕುರಿತು ಅವರು ಸಂಶೋಧನೆ ಮಾಡಿ ಹಾಕಿಟ್ಟುಕೊಂಡಿರುವ ಟಿಪ್ಪಣಿಗಳೆಲ್ಲ ಕೃತಿ ರೂಪಕ್ಕಿಳಿದಿದ್ದೇ ಆಗಿದ್ದಲ್ಲಿ ಕನಿಷ್ಠ ಅರ್ಧ ಡಜನ್ ಮೌಲಿಕ ಕೃತಿಗಳಿಗೆ ಸಾಕಾಗುತ್ತಿದ್ದವು ಎಂದು ನನ್ನ ನಂಬಿಕೆ.

ವಿಠಲ ಹೆಗ್ಡೆಯವರು ಮಲೆನಾಡಿಗಷ್ಟೇ ಸೀಮಿತರಾಗದೆ, ಕನ್ನಡ ನಾಡು-ನುಡಿ-ಜನಜೀವನ-ಕೃಷಿ-ಪ್ರಕೃತಿ ಸಂಪತ್ತು-ಚಳವಳಿ-ಇತಿಹಾಸ … ಈ ಎಲ್ಲ ರಂಗಗಳಲ್ಲೂ ನಿರಂತರ ಕ್ರಿಯಾಶೀಲವಾಗಿರುವ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಜನಜನಿತರಾಗಿದ್ದಾರೆ.

ಅವರ ಕೃತಿಗಳ ವಿಷಯಕ್ಕೆ ಬಂದರೆ, ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಇವು ಅವರ ಪ್ರಕಟವಾಗಿರುವ ಮೂರೇ ಮೂರು ಕೃತಿಗಳು. ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲ ಮಲೆನಾಡಿನ ಈ ಭಾಗದ ಜನಜೀವನದಲ್ಲಿ ಗಮನಾರ್ಹ ಸಮೃದ್ಧಿಗೆ ಕಾರಣವಾಗಿದ್ದ ಅಡಿಕೆಯ ಬೆಲೆ ಇದ್ದಕ್ಕಿದ್ದಂತೆ ತಥಾಕಥಿತ ‘ಮಾರುಕಟ್ಟೆ’ ಅರ್ಥವ್ಯವಸ್ಥೆ ಮತ್ತು ‘ಮಾರುಕಟ್ಟೆ ರಾಜಕಾರಣ’ದಿಂದಾಗಿ ಯದ್ವಾತದ್ವಾ ಏರುಪೇರಾಗಿ ಅಡಿಕೆ ಸೀಮೆಯಾದ್ಯಂತ ಅತಂತ್ರ ಸೃಷ್ಟಿಸಿದ ಸಂದರ್ಭದಲ್ಲಿ ‘ಅಡಿಕೆಯ ಮಾನ’ ರಚಿತವಾಯಿತು. ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬರೊಲ್ಲ’ ಎಂಬ ಗಾದೆಮಾತು ಈ ಶೀರ್ಷಿಕೆಗೆ ಪ್ರೇರಣೆ.

ಬಂಡವಾಳಶಾಹಿ ಹಿತಾಸಕ್ತಿಗಳೂ ಅಧಿಕಾರಶಾಹಿ ಮತ್ತು ರಾಜಕೀಯ ಶಕ್ತಿಗಳೂ ಒಟ್ಟಾಗಿ, ವಿವಿಧ ರೀತಿಗಳಲ್ಲಿ ಮಲೆನಾಡಿನ ಅಪಾರ ವನರಾಶಿಯನ್ನು ಒಳಗೊಂಡ ಅಮೂಲ್ಯ ಪರಿಸರ ಸಂಪತ್ತನ್ನು ಸೂರೆಗೈದು ಬರಿದಾಗಿಸುತ್ತಿದ್ದರೆ, ಅರಣ್ಯಾಧಿಕಾರಿಗಳು ಮತ್ತು ಕೆಲವು ಪಟ್ಟಭದ್ರ ‘ಪರಿಸರ’ ವೃತ್ತಿಪರರು ಸುಪ್ರೀಂ ಕೋರ್ಟಿನ ಸದಾಶಯವನ್ನು ದುರುಪಯೋಗ ಪಡಿಸಿಕೊಂಡು, ಈ ಪರಿಸರ ನಾಶಕ್ಕೆಲ್ಲ ಇಲ್ಲಿನ ರೈತಾಪಿಯೇ ಕಾರಣವೆಂಬಂತೆ ಬಿಂಬಿಸಿ, ರೈತಾಪಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಒಟ್ಟಾರೆ ವಿದ್ಯಮಾನವನ್ನು ವರ್ಣಿಸಿ ಬರೆದ ಪುಸ್ತಕ ‘ಕಾಡು-ಕಿರುಕುಳ’.

