Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ

- Advertisement -
- Advertisement -

ಶೃಂಗೇರಿಯಲ್ಲಿ ಜನವರಿ 10 ಮತ್ತು 11ರಂದು ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತವಾದುದು.
ವಿಠಲ ಹೆಗ್ಡೆಯವರು ಸಾಹಿತಿಯಾಗಿ ದೊಡ್ಡ ಹೆಸರೇನೂ ಮಾಡಿಲ್ಲ, ಹೆಚ್ಚು ಕೃತಿಗಳನ್ನೂ ಪ್ರಕಟಿಸಿಲ್ಲ, ನಿಜ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ ಎಂಬುದನ್ನು ಗಮನಿಸಿದರೆ ಅವರ ಸಾಹಿತ್ಯ ಕೃಷಿ ‘ಸಣ್ಣ’ದಾದರೂ ಅದರ ಮೌಲಿಕತೆ ಅರ್ಥವಾಗುತ್ತದೆ.

ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಹಾಸುಹೊಕ್ಕಾಗಿ ಬೆರೆತುಹೋಗಿದ್ದಾರೆ. ಪುಸ್ತಕಗಳನ್ನು ಬರೆದು ಪ್ರಕಟಿಸುವುದನ್ನೇ ಪ್ರಧಾನ ವೃತ್ತಿಯಾಗಿ ಅವರು ಮಾಡಿಕೊಂಡಿದ್ದಲ್ಲಿ, ಜಿಲ್ಲೆಯ ಹಾಗೂ ಶೃಂಗೇರಿ ಮತ್ತು ಆ ಪರಿಸರದ ಪ್ರಕೃತಿ, ಬದುಕು ಮತ್ತು ಇತಿಹಾಸದ ಕುರಿತು ಅವರು ಸಂಶೋಧನೆ ಮಾಡಿ ಹಾಕಿಟ್ಟುಕೊಂಡಿರುವ ಟಿಪ್ಪಣಿಗಳೆಲ್ಲ ಕೃತಿ ರೂಪಕ್ಕಿಳಿದಿದ್ದೇ ಆಗಿದ್ದಲ್ಲಿ ಕನಿಷ್ಠ ಅರ್ಧ ಡಜನ್ ಮೌಲಿಕ ಕೃತಿಗಳಿಗೆ ಸಾಕಾಗುತ್ತಿದ್ದವು ಎಂದು ನನ್ನ ನಂಬಿಕೆ.

ವಿಠಲ ಹೆಗ್ಡೆಯವರು ಮಲೆನಾಡಿಗಷ್ಟೇ ಸೀಮಿತರಾಗದೆ, ಕನ್ನಡ ನಾಡು-ನುಡಿ-ಜನಜೀವನ-ಕೃಷಿ-ಪ್ರಕೃತಿ ಸಂಪತ್ತು-ಚಳವಳಿ-ಇತಿಹಾಸ … ಈ ಎಲ್ಲ ರಂಗಗಳಲ್ಲೂ ನಿರಂತರ ಕ್ರಿಯಾಶೀಲವಾಗಿರುವ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಜನಜನಿತರಾಗಿದ್ದಾರೆ.

ಅವರ ಕೃತಿಗಳ ವಿಷಯಕ್ಕೆ ಬಂದರೆ, ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಇವು ಅವರ ಪ್ರಕಟವಾಗಿರುವ ಮೂರೇ ಮೂರು ಕೃತಿಗಳು. ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲ ಮಲೆನಾಡಿನ ಈ ಭಾಗದ ಜನಜೀವನದಲ್ಲಿ ಗಮನಾರ್ಹ ಸಮೃದ್ಧಿಗೆ ಕಾರಣವಾಗಿದ್ದ ಅಡಿಕೆಯ ಬೆಲೆ ಇದ್ದಕ್ಕಿದ್ದಂತೆ ತಥಾಕಥಿತ ‘ಮಾರುಕಟ್ಟೆ’ ಅರ್ಥವ್ಯವಸ್ಥೆ ಮತ್ತು ‘ಮಾರುಕಟ್ಟೆ ರಾಜಕಾರಣ’ದಿಂದಾಗಿ ಯದ್ವಾತದ್ವಾ ಏರುಪೇರಾಗಿ ಅಡಿಕೆ ಸೀಮೆಯಾದ್ಯಂತ ಅತಂತ್ರ ಸೃಷ್ಟಿಸಿದ ಸಂದರ್ಭದಲ್ಲಿ ‘ಅಡಿಕೆಯ ಮಾನ’ ರಚಿತವಾಯಿತು. ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬರೊಲ್ಲ’ ಎಂಬ ಗಾದೆಮಾತು ಈ ಶೀರ್ಷಿಕೆಗೆ ಪ್ರೇರಣೆ.

