Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ

- Advertisement -
- Advertisement -

ಶೃಂಗೇರಿಯಲ್ಲಿ ಜನವರಿ 10 ಮತ್ತು 11ರಂದು ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತವಾದುದು.
ವಿಠಲ ಹೆಗ್ಡೆಯವರು ಸಾಹಿತಿಯಾಗಿ ದೊಡ್ಡ ಹೆಸರೇನೂ ಮಾಡಿಲ್ಲ, ಹೆಚ್ಚು ಕೃತಿಗಳನ್ನೂ ಪ್ರಕಟಿಸಿಲ್ಲ, ನಿಜ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ ಎಂಬುದನ್ನು ಗಮನಿಸಿದರೆ ಅವರ ಸಾಹಿತ್ಯ ಕೃಷಿ ‘ಸಣ್ಣ’ದಾದರೂ ಅದರ ಮೌಲಿಕತೆ ಅರ್ಥವಾಗುತ್ತದೆ.

ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಹಾಸುಹೊಕ್ಕಾಗಿ ಬೆರೆತುಹೋಗಿದ್ದಾರೆ. ಪುಸ್ತಕಗಳನ್ನು ಬರೆದು ಪ್ರಕಟಿಸುವುದನ್ನೇ ಪ್ರಧಾನ ವೃತ್ತಿಯಾಗಿ ಅವರು ಮಾಡಿಕೊಂಡಿದ್ದಲ್ಲಿ, ಜಿಲ್ಲೆಯ ಹಾಗೂ ಶೃಂಗೇರಿ ಮತ್ತು ಆ ಪರಿಸರದ ಪ್ರಕೃತಿ, ಬದುಕು ಮತ್ತು ಇತಿಹಾಸದ ಕುರಿತು ಅವರು ಸಂಶೋಧನೆ ಮಾಡಿ ಹಾಕಿಟ್ಟುಕೊಂಡಿರುವ ಟಿಪ್ಪಣಿಗಳೆಲ್ಲ ಕೃತಿ ರೂಪಕ್ಕಿಳಿದಿದ್ದೇ ಆಗಿದ್ದಲ್ಲಿ ಕನಿಷ್ಠ ಅರ್ಧ ಡಜನ್ ಮೌಲಿಕ ಕೃತಿಗಳಿಗೆ ಸಾಕಾಗುತ್ತಿದ್ದವು ಎಂದು ನನ್ನ ನಂಬಿಕೆ.

ವಿಠಲ ಹೆಗ್ಡೆಯವರು ಮಲೆನಾಡಿಗಷ್ಟೇ ಸೀಮಿತರಾಗದೆ, ಕನ್ನಡ ನಾಡು-ನುಡಿ-ಜನಜೀವನ-ಕೃಷಿ-ಪ್ರಕೃತಿ ಸಂಪತ್ತು-ಚಳವಳಿ-ಇತಿಹಾಸ … ಈ ಎಲ್ಲ ರಂಗಗಳಲ್ಲೂ ನಿರಂತರ ಕ್ರಿಯಾಶೀಲವಾಗಿರುವ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಜನಜನಿತರಾಗಿದ್ದಾರೆ.

ಅವರ ಕೃತಿಗಳ ವಿಷಯಕ್ಕೆ ಬಂದರೆ, ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಇವು ಅವರ ಪ್ರಕಟವಾಗಿರುವ ಮೂರೇ ಮೂರು ಕೃತಿಗಳು. ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲ ಮಲೆನಾಡಿನ ಈ ಭಾಗದ ಜನಜೀವನದಲ್ಲಿ ಗಮನಾರ್ಹ ಸಮೃದ್ಧಿಗೆ ಕಾರಣವಾಗಿದ್ದ ಅಡಿಕೆಯ ಬೆಲೆ ಇದ್ದಕ್ಕಿದ್ದಂತೆ ತಥಾಕಥಿತ ‘ಮಾರುಕಟ್ಟೆ’ ಅರ್ಥವ್ಯವಸ್ಥೆ ಮತ್ತು ‘ಮಾರುಕಟ್ಟೆ ರಾಜಕಾರಣ’ದಿಂದಾಗಿ ಯದ್ವಾತದ್ವಾ ಏರುಪೇರಾಗಿ ಅಡಿಕೆ ಸೀಮೆಯಾದ್ಯಂತ ಅತಂತ್ರ ಸೃಷ್ಟಿಸಿದ ಸಂದರ್ಭದಲ್ಲಿ ‘ಅಡಿಕೆಯ ಮಾನ’ ರಚಿತವಾಯಿತು. ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬರೊಲ್ಲ’ ಎಂಬ ಗಾದೆಮಾತು ಈ ಶೀರ್ಷಿಕೆಗೆ ಪ್ರೇರಣೆ.

