Homeಕರ್ನಾಟಕಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ

- Advertisement -
- Advertisement -

ಶೃಂಗೇರಿಯಲ್ಲಿ ಜನವರಿ 10 ಮತ್ತು 11ರಂದು ನಡೆಯಲಿರುವ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಕಲ್ಕುಳಿ ವಿಠಲ ಹೆಗ್ಡೆಯವರ ಆಯ್ಕೆ ಅತ್ಯಂತ ಪ್ರಶಸ್ತವಾದುದು.
ವಿಠಲ ಹೆಗ್ಡೆಯವರು ಸಾಹಿತಿಯಾಗಿ ದೊಡ್ಡ ಹೆಸರೇನೂ ಮಾಡಿಲ್ಲ, ಹೆಚ್ಚು ಕೃತಿಗಳನ್ನೂ ಪ್ರಕಟಿಸಿಲ್ಲ, ನಿಜ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿರುವುದು ಪೂರ್ಣಚಂದ್ರ ತೇಜಸ್ವಿಯವರನ್ನು ಬಿಟ್ಟರೆ ವಿಠಲ ಹೆಗ್ಡೆಯವರಿಗೆ ಮಾತ್ರ ಎಂಬುದನ್ನು ಗಮನಿಸಿದರೆ ಅವರ ಸಾಹಿತ್ಯ ಕೃಷಿ ‘ಸಣ್ಣ’ದಾದರೂ ಅದರ ಮೌಲಿಕತೆ ಅರ್ಥವಾಗುತ್ತದೆ.

ಜಿಲ್ಲೆಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವರು ಹಾಸುಹೊಕ್ಕಾಗಿ ಬೆರೆತುಹೋಗಿದ್ದಾರೆ. ಪುಸ್ತಕಗಳನ್ನು ಬರೆದು ಪ್ರಕಟಿಸುವುದನ್ನೇ ಪ್ರಧಾನ ವೃತ್ತಿಯಾಗಿ ಅವರು ಮಾಡಿಕೊಂಡಿದ್ದಲ್ಲಿ, ಜಿಲ್ಲೆಯ ಹಾಗೂ ಶೃಂಗೇರಿ ಮತ್ತು ಆ ಪರಿಸರದ ಪ್ರಕೃತಿ, ಬದುಕು ಮತ್ತು ಇತಿಹಾಸದ ಕುರಿತು ಅವರು ಸಂಶೋಧನೆ ಮಾಡಿ ಹಾಕಿಟ್ಟುಕೊಂಡಿರುವ ಟಿಪ್ಪಣಿಗಳೆಲ್ಲ ಕೃತಿ ರೂಪಕ್ಕಿಳಿದಿದ್ದೇ ಆಗಿದ್ದಲ್ಲಿ ಕನಿಷ್ಠ ಅರ್ಧ ಡಜನ್ ಮೌಲಿಕ ಕೃತಿಗಳಿಗೆ ಸಾಕಾಗುತ್ತಿದ್ದವು ಎಂದು ನನ್ನ ನಂಬಿಕೆ.

ವಿಠಲ ಹೆಗ್ಡೆಯವರು ಮಲೆನಾಡಿಗಷ್ಟೇ ಸೀಮಿತರಾಗದೆ, ಕನ್ನಡ ನಾಡು-ನುಡಿ-ಜನಜೀವನ-ಕೃಷಿ-ಪ್ರಕೃತಿ ಸಂಪತ್ತು-ಚಳವಳಿ-ಇತಿಹಾಸ … ಈ ಎಲ್ಲ ರಂಗಗಳಲ್ಲೂ ನಿರಂತರ ಕ್ರಿಯಾಶೀಲವಾಗಿರುವ ಒಬ್ಬ ವಿಶಿಷ್ಟ ವ್ಯಕ್ತಿಯಾಗಿ ಜನಜನಿತರಾಗಿದ್ದಾರೆ.