ಹೆಗ್ಡೆಯವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯಕ್ಕೊಂದು ಪಠ್ಯವಾಗಿಯೂ, ಇಂಗ್ಲಿಷ್ ವಿಷಯದಲ್ಲಿ ಒಂದು ಪೂರಕ ಓದಿನ ಕೃತಿಯಾಗಿಯೂ ನಿಗದಿಯಾಗಿದೆ. ಕುವೆಂಪು ಮತ್ತು ತೇಜಸ್ವಿಯವರ ನಂತರ ಮಲೆನಾಡಿನ ಬದುಕಿನ ಚಿತ್ರಣವನ್ನು ಇಷ್ಟು ಸೊಗಸಾಗಿ ಸಮಗ್ರವಾಗಿಯೂ ಪರಿಣಾಮಕಾರಿಯೂ ಆಗಿ ಕಟ್ಟಿಕೊಟ್ಟಿರುವ ಕೃತಿ ಇನ್ನೊಂದಿಲ್ಲ ಎಂದು ಯು.ಆರ್. ಅನಂತ ಮೂರ್ತಿಯವರು ಇದನ್ನು ಶ್ಲಾಘಿಸಿರುವುದು ಸುಮ್ಮನೇ ಅಲ್ಲ. ಮಲೆನಾಡಿನ ‘ಮುಖ್ಯಧಾರೆ’ ಜೀವನ ಚಿತ್ರಣದಿಂದ ಸ್ವಲ್ಪ ‘ಕೆಳ’ಕ್ಕಿಳಿದು ತಳಸಮುದಾಯಗಳ ಬದುಕಿನ ಚಿತ್ರಣವನ್ನು ತುಂಬ ಲವಲವಿಕೆಯ ಶೈಲಿಯಲ್ಲಿ ‘ಮಂಗನ ಬ್ಯಾಟೆ’ ಅತ್ಯಂತ ವಿವರವಾಗಿಯೂ ಆಪ್ತವಾಗಿಯೂ ಬಿಚ್ಚಿಟ್ಟಿದೆ.

ಹೆಗ್ಡೆಯವರ ಬದುಕು ಬರಹ ಹೋರಾಟಗಳ ಕುರಿತು ಬರೆಯಬಹುದಾದ್ದು ಬಹಳಷ್ಟಿದೆ. ಇಂದಿಗೂ ಶೃಂಗೇರಿ ತಾಲೂಕಿನಲ್ಲಿ ದಲಿತರು, ಆದಿವಾಸಿಗಳು ಮತ್ತು ಎಲ್ಲ ತಳ ಸಮುದಾಯಗಳ ಬಡಜನರು ತಮಗೆ ಅನ್ಯಾಯವಾದಾಗ ಮೊದಲು ಆಶ್ರಯಿಸುವುದೇ ವಿಠಲ ಹೆಗ್ಡೆಯವರನ್ನು. ಪತ್ರಕರ್ತರಾಗಿಯೂ ಅವರು ಒಳ್ಳೆಯ ಹೆಸರು ಮಾಡಿದ್ದಾರೆ. ಹೀಗೆ ಸಾಹಿತ್ಯಕ-ಸಾಮಾಜಿಕ-ಸಾಂಸ್ಕೃತಿಕ ರಂಗಗಳೆಲ್ಲದರಲ್ಲೂ ಕ್ರಿಯಾಶೀಲರಾದ ವ್ಯಕ್ತಿಯೊಬ್ಬರನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಗೂ ಗೆಳೆಯ ಕಲ್ಕುಳಿ ವಿಠಲ ಹೆಗ್ಡೆಯವರನ್ನು ಆತ್ಮೀಯವಾಗಿ ಅಭಿನಂದಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...