ಬಂಡವಾಳಶಾಹಿ ಹಿತಾಸಕ್ತಿಗಳೂ ಅಧಿಕಾರಶಾಹಿ ಮತ್ತು ರಾಜಕೀಯ ಶಕ್ತಿಗಳೂ ಒಟ್ಟಾಗಿ, ವಿವಿಧ ರೀತಿಗಳಲ್ಲಿ ಮಲೆನಾಡಿನ ಅಪಾರ ವನರಾಶಿಯನ್ನು ಒಳಗೊಂಡ ಅಮೂಲ್ಯ ಪರಿಸರ ಸಂಪತ್ತನ್ನು ಸೂರೆಗೈದು ಬರಿದಾಗಿಸುತ್ತಿದ್ದರೆ, ಅರಣ್ಯಾಧಿಕಾರಿಗಳು ಮತ್ತು ಕೆಲವು ಪಟ್ಟಭದ್ರ ‘ಪರಿಸರ’ ವೃತ್ತಿಪರರು ಸುಪ್ರೀಂ ಕೋರ್ಟಿನ ಸದಾಶಯವನ್ನು ದುರುಪಯೋಗ ಪಡಿಸಿಕೊಂಡು, ಈ ಪರಿಸರ ನಾಶಕ್ಕೆಲ್ಲ ಇಲ್ಲಿನ ರೈತಾಪಿಯೇ ಕಾರಣವೆಂಬಂತೆ ಬಿಂಬಿಸಿ, ರೈತಾಪಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಒಟ್ಟಾರೆ ವಿದ್ಯಮಾನವನ್ನು ವರ್ಣಿಸಿ ಬರೆದ ಪುಸ್ತಕ ‘ಕಾಡು-ಕಿರುಕುಳ’.

ಹೆಗ್ಡೆಯವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯಕ್ಕೊಂದು ಪಠ್ಯವಾಗಿಯೂ, ಇಂಗ್ಲಿಷ್ ವಿಷಯದಲ್ಲಿ ಒಂದು ಪೂರಕ ಓದಿನ ಕೃತಿಯಾಗಿಯೂ ನಿಗದಿಯಾಗಿದೆ. ಕುವೆಂಪು ಮತ್ತು ತೇಜಸ್ವಿಯವರ ನಂತರ ಮಲೆನಾಡಿನ ಬದುಕಿನ ಚಿತ್ರಣವನ್ನು ಇಷ್ಟು ಸೊಗಸಾಗಿ ಸಮಗ್ರವಾಗಿಯೂ ಪರಿಣಾಮಕಾರಿಯೂ ಆಗಿ ಕಟ್ಟಿಕೊಟ್ಟಿರುವ ಕೃತಿ ಇನ್ನೊಂದಿಲ್ಲ ಎಂದು ಯು.ಆರ್. ಅನಂತ ಮೂರ್ತಿಯವರು ಇದನ್ನು ಶ್ಲಾಘಿಸಿರುವುದು ಸುಮ್ಮನೇ ಅಲ್ಲ. ಮಲೆನಾಡಿನ ‘ಮುಖ್ಯಧಾರೆ’ ಜೀವನ ಚಿತ್ರಣದಿಂದ ಸ್ವಲ್ಪ ‘ಕೆಳ’ಕ್ಕಿಳಿದು ತಳಸಮುದಾಯಗಳ ಬದುಕಿನ ಚಿತ್ರಣವನ್ನು ತುಂಬ ಲವಲವಿಕೆಯ ಶೈಲಿಯಲ್ಲಿ ‘ಮಂಗನ ಬ್ಯಾಟೆ’ ಅತ್ಯಂತ ವಿವರವಾಗಿಯೂ ಆಪ್ತವಾಗಿಯೂ ಬಿಚ್ಚಿಟ್ಟಿದೆ.

ಹೆಗ್ಡೆಯವರ ಬದುಕು ಬರಹ ಹೋರಾಟಗಳ ಕುರಿತು ಬರೆಯಬಹುದಾದ್ದು ಬಹಳಷ್ಟಿದೆ. ಇಂದಿಗೂ ಶೃಂಗೇರಿ ತಾಲೂಕಿನಲ್ಲಿ ದಲಿತರು, ಆದಿವಾಸಿಗಳು ಮತ್ತು ಎಲ್ಲ ತಳ ಸಮುದಾಯಗಳ ಬಡಜನರು ತಮಗೆ ಅನ್ಯಾಯವಾದಾಗ ಮೊದಲು ಆಶ್ರಯಿಸುವುದೇ ವಿಠಲ ಹೆಗ್ಡೆಯವರನ್ನು. ಪತ್ರಕರ್ತರಾಗಿಯೂ ಅವರು ಒಳ್ಳೆಯ ಹೆಸರು ಮಾಡಿದ್ದಾರೆ. ಹೀಗೆ ಸಾಹಿತ್ಯಕ-ಸಾಮಾಜಿಕ-ಸಾಂಸ್ಕೃತಿಕ ರಂಗಗಳೆಲ್ಲದರಲ್ಲೂ ಕ್ರಿಯಾಶೀಲರಾದ ವ್ಯಕ್ತಿಯೊಬ್ಬರನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಗೂ ಗೆಳೆಯ ಕಲ್ಕುಳಿ ವಿಠಲ ಹೆಗ್ಡೆಯವರನ್ನು ಆತ್ಮೀಯವಾಗಿ ಅಭಿನಂದಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...