ಅವರ ಕೃತಿಗಳ ವಿಷಯಕ್ಕೆ ಬಂದರೆ, ‘ಮಂಗನ ಬ್ಯಾಟೆ’, ‘ಅಡಿಕೆಯ ಮಾನ’ ಮತ್ತು ‘ಕಾಡು-ಕಿರುಕುಳ’ ಇವು ಅವರ ಪ್ರಕಟವಾಗಿರುವ ಮೂರೇ ಮೂರು ಕೃತಿಗಳು. ಸುಮಾರು ಎರಡು ದಶಕಕ್ಕೂ ಹೆಚ್ಚು ಕಾಲ ಮಲೆನಾಡಿನ ಈ ಭಾಗದ ಜನಜೀವನದಲ್ಲಿ ಗಮನಾರ್ಹ ಸಮೃದ್ಧಿಗೆ ಕಾರಣವಾಗಿದ್ದ ಅಡಿಕೆಯ ಬೆಲೆ ಇದ್ದಕ್ಕಿದ್ದಂತೆ ತಥಾಕಥಿತ ‘ಮಾರುಕಟ್ಟೆ’ ಅರ್ಥವ್ಯವಸ್ಥೆ ಮತ್ತು ‘ಮಾರುಕಟ್ಟೆ ರಾಜಕಾರಣ’ದಿಂದಾಗಿ ಯದ್ವಾತದ್ವಾ ಏರುಪೇರಾಗಿ ಅಡಿಕೆ ಸೀಮೆಯಾದ್ಯಂತ ಅತಂತ್ರ ಸೃಷ್ಟಿಸಿದ ಸಂದರ್ಭದಲ್ಲಿ ‘ಅಡಿಕೆಯ ಮಾನ’ ರಚಿತವಾಯಿತು. ‘ಅಡಿಕೆಯಲ್ಲಿ ಹೋದ ಮಾನ ಆನೆ ಕೊಟ್ಟರೂ ಬರೊಲ್ಲ’ ಎಂಬ ಗಾದೆಮಾತು ಈ ಶೀರ್ಷಿಕೆಗೆ ಪ್ರೇರಣೆ.

ಬಂಡವಾಳಶಾಹಿ ಹಿತಾಸಕ್ತಿಗಳೂ ಅಧಿಕಾರಶಾಹಿ ಮತ್ತು ರಾಜಕೀಯ ಶಕ್ತಿಗಳೂ ಒಟ್ಟಾಗಿ, ವಿವಿಧ ರೀತಿಗಳಲ್ಲಿ ಮಲೆನಾಡಿನ ಅಪಾರ ವನರಾಶಿಯನ್ನು ಒಳಗೊಂಡ ಅಮೂಲ್ಯ ಪರಿಸರ ಸಂಪತ್ತನ್ನು ಸೂರೆಗೈದು ಬರಿದಾಗಿಸುತ್ತಿದ್ದರೆ, ಅರಣ್ಯಾಧಿಕಾರಿಗಳು ಮತ್ತು ಕೆಲವು ಪಟ್ಟಭದ್ರ ‘ಪರಿಸರ’ ವೃತ್ತಿಪರರು ಸುಪ್ರೀಂ ಕೋರ್ಟಿನ ಸದಾಶಯವನ್ನು ದುರುಪಯೋಗ ಪಡಿಸಿಕೊಂಡು, ಈ ಪರಿಸರ ನಾಶಕ್ಕೆಲ್ಲ ಇಲ್ಲಿನ ರೈತಾಪಿಯೇ ಕಾರಣವೆಂಬಂತೆ ಬಿಂಬಿಸಿ, ರೈತಾಪಿಗೆ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಒಟ್ಟಾರೆ ವಿದ್ಯಮಾನವನ್ನು ವರ್ಣಿಸಿ ಬರೆದ ಪುಸ್ತಕ ‘ಕಾಡು-ಕಿರುಕುಳ’.

