Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ

- Advertisement -
- Advertisement -

ಶೃಂಗೇರಿಯಲ್ಲಿ ಜನವರಿ 10 ಮತ್ತು 11ರಂದು ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತವಾದುದು.
ವಿಠಲ ಹೆಗ್ಡೆಯವರು ಸಾಹಿತಿಯಾಗಿ ದೊಡ್ಡ ಹೆಸರೇನೂ ಮಾಡಿಲ್ಲ, ಹೆಚ್ಚು ಕೃತಿಗಳನ್ನೂ ಪ್ರಕಟಿಸಿಲ್ಲ, ನಿಜ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ ಎಂಬುದನ್ನು ಗಮನಿಸಿದರೆ ಅವರ ಸಾಹಿತ್ಯ ಕೃಷಿ ‘ಸಣ್ಣ’ದಾದರೂ ಅದರ ಮೌಲಿಕತೆ ಅರ್ಥವಾಗುತ್ತದೆ.

ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಹಾಸುಹೊಕ್ಕಾಗಿ ಬೆರೆತುಹೋಗಿದ್ದಾರೆ. ಪುಸ್ತಕಗಳನ್ನು ಬರೆದು ಪ್ರಕಟಿಸುವುದನ್ನೇ ಪ್ರಧಾನ ವೃತ್ತಿಯಾಗಿ ಅವರು ಮಾಡಿಕೊಂಡಿದ್ದಲ್ಲಿ, ಜಿಲ್ಲೆಯ ಹಾಗೂ ಶೃಂಗೇರಿ ಮತ್ತು ಆ ಪರಿಸರದ ಪ್ರಕೃತಿ, ಬದುಕು ಮತ್ತು ಇತಿಹಾಸದ ಕುರಿತು ಅವರು ಸಂಶೋಧನೆ ಮಾಡಿ ಹಾಕಿಟ್ಟುಕೊಂಡಿರುವ ಟಿಪ್ಪಣಿಗಳೆಲ್ಲ ಕೃತಿ ರೂಪಕ್ಕಿಳಿದಿದ್ದೇ ಆಗಿದ್ದಲ್ಲಿ ಕನಿಷ್ಠ ಅರ್ಧ ಡಜನ್ ಮೌಲಿಕ ಕೃತಿಗಳಿಗೆ ಸಾಕಾಗುತ್ತಿದ್ದವು ಎಂದು ನನ್ನ ನಂಬಿಕೆ.

ವಿಠಲ ಹೆಗ್ಡೆಯವರು ಮಲೆನಾಡಿಗಷ್ಟೇ ಸೀಮಿತರಾಗದೆ, ಕನ್ನಡ ನಾಡು-ನುಡಿ-ಜನಜೀವನ-ಕೃಷಿ-ಪ್ರಕೃತಿ ಸಂಪತ್ತು-ಚಳವಳಿ-ಇತಿಹಾಸ … ಈ ಎಲ್ಲ ರಂಗಗಳಲ್ಲೂ ನಿರಂತರ ಕ್ರಿಯಾಶೀಲವಾಗಿರುವ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಜನಜನಿತರಾಗಿದ್ದಾರೆ.

ಅವರ ಕೃತಿಗಳ ವಿಷಯಕ್ಕೆ ಬಂದರೆ, ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಇವು ಅವರ ಪ್ರಕಟವಾಗಿರುವ ಮೂರೇ ಮೂರು ಕೃತಿಗಳು. ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲ ಮಲೆನಾಡಿನ ಈ ಭಾಗದ ಜನಜೀವನದಲ್ಲಿ ಗಮನಾರ್ಹ ಸಮೃದ್ಧಿಗೆ ಕಾರಣವಾಗಿದ್ದ ಅಡಿಕೆಯ ಬೆಲೆ ಇದ್ದಕ್ಕಿದ್ದಂತೆ ತಥಾಕಥಿತ ‘ಮಾರುಕಟ್ಟೆ’ ಅರ್ಥವ್ಯವಸ್ಥೆ ಮತ್ತು ‘ಮಾರುಕಟ್ಟೆ ರಾಜಕಾರಣ’ದಿಂದಾಗಿ ಯದ್ವಾತದ್ವಾ ಏರುಪೇರಾಗಿ ಅಡಿಕೆ ಸೀಮೆಯಾದ್ಯಂತ ಅತಂತ್ರ ಸೃಷ್ಟಿಸಿದ ಸಂದರ್ಭದಲ್ಲಿ ‘ಅಡಿಕೆಯ ಮಾನ’ ರಚಿತವಾಯಿತು. ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬರೊಲ್ಲ’ ಎಂಬ ಗಾದೆಮಾತು ಈ ಶೀರ್ಷಿಕೆಗೆ ಪ್ರೇರಣೆ.

