Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ

- Advertisement -
- Advertisement -

ಶೃಂಗೇರಿಯಲ್ಲಿ ಜನವರಿ 10 ಮತ್ತು 11ರಂದು ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತವಾದುದು.
ವಿಠಲ ಹೆಗ್ಡೆಯವರು ಸಾಹಿತಿಯಾಗಿ ದೊಡ್ಡ ಹೆಸರೇನೂ ಮಾಡಿಲ್ಲ, ಹೆಚ್ಚು ಕೃತಿಗಳನ್ನೂ ಪ್ರಕಟಿಸಿಲ್ಲ, ನಿಜ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ ಎಂಬುದನ್ನು ಗಮನಿಸಿದರೆ ಅವರ ಸಾಹಿತ್ಯ ಕೃಷಿ ‘ಸಣ್ಣ’ದಾದರೂ ಅದರ ಮೌಲಿಕತೆ ಅರ್ಥವಾಗುತ್ತದೆ.

ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಹಾಸುಹೊಕ್ಕಾಗಿ ಬೆರೆತುಹೋಗಿದ್ದಾರೆ. ಪುಸ್ತಕಗಳನ್ನು ಬರೆದು ಪ್ರಕಟಿಸುವುದನ್ನೇ ಪ್ರಧಾನ ವೃತ್ತಿಯಾಗಿ ಅವರು ಮಾಡಿಕೊಂಡಿದ್ದಲ್ಲಿ, ಜಿಲ್ಲೆಯ ಹಾಗೂ ಶೃಂಗೇರಿ ಮತ್ತು ಆ ಪರಿಸರದ ಪ್ರಕೃತಿ, ಬದುಕು ಮತ್ತು ಇತಿಹಾಸದ ಕುರಿತು ಅವರು ಸಂಶೋಧನೆ ಮಾಡಿ ಹಾಕಿಟ್ಟುಕೊಂಡಿರುವ ಟಿಪ್ಪಣಿಗಳೆಲ್ಲ ಕೃತಿ ರೂಪಕ್ಕಿಳಿದಿದ್ದೇ ಆಗಿದ್ದಲ್ಲಿ ಕನಿಷ್ಠ ಅರ್ಧ ಡಜನ್ ಮೌಲಿಕ ಕೃತಿಗಳಿಗೆ ಸಾಕಾಗುತ್ತಿದ್ದವು ಎಂದು ನನ್ನ ನಂಬಿಕೆ.

ವಿಠಲ ಹೆಗ್ಡೆಯವರು ಮಲೆನಾಡಿಗಷ್ಟೇ ಸೀಮಿತರಾಗದೆ, ಕನ್ನಡ ನಾಡು-ನುಡಿ-ಜನಜೀವನ-ಕೃಷಿ-ಪ್ರಕೃತಿ ಸಂಪತ್ತು-ಚಳವಳಿ-ಇತಿಹಾಸ … ಈ ಎಲ್ಲ ರಂಗಗಳಲ್ಲೂ ನಿರಂತರ ಕ್ರಿಯಾಶೀಲವಾಗಿರುವ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಜನಜನಿತರಾಗಿದ್ದಾರೆ.

ಅವರ ಕೃತಿಗಳ ವಿಷಯಕ್ಕೆ ಬಂದರೆ, ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಇವು ಅವರ ಪ್ರಕಟವಾಗಿರುವ ಮೂರೇ ಮೂರು ಕೃತಿಗಳು. ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲ ಮಲೆನಾಡಿನ ಈ ಭಾಗದ ಜನಜೀವನದಲ್ಲಿ ಗಮನಾರ್ಹ ಸಮೃದ್ಧಿಗೆ ಕಾರಣವಾಗಿದ್ದ ಅಡಿಕೆಯ ಬೆಲೆ ಇದ್ದಕ್ಕಿದ್ದಂತೆ ತಥಾಕಥಿತ ‘ಮಾರುಕಟ್ಟೆ’ ಅರ್ಥವ್ಯವಸ್ಥೆ ಮತ್ತು ‘ಮಾರುಕಟ್ಟೆ ರಾಜಕಾರಣ’ದಿಂದಾಗಿ ಯದ್ವಾತದ್ವಾ ಏರುಪೇರಾಗಿ ಅಡಿಕೆ ಸೀಮೆಯಾದ್ಯಂತ ಅತಂತ್ರ ಸೃಷ್ಟಿಸಿದ ಸಂದರ್ಭದಲ್ಲಿ ‘ಅಡಿಕೆಯ ಮಾನ’ ರಚಿತವಾಯಿತು. ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬರೊಲ್ಲ’ ಎಂಬ ಗಾದೆಮಾತು ಈ ಶೀರ್ಷಿಕೆಗೆ ಪ್ರೇರಣೆ.