ಹೆಗ್ಡೆಯವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ‘ಮಂಗನ ಬ್ಯಾಟೆ’ ಕೃತಿ ಕುವೆಂಪು ವಿವಿಯ ಮೊದಲ ವರ್ಷದ ಪದವಿ ಕನ್ನಡ ವಿಷಯಕ್ಕೊಂದು ಪಠ್ಯವಾಗಿಯೂ, ಇಂಗ್ಲಿಷ್ ವಿಷಯದಲ್ಲಿ ಒಂದು ಪೂರಕ ಓದಿನ ಕೃತಿಯಾಗಿಯೂ ನಿಗದಿಯಾಗಿದೆ. ಕುವೆಂಪು ಮತ್ತು ತೇಜಸ್ವಿಯವರ ನಂತರ ಮಲೆನಾಡಿನ ಬದುಕಿನ ಚಿತ್ರಣವನ್ನು ಇಷ್ಟು ಸೊಗಸಾಗಿ ಸಮಗ್ರವಾಗಿಯೂ ಪರಿಣಾಮಕಾರಿಯೂ ಆಗಿ ಕಟ್ಟಿಕೊಟ್ಟಿರುವ ಕೃತಿ ಇನ್ನೊಂದಿಲ್ಲ ಎಂದು ಯು.ಆರ್. ಅನಂತ ಮೂರ್ತಿಯವರು ಇದನ್ನು ಶ್ಲಾಘಿಸಿರುವುದು ಸುಮ್ಮನೇ ಅಲ್ಲ. ಮಲೆನಾಡಿನ ‘ಮುಖ್ಯಧಾರೆ’ ಜೀವನ ಚಿತ್ರಣದಿಂದ ಸ್ವಲ್ಪ ‘ಕೆಳ’ಕ್ಕಿಳಿದು ತಳಸಮುದಾಯಗಳ ಬದುಕಿನ ಚಿತ್ರಣವನ್ನು ತುಂಬ ಲವಲವಿಕೆಯ ಶೈಲಿಯಲ್ಲಿ ‘ಮಂಗನ ಬ್ಯಾಟೆ’ ಅತ್ಯಂತ ವಿವರವಾಗಿಯೂ ಆಪ್ತವಾಗಿಯೂ ಬಿಚ್ಚಿಟ್ಟಿದೆ.

ಹೆಗ್ಡೆಯವರ ಬದುಕು ಬರಹ ಹೋರಾಟಗಳ ಕುರಿತು ಬರೆಯಬಹುದಾದ್ದು ಬಹಳಷ್ಟಿದೆ. ಇಂದಿಗೂ ಶೃಂಗೇರಿ ತಾಲೂಕಿನಲ್ಲಿ ದಲಿತರು, ಆದಿವಾಸಿಗಳು ಮತ್ತು ಎಲ್ಲ ತಳ ಸಮುದಾಯಗಳ ಬಡಜನರು ತಮಗೆ ಅನ್ಯಾಯವಾದಾಗ ಮೊದಲು ಆಶ್ರಯಿಸುವುದೇ ವಿಠಲ ಹೆಗ್ಡೆಯವರನ್ನು. ಪತ್ರಕರ್ತರಾಗಿಯೂ ಅವರು ಒಳ್ಳೆಯ ಹೆಸರು ಮಾಡಿದ್ದಾರೆ. ಹೀಗೆ ಸಾಹಿತ್ಯಕ-ಸಾಮಾಜಿಕ-ಸಾಂಸ್ಕೃತಿಕ ರಂಗಗಳೆಲ್ಲದರಲ್ಲೂ ಕ್ರಿಯಾಶೀಲರಾದ ವ್ಯಕ್ತಿಯೊಬ್ಬರನ್ನು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ್ನು ಹಾಗೂ ಗೆಳೆಯ ಕಲ್ಕುಳಿ ವಿಠಲ ಹೆಗ್ಡೆಯವರನ್ನು ಆತ್ಮೀಯವಾಗಿ ಅಭಿನಂದಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...