ಬಂಡವಾಳಶಾಹಿ ಹಿತಾಸಕ್ತಿಗಳೂ ಅಧಿಕಾರಶಾಹಿ ಮತ್ತು ರಾಜಕೀಯ ಶಕ್ತಿಗಳೂ ಒಟ್ಟಾಗಿ, ವಿವಿಧ ರೀತಿಗಳಲ್ಲಿ ಮಲೆನಾಡಿನ ಅಪಾರ ವನರಾಶಿಯನ್ನು ಒಳಗೊಂಡ ಅಮೂಲ್ಯ ಪರಿಸರ ಸಂಪತ್ತನ್ನು ಸೂರೆಗೈದು ಬರಿದಾಗಿಸುತ್ತಿದ್ದರೆ, ಅರಣ್ಯಾಧಿಕಾರಿಗಳು ಮತ್ತು ಕೆಲವು ಪಟ್ಟಭದ್ರ ‘ಪರಿಸರ’ ವೃತ್ತಿಪರರು ಸುಪ್ರೀಂ ಕೋರ್ಟಿನ ಸದಾಶಯವನ್ನು ದುರುಪಯೋಗ ಪಡಿಸಿಕೊಂಡು, ಈ ಪರಿಸರ ನಾಶಕ್ಕೆಲ್ಲ ಇಲ್ಲಿನ ರೈತಾಪಿಯೇ ಕಾರಣವೆಂಬಂತೆ ಬಿಂಬಿಸಿ, ರೈತಾಪಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಒಟ್ಟಾರೆ ವಿದ್ಯಮಾನವನ್ನು ವರ್ಣಿಸಿ ಬರೆದ ಪುಸ್ತಕ ‘ಕಾಡು-ಕಿರುಕುಳ’.

ಹೆಗ್ಡೆಯವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯಕ್ಕೊಂದು ಪಠ್ಯವಾಗಿಯೂ, ಇಂಗ್ಲಿಷ್ ವಿಷಯದಲ್ಲಿ ಒಂದು ಪೂರಕ ಓದಿನ ಕೃತಿಯಾಗಿಯೂ ನಿಗದಿಯಾಗಿದೆ. ಕುವೆಂಪು ಮತ್ತು ತೇಜಸ್ವಿಯವರ ನಂತರ ಮಲೆನಾಡಿನ ಬದುಕಿನ ಚಿತ್ರಣವನ್ನು ಇಷ್ಟು ಸೊಗಸಾಗಿ ಸಮಗ್ರವಾಗಿಯೂ ಪರಿಣಾಮಕಾರಿಯೂ ಆಗಿ ಕಟ್ಟಿಕೊಟ್ಟಿರುವ ಕೃತಿ ಇನ್ನೊಂದಿಲ್ಲ ಎಂದು ಯು.ಆರ್. ಅನಂತ ಮೂರ್ತಿಯವರು ಇದನ್ನು ಶ್ಲಾಘಿಸಿರುವುದು ಸುಮ್ಮನೇ ಅಲ್ಲ. ಮಲೆನಾಡಿನ ‘ಮುಖ್ಯಧಾರೆ’ ಜೀವನ ಚಿತ್ರಣದಿಂದ ಸ್ವಲ್ಪ ‘ಕೆಳ’ಕ್ಕಿಳಿದು ತಳಸಮುದಾಯಗಳ ಬದುಕಿನ ಚಿತ್ರಣವನ್ನು ತುಂಬ ಲವಲವಿಕೆಯ ಶೈಲಿಯಲ್ಲಿ ‘ಮಂಗನ ಬ್ಯಾಟೆ’ ಅತ್ಯಂತ ವಿವರವಾಗಿಯೂ ಆಪ್ತವಾಗಿಯೂ ಬಿಚ್ಚಿಟ್ಟಿದೆ.

ಹೆಗ್ಡೆಯವರ ಬದುಕು ಬರಹ ಹೋರಾಟಗಳ ಕುರಿತು ಬರೆಯಬಹುದಾದ್ದು ಬಹಳಷ್ಟಿದೆ. ಇಂದಿಗೂ ಶೃಂಗೇರಿ ತಾಲೂಕಿನಲ್ಲಿ ದಲಿತರು, ಆದಿವಾಸಿಗಳು ಮತ್ತು ಎಲ್ಲ ತಳ ಸಮುದಾಯಗಳ ಬಡಜನರು ತಮಗೆ ಅನ್ಯಾಯವಾದಾಗ ಮೊದಲು ಆಶ್ರಯಿಸುವುದೇ ವಿಠಲ ಹೆಗ್ಡೆಯವರನ್ನು. ಪತ್ರಕರ್ತರಾಗಿಯೂ ಅವರು ಒಳ್ಳೆಯ ಹೆಸರು ಮಾಡಿದ್ದಾರೆ. ಹೀಗೆ ಸಾಹಿತ್ಯಕ-ಸಾಮಾಜಿಕ-ಸಾಂಸ್ಕೃತಿಕ ರಂಗಗಳೆಲ್ಲದರಲ್ಲೂ ಕ್ರಿಯಾಶೀಲರಾದ ವ್ಯಕ್ತಿಯೊಬ್ಬರನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಗೂ ಗೆಳೆಯ ಕಲ್ಕುಳಿ ವಿಠಲ ಹೆಗ್ಡೆಯವರನ್ನು ಆತ್ಮೀಯವಾಗಿ ಅಭಿನಂದಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...