ಬಂಡವಾಳಶಾಹಿ ಹಿತಾಸಕ್ತಿಗಳೂ ಅಧಿಕಾರಶಾಹಿ ಮತ್ತು ರಾಜಕೀಯ ಶಕ್ತಿಗಳೂ ಒಟ್ಟಾಗಿ, ವಿವಿಧ ರೀತಿಗಳಲ್ಲಿ ಮಲೆನಾಡಿನ ಅಪಾರ ವನರಾಶಿಯನ್ನು ಒಳಗೊಂಡ ಅಮೂಲ್ಯ ಪರಿಸರ ಸಂಪತ್ತನ್ನು ಸೂರೆಗೈದು ಬರಿದಾಗಿಸುತ್ತಿದ್ದರೆ, ಅರಣ್ಯಾಧಿಕಾರಿಗಳು ಮತ್ತು ಕೆಲವು ಪಟ್ಟಭದ್ರ ‘ಪರಿಸರ’ ವೃತ್ತಿಪರರು ಸುಪ್ರೀಂ ಕೋರ್ಟಿನ ಸದಾಶಯವನ್ನು ದುರುಪಯೋಗ ಪಡಿಸಿಕೊಂಡು, ಈ ಪರಿಸರ ನಾಶಕ್ಕೆಲ್ಲ ಇಲ್ಲಿನ ರೈತಾಪಿಯೇ ಕಾರಣವೆಂಬಂತೆ ಬಿಂಬಿಸಿ, ರೈತಾಪಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಒಟ್ಟಾರೆ ವಿದ್ಯಮಾನವನ್ನು ವರ್ಣಿಸಿ ಬರೆದ ಪುಸ್ತಕ ‘ಕಾಡು-ಕಿರುಕುಳ’.

ಹೆಗ್ಡೆಯವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯಕ್ಕೊಂದು ಪಠ್ಯವಾಗಿಯೂ, ಇಂಗ್ಲಿಷ್ ವಿಷಯದಲ್ಲಿ ಒಂದು ಪೂರಕ ಓದಿನ ಕೃತಿಯಾಗಿಯೂ ನಿಗದಿಯಾಗಿದೆ. ಕುವೆಂಪು ಮತ್ತು ತೇಜಸ್ವಿಯವರ ನಂತರ ಮಲೆನಾಡಿನ ಬದುಕಿನ ಚಿತ್ರಣವನ್ನು ಇಷ್ಟು ಸೊಗಸಾಗಿ ಸಮಗ್ರವಾಗಿಯೂ ಪರಿಣಾಮಕಾರಿಯೂ ಆಗಿ ಕಟ್ಟಿಕೊಟ್ಟಿರುವ ಕೃತಿ ಇನ್ನೊಂದಿಲ್ಲ ಎಂದು ಯು.ಆರ್. ಅನಂತ ಮೂರ್ತಿಯವರು ಇದನ್ನು ಶ್ಲಾಘಿಸಿರುವುದು ಸುಮ್ಮನೇ ಅಲ್ಲ. ಮಲೆನಾಡಿನ ‘ಮುಖ್ಯಧಾರೆ’ ಜೀವನ ಚಿತ್ರಣದಿಂದ ಸ್ವಲ್ಪ ‘ಕೆಳ’ಕ್ಕಿಳಿದು ತಳಸಮುದಾಯಗಳ ಬದುಕಿನ ಚಿತ್ರಣವನ್ನು ತುಂಬ ಲವಲವಿಕೆಯ ಶೈಲಿಯಲ್ಲಿ ‘ಮಂಗನ ಬ್ಯಾಟೆ’ ಅತ್ಯಂತ ವಿವರವಾಗಿಯೂ ಆಪ್ತವಾಗಿಯೂ ಬಿಚ್ಚಿಟ್ಟಿದೆ.

ಹೆಗ್ಡೆಯವರ ಬದುಕು ಬರಹ ಹೋರಾಟಗಳ ಕುರಿತು ಬರೆಯಬಹುದಾದ್ದು ಬಹಳಷ್ಟಿದೆ. ಇಂದಿಗೂ ಶೃಂಗೇರಿ ತಾಲೂಕಿನಲ್ಲಿ ದಲಿತರು, ಆದಿವಾಸಿಗಳು ಮತ್ತು ಎಲ್ಲ ತಳ ಸಮುದಾಯಗಳ ಬಡಜನರು ತಮಗೆ ಅನ್ಯಾಯವಾದಾಗ ಮೊದಲು ಆಶ್ರಯಿಸುವುದೇ ವಿಠಲ ಹೆಗ್ಡೆಯವರನ್ನು. ಪತ್ರಕರ್ತರಾಗಿಯೂ ಅವರು ಒಳ್ಳೆಯ ಹೆಸರು ಮಾಡಿದ್ದಾರೆ. ಹೀಗೆ ಸಾಹಿತ್ಯಕ-ಸಾಮಾಜಿಕ-ಸಾಂಸ್ಕೃತಿಕ ರಂಗಗಳೆಲ್ಲದರಲ್ಲೂ ಕ್ರಿಯಾಶೀಲರಾದ ವ್ಯಕ್ತಿಯೊಬ್ಬರನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಗೂ ಗೆಳೆಯ ಕಲ್ಕುಳಿ ವಿಠಲ ಹೆಗ್ಡೆಯವರನ್ನು ಆತ್ಮೀಯವಾಗಿ ಅಭಿನಂದಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...