ಬಂಡವಾಳಶಾಹಿ ಹಿತಾಸಕ್ತಿಗಳೂ ಅಧಿಕಾರಶಾಹಿ ಮತ್ತು ರಾಜಕೀಯ ಶಕ್ತಿಗಳೂ ಒಟ್ಟಾಗಿ, ವಿವಿಧ ರೀತಿಗಳಲ್ಲಿ ಮಲೆನಾಡಿನ ಅಪಾರ ವನರಾಶಿಯನ್ನು ಒಳಗೊಂಡ ಅಮೂಲ್ಯ ಪರಿಸರ ಸಂಪತ್ತನ್ನು ಸೂರೆಗೈದು ಬರಿದಾಗಿಸುತ್ತಿದ್ದರೆ, ಅರಣ್ಯಾಧಿಕಾರಿಗಳು ಮತ್ತು ಕೆಲವು ಪಟ್ಟಭದ್ರ ‘ಪರಿಸರ’ ವೃತ್ತಿಪರರು ಸುಪ್ರೀಂ ಕೋರ್ಟಿನ ಸದಾಶಯವನ್ನು ದುರುಪಯೋಗ ಪಡಿಸಿಕೊಂಡು, ಈ ಪರಿಸರ ನಾಶಕ್ಕೆಲ್ಲ ಇಲ್ಲಿನ ರೈತಾಪಿಯೇ ಕಾರಣವೆಂಬಂತೆ ಬಿಂಬಿಸಿ, ರೈತಾಪಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಒಟ್ಟಾರೆ ವಿದ್ಯಮಾನವನ್ನು ವರ್ಣಿಸಿ ಬರೆದ ಪುಸ್ತಕ ‘ಕಾಡು-ಕಿರುಕುಳ’.

ಹೆಗ್ಡೆಯವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯಕ್ಕೊಂದು ಪಠ್ಯವಾಗಿಯೂ, ಇಂಗ್ಲಿಷ್ ವಿಷಯದಲ್ಲಿ ಒಂದು ಪೂರಕ ಓದಿನ ಕೃತಿಯಾಗಿಯೂ ನಿಗದಿಯಾಗಿದೆ. ಕುವೆಂಪು ಮತ್ತು ತೇಜಸ್ವಿಯವರ ನಂತರ ಮಲೆನಾಡಿನ ಬದುಕಿನ ಚಿತ್ರಣವನ್ನು ಇಷ್ಟು ಸೊಗಸಾಗಿ ಸಮಗ್ರವಾಗಿಯೂ ಪರಿಣಾಮಕಾರಿಯೂ ಆಗಿ ಕಟ್ಟಿಕೊಟ್ಟಿರುವ ಕೃತಿ ಇನ್ನೊಂದಿಲ್ಲ ಎಂದು ಯು.ಆರ್. ಅನಂತ ಮೂರ್ತಿಯವರು ಇದನ್ನು ಶ್ಲಾಘಿಸಿರುವುದು ಸುಮ್ಮನೇ ಅಲ್ಲ. ಮಲೆನಾಡಿನ ‘ಮುಖ್ಯಧಾರೆ’ ಜೀವನ ಚಿತ್ರಣದಿಂದ ಸ್ವಲ್ಪ ‘ಕೆಳ’ಕ್ಕಿಳಿದು ತಳಸಮುದಾಯಗಳ ಬದುಕಿನ ಚಿತ್ರಣವನ್ನು ತುಂಬ ಲವಲವಿಕೆಯ ಶೈಲಿಯಲ್ಲಿ ‘ಮಂಗನ ಬ್ಯಾಟೆ’ ಅತ್ಯಂತ ವಿವರವಾಗಿಯೂ ಆಪ್ತವಾಗಿಯೂ ಬಿಚ್ಚಿಟ್ಟಿದೆ.

ಹೆಗ್ಡೆಯವರ ಬದುಕು ಬರಹ ಹೋರಾಟಗಳ ಕುರಿತು ಬರೆಯಬಹುದಾದ್ದು ಬಹಳಷ್ಟಿದೆ. ಇಂದಿಗೂ ಶೃಂಗೇರಿ ತಾಲೂಕಿನಲ್ಲಿ ದಲಿತರು, ಆದಿವಾಸಿಗಳು ಮತ್ತು ಎಲ್ಲ ತಳ ಸಮುದಾಯಗಳ ಬಡಜನರು ತಮಗೆ ಅನ್ಯಾಯವಾದಾಗ ಮೊದಲು ಆಶ್ರಯಿಸುವುದೇ ವಿಠಲ ಹೆಗ್ಡೆಯವರನ್ನು. ಪತ್ರಕರ್ತರಾಗಿಯೂ ಅವರು ಒಳ್ಳೆಯ ಹೆಸರು ಮಾಡಿದ್ದಾರೆ. ಹೀಗೆ ಸಾಹಿತ್ಯಕ-ಸಾಮಾಜಿಕ-ಸಾಂಸ್ಕೃತಿಕ ರಂಗಗಳೆಲ್ಲದರಲ್ಲೂ ಕ್ರಿಯಾಶೀಲರಾದ ವ್ಯಕ್ತಿಯೊಬ್ಬರನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಗೂ ಗೆಳೆಯ ಕಲ್ಕುಳಿ ವಿಠಲ ಹೆಗ್ಡೆಯವರನ್ನು ಆತ್ಮೀಯವಾಗಿ ಅಭಿನಂದಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...